Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Haveri - ನಮ್ಮನ್ನು ನಾವು ರಕ್ಷಣೆ ಮಾಡ್ಕೋಬೇಕು, ಇಲ್ಲದಿದ್ರೆ ನಮ್ಮ ದೇಶವನ್ನು ಪಾಕಿಸ್ತಾನ ಮಾಡ್ತಾರೆ: ಬಿ.ಸಿ.ಪಾಟೀಲ್

Haveri

ನಮ್ಮನ್ನು ನಾವು ರಕ್ಷಣೆ ಮಾಡ್ಕೋಬೇಕು, ಇಲ್ಲದಿದ್ರೆ ನಮ್ಮ ದೇಶವನ್ನು ಪಾಕಿಸ್ತಾನ ಮಾಡ್ತಾರೆ: ಬಿ.ಸಿ.ಪಾಟೀಲ್

Public TV
Last updated: 2023/03/14 at 7:08 PM
Public TV
Share
2 Min Read
SHARE

ಹಾವೇರಿ: ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ನಮ್ಮ ದೇಶವನ್ನು ಪಾಕಿಸ್ತಾನ (Pakistan) ಮಾಡಲು ಸಹ ಹಿಂದೇಟು ಹಾಕಲ್ಲ ಎಂದು ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ಕುರಿತು ಬಿ.ಸಿ.ಪಾಟೀಲ್ (B.C.Patil) ಎಚ್ಚರಿಕೆಯ ಮಾತುಗಳನ್ನಾಡಿದರು.

ಹಾವೇರಿ (Haveri) ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣದ ಬಳಿಕ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ (Sangolli Rayanna) ಮತ್ತು ಶಿವಾಜಿ (Shivaji) ಮಹಾರಾಜರು ಹಿಂದುತ್ವಕ್ಕಾಗಿ ಹೋರಾಟ ಮಾಡಿದ ಎರಡು ಮುತ್ತುಗಳು. ಹೀಗಾಗಿ ಇವರಿಬ್ಬರ ಮೂರ್ತಿಯನ್ನೂ ಪ್ರತಿಷ್ಠಾನ ಮಾಡಿದ್ದೇವೆ. ಸಂಗೊಳ್ಳಿ ರಾಯಣ್ಣನವರ ಸಾಧನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಆದರೆ ರಾಯಣ್ಣ ಪ್ರತಿಮೆ ಮೆರವಣಿಗೆ ವೇಳೆ ಕಲ್ಲು ಹೊಡೆಯುವವರನ್ನು ರಕ್ಷಣೆ ಮಾಡುವ ಪಕ್ಷಗಳಿವೆ. ನಾವೇನು ಪಾಕಿಸ್ತಾನದಲ್ಲಿ ಇದ್ದೀವಾ ಎಂದು ಕಲ್ಲು ತೂರಾಟ ಮಾಡಿದವರ ವಿರುದ್ಧ ಗರಂ ಆದರು. ಇದನ್ನೂ ಓದಿ: ಮತ್ತೊಮ್ಮೆ ಸಿಎಂ ಆಗಲೆಂದು ಹರಕೆ- ಸಿದ್ದು ಭಾವಚಿತ್ರ ಹಿಡಿದು ಅಭಿಮಾನಿ ಶ್ರೀಶೈಲ ಪಾದಯಾತ್ರೆ

ನಾನು ಯಾವುದೇ ಜಾತಿಗೆ ಸೀಮಿತವಾಗಿಲ್ಲ. ನನಗೆ ಎಲ್ಲಾ ಸಮುದಾಯದ ಜನರು ಮತ ಹಾಕಿದ್ದಾರೆ. ಎಲ್ಲಾ ಸಮುದಾಯದವರನ್ನು ಪ್ರೀತಿಸುವ ಗುಣ ನನ್ನಲ್ಲಿದೆ. ಇಡೀ ಸಮುದಾಯ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಕೊಡುಗೆ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಸಹಾಯ ಮಾಡಿದ್ದು ನನ್ನ ಪುಣ್ಯ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೆರವಣಿಗೆ ಹೋಗುವ ವೇಳೆ ಕಲ್ಲು ಹೊಡೆಯುವ ಜನರನ್ನು ರಕ್ಷಣೆ ಮಾಡುವ ಪಕ್ಷಗಳಿವೆ. ಮಂಗಳೂರಿನಲ್ಲಿ (Mangaluru) ಕುಕ್ಕರ್ ಬ್ಲಾಸ್ಟ್ ಮಾಡಿದವರಿಗೆ ರಕ್ಷಣೆಯನ್ನು ನೀಡುತ್ತಿದ್ದಾರೆ. ಮೊದಲು ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು. ಇಲ್ಲವಾದರೆ ನಮ್ಮ ದೇಶವನ್ನು ಪಾಕಿಸ್ತಾನ ಮಾಡಲು ಸಹ ಹಿಂದೇಟು ಹಾಕುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಂಡ್ಯದಲ್ಲಿ ಚಕ್ರವ್ಯೂಹ ಮಾಡಿ ಸೋಲಿಸಿದ್ರು, ರಾಮನಗರದಲ್ಲೂ ಆ ಸಂಚು ನಡೀತಿದೆ- ನಿಖಿಲ್ ಕಿಡಿ 

ಕಲ್ಲು ತೂರಾಟ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ನನಗೆ ಇನ್ನೂ ಅದರ ಬಗ್ಗೆ ಮಾಹಿತಿ ಬರಲಿಲ್ಲ. ಪೊಲೀಸ್ ಅಧಿಕಾರಿಗಳ ಬಳಿ ಕೇಳಿ ತಿಳಿದುಕೊಳ್ಳುತ್ತೇನೆ. ಅಂತಹ ಕೀಳುಮಟ್ಟಕ್ಕೆ ಬಿ.ಸಿ.ಪಾಟೀಲ್ ಎಂದಿಗೂ ಹೋಗುವುದಿಲ್ಲ. ಅವರು ಶಾಂತರೀತಿಯಿಂದ ಹೋಗಬೇಕು ಎಂದು ಪ್ರಾರಂಭದಲ್ಲಿಯೇ ಹೇಳಿದ್ದೇನೆ. ಈಗಲೂ ಹೇಳುತ್ತೇನೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಏರಿಯಾದಲ್ಲಿ ಹೋಗುವ ಸಮಯದಲ್ಲಿ ಸ್ವಾಗತ ಮಾಡಬೇಕಾದವರು, ಕಲ್ಲು ತೆಗೆದುಕೊಂಡು ಹೆದರಿಸಿ ಕಳುಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: Karnataka Politics: ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರದ ಪರ್ವ ಏಳು ಬೀಳುಗಳು

ಸಂಗೊಳ್ಳಿ ರಾಯಣ್ಣ ದೇಶಕ್ಕಾಗಿ ಪ್ರಾಣಕೊಟ್ಟ ವ್ಯಕ್ತಿ. ಅವರು ಜನಾಂಗ ಅಥವಾ ಧರ್ಮದ ಪರವಾಗಿ ಹೋರಾಟ ಮಾಡಿದವರಲ್ಲ. ರಾಷ್ಟ್ರಕ್ಕಾಗಿ ಪ್ರಾಣ ತೆತ್ತು, ಬ್ರಿಟಿಷರ ವಿರುದ್ಧ ಕತ್ತಿ ಝಳಪಿಸಿದ ವ್ಯಕ್ತಿಗೆ ಅವಮಾನ ಮಾಡಿದ್ದಾರೆ. ಅದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಯಾರೇ ಕೈಮುಗಿದರೂ ಮೋದಿ ವಾಪಸ್ ಕೈಮುಗಿಯುತ್ತಾರೆ- ಕೋಟ ಶ್ರೀನಿವಾಸ ಪೂಜಾರಿ

TAGGED: B.C.Patil, haveri, Sangolli Rayanna, ಬಿ.ಸಿ. ಪಾಟೀಲ್, ಸಂಗೊಳ್ಳಿ ರಾಯಣ್ಣ, ಹಾವೇರಿ
Share this Article
Facebook Twitter Whatsapp Whatsapp Telegram
Share

Latest News

ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ, ಇದು ನಮಗೆ ಬೇಕಾಗಿಲ್ಲ: ಡಿಕೆಶಿ ಕಿಡಿ
By Public TV
ಬಿಜೆಪಿ ಮುಖಂಡನ ಮಳಿಗೆ ಮೇಲೆ ದಾಳಿ – 3 ಕೋಟಿ ಮೌಲ್ಯದ ವಸ್ತುಗಳು ಜಪ್ತಿ
By Public TV
ಬಿಜೆಪಿ ಕರ್ನಾಟಕ ಜನರ ಸಮಾಧಿ ಕಟ್ಟುತ್ತಿದೆ : ಹೆಚ್‍ಡಿಕೆ
By Public TV
ರಶ್ಮಿಕಾ ಮಂದಣ್ಣ- ನಿತಿನ್ ಚಿತ್ರಕ್ಕೆ ಮೆಗಾಸ್ಟಾರ್ ಚಿರಂಜೀವಿ ಕ್ಲಾಪ್
By Public TV
ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಿವೆ: ಬೊಮ್ಮಾಯಿ
By Public TV
ಕ್ರೇಜಿ ಕ್ವೀನ್ ರಕ್ಷಿತಾ ಜೊತೆ ಕಾಂಪಿಟೇಶನ್ ಶುರುವಾಗಿದ್ಹೇಗೆ, ರಮ್ಯಾ ಹೇಳಿದ್ದೇನು?
By Public TV

You Might Also Like

Karnataka Budget 2023

ಲಿಂಗಾಯತರು, ಒಕ್ಕಲಿಗರು ಭಿಕ್ಷುಕರಲ್ಲ, ಇದು ನಮಗೆ ಬೇಕಾಗಿಲ್ಲ: ಡಿಕೆಶಿ ಕಿಡಿ

Public TV By Public TV 10 mins ago
Karnataka Election 2023

ಬಿಜೆಪಿ ಮುಖಂಡನ ಮಳಿಗೆ ಮೇಲೆ ದಾಳಿ – 3 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

Public TV By Public TV 9 mins ago
Mysuru

ಬಿಜೆಪಿ ಕರ್ನಾಟಕ ಜನರ ಸಮಾಧಿ ಕಟ್ಟುತ್ತಿದೆ : ಹೆಚ್‍ಡಿಕೆ

Public TV By Public TV 11 mins ago
Latest

ರಶ್ಮಿಕಾ ಮಂದಣ್ಣ- ನಿತಿನ್ ಚಿತ್ರಕ್ಕೆ ಮೆಗಾಸ್ಟಾರ್ ಚಿರಂಜೀವಿ ಕ್ಲಾಪ್

Public TV By Public TV 39 mins ago
Follow US
Go to mobile version
Welcome Back!

Sign in to your account

Lost your password?