– ಟೀಕೆ ವ್ಯಕ್ತವಾಗುತ್ತಿದ್ದಂತೆ ಆದೇಶ ಹಿಂಪಡೆದ ಸರ್ಕಾರ
ತಿರುವನಂತಪುರಂ: ವಯನಾಡ್ ಭೂಕುಸಿತದ (Wayanad Landslide) ಕುರಿತು ತಮ್ಮ ಅಭಿಪ್ರಾಯಗಳನ್ನು ಮತ್ತು ಅಧ್ಯಯನ ವರದಿಗಳನ್ನು ಸರ್ಕಾರದ ಅನುಮತಿ ಇಲ್ಲದೇ ಮಾಧ್ಯಮಗಳೊಂದಿಗೆ ಹಂಚಿಕೊಳ್ಳಬಾರದು ಎಂದು ಕೇರಳ ಸರ್ಕಾರ (Government of Kerala) ವಿಜ್ಞಾನಿಗಳಿಗೆ (Scientist) ನಿರ್ಬಂಧ ಹೇರಿದೆ.
ರಾಜ್ಯ ಪರಿಹಾರ ಆಯುಕ್ತ ಮತ್ತು ವಿಪತ್ತು ನಿರ್ವಹಣೆಯ ಪ್ರಧಾನ ಕಾರ್ಯದರ್ಶಿ ಟಿಕು ಬಿಸ್ವಾಲ್ ಅವರು ಕೇರಳದ ಎಲ್ಲಾ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಗಳಿಗೆ ವಿಪತ್ತು ಎಂದು ಗುರುತಿಸಲಾಗಿರುವ ವಯನಾಡಿನ ಮೆಪ್ಪಾಡಿ ಪಂಚಾಯತ್ ವ್ಯಾಪ್ತಿಯ ಜಾಗಗಳಿಗೆ ಭೇಟಿ ನೀಡದಂತೆ ನಿರ್ಬಂಧ ಹೇರಿದ್ದಾರೆ. ಇದನ್ನೂ ಓದಿ: ಸೈನಿಕರಿಗೆ ಸೆಲ್ಯೂಟ್: ಕೇವಲ 16 ಗಂಟೆಯಲ್ಲಿ 24 ಟನ್ ಸಾಮರ್ಥ್ಯದ 190 ಅಡಿ ಉದ್ದದ ಸೇತುವೆ ರೆಡಿ!
ರಾಜ್ಯ ಮತ್ತು ದೇಶದಲ್ಲಿರುವ ವಿಜ್ಞಾನಿಗಳು ಈ ಜಲಪ್ರಳಯಕ್ಕೆ ಅರಣ್ಯ ನಾಶ, ಗಣಿಗಾರಿಕೆ, ಹವಾಮಾನ ಬದಲಾವಣೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಂತೆ ಕೇರಳ ಸರ್ಕಾರ ಈ ಮಹತ್ವದ ನಿರ್ಧಾರ ಪ್ರಕಟಿಸಿದೆ. ಇದನ್ನೂ ಓದಿ: 206 ಮಂದಿ ನಾಪತ್ತೆ – ಇಂದಿನಿಂದ 3 ಸಾವಿರ ಮಂದಿಯಿಂದ ಮೃತದೇಹ ಶೋಧ ಕಾರ್ಯ
ಸಾಮಾಜಿಕ ಜಾಲತಾಣದಲ್ಲಿ ಈ ಆದೇಶಕ್ಕೆ ಭಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆ ಕೇರಳ ಸರ್ಕಾರ ಈ ಆದೇಶವನ್ನು ಹಿಂದಕ್ಕೆ ಪಡೆದಿದೆ.