Wayanad Landslide |ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಘೋಷಣೆ

Public TV
1 Min Read
Siddaramaiah 2

ನವದೆಹಲಿ: ಕೇರಳದ ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: Wayanad Landslide| ಪಾಪುವನ್ನು ಹಿಡಿಯುವಷ್ಟರಲ್ಲಿ ಗೋಡೆ ಕುಸಿದು ಬಿತ್ತು: ಕಣ್ಣೀರಿಟ್ಟ ತಾಯಿ

Wayanad Landslide Houses washed away town partially swept off Chooralmala Mundakkai Meppadi News

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಅಂತಾ ಟ್ವೀಟ್ ಮಾಡಿದ್ದಾರೆ.  ಇದನ್ನೂ ಓದಿ: Wayanad Landslide | ಒಂದೇ ಕುಟುಂಬದ 9 ಜನ ಕನ್ನಡಿಗರು ನಾಪತ್ತೆ – ಕಣ್ಣೀರಿಟ್ಟ ಸಂಬಂಧಿಕ

ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ತಿಳಿಸಿದ್ದಾರೆ.

 

Share This Article