ಹಾಸನ: ಸಚಿವ ಸಂಪುಟ ಪುನಾರಚನೆಯ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನದ ಹೊಗೆ ಕಾಣುತ್ತಿದೆ. ಇದಕ್ಕೆ ಪೂರಕ ಎಂಬಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳದಲ್ಲಿದ್ದು, ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ಸಚಿವ ಹೆಚ್.ಡಿ.ರೇವಣ್ಣ, ಸಮ್ಮಿಶ್ರ ಸರ್ಕಾರಕ್ಕೆ ಏನೂ ಆಗಲ್ಲ. ಎಲ್ಲ ಗೊಂದಲಗಳು ಕೆಲವೇ ದಿನಗಳಲ್ಲಿ ಅಂತ್ಯವಾಗಲಿವೆ ಎಂದು ಭವಿಷ್ಯ ನುಡಿದಿದ್ದಾರೆ.
ಜನವರಿ 3 ರಿಂದ 13ರೊಳಗೆ ಎಲ್ಲವೂ ಸರಿ ಹೋಗಲಿದೆ ಅಂತಾ ನಾನೇ ಜೋತಿಷ್ಯ ನುಡಿಯುತ್ತಿದ್ದೇನೆ. ರಮೇಶ್ ಜಾರಕಿಹೊಳಿ ಅವರಿಗೆ ಸಣ್ಣ ಪ್ರಮಾಣದಲ್ಲಿ ಅಸಮಾಧಾನವಿದೆ. ಎಲ್ಲಾ ಸಚಿವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ. ರಮೇಶಣ್ಣ ನನ್ನ ಅತ್ಮೀಯ ಗೆಳೆಯರು ಆಗಿದ್ದಾರೆ. ರಮೇಶಣ್ಣ, ನಾಗೇಂದ್ರ ಸೇರಿದಂತೆ ಎಲ್ಲರನ್ನೂ ಜೊತೆಗಿಟ್ಟುಕೊಳ್ಳುತ್ತೇವೆ. ಈ ತಿಂಗಳ 3 ರಿಂದ 13 ರಿಂದ ಎಲ್ಲಾ ಸರಿ ಹೋಗುತ್ತದೆ, ಸಮ್ಮಿಶ್ರ ಸರ್ಕಾರ ಐದು ವರ್ಷವನ್ನು ಪೂರ್ಣಗೊಳಿಸುತ್ತದೆ ಎಂದು ರೇವಣ್ಣವರು ಆತ್ಮವಿಶ್ವಾಸ ವ್ಯಕ್ತಪಡಿಸಿದ್ರು.
- Advertisement 2
- Advertisement 3
ಹಾಸನ ಜಿಲ್ಲೆಯ ಶಾಲಾ-ಕಾಲೇಜು ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ., ಯು.ಕೆ.ಜಿ. ತೆರೆಯಬೇಕು. ಇದರಿಂದ ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೇ ಆರಂಭಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಇಲ್ಲವಾದಲ್ಲಿ ಎಲ್ಲಾ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ರದ್ದು ಮಾಡಿ, ಕನ್ನಡ ಭಾಷೆಯಲ್ಲಿ ವಿದ್ಯಾಭ್ಯಾಸ ನೀಡಲಿ. ಇದು ನನ್ನ ಸ್ವಂತ ಅಭಿಪ್ರಾಯ ಇದರಲ್ಲಿ ರಾಜಿಯೇ ಇಲ್ಲ ಎಂದು ಹೇಳಿದರು.
- Advertisement 4
ಖಾಸಗಿ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವುದಿಲ್ಲ. ಶ್ರೀಮಂತರ ಮಕ್ಕಳಂತೆ ಬಡ ಮಕ್ಕಳಿಗೂ ಉನ್ನತ ಶಿಕ್ಷಣ ಸಿಗಬೇಕು ಎಂಬುವುದು ನಮ್ಮ ಆಶಯ. ಈ ಬಗ್ಗೆ ಧ್ವನಿ ಎತ್ತಲು ಬುದ್ದಿ ಜೀವಿಗಳಿಗೂ ಮನವಿ ಮಾಡುತ್ತೇನೆ. ಖಾಸಗಿ ಶಾಲೆಗಳ ಡೊನೇಷನ್ ಹಾವಳಿ ತಡೆಗಟ್ಟಲು ಸಾಧ್ಯವಿಲ್ಲ. ಕಾರಣ ಹಣವಂತರು ಶಾಲೆಗಳನ್ನು ನಡೆಸುತ್ತಿದ್ದಾರೆ. ಇಂಗ್ಲಿಷ್ ಭಾಷೆಯ ಶಿಕ್ಷಕರನ್ನು ನೇಮಕ ಮಾಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಅಂತಾ ಅಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv