ನವದೆಹಲಿ: ಜನರ ಆದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ ಎಂದು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಸೋತ ಬಳಿಕ ಮಾತನಾಡಿದ ಅವರು, ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಚುನಾವಣೆಯಲ್ಲಿ ಅವರು ನೀಡಿದ ಎಲ್ಲಾ ಭರವಸೆಗಳನ್ನುಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದರು.
#WATCH | On #DelhiElection2025, AAP national convener and former Delhi CM, Arvind Kejriwal, “We accept the mandate of the people with great humility. I congratulate the BJP for this victory and I hope they will fulfil all the promises for which people have voted them. We have… pic.twitter.com/VZOwLS8OVH
— ANI (@ANI) February 8, 2025
ಕಳೆದ 10 ವರ್ಷಗಳಲ್ಲಿ ನಾವು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. ನಾವು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡುವುದರ ಜೊತೆಗೆ ಜನರ ನಡುವೆಯೇ ಇದ್ದು ಅವರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.