ಕಾಂತಾರ (Kantara) ಸಿನಿಮಾ ವೀಕ್ಷಿಸಿ, ಚಿತ್ರಮಂದಿರದಿಂದ (Theater) ಹೊರಗೆ ಬರುತ್ತಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ನಿಧನರಾದ ಘಟನೆ ಮಂಡ್ಯ (Mandya) ಜಿಲ್ಲೆ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಸಾರೆಮೇಗಲಕೊಪ್ಪ ನಿವಾಸಿ, ರಾಜಶೇಖರ್ (Rajashekhar ಕಾಂತಾರ ಸಿನಿಮಾ ವೀಕ್ಷಿಸಲು ವೆಂಕಟೇಶ್ವರ ಚಿತ್ರಮಂದಿರಕ್ಕೆ ಆಗಮಿಸಿದ್ದರು.
ಖುಷಿಯಾಗಿಯೇ ಕಾಂತಾರ ಸಿನಿಮಾವನ್ನು ವೀಕ್ಷಿಸಿದ್ದ 45ರ ವಯಸ್ಸಿನ ರಾಜಶೇಖರ್, ಥಿಯೇಟರ್ ನಿಂದ ಆಚೆ ಬರುವಾಗ ಎದೆನೋವು ಕಾಣಿಸಿಕೊಂಡಿದೆ. ಅಲ್ಲಿಯೇ ಕುಸಿದು ಕೂತಿದ್ದಾರೆ. ತೀವ್ರ ಹೃದಯಾಘಾತವಾಗಿ (Heart Attack) ನಿಧನರಾಗಿದ್ದಾರೆ (Death) ಎನ್ನಲಾಗುತ್ತಿದೆ. ಈ ಕುರಿತಂತೆ ನಾಗಮಂಗಲ (Nagamangala) ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ
ರಾಜಶೇಖರ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಖುಷಿಯಿಂದಲೇ ಸಿನಿಮಾ ನೋಡಲು ಹೋಗಿದ್ದ ಕುಟುಂಬದ ಸದಸ್ಯನನ್ನು ಈ ರೀತಿ ಕಳೆದುಕೊಳ್ಳುತ್ತೇವೆ ಎಂದು ಅಂದುಕೊಂಡಿರಲಿಲ್ಲ ಎಂದು ಸದಸ್ಯರು ಗೋಳಾಡುತ್ತಿದ್ದ ಸನ್ನಿವೇಶ, ಹೃದಯ ಹಿಂಡುವಂತಿತ್ತು.