Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಭ್ರಷ್ಟಾಚಾರ ಮುಗಿಸಲು ನಾವು ಬಂದಿದ್ದೇವೆ – ಬಿಜೆಪಿ, ಕಾಂಗ್ರೆಸ್ ನಡುವೆ ವಾಕ್ಸಮರ

Public TV
Last updated: September 21, 2022 5:02 pm
Public TV
Share
3 Min Read
vidhana parishad 2
SHARE

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ (Vidhana Parishad) ಉತ್ತರ ನೀಡಲು ಕಾಲಾವಕಾಶ ಕೋರಿದ ಘಟನೆ ಸದನದಲ್ಲಿ ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ನಡುವೆ ಮಾತಿನ ಚಕಮಕಿ, ಗದ್ದಲ ಗಲಾಟೆ ಸೃಷ್ಟಿಗೆ ಕಾರಣವಾಯಿತು. ಆರೋಪ ಪ್ರತ್ಯಾರೋಪಗಳಿಂದ ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಗಿ ಕಲಾಪವನ್ನು 5 ನಿಮಿಷ ಮುಂದೂಡಿದ ಘಟನೆ ನಡೆಯಿತು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ, ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಅಶೋಕ್ ಸಮಯಾವಕಾಶ ಕೋರಿದರು. ಬಹಳ ವಿಷಯ ಕೇಳಿದ್ದಾರೆ ಅದಕ್ಕಾಗಿ ಸಮಯ ಬೇಕು ಎಂದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಲೀಂ ಅಹಮದ್ ಉತ್ತರವಿಲ್ಲದಿದ್ದರೆ ಪಟ್ಟಿಯಲ್ಲಿ ಯಾಕೆ ಹಾಕಬೇಕಿತ್ತು? ಉತ್ತರ ಕೊಡಿಸಿ ಎಂದು ಪಟ್ಟು ಹಿಡಿದರು. ಇದಕ್ಕೆ ದನಿಗೂಡಿಸಿದ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್, ಸರ್ಕಾರದ ಬಳಿ ಉತ್ತರವಿಲ್ಲ ಎಂದರೆ ಹೇಗೆ? ಉತ್ತರ ಕೊಡಿಸಬೇಕು ಎಂದು ಆಗ್ರಹಿಸಿದರು.

vidhana parishad 1

ಆದರೆ ಸಭಾಪತಿಗಳು ಸಮಯಾವಕಾಶಕ್ಕೆ ಒಪ್ಪಿ ಮುಂದಿನ ಪ್ರಶ್ನೆ ಕೈಗೆತ್ತಿಕೊಳ್ಳಲು ಮುಂದಾಗಿದ್ದಕ್ಕೆ ಸಿಟ್ಟಾದ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದರು. ಈ ವೇಳೆ ಮಾತನಾಡಿದ ಕಂದಾಯ ಸಚಿವ ಅಶೋಕ್, ಇದು ಬೇಜವಾಬ್ದಾರಿತನದ ಪರಮಾವಧಿ ಎಂದರು. ಇದಕ್ಕೆ ದನಿಗೂಡಿಸಿದ ಸಚಿವ ಸುಧಾಕರ್, ಹಿಂದೆ ಇವರೆಲ್ಲಾ ಏನು ಮಾಡಿದ್ದರು ಎಂದು ಕಡತ ತರಿಸಿ ನೋಡಿ ಎಂದರು. ಇದಕ್ಕೆ ಟಾಂಗ್ ನೀಡಿದ ಹರಿಪ್ರಸಾದ್, ಸಚಿವರದ್ದು ಬೇಜವಾಬ್ದಾರಿ ಹೇಳಿಕೆ. ಇದು ಸಚಿವರ ಪಲಾಯನವಾದ. ಅವರಿಗೆ ಉತ್ತರ ಕೊಡಲು ಸಾಧ್ಯವಾಗದೆ ಹೀಗೆ ಮಾಡುತ್ತಿದ್ದಾರೆ ಎಂದರು.

ಈ ವೇಳೆ ಮಧ್ಯಪ್ರವೇಶ ಮಾಡಿದ ಸಭಾಪತಿಗಳು ಸಚಿವರು ಉತ್ತರ ಕೊಡಬೇಕು, ಇದು ಪ್ರತಿಪಕ್ಷದ ಹಕ್ಕು. ಆದರೆ ಕಾಲಾವಕಾಶ ಬೇಕಾದಾಗ ಕೊಡಬೇಕಾಗಲಿದೆ ಎಂದರು. ಸಭಾಪತಿ ಹೇಳಿಕೆ ಸಮರ್ಥಿಸಿಕೊಂಡ ಅಶೋಕ್, 6 ವಿಷಯ ಕೇಳಿದ್ದಾರೆ. ಭೂ ಮಂಜೂರಾತಿ ಯಾರಿಗೆ ಎಂದು ಕೇಳಿಲ್ಲ. ಯಾವ ದಿನಾಂಕ ಎಂದಿಲ್ಲ. ಪೂರ್ತಿ ಕೊಡಬೇಕು. ಭೂ ಪರಿವರ್ತನೆ ರಾಜ್ಯದ ಪೂರ್ತಿ ಕೇಳಿದ್ದಾರೆ. ಆದಾಯ, ಜನನ, ಮರಣ, ಪಿಂಚಣಿ ಇಡೀ ರಾಜ್ಯದ್ದು ಕೇಳಿದ್ದಾರೆ ಇದು ಕೊಡಲು ಸಾಧ್ಯವಾ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಬ್‌ ಅರ್ಬನ್ ರೈಲ್ವೇ ಯೋಜನೆಗೆ ದಿ.ಅನಂತ್ ಕುಮಾರ್ ಹೆಸರು: ಸೋಮಣ್ಣ

 

ಇದಕ್ಕೆ ಪ್ರತಿಕ್ರಿಯಿಸಿದ ಹರಿಪ್ರಸಾದ್, ಲಂಚದ ಪ್ರಕರಣ ಅವರಿಗೆ ಹೇಳಲಾಗುತ್ತಿಲ್ಲ. ಬಹಳ ಲಂಚ ಪಡೆದಿದ್ದಾರೆ. ಅದಕ್ಕೆ ಸಮಯ ಬೇಕು ಎನ್ನುತ್ತಿದ್ದಾರೆ ಎಂದರು. ಇದಕ್ಕೆ ಟಾಂಗ್ ನೀಡಿದ ಸಚಿವ ಅಶೋಕ್, ಲಂಚದ ವಿಚಾರ ಕೇಳಿದರೆ ಅದಕ್ಕೆ ಉತ್ತರ ಕೊಡಲು ಸಿದ್ದ ಎಂದರು.

ಈ ವೇಳೆ ಬಿಜೆಪಿ ಸದಸ್ಯರಿಂದ ರಾಜೀವ್ ಗಾಂಧಿ ಹೇಳಿಕೆ ಪ್ರಸ್ತಾಪವಾಯಿತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಕೆ ಹರಿಪ್ರಸಾದ್, 100 ರೂ. ಬಿಡುಗಡೆ ಆದರೆ ಕಡೆಯ ಹಳ್ಳಿಗೆ ತಲುಪುವ ವೇಳೆ 15 ರೂ. ಆಗಿರಲಿದೆ. ಶಾಸಕರ ನಿಧಿ 15 ಲಕ್ಷ ಎಂದರೆ, 12 ಲಕ್ಷ ಮಾತ್ರ ಸಿಗೋದು. ಉಳಿದ 3 ಲಕ್ಷ ತೆರಿಗೆ ಇತ್ಯಾದಿಗೆ ಹೋಗಲಿದೆ. ಈ ಅರ್ಥದಲ್ಲಿ ರಾಜೀವ್ ಗಾಂಧಿ ಅಂದು ಹೇಳಿದ್ದರು ಎಂದು ರಾಜೀವ್ ಗಾಂಧಿ ಹೇಳಿಕೆ ಸಮರ್ಥಿಸಿಕೊಂಡರು. ದೇವಸ್ಥಾನದ ಹಣ ಹೊಡೆದವರು ಯಾರು ಎಂದು ಗೊತ್ತಿದೆ ಎಂದು ಬಿಜೆಪಿ ಸದಸ್ಯರಿಗೆ ಟಾಂಗ್ ನೀಡಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಸರ್ಕಾರಿ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆ – ಒಪ್ಪಿಕೊಂಡ ಸರ್ಕಾರ

ಈ ವೇಳೆ ಮಧ್ಯಪ್ರವೇಶ ಮಾಡಿದ ಸಚಿವ ಸೋಮಣ್ಣ, ಹತ್ತಾರು ಪ್ರಶ್ನೆ ಕೇಳುವ ವೇಳೆ ಒಂದೋ ಎರಡೋ ಪ್ರಶ್ನೆಗೆ ಉತ್ತರ ಬಂದಿಲ್ಲ ಎಂದರೆ ಸಹಕಾರ ಅಗತ್ಯ. ನಿಮ್ಮ ಕಾಲ ಈ ಕಾಲ ಎಲ್ಲಾ ವೇಳೆಯಲ್ಲೂ ಇದು ನಡೆದುಕೊಂಡು ಬಂದಿದೆ. ಪ್ರತಿಷ್ಠೆಯಾಗಿ ಪರಿಗಣಿಸದೆ ಸಹಕರಿಸಿ ಎಂದರು. ಇದಕ್ಕೆ ಪ್ರತಿಯಾಗಿ ಹರಿಪ್ರಸಾದ್, ನೀವು ಒಳ್ಳೆಯ ಸಂಪ್ರದಾಯ ಹಾಕಿಕೊಟ್ಟಿದ್ದರೆ ನಾವು ಅದನ್ನು ಪಾಲಿಸುತ್ತಿದ್ದೆವು. ಈ ಪ್ರಶ್ನೆಯಲ್ಲಿ ಲಂಚದ ವಿಷಯ ಇದೆ ಅದನ್ನು ವಿಷಯಾಂತರ ಮಾಡಲು ಹೀಗೆಲ್ಲಾ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಅಶ್ವಥ್‌ನಾರಾಯಣ, ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವ ನೈತಿಕತೆ ನಿಮಗಿಲ್ಲ. ಭ್ರಷ್ಟಾಚಾರ ಮುಗಿಸಲು ನಾವು ಬಂದಿದ್ದೇವೆ ಎಂದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿದ್ದರಿಂದ ಸಭಾಪತಿಗಳು ಸದನವನ್ನು 5 ನಿಮಿಷ ಮುಂದೂಡಿಕೆ ಮಾಡಿದರು. ಕಲಾಪ ಮುಂದೂಡಿಕೆಯಾದರೂ ಕಾಂಗ್ರೆಸ್ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ಮುಂದುವರೆದಿತ್ತು.

ಬಳಿಕ ಮತ್ತೆ ಸದನ ಪ್ರಾರಂಭ ಆಗಿ ಸದನ ಮುಕ್ತಾಯ ಆಗೋ ಒಳಗೆ ಉತ್ತರ ಕೊಡೋದಾಗಿ ಸಚಿವರು ತಿಳಿಸಿದರು. ಇದಕ್ಕೆ ಒಪ್ಪಿದ ಕಾಂಗ್ರೆಸ್ ಧರಣಿ ವಾಪಸ್ ಪಡೆಯಿತು.

Live Tv
[brid partner=56869869 player=32851 video=960834 autoplay=true]

TAGGED:bjpcongresskarnatakavidhana parishadಕರ್ನಾಟಕಕಾಂಗ್ರೆಸ್ಬಿಜೆಪಿವಿಧಾನ ಪರಿಷತ್ಸದನ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

School Building Collapses
Latest

ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

Public TV
By Public TV
23 minutes ago
Prahlad Joshi 3
Latest

ನವೀಕರಿಸಬಹುದಾದ ಇಂಧನದಿಂದ 4 ಲಕ್ಷ ಕೋಟಿ ರೂ. ಉಳಿತಾಯ: ಪ್ರಹ್ಲಾದ್ ಜೋಶಿ

Public TV
By Public TV
39 minutes ago
Ramanagara Suicide Case
Crime

ವಿಷ ಕುಡಿದು ಪತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್; ಗಂಡನನ್ನೇ ಕೊಲೆ ಮಾಡಿಸಿದ ಗ್ರಾಪಂ ಸದಸ್ಯೆ!

Public TV
By Public TV
1 hour ago
Tigers Death Case 3
Chamarajanagar

ಚಾ.ನಗರದಲ್ಲಿ 5 ಹುಲಿಗಳ ಸಾವು ಕೇಸ್‌ – ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

Public TV
By Public TV
1 hour ago
Chikkamagaluru Suicide
Chikkamagaluru

ಮಗನ ಸಾವಿನಿಂದ ಮನನೊಂದ ತಾಯಿ – ಮೃತದೇಹ ಸಿಗುವ ಮುನ್ನವೇ ಕೆರೆಗೆ ಹಾರಿ ಆತ್ಮಹತ್ಯೆ

Public TV
By Public TV
2 hours ago
Biklu Shiva
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಮತ್ತೊಂದು ರಹಸ್ಯ ಸ್ಫೋಟ, ಕೊಲೆಯಾದ 15 ನಿಮಿಷಕ್ಕೆ ಎ1 ಜಗ್ಗ ಎಸ್ಕೇಪ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?