ಸಿನಿಮಾ (Cinema) ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು ಎಂದು ದರ್ಶನ್ (Darshan) ಅವರು ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.
ವಿಜಯಲಕ್ಷ್ಮಿ ದರ್ಶನ್ (Vijayalakshmi Darshan) ಅವರು ದರ್ಶನ್ ಅಭಿಮಾನಿಗಳಿಗೆ ಕಳುಹಿಸಿದ ಸಂದೇಶವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪೋಸ್ಟ್ನಲ್ಲಿ ಏನಿದೆ?
ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ ಪ್ರೀತಿಯ ದರ್ಶನ್ ಅವರು ನಿಮಗೆ ಕಳಿಸಿರುವ ಸಂದೇಶ.
ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.
ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೇ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.
ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ ದಿ ಡೆವಿಲ್ ʼ ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೇ ಅಡೆತಡೆ ಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ. ಹಾಗಾಗಿ ಅದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇನೆ. ಹಾಗೂ ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿ ನಂಬಿದ್ದೇನೆ.
ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.