ಕೋಮುವಾದಿ ಶಕ್ತಿ ದೂರ ಇಡಲು ನಾವು ಕಾಂಗ್ರೆಸ್ ಒಂದಾಗಿದ್ದೇವೆ: ರೇವಣ್ಣ

Public TV
1 Min Read
hsn revanna

ಹಾಸನ: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಅವರು ಇಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ ಮನೆಗೆ ಭೇಟಿ ನೀಡಿದ್ದಾರೆ.

ಬಿ.ಶಿವರಾಂ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ರೇವಣ್ಣ, “ಕೋಮುವಾದಿ ಶಕ್ತಿ ದೂರ ಇಡಲು ನಾವು ಕಾಂಗ್ರೆಸ್ ಒಂದಾಗಿದ್ದೇವೆ. ನಾವೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ಸಣ್ಣ ಪುಟ್ಟ ಸಮಸ್ಯೆ ಇದರೂ ಒಟ್ಟಾಗಿ ಮಾತನಾಡಿದ್ದೇವೆ. ನಾವು ಶಿವರಾಂ ಒಟ್ಟಾಗಿ ಸೇರಿ ಚುನಾವಣೆ ಕಾರ್ಯತಂತ್ರ ಮಾಡುತ್ತೇವೆ” ಎಂದು ಎಚ್‍ಡಿ ರೇವಣ್ಣ ಹೇಳಿದ್ದಾರೆ.

hsn revanna 2

ಅಲ್ಲದೆ ಮುಂದೆ ನಾವಿಬ್ಬರೂ ಜಿಲ್ಲೆಯ ಅಭಿವೃದ್ಧಿ ಮಾಡುತ್ತೇವೆ ಎಂದು ಬಿ. ಶಿವರಾಂ ಸಚಿವ ರೇವಣ್ಣ ಮಾತಿಗೆ ಧ್ವನಿಗೂಡಿಸಿದ್ದಾರೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಹಳೇ ಭಿನ್ನಮತ ಮರೆತು ಒಟ್ಟಾಗಿ ಹೋಗುತ್ತೇವೆ. ಮುಂದೆ ಕಾಂಗ್ರೆಸ್ ಕಾರ್ಯಕರ್ತರನ್ನೂ ವಿಶ್ವಾಸಕ್ಕೆ ಪಡೆಯಿರಿ ಎಂದು ಮನವಿ ಮಾಡಿದ್ದೇನೆ. ಹಿಂದಿನ ಭಾವನೆ ಬೇಡ, ನಂಬಿಕೆಯಿಂದ ಮುನ್ನಡೆಯೋಣ. ನಾನೂ ಕಾಂಗ್ರೆಸ್ ಕಾರ್ಯಕರ್ತರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವೆ ಎಂದು ರೇವಣ್ಣ ಹೇಳಿದ್ದಾರೆ.

ಇತ್ತೀಚೆಗೆ ಶಿವರಾಂ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷ ಜೆಡಿಎಸ್ ಕುರಿತು ಅಸಮಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ಇಂದು ರೇವಣ್ಣ ಚುನಾವಣೆಯಲ್ಲಿ ಪುತ್ರನಿಗೆ ಬೆಂಬಲಿಸಲು ಸಹಾಯ ಯಾಚಿಸಲು ಶಿವರಾಂ ಮನೆಗೆ ಆಗಮಿಸಿದ್ದರು. ಈ ವೇಳೆ ಶಿವರಾಂ ರೇವಣ್ಣರನ್ನು ಹಾರ ಮತ್ತು ಶಾಲು ಹಾಕಿ ಸ್ವಾಗತಿಸಿದ್ದಾರೆ. ಬಳಿಕ ಟೀ ಕುಡಿಯುತ್ತಾ ಶಿವರಾಂ ಹೊತೆ ಉಭಯ ಕುಶಲೋಪರಿ ನಡೆಸಿದ್ದಾರೆ. ಇದೇ ವೇಳೆ ರೇವಣ್ಣ ಮನೆ ಆಲ್ಟ್ರೇಷನ್ ಮಾಡಿಸಿದ್ದೀರಾ ಎಂದು ಪ್ರಶ್ನಿಸಿದ್ದಕ್ಕೆ ನಮ್ಮ ಮನೆಯಲ್ಲಿ ವಾಸ್ತುಗೀಸ್ತು ಇಲ್ಲ ಎಂದು ಶಿವರಾಂ ನಗೆ ಚಟಾಕಿ ಹಾರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *