ದಾವಣಗೆರೆ: ಗ್ರಾಮಗಳಲ್ಲಿ ನಾವು ದಲಿತರೆಂದು ಮನೆಯ ಒಳಗೆ ಸೇರಿಸುವುದಿಲ್ಲ ಎಂದು ಆಶಾ ಕಾರ್ಯಕರ್ತೆಯೊಬ್ಬರು ತಹಶೀಲ್ದಾರರ ಮುಂದೆ ಕಣ್ಣೀರು ಹಾಕಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರು ಗ್ರಾಪಂ ವ್ಯಾಪ್ತಿಯ ಕಾನನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಗ್ರಾಮಗಳಲ್ಲಿ ಸಮೀಕ್ಷಾ ಕಾರ್ಯ ಮಾಡಲು ಪ್ರತಿ ಮನೆಗೆ ತೆರಳಿದರೆ ನಾವು ದಲಿತರೆನ್ನುವ ಕಾರಣಕ್ಕೆ ಒಳಗೆ ಪ್ರವೇಶ ನೀಡದೆ ಹೊರಗೇ ನಿಲ್ಲಿಸುತ್ತಾರೆ. ಹೀಗಿರುವಾಗ ಹೇಗೆ ಕೆಲಸ ಮಾಡಲಿ ಸರ್? ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: 819 ಕೋಟಿ ವಂಚಿಸಿದ್ರಾ ಮಾಜಿ ಸಚಿವ..? – ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಣ್ ಗಂಭೀರ ಆರೋಪ
ಕಾನನಕಟ್ಟೆ ಗ್ರಾಮದ ಗ್ರಾಮಸ್ಥರು ನಿಗೂಢ ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಪತಿ, ತಾಲೂಕು ಆರೋಗ್ಯಾಧಿಕಾರಿ ನಾಗರಾಜ್, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಪೂಜಾರ ಸಿದ್ದಪ್ಪ ಕಾನನಕಟ್ಟೆಗೆ ಭೇಟಿ ನೀಡಿದ್ದರು. ಈ ವೇಳೆ ಆಶಾ ಕಾರ್ಯಕರ್ತೆ ತಮ್ಮ ನೋವು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸರ್ಜರಿಗಾಗಿ ಸುನೀಲ್ ಶೆಟ್ಟಿ ಪುತ್ರಿ ಜೊತೆ ಜರ್ಮನಿಗೆ ಹಾರಿದ ಕ್ರಿಕೆಟಿಗ ಕೆ.ಎಲ್ ರಾಹುಲ್
ಅಧಿಕಾರಿಗಳು ಕೆಲಸ ಮಾಡಿ ಎಂದು ಹೇಳುತ್ತಾರೆ. ಆದರೆ ನಾವು ಎಸ್ಸಿ ಜನಾಂಗದವರೆಂದು ಸವರ್ಣಿಯರು ಮನೆಯೊಳಗೆ ಪ್ರವೇಶ ನೀಡುತ್ತಿಲ್ಲ. ಇದರಿಂದ ನೀರು ಸಂಗ್ರಹಿಸುವ ತೊಟ್ಟಿಗಳನ್ನು ಪರಿಶೀಲನೆ ನಡೆಸಲು ಸಾಧ್ಯವಿಲ್ಲ. ಸಮೀಕ್ಷೆ ಮಾಡಿ ವರದಿ ನೀಡಲೂ ಸಾಧ್ಯವಾಗುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ. ಬಳಿಕ ತಾಪಂ ಇಓ ಲಕ್ಷ್ಮೀಪತಿ ಸಮಾಧಾನಪಡಿಸಿ ಸಮೀಕ್ಷೆ ಕಾರ್ಯ ನಡೆಸುವಂತೆ ಸಲಹೆ ನೀಡಿದ್ದಾರೆ.