3 ಸೀಟ್‌ ಕೇಳಿದ್ದೀವಿ, ತಗೊಳ್ತೀವಿ: ಬಿಜೆಪಿ ವರಿಷ್ಠರ ಭೇಟಿ ಬಳಿಕ ಹೆಚ್‌ಡಿಕೆ ಮಾತು

Public TV
1 Min Read
KUMARASWAMY

– ಮಂಡ್ಯದಲ್ಲಿ ನಿಖಿಲ್‌ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ದೆಹಲಿಯಿಂದ ವಾಪಸ್‌ ಆದ ಬಳಿಕ ಹೆಚ್‌ಡಿಕೆ, ಬಿಜೆಪಿ ನಾಯಕರ ಭೇಟಿ ಮಾಡಿದ್ದೇವೆ. ಮೂರು ಸೀಟು ಕೇಳಿದ್ದೇವೆ, ತೆಗೆದುಕೊಳ್ತೀವಿ. ಚುನಾವಣೆಗೆ ಎಲ್ಲಾ ರೆಡಿಯಾಗಿದ್ದೀವಿ. ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೋಮವಾರ ಬಿಜೆಪಿ ಸೇರ್ಪಡೆ: ಡಾ. ಮಂಜುನಾಥ್‌

Lok Sabha Election 2024 Dr Manjunath HD Kumaraswamy Meets home minister amit shah in Delhi

ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ಮಾತನಾಡಿ, ಅದನ್ನು 25ರ ನಂತರ ಹೇಳ್ತೀನಿ. ನನಗೆ ಆರೋಗ್ಯ ಸಮಸ್ಯೆ ಇದೆ. ಚಿಕಿತ್ಸೆ ನಂತರ ಮಾತಾಡ್ತೀನಿ ಎಂದು ಮಾತನಾಡಿದ್ದಾರೆ.

ಹೆಚ್‌.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಗೃಹ ಸಚಿವ ಅಮಿತ್‌ ಶಾ (Amit Shah) ಅವರನ್ನು ಶನಿವಾರ ಭೇಟಿಯಾಗಿದ್ದರು. ಮೈತ್ರಿ ಟಿಕೆಟ್‌ ಅಂತಿಮಗೊಳಿಸುವ ವಿಚಾರವಾಗಿ ಭೇಟಿ ಮಾಡಿದ್ದರು ಎನ್ನಲಾಗಿತ್ತು. ಇದನ್ನೂ ಓದಿ: ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ – ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ಎಫ್‍ಐಆರ್

ಹೆಚ್‌ಡಿಕೆಗೆ ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ಸಾಥ್‌ ನೀಡಿದ್ದರು.

Share This Article