ನಮ್ಮದು ರೈತರ ಪರವಾದ ಸರ್ಕಾರ: ಜಗದೀಶ್ ಶೆಟ್ಟರ್

Public TV
1 Min Read
Jagadish Shettar Hubli National Flag Congress Narendra Modi

ಹುಬ್ಬಳ್ಳಿ: ಉತ್ತಮ ಗುಣಮಟ್ಟದ ರಸ್ತೆಗಳ ನಿರ್ಮಾಣದಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ನಮ್ಮ ಸರ್ಕಾರದ ಮುಖ್ಯ ಧ್ಯೇಯ ರೈತರ ಅಭಿವೃದ್ಧಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadeesh Shettar) ಹೇಳಿದ್ದಾರೆ.

Farmers Budget1

ವಾರ್ಡ್ ನಂ.35 ರ ಭೈರಿದೇವರಕೊಪ್ಪದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 8 ಕೋಟಿ ಅನುದಾನದಲ್ಲಿ, ಎರಡು ಸಣ್ಣ ಸೇತುವೆ ಒಳಗೊಂಡಂತೆ ಭೈರಿದೇವರಕೊಪ್ಪ – ಮಾರಡಗಿ, ಭೈರಿದೇವರಕೊಪ್ಪ – ಸೋಮಾಪುರ ಜಿಲ್ಲಾ ಮುಖ್ಯ ರಸ್ತೆ ಸುಧಾರಣಾ ಕಾಮಗಾರಿಗಳು ಹಾಗೂ ಭೈರಿದೇವರಕೊಪ್ಪ – ಸದಾಶಿವ ನಗರದ 24*7 ಕುಡಿಯುವ ನೀರು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಸಮೀಕ್ಷೆ ಏನೇ ಹೇಳಿದ್ರೂ ಈ ಬಾರಿ JDSಗೆ ಅಧಿಕಾರ- HDK

hubballi jagadish shettar

ರಸ್ತೆಗಳನ್ನು ಡಾಂಬರೀಕರಣ ಮಾಡುವುದರಿಂದ ಮನೆಯಿಂದ ಹೊಲಗಳಿಗೆ ಸರಾಗವಾಗಿ ಓಡಾಡಬಹುದು. ಅಲ್ಲದೇ ಬೆಳೆದ ಬೆಳೆಗಳನ್ನು ಸುಲಭವಾಗಿ ಸಾಗಿಸಬಹುದು. ರಸ್ತೆ (Road) ಗಳು ಅತಿಕ್ರಮಣವಾಗಿದ್ದರೆ ತೆರವುಗೊಳಿಸಿ ರಸ್ತೆಗಳನ್ನು ಅಗಲೀಕರಣ ಮಾಡಲಾಗುವುದು. ಮುಂದಿನ ದಿನಗಳಲ್ಲಿ ಹಳ್ಳಕ್ಕೆ ಸೇತುವೆ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.ಇನ್ನೂ ನಮ್ಮ ಸರ್ಕಾರದ ರೈತರ ಪರವಾದ ಸರ್ಕಾರ ರೈತರ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸ ಮಾಡುತ್ತಿದೆ ಎಂದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *