ವಿಜಯಪುರ: ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ರಸ್ತೆ ಮಧ್ಯದಲ್ಲೆ ಬೈಕ್ ಸವಾರ ಸಜೀವ ದಹನವಾದ ಘಟನೆ ವಿಜಯಪುರ ತಾಲೂಕಿನ ಅರಕೇರಿ ತಾಂಡಾ ಬಳಿ ನಡೆದಿದೆ.
ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು, 50 ವರ್ಷದ ರಮೇಶ ಸಿದ್ದಪ್ಪ ಕಾಂಬಳೆ ಎಂಬ ಬೈಕ್ ಸವಾರ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ. ಇನ್ನೊರ್ವ ಬೈಕ್ ಸವಾರ ಪ್ರಕಾಶ ಚವ್ಹಾಣ ಕಾಲಿಗೆ ಬೆಂಕಿ ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ರಮೇಶ್ ಬೈಕ್ನಲ್ಲಿ ಸೀಮೆಎಣ್ಣೆ ತುಂಬಿದ ಡಬ್ಬಿ ಇಟ್ಟಕೊಂಡಿದ್ರು. ಇದ್ರಿಂದ ಅಪಘಾತದ ವೇಳೆ ಸೀಮೆಎಣ್ಣೆಗೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿದೆ.