ಚಾಮರಾಜನಗರ: ಬಿಜೆಪಿ (BJP) ಅಂದ್ರೆ ನಮಗೆ ಭಯ ಇದೆ, 24 ಗಂಟೆಯೂ ನಾವು ಎಚ್ಚರದಿಂದ ಇರಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಆತಂಕ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಟ್ಟು 20 ಜನ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಶಾಸಕರ ಹೆಸರು ಪ್ರಸ್ತಾಪಿಸದೇ ಆಪರೇಷನ್ ಹಸ್ತದ ಗುಟ್ಟು ರಿವೀಲ್ ಮಾಡಿದ್ದಾರೆ. ಕಾಂಗ್ರೆಸ್ (Congress) ಪಕ್ಷದ ತತ್ವ ಸಿದ್ಧಾಂತಕ್ಕೆ ಒಪ್ಪಿ ಬರುವವರು ಖಂಡಿತಾ ಬರಬಹುದು ಅಂತಾ ಹೇಳಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡುಗಡೆ – ಕೆಆರ್ಎಸ್ ಡ್ಯಾಂ ನೀರಿನ ಮಟ್ಟ 106 ಅಡಿಗೆ ಕುಸಿತ
ಸಹೋದರ ರಮೇಶ್ ಜಾರಕಿಹೊಳಿಯನ್ನ (Ramesh Jarkiholi) ಮತ್ತೆ ಕಾಂಗ್ರೆಸ್ಗೆ ಕರೆತರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನನಗೆ ಅದರ ಬಗ್ಗೆ ಮಾಹಿತಿ ಇಲ್ಲ. ಪಕ್ಷದ ಹಿರಿಯರು ಏನ್ ಹೇಳ್ತಾರೊ ಅದಕ್ಕೆ ನಾವು ಬದ್ಧ ಎಂದಿದ್ದಾರೆ.
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪೆನ್ಡ್ರೈವ್ ವಿಚಾರಕ್ಕೆ ತಿರುಗೇಟು ನೀಡಿದ ಸಚಿವ, ಅದು ಮುಗಿದುಹೋದ ಅಧ್ಯಾಯ. ನಾನು ಅದರ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶ್ರೀಕ್ಷೇತ್ರ ಕಾಳಹಸ್ತಿಯಲ್ಲಿ ವಿಷ್ಣು ಮಂಚು ನಟನೆಯ ‘ಕಣ್ಣಪ್ಪ’ ಚಿತ್ರಕ್ಕೆ ಚಾಲನೆ
ಇದೇ ವೇಳೆ ವಿವಿಧ ವಿಚಾರಗಳ ಬಗ್ಗೆ ಪ್ರಸ್ತಾಪಿಸಿ, ಬೆಳಗಾವಿ ಜಿಲ್ಲೆ ದೇಶದಲ್ಲೇ ಅತಿ ದೊಡ್ಡ ಜಿಲ್ಲೆಯಾಗಿರುವುದರಿಂದ ಪ್ರತ್ಯೇಕ ಜಿಲ್ಲೆಯ ಅವಶ್ಯಕತೆಯಿದೆ. ತಮಿಳುನಾಡಿಗೆ ಕೆಆರ್ಎಸ್ ನಿಂದ ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನ ಪರಿಪಾಲನೆ ಮಾಡುವುದು ನಮ್ಮ ಕರ್ತವ್ಯ ಎಂದು ತಿಳಿಸಿದ್ದಾರೆ.
Web Stories