Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

Wayanad Landslides: ತಮಿಳುನಾಡಿನಿಂದ 5 ಕೋಟಿ ನೆರವು – ಅಗತ್ಯ ಸಹಕಾರ ನೀಡೋದಾಗಿ ಕರ್ನಾಟಕ ಸಿಎಂ ಭರವಸೆ

Public TV
Last updated: July 30, 2024 3:58 pm
Public TV
Share
3 Min Read
Drone
SHARE

– ಸಾವಿನ ಸಂಖ್ಯೆ 84ಕ್ಕೆ ಏರಿಕೆ, ಎನ್‌ಡಿಆರ್‌ಎಫ್‌ ತಂಡದಿಂದ ರಕ್ಷಣಾ ಕಾರ್ಯ
– ರಕ್ಷಣೆಗೆ ಧಾವಿಸಿದ ಸೇನಾ ಶ್ವಾನದಳ

ತಿರುವನಂತಪುರಂ: ಭಾರೀ ಮಳೆಯ ಹೊಡೆತಕ್ಕೆ ವಯನಾಡಿನಲ್ಲಿ ಭೂಕುಸಿತ (Wayanad Landslides) ಸಂಭವಿಸಿದ್ದು, ಸಾವಿನ ಸಂಖ್ಯೆ 84ಕ್ಕೆ ಏರಿಕೆಯಾಗಿದೆ. ಅಲ್ಲದೇ ನೂರಾರು ಮಂದಿ ಅವಶೇಷಗಳಡಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಗುಡ್ಡಗಾಡು ಪ್ರದೇಶವಾಗಿರುವ ಮೆಪ್ಪಾಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಭೀತಿ ಎದುರಾಗಿದೆ. ಈ ನಡುವೆ ಕೇರಳಕ್ಕೆ ಅಗತ್ಯ ನೆರವು ನೀಡುವುದಾಗಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌ (MK Stalin) ಭರವಸೆ ನೀಡಿದ್ದಾರೆ.

Chooralmala Wayanad landslides

ಈಗಾಗಲೇ ಸ್ಟಾಲಿನ್‌ ಸರ್ಕಾರದ ವತಿಯಿಂದ ರಕ್ಷಣಾ ಕಾರ್ಯಾಚರಣೆಗಾಗಿ 5 ಕೋಟಿ ರೂ. ತುರ್ತು ನೆರವು ಘೋಷಿಸಿದ್ದಾರೆ. ಅಲ್ಲದೇ ರಾಜ್ಯದಿಂದ ರಕ್ಷಣಾ ತಂಡಗಳನ್ನು ನಿಯೋಜಿಸುವಂತೆ ಹಿರಿಯ ಐಎಎಸ್ ಅಧಿಕಾರಿಗಳಾದ ಜಿ ಸಮೀರನ್ ಮತ್ತು ಜಾನಿ ಟಾಮ್ ವರ್ಗೀಸ್ ಅವರಿಗೆ ಜವಾಬ್ದಾರಿ ವಹಿಸಿದ್ದಾರೆ. ಸ್ಟಾಲಿನ್‌ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ತಮಿಳುನಾಡು ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆ. 20 ಅಗ್ನಿಶಾಮಕ ದಳದವರು, 20 ಸಿಬ್ಬಂದಿಯನ್ನು ಒಳಗೊಂಡ ಎಸ್‌ಡಿಆರ್‌ಎಫ್ (SDRF) ತಂಡ ಮತ್ತು 10 ವೈದ್ಯರು, ದಾದಿಯರು ಹಾಗೂ ಸಹಾಯಕ ಸಿಬ್ಬಂದಿಯನ್ನೊಳಗೊಂಡ ತಂಡವನ್ನು ಕೇರಳಕ್ಕೆ ಕಳುಹಿಸುವುದಾಗಿ ತಿಳಿಸಿದ್ದಾರೆಂದು ಎಂದು ಸರ್ಕಾರಿ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: Delhi Coaching Centre Flooded: ಯುಪಿಎಸ್‌ಸಿ ವಿದ್ಯಾರ್ಥಿಗಳ ಸಾವಿನ ತನಿಖೆಗೆ ಸಮಿತಿ ರಚಿಸಿದ ಗೃಹ ಇಲಾಖೆ

landslides in Wayanad

ಅಲ್ಲದೇ ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಕರ್ನಾಟಕ ಸಿಎಂ ಸಿದ್ದರಾಮಯ್ಯ, ಕೇರಳದಲ್ಲಿ (Kerala Landslides) ಸಂಭವಿಸಿದ ಗುಡ್ಡ ಕುಸಿತ ಅವಘಡದಲ್ಲಿ 70ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು, ಹಲವರು ಕಣ್ಮರೆಯಾಗಿರುವ ಸುದ್ದಿ ಕೇಳಿ ಎದೆ ನಲುಗಿತು. ಇಂತಹ ಸಂಕಷ್ಟದ ಸಮಯದಲ್ಲಿ ನೆರೆಯ ಕೇರಳ ಜನರ ಜೊತೆ ನಾವು ನಿಲ್ಲಲಿದ್ದೇವೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ವಯನಾಡಿನ ಬೆಟ್ಟದಲ್ಲಿ ಜಲಸ್ಫೋಟ – 19 ಮಂದಿ ಸಾವು, ನೂರಾರು ಮಂದಿ ಸಿಲುಕಿರುವ ಸಾಧ್ಯತೆ

landslides in Wayanad

NDRF ತಂಡದಿಂದ ರಕ್ಷಣಾ ಕಾರ್ಯ:
ಮೆಪ್ಪಾಡಿ ಜಿಲ್ಲೆಯಲ್ಲಿ ಎಲ್ಲಿ ನೋಡಿದರೂ ಮಣ್ಣಿನ ರಾಶಿಯೇ ಕಂಡು ಬಂದಿದ್ದು, ರಸ್ತೆ, ಸೇತುವೆ, ಮನೆಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ಮತ್ತೊಂದೆಡೆ ಎನ್‌ಡಿಆರ್‌ಎಫ್, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ಈವರೆಗೆ ಸುಮಾರು 101 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಕಲ್ಪೆಟ್ಟಾದ ಬತ್ತೇರಿ ಸೇಂಟ್ ಮೇರಿಸ್ ಎಸ್‌ಕೆಎಂಜೆ ಶಾಲೆಯಲ್ಲಿ ಆಶ್ರಯ ಶಿಬಿರವನ್ನು ಸ್ಥಾಪಿಸಲಾಗಿದ್ದು, ವೈದ್ಯಕೀಯ ತಂಡಗಳು ಅಂಬುಲೆನ್ಸ್‌ಗಳೊಂದಿಗೆ ಸ್ಥಳದಲ್ಲೇ ಬಿಡುಬಿಟ್ಟಿವೆ. ಜೊತೆಗೆ ಸಂತ್ರಸ್ತರಿಗೆ ಆಹಾರ ಬಟ್ಟೆ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಅಭಿಮನ್ಯುವಿಗೆ ಮಾಡಿದಂತೆ ಇಡೀ ಭಾರತಕ್ಕೆ ಚಕ್ರವ್ಯೂಹ ರಚಿಸಿದ್ದಾರೆ, ದೇಶವನ್ನ ಧ್ವಂಸಗೊಳಿಸುತ್ತಾರೆ – ರಾಗಾ ಆತಂಕ

ರಕ್ಷಣೆಗೆ ಧಾವಿಸಿದ ಸೇನಾ ಶ್ವಾನದಳ
ಸದ್ಯ ಭೂಕುಸಿತದಿಂದ ರಕ್ಷಣೆಗೆ ಹೆಚ್ಚಿನ ಸಲಕರಣೆಗಳು ಹಾಗೂ ಸಿಬ್ಬಂದಿಯ ಅವಶ್ಯಕವಿದ್ದು, ಕೇರಳ ಸರ್ಕಾರದ ಮನವಿಯಂತೆ ಮೀರತ್ ಆರ್.ವಿ.ಸಿ ಯಿಂದ ಸೇನಾ ಶ್ವಾನದಳವನ್ನು ಕೇರಳಕ್ಕೆ ಕಳುಹಿಸಲಾಗಿದೆ. ನೌಕಾಪಡೆಯ 50 ಸದಸ್ಯರ ತಂಡ ಕೂಟ ಆಗಮಿಸಿದೆ. ಭಾರತೀಯ ನೌಕಾಪಡೆಯ ನದಿ ದಾಟುವ ತಂಡ ವಯನಾಡ್ ತಲುಪುತ್ತಿದೆ. ಎಜಿಮಲ ನೌಕಾ ಅಕಾಡೆಮಿಯಲ್ಲಿರುವ ನೌಕಾಪಡೆಯ ತಂಡವು ವೈದ್ಯಕೀಯ ತಜ್ಞರನ್ನೂ ಹೊಂದಿರುತ್ತದೆ. ಇದನ್ನೂ ಓದಿ:  ಕುಡಿಯುವ ನೀರಿಗಾಗಿ ಜನ ಮತ ಹಾಕಿದ್ದಾರೆ; ಬೆಂಗಳೂರಿಗೆ ನೀರು ಕೊಡಿ – ರಾಜ್ಯಸಭೆಯಲ್ಲಿ ಹೆಚ್‌ಡಿಡಿ ಮನವಿ

TAGGED:ಎಂ.ಕೆ.ಸ್ಟಾಲಿನ್ಎನ್‍ಡಿಆರ್‍ಎಫ್ಕೇರಳತಮಿಳುನಾಡುವಯನಾಡು ಭೂಕುಸಿತಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Bengaluru Dog Murder
Bengaluru City

ತಾನೇ ಸಾಕಿದ್ದ ಶ್ವಾನಕ್ಕೆ ಚಿತ್ರಹಿಂಸೆ ಕೊಟ್ಟು ಬರ್ಬರವಾಗಿ ಹತ್ಯೆಗೈದ ಮಹಿಳೆ

Public TV
By Public TV
14 minutes ago
mysuru dasara jamboo savari 11
Districts

Mysuru Dasara | ಸೆ.22ರಿಂದ 11 ದಿನಗಳ ಕಾಲ ವಿಜೃಂಭಣೆಯ ದಸರಾ

Public TV
By Public TV
15 minutes ago
Tirupati Train
Bengaluru City

ತಿರುಪತಿಗೆ ತೆರಳೋ ಭಕ್ತಾದಿಗಳಿಗೆ ಗುಡ್ ನ್ಯೂಸ್ – ನೂತನ ರೈಲು ಸೇವೆ ಆರಂಭ

Public TV
By Public TV
20 minutes ago
CRIME
Bengaluru City

ಮದ್ವೆ ಆದ್ಮೇಲೆ ಗಂಡನ ಜೊತೆ ಹೇಗಿರಬೇಕು ಅಂತ ಹೇಳ್ಕೊಡ್ತೀನಿ – ತಾಯಿಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ!

Public TV
By Public TV
21 minutes ago
Yatnal
Latest

ರಮೇಶ್‌ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದೇ ವಿಜಯೇಂದ್ರ: ಮತ್ತೆ ಗುಡುಗಿದ ಯತ್ನಾಳ್

Public TV
By Public TV
29 minutes ago
PM Modi 4
Latest

ಪ್ರಧಾನಿ ಮೋದಿಗೆ `ಧರ್ಮ ಚಕ್ರವರ್ತಿ’ ಬಿರುದು ಪ್ರದಾನ

Public TV
By Public TV
36 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?