Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾವು ರಾಜಕೀಯ ಸಭೆ ಮಾಡಿಲ್ಲ, ನಮ್ಮ ಮೇಲಿನ ಆಪಾದನೆಯಿಂದ ಬೇಜಾರಾಗಿದೆ: ಪರಮೇಶ್ವರ್

Public TV
Last updated: October 10, 2024 5:40 pm
Public TV
Share
3 Min Read
g parameshwar
SHARE

ಬೆಂಗಳೂರು: ನಾನಾಗಲಿ, ಸತೀಶ್ ಜಾರಕಿಹೊಳಿ ಮತ್ತು ಮಹದೇವಪ್ಪ ಅವರಾಗಲಿ ಮುಖ್ಯಮಂತ್ರಿ ಪದವಿ ಬಗ್ಗೆ ಯಾವತ್ತು ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಸ್ಪಷ್ಟಪಡಿಸಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮ ಸ್ನೇಹಿತರು ಕೇಳಿದಾಗ ಐದು ವರ್ಷ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (CM Siddaramaiah) ಅವರು ಮುಂದುವರೆಯುತ್ತಾರೆ ಎಂದು ಅನೇಕ ಸಲ ಹೇಳಿದ್ದೇನೆ. ನಿನ್ನೆ ಮೈಸೂರಿನಲ್ಲಿಯೂ (Mysuru) ಸಹ ಇದೇ ಮಾತನ್ನು ಹೇಳಿದ್ದೇನೆ. ನಾವು ಯಾರು ಸಹ ಮುಖ್ಯಮಂತ್ರಿಯನ್ನು ಬದಲಾಯಿಸಿ, ಬೇರೆಯವರನ್ನು ಮಾಡಿ ಎಂದು ಮಾತನಾಡಿಲ್ಲ ಎಂದರು. ಇದನ್ನೂ ಓದಿ: ಒಂದು ಯುಗ ಈಗಷ್ಟೇ ಊರುಳಿತು: ರತನ್ ಟಾಟಾ ನಿಧನಕ್ಕೆ ಅಮಿತಾಬ್ ಬಚ್ಚನ್ ಸಂತಾಪ

ಇನ್ಮುಂದೆ ನಾನು ವೈಯಕ್ತಿಕವಾಗಿ ಮುಖ್ಯಮಂತ್ರಿ ವಿಚಾರದಲ್ಲಿ ನೀವು ಕೇಳಿದರು ಪ್ರತಿಕ್ರಿಯಿಸುವುದಿಲ್ಲ. ಕೆಲವು ವಿಚಾರಗಳಲ್ಲಿ ಅಗತ್ಯ ಇದ್ದರೆ ಭೇಟಿ ಮಾಡುತ್ತೇವೆ. ಅನವಶ್ಯಕವಾಗಿ ಡಿನ್ನರ್ ಮೀಟಿಂಗ್, ರಾಜಕೀಯ ಸಭೆಗಳನ್ನು ನಾವು ಈವರೆಗೂ ಮಾಡಿಲ್ಲ. ಮುಂದೆಯೋ ಮಾಡೋದಿಲ್ಲ. ಇದು ನನ್ನ ಸ್ಪಷ್ಟೀಕರಣ. ಏನೂ ಇಲ್ಲದೇ ಅಪಾದಿತರ ಸ್ಥಾನದಲ್ಲಿ ನಿಲ್ಲಿಸಿದರೆ ನಮಗೆ ಬೇಜಾರಾಗುವುದಿಲ್ಲವೇ? ನಾವು ಜವಾಬ್ದಾರಿ ಇರುವವರು. ಸುಮ್ಮನೇ ಹುಡುಗಾಟಿಕೆ ಮಾಡುವುದಿಲ್ಲ. ನಾನು ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ನನಗೂ ಜವಾಬ್ದಾರಿ ಇದೆ ಎಂದು ಹೇಳಿದರು. ಇದನ್ನೂ ಓದಿ: ಉರಿನತ್ತ ಜನ | ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

ವಿಪಕ್ಷ ನಾಯಕ ಆರ್.ಅಶೋಕ್ (R Ashok) ಆರೋಪದ ಕುರಿತು ಪ್ರತಿಕ್ರಿಯಿಸಿ, ಸಿದ್ದಗಂಗಾ ಮಠಕ್ಕೂ ನಮಗೂ ಇರುವ ಸಂಬಂಧವೇ ಬೇರೆ. ಇತ್ತೀಚೆಗೆ ನಾನು ಮಠಕ್ಕೆ ಹೋಗೇ ಇಲ್ಲ. ಸಿದ್ದಗಂಗಾ ಮಠಕ್ಕೆ ಹೋದರೆ ಸ್ವಾಮೀಜಿಯವರ ಗದ್ದುಗೆಗೆ ಮತ್ತು ಸಿದ್ದಲಿಂಗ ಸ್ವಾಮೀಜಿಯವರಿಗೆ ನಮಸ್ಕರಿಸಿ ಬರುತ್ತೇನೆ. ನನ್ನ ತಂದೆಯವರ ಕಾಲದಿಂದ ದೊಡ್ಡ ಸ್ವಾಮೀಜಿಯವರು ನಮಗೆಲ್ಲ ಆದರ್ಶ. ಮಠಕ್ಕೆ ಹೋಗಿ ರಾಜಕೀಯ ಮಾತಾಡುವುದಿಲ್ಲ. ಸಿದ್ದಗಂಗಾ ಮಠಕ್ಕೂ ನಮ್ಮ ಕುಟುಂಬಕ್ಕೂ ಅಪಾರವಾದ ಸಂಬಂಧ. ಮಠಕ್ಕೆ ಹೋದಾಗಲೆಲ್ಲ ಮುಖ್ಯಮಂತ್ರಿ ಆಗಬೇಕೆಂದು ಪೂಜೆ ಮಾಡುವುದಿಲ್ಲ ಎಂದು ನುಡಿದರು. ಇದನ್ನೂ ಓದಿ: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಪೂರ್ಣ – ಅ.14 ರಂದು ಆದೇಶ ಪ್ರಕಟ

ಕೋವಿಡ್ ಸಂದರ್ಭದಲ್ಲಿನ ಹಗರಣದ ತನಿಖೆಯ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕಬೇಕು ಎಂದು ಹೇಳುತ್ತಿದ್ದಾರೆ. ಹಿಂದಿನ ಸರ್ಕಾರದಲ್ಲಿ ನಡೆದ ಅಕ್ರಮ ಪ್ರಕರಣಗಳ ತನಿಖೆಯ ಪರಿಶೀಲನೆ ಸಮಿತಿಯ ಸಭೆಯನ್ನು ನಿನ್ನೆ ನಡೆಸಿದ್ದೇನೆ. ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ಕೋವಿಡ್ ತನಿಖೆಯ ಪ್ರಕರಣಕ್ಕೆ ಪ್ರತ್ಯೇಕ ಸಮಿತಿ ಮಾಡಿರುವುದರಿಂದ ವಿಷಯ ನಮ್ಮ ಮುಂದೆ ಚರ್ಚೆಗೆ ಬಂದಿಲ್ಲ ಎಂದರು. ಇದನ್ನೂ ಓದಿ: ರಾಜಕೀಯಕ್ಕಾಗಿ ಕಾಂಗ್ರೆಸ್ ಪಕ್ಷ ದಲಿತ ಕಾರ್ಡ್ ಪ್ಲೇ ಮಾಡ್ತಿದೆ – ಛಲವಾದಿ ನಾರಾಯಣಸ್ವಾಮಿ

ಬಿಜೆಪಿ (BJP) ಆಡಳಿತದಲ್ಲಿ ನಡೆದ ಹಗರಣಗಳ ತನಿಖೆ ಕೆಲವು ಕೊನೆ ಹಂತದಲ್ಲಿವೆ. ಪೂರ್ಣಗೊಂಡ ಬಳಿಕ ವರದಿ ಸಲ್ಲಿಸಬೇಕಾಗುತ್ತದೆ. ಬೇರೆಬೇರೆ ಸಂದರ್ಭದಲ್ಲಿ ಆಗಿರುವ ಪ್ರಕರಣಗಳು ಇವೆ. ಎಲ್ಲ ಪ್ರಕರಣಗಳ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ವಕೀಲ್ ಸಾಬ್ ಗೆಟಪ್‌ನಲ್ಲಿ ರಾಕಿ ಭಾಯ್- ಇದು ‘ಟಾಕ್ಸಿಕ್‌’ ಚಿತ್ರದಲ್ಲಿನ ಯಶ್‌ ಕ್ಯಾರೆಕ್ಟರ್?

ರತನ್ ಟಾಟಾ ನಿಧನಕ್ಕೆ ಸಂತಾಪ:
ರತನ್ ಟಾಟಾ ಅವರು ದೇಶಕ್ಕೆ ಅತ್ಯಂತ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅವರು ತೆಗೆದುಕೊಂಡಂತಹ ಅನೇಕ ನಿರ್ಧಾರಗಳು, ಕೈಗಾರಿಕೆಗಳು ಭಾರತವನ್ನೇ ಪ್ರತಿನಿಧಿಸುವಂತೆ ಕಟ್ಟಿದ್ದಾರೆ. ಅತಿದೊಡ್ಡ ಮಾನವತಾ ವ್ಯಕ್ತಿ. ಅನೇಕ ರೀತಿಯಲ್ಲಿ ಸಮಾಜಕ್ಕೆ ಸೇವೆ ಮಾಡುವುದು, ಅವರಿಗೆ ಬಂದಂತಹ ಲಾಭದಲ್ಲಿ ವಿದ್ಯಾರ್ಥಿಗಳಿಗೆ, ಕಷ್ಟದಲ್ಲಿರುವ ಸಮುದಾಯಗಳಿಗೆ, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ 1,500 ಕೋಟಿ ರೂ. ಸಹಾಯ ಮಾಡಿರುವುದನ್ನು ಸ್ಮರಿಸಬೇಕಿದೆ ಎಂದರು. ಇದನ್ನೂ ಓದಿ: ಬೈಕ್ ಮೆಕಾನಿಕ್ ರಾತ್ರೋರಾತ್ರಿ ಕೋಟ್ಯಧಿಪತಿ – 25 ಕೋಟಿ ಬಹುಮಾನ ಗೆದ್ದ ಮಂಡ್ಯದ ಗಂಡು

ಅವರನ್ನು ದೇಶ, ಸಮಾಜ ಕಳೆದುಕೊಂಡಿದೆ. ಇದು ನಮಗೆ ಆದ ನಷ್ಟ. ಅದನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ರತನ್ ಟಾಟಾ (Ratan Tata) ಸೇವೆಯನ್ನು ಸೂರ್ಯ ಚಂದ್ರ ಇರುವವರೆಗೂ ದೇಶ ಮರೆಯುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ನ್ಯಾನೋ ಕಾರು ತಯಾರಿಸಿದ್ದು ಯಾಕೆ? ಪಶ್ಚಿಮ ಬಂಗಾಳದಿಂದ ಗುಜರಾತ್‌ಗೆ ಘಟಕ ಶಿಫ್ಟ್‌ ಆಗಿದ್ದು ಯಾಕೆ?

TAGGED:bengalurucm siddaramaiahG ParameshwarRatan Tataಜಿ.ಪರಮೇಶ್ವರ್ಬೆಂಗಳೂರುರತನ್ ಟಾಟಾಸತೀಶ್ ಜಾರಕಿಹೊಳಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories
chiranjeevi 6
ಟ್ರೋಲರ್ಸ್‌ ವಿರುದ್ಧ ರೊಚ್ಚಿಗೆದ್ದ ಚಿರಂಜೀವಿ
Cinema Latest South cinema
Santosh balaraj 2
ಕ್ರಿಶ್ಚಿಯನ್ ಸಂಪ್ರದಾಯದಂತೆ ನೆರವೇರಿದ ನಟ ಸಂತೋಷ್ ಬಾಲರಾಜ್ ಅಂತ್ಯಕ್ರಿಯೆ
Bengaluru Rural Cinema Latest Sandalwood
Actress Ramya case koppal man into custody
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ – ಕೊಪ್ಪಳ ಮೂಲದ ಓರ್ವ ವಶಕ್ಕೆ
Cinema Districts Karnataka Koppal Latest Top Stories
DARSHAN 1 1
ಅಪಹರಣಕ್ಕೆ ಸೂಚನೆ ನೀಡಿಲ್ಲ, ಯಾವುದೇ ಪುರಾವೆ ಇಲ್ಲ – ಜಾಮೀನು ರದ್ದು ಮಾಡ್ಬೇಡಿ: ದರ್ಶನ್‌ ವಾದ ಏನು?
Cinema Court Latest Main Post

You Might Also Like

Narendra Modi Kartavya Bhavan 3
Latest

ದೆಹಲಿಯಲ್ಲಿ ಕರ್ತವ್ಯ ಭವನ ಉದ್ಘಾಟಿಸಿದ ಮೋದಿ – ವಿಶೇಷತೆಗಳೇನು?

Public TV
By Public TV
5 minutes ago
supreme Court 1
Court

ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ – ಆ.8ರಂದು ಸುಪ್ರೀಂ ಕೋರ್ಟ್ ವಿಚಾರಣೆ

Public TV
By Public TV
9 minutes ago
Rahul Gandhi
Court

ಅಮಿತ್ ಶಾ ವಿರುದ್ಧದ ಮಾನಹಾನಿ ಕೇಸ್ – ರಾಹುಲ್ ಗಾಂಧಿಗೆ ಜಾಮೀನು ಮಂಜೂರು

Public TV
By Public TV
19 minutes ago
Talaguppa Mysuru Train Coach Derail In Shivamogga
Crime

Shivamogga | ಕಳಚಿದ ತಾಳಗುಪ್ಪ – ಮೈಸೂರು ರೈಲು ಬೋಗಿ; ತಪ್ಪಿದ ಭಾರೀ ಅನಾಹುತ

Public TV
By Public TV
32 minutes ago
kaiga nuclear power plant
Latest

ಕೈಗಾ ಅಣುಸ್ಥಾವರದ ವಿಕಿರಣದಿಂದ ಜನರಲ್ಲಿ ಕ್ಯಾನ್ಸರ್ ಪತ್ತೆಯಾಗಿಲ್ಲ: ಅಣು ವಿದ್ಯುತ್ ಸ್ಥಾವರದ ನಿರ್ದೇಶಕ ಸ್ಪಷ್ಟನೆ

Public TV
By Public TV
1 hour ago
youtubers beaten up Chaos erupted in Dharmasthala devotees outraged 2
Dakshina Kannada

ಯೂಟ್ಯೂಬರ್‌ಗಳಿಗೆ ಥಳಿತ, ಅಪಪ್ರಚಾರಿಗಳನ್ನು ಬಂಧಿಸಿ – ಸಿಡಿದ ಧರ್ಮಸ್ಥಳದ ಭಕ್ತರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?