ಬೋಟ್ ಹತ್ತಲು ಬೆನ್ನನ್ನೇ ಮೆಟ್ಟಿಲಾಗಿಸಿದ ಮೀನುಗಾರ!

Public TV
1 Min Read
KERALA FISHER MAN

ತಿರುವನಂತಪುರಂ: ಮಹಾಮಳೆ ಕರ್ನಾಟಕದ ಹಾಗೂ ಕೇರಳ ಜನತೆಯನ್ನು ತಲ್ಲಣಗೊಳಿಸಿದ್ದು, ಅನೇಕರು ವಿವಿಧ ರೀತಿಯ ಸಹಾಯಕ್ಕೆ ನಿಂತಿದ್ದಾರೆ. ಮೀನುಗಾರನೊಬ್ಬ ಬೆನ್ನನ್ನೇ ಮೆಟ್ಟಿಲು ಮಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೀನುಗಾರ ಕೆ.ಪಿ.ಜೈಸಾಲ್ ಮಲಪ್ಪುರಂ ಜಿಲ್ಲೆಯ ವೆಂಗರಾದಲ್ಲಿ ಸಂತ್ರಸ್ತರ ರಕ್ಷಣೆಗೆ ಮುಂದಾಗಿದ್ದು, ಮಹಿಳೆಯರಿಗೆ ಬೋಟ್ ಹತ್ತಲು ಸಾಧ್ಯವಾಗಲಿಲ್ಲ. ಇರಿಂದಾಗಿ ಜೈಸಾಲ್ ಬೋಟ್ ಪಕ್ಕದಲ್ಲಿಯೇ ಮಂಡಿ ಹಾಗೂ ಎರಡು ಕೈಗಳನ್ನು ನೆಲಕ್ಕೆ ಊರಿ ಬೆನ್ನನ್ನು ಮೆಟ್ಟಿಲಿನಂತೆ ಮಾಡಿ ಬೋಟ್ ಹತ್ತಲು ಮಹಿಳೆಯರಿಗೆ ಸಹಾಯ ಮಾಡಿದರು.

ಜೈಸಾಲ್ ಅವರ ಸಹಾಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮಹಾಮಳೆಗೆ ದೇವರನಾಡಲ್ಲಿ 380 ಮಂದಿ ಪ್ರಾಣ ಕಳೆದುಕೊಂಡಿದ್ದು, ಸುಮಾರು 3.14 ಲಕ್ಷ ಜನರನ್ನು ನಿರಾಶ್ರಿತರ ಶಿಬಿರದಲ್ಲಿ ಇರಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಕೇರಳದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ರಾಜ್ಯಕ್ಕೆ 500 ಕೋಟಿ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಪ್ರವಾಹದಲ್ಲಿ ಮೃತ ಕುಟುಂಬಸ್ಥರಿಗೆ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಿಂದ ಕೇರಳ ಸಂತ್ರಸ್ತರಿಗೆ ಪರಿಹಾರ ಧನ ಹರಿದು ಬರುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *