Wayanad Landslide : ರಕ್ಷಣಾ ಕಾರ್ಯಾಚರಣೆ ಯಾಕೆ ಕಷ್ಟವಾಗುತ್ತಿದೆ?

Public TV
2 Min Read
Wayanad Landslide Why is the rescue operation difficult Chooralmala Mundakkai Meppadi News 3

– ರೋಪ್‌ ವೇ ಬಳಸಿ ಸಂತ್ರಸ್ತರನ್ನು ತಲುಪಿತ್ತಿವೆ ರಕ್ಷಣಾ ತಂಡಗಳು
– ಕೊಚ್ಚಿ ಹೋಗಿದೆ ನಗರಗಳ ಮಧ್ಯೆ ಇದ್ದ ಏಕೈಕ ಸೇತುವೆ

ವಯನಾಡು: ಭೀಕರ ಜಲಪ್ರಳಯಕ್ಕೆ 143 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಏರಿಕೆ ಆಗುತ್ತಲೇ ಇದೆ. ಸೇತುವೆ (Bridge) ಕೊಚ್ಚಿ ಹೋಗಿದ್ದರಿಂದ ಗ್ರಾಮಗಳು ನಡುಗಡ್ಡೆಯಾಗಿವೆ.

ಭಾರತೀಯ ಸೇನೆ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಅಗ್ನಿಶಾಮಕ ಸೇರಿದಂತೆ ಎಲ್ಲಾ ಸರ್ಕಾರಿ ಸಂಸ್ಥೆಗಳು ಒಗ್ಗೂಡಿ ಕಾರ್ಯಾಚರಣೆ ಮಾಡುತ್ತಿದ್ದರೂ ನಡುಗಡ್ಡೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಣೆ ಮಾಡಲು ಭಾರೀ ಕಷ್ಟವಾಗುತ್ತಿದೆ. ಸೇತುವೆಗಳು ನೀರಿನಲ್ಲಿ ಕೊಚ್ಚಿ ಹೋಗಿರುವ ಕಾರಣ ಮರದಿಂದ ಮರಕ್ಕೆ ಹಗ್ಗ ಕಟ್ಟಿ ರೋಪ್ ವೇ ನಿರ್ಮಿಸಿ ಆ ರೋಪ್ ವೇ ಮೂಲಕ ಒಂದು ಕಡೆಯಿಂದ ಮತ್ತೊಂದು ಕಡೆಗೆ ಶವ ಸಾಗಿಸಲಾಗುತ್ತಿದೆ.

Wayanad Landslide Why is the rescue operation difficult Chooralmala Mundakkai Meppadi News 1

ಯಾಕೆ ಕಷ್ಟವಾಗುತ್ತಿದೆ?
ಮುಂಡಕ್ಕೈ(Mundakkai), ಅಟ್ಟಮಲಾ ನಗರ ಮತ್ತು ಚೂರಲ್ ಮಲೈ (Chooralmala) ನಗರವನ್ನು ಸಂಪರ್ಕಿಸಲು ಇದ್ದ ಏಕೈಕ ದೊಡ್ಡ ಸೇತುವೆ ಕೊಚ್ಚಿ ಹೋಗಿದೆ. ಪರಿಣಾಮ ಈಗ ರಕ್ಷಣಾ ತಂಡಗಳು ರೋಪ್‌ವೇ ಬಳಸಿಕೊಂಡು ಸಂತ್ರಸ್ತರನ್ನು ತಲುಪಿ ರಕ್ಷಣೆ ಮಾಡುತ್ತಿದ್ದಾರೆ. ಇದನ್ನೂ ಓದಿ: Wayanad Landslide : ಅರ್ಧ ಸೆಕೆಂಡ್‌ನಲ್ಲಿ ನೂರು ಜನ ಸಮಾಧಿ!

01 6

ಮಂಗಳವಾರ ಬೆಳಗ್ಗೆ ದುರಂತ ನಡೆದ ಬಳಿಕ ಮಂಡಕ್ಕೈಯಲ್ಲಿ ಸಿಲುಕಿದ್ದ ಜನರನ್ನು ತಲುಪಲು 13 ಗಂಟೆ ಬೇಕಾಗಿತ್ತು. ಮೆಪ್ಪಾಡಿ (Meppadi) ಮತ್ತು ಚೂರಲ್ ಮಲೈ ಹೊರ ಜಗತ್ತಿನೊಂದಿಗೆ ಸಂಪರ್ಕವನ್ನು ಕಳೆದುಕೊಂಡಿತ್ತು. ಹೆಲಿಕಾಪ್ಟರ್‌ ಬಳಸಿ ಕಾರ್ಯಾಚರಣೆಗೆ ಸೇನೆ ಸಿದ್ಧವಾಗಿದ್ದರೂ ನಿರಂತರ ಮಳೆ ಸುರಿಯುತ್ತಿದೆ. ಕೆಟ್ಟ ಹವಾಮಾನದಿಂದಾಗಿ ರಕ್ಷಣಾ ಕಾರ್ಯಾಚರಣೆ ದುಸ್ತರವಾಗಿದೆ. ಇದನ್ನೂ ಓದಿ: Wayanad Landslides: ನಾಲ್ವರು ಕನ್ನಡಿಗರು ದುರ್ಮರಣ – ಬೆಂಗಳೂರಿನ ಇಬ್ಬರು ಪ್ರವಾಸಿಗರು ಕಣ್ಮರೆ!

Wayanad Landslide Why is the rescue operation difficult Chooralmala Mundakkai Meppadi News 2

ಮೆಪ್ಪಾಡಿ ಎಲೆಕ್ಟ್ರಿಕಲ್‌ ಸ್ಟೇಷನ್‌ 3 ಕಿ.ಮೀ ಹೈ ಟೆನ್ಷನ್‌ ಲೈನ್‌, 8 ಕಿ.ಮೀ ಲೋ ಟೆನ್ಷನ್‌ ಲೈನ್‌, 2 ಟ್ರಾನ್ಸ್‌ಫಾರಂಗಳು ನೀರಿನ ಅಬ್ಬರಕ್ಕೆ ಕೊಚ್ಚಿ ಹೋಗಿದೆ. 3 ಟ್ರಾನ್ಸ್‌ಫಾರಂಗಳು ಹಾಳಾಗಿದೆ. ಪಟ್ಟಣದಲ್ಲಿ ವಿದ್ಯುತ್‌ ಸಂಪರ್ಕ ಇಲ್ಲದ ಕಾರಣ ಮೊಬೈಲ್‌ ಮೂಲಕ ಜನರ ಜೊತೆ ಸಂಪರ್ಕ ಸಾಧಿಸಲು ಕಷ್ಟವಾಗುತ್ತಿದೆ.

ಚೂರಲ್ ಮಲೈ ಸೇತುವೆ ಕಡಿತದಿಂದ ಅಂದಾಜು 500 ಕುಟುಂಬಗಳು ಸಂಪರ್ಕ ಕಡಿತಕೊಂಡಿದೆ ಎಂದು ವರದಿಯಾಗಿದೆ.

Share This Article