ವಿಡಿಯೋ: ಆರ್‌ಎಸ್‌ಎಸ್‌ನಂತೆ ದಂಡ ಹಿಡಿದು ಕಾಂಗ್ರೆಸ್ಸಿಗರಿಗೆ ಖಾದರ್ ತರಬೇತಿ

Public TV
1 Min Read
MNG 5

ಮಂಗಳೂರು: ಆರ್‌ಎಸ್‌ಎಸ್‌ ಮಾದರಿಯಲ್ಲೇ ಕಾಂಗ್ರೆಸ್ಸಿನಿಂದ ಪಥಸಂಚಲನ ತರಬೇತಿ ಮಂಗಳೂರಿನಲ್ಲಿ ನಡೆಯುತ್ತಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಭಾರೀ ಚರ್ಚೆಯಾಗುತ್ತಿದೆ.

ಹೌದು. ಕಾಂಗ್ರೆಸ್ ಕಾರ್ಯಕರ್ತರು ಪಥಸಂಚಲನ ತರಬೇತಿಯನ್ನು ಪಡೆಯುತ್ತಿದ್ದಾರೆ. ಮಾಜಿ ಸಚಿವ ಯು.ಟಿ ಖಾದರ್ ಅವರು ತಮ್ಮ ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದಾರೆ. ಈ ಪಥ ಸಂಚಲನ ತರಬೇತಿಯಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು, ಕಾರ್ಯಕರ್ತರು ಭಾಗಿಯಾಗಿದ್ದಾರೆ.

MNG 1 2

ತರಬೇತಿ ಯಾಕೆ?
ಅಕ್ಟೋಬರ್ 2, ಗಾಂಧಿ ಜಯಂತಿ ಕಾರ್ಯಕ್ರಮಕ್ಕಾಗಿ ಕಾಂಗ್ರೆಸ್ ಪಾಳಯದಲ್ಲಿ ಸಿದ್ಧತೆ ಭರದಿಂದ ನಡೆಯುತ್ತಿದ್ದು, ದಕ್ಷಿಣ ಕನ್ನಡದಲ್ಲಿಯೂ ಕಾಂಗ್ರೆಸ್ ಸೇವಾದಳದಿಂದ ಪಥಸಂಚಲನವಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆ ನಡೆಯುತ್ತಿದ್ದು, ಕೋಣಾಜೆ ಪಿಎ ಕಾಲೇಜು ಮೈದಾನದಲ್ಲಿ ಕಾರ್ಯಕರ್ತರು ತರಬೇತಿ ಮಾಡುತ್ತಿದ್ದಾರೆ. ವಿಶೇಷವೆಂದರೆ ಆರ್‌ಎಸ್‌ಎಸ್‌ ಸ್ವಯಂಸೇವಕರು ಬಳಸುತ್ತಿರುವ ದಂಡದಂತೆ ಕಾಂಗ್ರೆಸ್ ಸೇವಾದಳದ ಸ್ವಯಂಸೇವಕರು ದಂಡವನ್ನು ಹಿಡಿದು ಪಥಸಂಚಲನ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *