Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾ ನಿಯಂತ್ರಣದಲ್ಲಿ ಸರ್ಕಾರದಿಂದ ಅತ್ಯುತ್ತಮ ಸಾಧನೆ: ಗೆಹ್ಲೋಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೊರೊನಾ ನಿಯಂತ್ರಣದಲ್ಲಿ ಸರ್ಕಾರದಿಂದ ಅತ್ಯುತ್ತಮ ಸಾಧನೆ: ಗೆಹ್ಲೋಟ್

Bengaluru City

ಕೊರೊನಾ ನಿಯಂತ್ರಣದಲ್ಲಿ ಸರ್ಕಾರದಿಂದ ಅತ್ಯುತ್ತಮ ಸಾಧನೆ: ಗೆಹ್ಲೋಟ್

Public TV
Last updated: January 26, 2022 11:01 am
Public TV
Share
3 Min Read
thawar chand gehlot
SHARE

ಬೆಂಗಳೂರು: ಕೊರೊನಾ 3ನೇ ಅಲೆ ನಡುವೆ ಇಂದು 73ನೇ ಗಣರಾಜ್ಯೋತ್ಸವ ಆಚರಣೆಯನ್ನು ಮಾಣಿಕ್ ಷಾ ಪೇರೇಡ್ ಗ್ರೌಂಡ್ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಘನವೆತ್ತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ ನೆರವೇರಿಸಿದರು.

thawar chand gehlot

ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು ರಾಜ್ಯ ಸರ್ಕಾರ ಸಾಧನೆಗಳನ್ನು ಭಾಷಣದ ಮೂಲಕ ವಿವರಿಸಿದರು. ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ಅತ್ಯುತ್ತಮ ಸಾಧನೆ ಮಾಡಿದೆ ಎಂದು ಹೊಗಳಿದರು. ಜನರು ಕೊರೊನಾ ನಿಯಂತ್ರಣಕ್ಕೆ ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸರ್ ಸೂತ್ರ ಅನುಸರಿಸುವಂತೆ ಕರೆ ನೀಡಿದರು. ತಮ್ಮ ಭಾಷಣದುದ್ದಕ್ಕೂ ಸರ್ಕಾರದ ಕಾರ್ಯಕ್ರಮಗಳ ವಿವರವನ್ನು ಜನತೆಯ ಮುಂದಿಟ್ಟರು. ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು, ಗಣ್ಯರು ಉಪಸ್ಥಿತರಿದ್ದರು.

ಭಾರತವು ಎರಡು ಲಸಿಕೆಗಳನ್ನು ಉತ್ಪಾದಿಸಿರುವುದಲ್ಲದೇ ಈ ಲಸಿಕೆಗಳನ್ನು ಇತರ ದೇಶಗಳಿಗೂ ಸಹ ರಫ್ತು ಮಾಡುವಲ್ಲಿ ಯಶಸ್ವಿಯಾಗಿದೆ ಎಂಬುದು ಗಮನಾರ್ಹ. ಲಸಿಕೆಯು ಹಂತ ಹಂತವಾಗಿ ಪ್ರತಿಯೊಬ್ಬರಿಗೂ ತಲುಪುವಂತೆ ನೋಡಿಕೊಂಡಿದ್ದೇವೆ. ಕೇಂದ್ರದ ಸಹಕಾರದಲ್ಲಿ ಕೆಲಸ ಮಾಡುತ್ತಿದ್ದೇವೆ. ನಮ್ಮ ಸರ್ಕಾರವು, ಸಾಂಕ್ರಾಮಿಕ ರೋಗದ ಈ ಪರಿಸ್ಥಿತಿಯಲ್ಲಿ ಅವಿರತವಾಗಿ ಶ್ರಮಿಸಿದ ನಮ್ಮ ವೈದ್ಯರುಗಳಿಗೆ, ನರ್ಸ್‍ಗಳಿಗೆ, ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಎಲ್ಲಾ ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರುಗಳಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಕೋವಿಡ್ ಹರಡುವಿಕೆಯನ್ನು ತಡೆಗಟ್ಟುವ ಮತ್ತು ಕೋವಿಡ್ ಸಮರ ಕೋಣೆಯ ಮೂಲಕ ಇದನ್ನು ಸಾಧಿಸುವ ದಿಸೆಯಲ್ಲಿ ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಿರುವುದಕ್ಕಾಗಿ ನಾನು ಸರ್ಕಾರಕ್ಕೆ ಅಭಿನಂದಿಸುತ್ತೇನೆ. ಭಾರತ ಸರ್ಕಾರವು ತಂತ್ರಜ್ಞಾನದಲ್ಲಿನ ಅತ್ಯುತ್ತಮ ಸಾಧನೆಗಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿದೆ. ಕೋವಿಡ್ ಸಮರ ಕೋಣೆಯ ನಿರ್ವಹಣೆ, ಸೋಂಕಿತರ ಗುರುತಿಸುವಿಕೆ ಮತ್ತು ಕ್ವಾರಂಟೈನ್ ನಿಗಾವಣೆ ಮೊದಲಾದಂತಹ ವಿವಿಧ ಕ್ಷೇತ್ರಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಪರಿಣಾಮಕಾರಿಯಾಗಿ ನಿರ್ವಹಿಸಲಾಗಿದೆ. ಇದರಿಂದಾಗಿ ಜಗತ್ತಿನ ಇತರ ಭಾಗಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸಾವಿನ ಸಂಖ್ಯೆ ಕಡಿಮೆಯಿದೆ ಎಂದರು. ಇದನ್ನೂ ಓದಿ: ಜೈ ಹಿಂದ್ – ಗಣರಾಜ್ಯೋತ್ಸವಕ್ಕೆ ಶುಭಕೋರಿದ ಪ್ರಧಾನಿ ಮೋದಿ

ಉತ್ತರ ಕರ್ನಾಟಕ ಭಾಗದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಉಂಟಾದ ವಿಪತ್ತಿನ ಸವಾಲನ್ನು ಸಮರ್ಥವಾಗಿ ಎದುರಿಸಿ, ನಿಯಂತ್ರಿಸಲು ಶ್ರಮಿಸಿದ ನಮ್ಮ ಕ್ಷೇತ್ರ ಸಿಬ್ಬಂದಿ, ವಿಕೋಪ ನಿರ್ವಹಣಾ ತಂಡಗಳು ಮತ್ತು ಜಿಲ್ಲಾ ಮುಖ್ಯ ಅಧಿಕಾರಿಗಳಿಗೂ ಕೂಡ ನಾನು ವಂದನೆಗಳನ್ನು ಸಲ್ಲಿಸುತ್ತೇನೆ. ಸ್ವಾತಂತ್ರ್ಯದ ಅಮೃತ ಮಹೋತ್ಸವವು, 75 ವರ್ಷಗಳ ಪ್ರಗತಿಪರ ಭಾರತ ಮತ್ತು ದೇಶದ ಜನರ, ಸಂಸ್ಕೃತಿ ಮತ್ತು ಸಾಧನೆಗಳ ವೈಭವಯುತ ಇತಿಹಾಸವನ್ನು ಆಚರಿಸಲು ಮತ್ತು ಸ್ಮರಿಸಲು ಭಾರತ ಸರ್ಕಾರದ ಉಪಕ್ರಮವಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಧಿಕೃತ ಪ್ರಯಾಣವು 2021ರ ಮಾರ್ಚ್ 12 ರಂದು ಆರಂಭವಾಗಿದ್ದು, 75ನೇ ವಾರ್ಷಿಕೋತ್ಸವದ 75 ವಾರಗಳ ಕೌಂಟ್‍ಡೌನ್ ಪ್ರಾರಂಭವಾಗಿದೆ ಮತ್ತು 2023ರ ಆಗಸ್ಟ್ 15ರಂದು ಅದು ಕೊನೆಗೊಳ್ಳುತ್ತದೆ. ದೇಶದ ಪ್ರಗತಿಪರ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕವು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಅನೇಕ ಮಹತ್ವಪೂರ್ಣ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದೆ. ಅಮೃತ ಗ್ರಾಮಪಂಚಾಯತಿಗಳ ಅಮೃತ ರೈತ, ಅಮೃತ ಗ್ರಾಮೀಣ ವಸತಿ ಯೋಜನೆ, ಅಮೃತ ನಿರ್ಮಲ, ಅಮೃತ ಶಾಲಾ ಮೂಲಸೌಕರ್ಯ ಕಾರ್ಯಕ್ರಮ, ಅಮೃತ ಅಂಗನವಾಡಿ ಕೇಂದ್ರಗಳು, ಅಮೃತ ನಗರೋತ್ಥಾನ ಇತ್ಯಾದಿ ಗಳನ್ನು ಒಳಗೊಂಡಂತೆ 14 ಅಮೃತ ಮಹೋತ್ಸವ ಕಾರ್ಯಕ್ರಮ ರಾಜ್ಯವು ಘೋಷಿಸಿದೆ ಎಂದು ತಿಳಿಸಿದರು.

ಕೊರೊನಾ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಈ ಬಾರಿಯೂ ಕೈ ಬಿಡಲಾಗಿತ್ತು. ಕೇವಲ ರಾಷ್ಟ್ರಗೀತೆ, ನಾಡಗೀತೆ, ರೈತಗೀತೆ ಮಾತ್ರ ಈ ಬಾರಿ ಪ್ರಸ್ತುತ ಪಡಿಸಲಾಯಿತು. 200 ಜನರಿಗೆ ಮಾತ್ರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿತ್ತು. ಧ್ವಜಾರೋಹಣ ಬಳಿಕ ರಾಜ್ಯಪಾಲರು ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು. ಡಾಗ್ ಸ್ವ್ಯಾಡ್, ಕೆಎಸ್‌ಆರ್‌ಪಿ, ಬಿಎಸ್‍ಎಫ್, ಅಗ್ನಿ ಶಾಮಕ, ಮಹಿಳಾ ಪೊಲೀಸ್ ಸೇರಿದಂತೆ 21 ತುಕಡಿಗಳು ರಾಜ್ಯಪಾಲರಿಗೆ ಗೌರವ ವಂದನೆ ಸಲ್ಲಿಸಿದರು. ವಿಶೇಷವಾಗಿ ಈ ಬಾರಿ ಆಂಧ್ರ ಪ್ರದೇಶ ಪೊಲೀಸರು ಗೌರವ ವಂದನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ನನಗೆ ಅಸಮಾಧಾನ ಇಲ್ಲ, ಬೇಕಾದರೆ ಮಂಪರು ಪರೀಕ್ಷೆ ಮಾಡಿಸಿ: ಆನಂದ್ ಸಿಂಗ್

TAGGED:bengaluruCorona VirusRepublicthawar chand gehlotಕೊರೊನಾ ವೈರಸ್ಗಣರಾಜ್ಯೋತ್ಸವಥಾವರ್ ಚಂದ್ ಗೆಹ್ಲೋಟ್ಬೆಂಗಳೂರು
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

Sadhvi Satish Sail
Bengaluru City

ಡಿಕೆಶಿ ಭೇಟಿಯಾದ ʻಫೆಮಿನಾ ಮಿಸ್ ಇಂಡಿಯಾ 2026ʼ ವಿಜೇತೆ, ಶಾಸಕ ಸತೀಶ್‌ ಸೈಲ್‌ ಪುತ್ರಿ

Public TV
By Public TV
6 hours ago
Sriramulu Siddaramaiah
Chitradurga

ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡುವ ಸಮಯ ಹತ್ತಿರದಲ್ಲಿದೆ: ಶ್ರೀರಾಮುಲು

Public TV
By Public TV
6 hours ago
Satyaki Savarkar
Court

ಸಾವರ್ಕರ್ ಬ್ರಿಟಿಷರ ಮುಂದೆ 5 ಬಾರಿ ಕ್ಷಮಾದಾನ ಕೋರಿ ಅರ್ಜಿ ಸಲ್ಲಿಸಿದ್ದು ಸತ್ಯ: ಸತ್ಯಕಿ ಸಾವರ್ಕರ್

Public TV
By Public TV
6 hours ago
Biryani Laddu
Latest

ವಿಧಾನಸಭಾ ಚುನಾವಣೆ ಫಲಿತಾಂಶ – ಕೇರಳದಲ್ಲಿ ವಿಜಯೋತ್ಸವಕ್ಕೆ ಬಿರಿಯಾನಿ, ಲಡ್ಡು ತಯಾರಿ

Public TV
By Public TV
7 hours ago
Assembly Elections
Latest

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ – ಎಣಿಕೆ ಕೇಂದ್ರಗಳ ಸುತ್ತ 3 ಹಂತದ ಭದ್ರತೆ, ಹೇಗಿದೆ ಕೊನೇ ಕ್ಷಣದ ಸಿದ್ಧತೆ?

Public TV
By Public TV
8 hours ago
Public TV hands over archery kit to Jayashree from Koppala G. Parameshwara HR Ranganath 3
Bengaluru City

ವಿಧಿಯಾಟಕ್ಕೆ ಸೆಡ್ಡು ಹೊಡೆದ ಛಲಗಾರ್ತಿ – ಜಯಶ್ರೀ ಕನಸಿನ ಬಿಲ್ಲಿಗೆ ಪಬ್ಲಿಕ್ ಟಿವಿ ಆಸರೆ!

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?