Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲೇ ಕರ್ನಾಟಕವನ್ನ ನಂ.1 ರಾಜ್ಯ ಮಾಡ್ತೀವಿ, ನಾನು ನಿಮ್ಮ ಸೇವಕ – ಜನರ ಮುಂದೆ ಮೋದಿ ಭಾವುಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ದೇಶದಲ್ಲೇ ಕರ್ನಾಟಕವನ್ನ ನಂ.1 ರಾಜ್ಯ ಮಾಡ್ತೀವಿ, ನಾನು ನಿಮ್ಮ ಸೇವಕ – ಜನರ ಮುಂದೆ ಮೋದಿ ಭಾವುಕ

Belgaum

ದೇಶದಲ್ಲೇ ಕರ್ನಾಟಕವನ್ನ ನಂ.1 ರಾಜ್ಯ ಮಾಡ್ತೀವಿ, ನಾನು ನಿಮ್ಮ ಸೇವಕ – ಜನರ ಮುಂದೆ ಮೋದಿ ಭಾವುಕ

Public TV
Last updated: May 3, 2023 8:42 pm
Public TV
Share
3 Min Read
NarendraModi 1
SHARE

ಬೆಳಗಾವಿ: ದೇಶದಲ್ಲಿ ಕರ್ನಾಟಕವನ್ನ ನಂ.1 ರಾಜ್ಯ ಮಾಡಲು ಬಿಜೆಪಿ (BJP) ಯೋಜನೆ ರೂಪಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.

ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ʻಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ನಾಡಿನ ಜನರಿಗೆ ನನ್ನ ನಮಸ್ಕಾರಗಳುʼ ಎನ್ನುತ್ತಾ ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ನಾನು ಮೊದಲು ನಿಮ್ಮೆಲ್ಲರ ಕ್ಷಮೆ ಕೇಳುವೆ, ಬರಲು ಸ್ವಲ್ಪ ತಡವಾಯಿತು ಎಂದು ಕ್ಷಮೆ ಕೋರಿದರು.

NarendraModi

ಮುಂದುವರಿದು, ಕಳೆದ 4 ದಿನಗಳಿಂದ ಕರ್ನಾಟಕದ ವಿವಿಧೆಡೆ ಭೇಟಿ ನೀಡಿದ್ದೇನೆ. ಈ ಸಲ ಪೂರ್ಣ ಬಹುಮತದ ಬಿಜೆಪಿ ಸರ್ಕಾರ ಬರುತ್ತದೆ. ಯುವಕರು, ಮಹಿಳೆಯರು, ರೈತರು, ಕಾರ್ಮಿಕರು, ನಗರ, ಹಳ್ಳಿ ಸೇರಿ ಎಲ್ಲ ಕಡೆ ಉತ್ಸಾಹ ಇದೆ. 4 ದಿಕ್ಕಿನಿಂದಲೂ ಒಂದೇ ಧ್ವನಿ ಕೇಳಿ ಬರುತ್ತಿದೆ. ʻಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರʼ ಎಂಬುದು ಕೇಳಿ ಬರುತ್ತಿದೆ. ಮತದಾನಕ್ಕೆ ಒಂದೇ‌ ವಾರ ಬಾಕಿ ಇದೆ. ಡಬಲ್ ಇಂಜಿನ್ ಸರ್ಕಾರ ಪು‌ನರಾಯ್ಕೆಯ ಶಂಖನಾದ ಜನರಿಂದ ಕೇಳಿ ಬಂದಿದೆ. ಇದಕ್ಕೆಲ್ಲ ಕಾರಣ ಬಡವರ, ಮಧ್ಯಮವರ್ಗದ ವಿಶ್ವಾಸ ಗಳಿಸಿದ್ದು ಎಲ್ಲರ ವಿಶ್ವಾಸ ಗಳಿಸಿದ್ದೆ ಇದಕ್ಕೆಲ್ಲ‌ ಕಾರಣ ಎಂದು ಹೇಳಿದರು. ಇದನ್ನೂ ಓದಿ: ಎಸಿಎಫ್‌ ಆಯ್ಕೆ ಮುಸುಕಿನ ಗುದ್ದಾಟ – ಸ್ಪರ್ಧಾಕಾಂಕ್ಷಿಗಳ ಹಿತ ಕಾಯುವಂತೆ KSCEAA ಒತ್ತಾಯ

NarendraModi 2

ಕರ್ನಾಟಕದಲ್ಲಿ ಈಗ ವಿಮಾನ ನಿಲ್ದಾಣ, ಆಧುನಿಕ ರೈಲ್ವೆ ನಿಲ್ದಾಣಗಳು ಆಗುತ್ತಿವೆ. ಕರ್ನಾಟಕವನ್ನು ನಂ.1 ಮಾಡಲು ಬಿಜೆಪಿ ಯೋಜನೆ ರೂಪಿಸಿದೆ. ಹಾಗಾಗಿ ಬಿಜೆಪಿಗೆ ಮತ ಹಾಕಿದರೆ, ದೇಶದಲ್ಲೇ ಕರ್ನಾಟಕವನ್ನು ನಂ.1 ಮಾಡಲು ಮತ ಹಾಕಿದಂತೆ ಎಂದು ಎಚ್ಚರಿಸಿದರು.

ಕರ್ನಾಟಕದ ಜನ ಕಾಂಗ್ರೆಸ್, ಜೆಡಿಎಸ್‌ನ ಶಾರ್ಟ್ ಕಟ್ ಸರ್ಕಾರದ ಬಗ್ಗೆ ಎಚ್ಚರಬಾಗಿರಬೇಕು. ಶಾರ್ಟ್ ಕಟ್ ರಾಜಕಾರಣ ಮಾಡುವುದು ಅಂದ್ರೆ ಸಮಾಜವನ್ನು ವಿಭಜಿಸಿದಂತೆ. ಇಂತಹ ರಾಜಕೀಯ ಮಾಡುವವರು ಒಡೆದು ಆಳುವ ನೀತಿ ಅನುಸರಿಸಿದಂರತೆ. ಇದು ವಿಕಾಸದ ದಾರಿ ಆಗುವುದಿಲ್ಲ. ಈ ಶಾರ್ಟ್ ಕಟ್ ರಾಜಕಾರಣದಿಂದ ಅಭಿವೃದ್ಧಿ ಆಗುವುದಿಲ್ಲ. ಹಿಂದೆಲ್ಲ ಅವರು ಮಾಡಿರಬಹುದು. ಆದರೆ, ಇದು 3ನೇ ಪೀಳಿಗೆಯ ಸಮಾಜ ಇದೆ. ಈ ಯುವ ಪೀಳಿಗೆ ಶಾರ್ಟ್ ಕಟ್‌ ನವರ ಕೈಗೆ ಅಧಿಕಾರ ಕೊಡುವುದಿಲ್ಲ. ದೇಶದಲ್ಲಿ ಅಸಮಾನತೆ ಹೋಗಲಾಡಿಸಿದ್ದು ಬಿಜೆಪಿ ಸರ್ಕಾರ, ಕರ್ನಾಟಕದಲ್ಲಿ ಬಿಜೆಪಿ ಸಮತೋಲನದ ಆಡಳಿತ ಮಾಡುತ್ತಿದೆ. ಒಗ್ಗಟ್ಟಿನಲ್ಲಿ ಕರ್ನಾಟಕ ಸರ್ಕಾರದ ಭವಿಷ್ಯ ಇದೆ ಎಂಬುದನ್ನ ಅರಿತು, ನೀವೆಲ್ಲರೂ ಬಿಜೆಪಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು.

ಜನಸೇವೆಯೇ ಜನಾರ್ಧನ ಸೇವೆ. ಬಿಜೆಪಿ ನಿಮ್ಮ ಸೇವಕನಂತೆ ಕೆಲಸ ಮಾಡುತ್ತದೆ. ನಾನು ಸೇವಕನಂತೆ ಕೆಲಸ ಮಾಡುತ್ತಿರುವೆ. ಆದ್ರೆ ಕಾಂಗ್ರೆಸ್ ಸೇವೆ ದೆಹಲಿಯಲ್ಲಿನ ಕುಟುಂಬದ ಮೇಲೆ ಇದೆ. ಕಾಂಗ್ರೆಸ್ ರಿಮೋಟ್ ಇರುವುದು ದೆಹಲಿಯ ಒಂದು ಕುಟುಂಬದ ಮನೆಯಲ್ಲಿ. ಜೆಡಿಎಸ್ ಒಂದು ಪರಿವಾರದ ಪ್ರೈವೆಟ್ ಲಿಮಿಟೆಡ್ ಕಂಪನಿ. ಆದರೆ ಮೋದಿಗೆ ಈ ಕುಟುಂಬ ರಾಜಕಾರಣ ಗೊತ್ತಿಲ್ಲ. ಜನರೇ ನನ್ನ ಪರಿವಾರ, ನನ್ನ ಕುಟುಂಬ. ಜನರ ಸುಖ-ದುಃಖಗಳೇ ನನಗೆ ನನ್ನ ಕುಟುಂಬದ ಸುಖ-ದುಃಖಗಳಿದ್ದಂತೆ ಎಂದು ಭಾವುಕರಾದರು. ಇದನ್ನೂ ಓದಿ: ಭಕ್ತ ಅಂತ ಹೇಳಿಕೊಳ್ಳೋದಲ್ಲ ಆಂಜನೇಯನ ತರ ಕೆಲಸ ಮಾಡಬೇಕು: ಡಿಕೆಶಿಗೆ ಸುಧಾಕರ್ ತಿರುಗೇಟು

ಕಾಂಗ್ರೆಸ್ ನೇತೃತ್ವದ ಸರ್ಕಾರಗಳನ್ನ ಎಲ್ಲ ಕಡೆ ತಿರಸ್ಕಾರ ಮಾಡಲಾಗಿದೆ. ದೇಶದಲ್ಲಿ ಮೂರು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಇದೆ. ಜೆಡಿಎಸ್‌ ಮೂರು ಜಿಲ್ಲೆಯ ಪಕ್ಷ. 2018ರಲ್ಲಿ ಅವರೊಂದಿಗೆ ಸೇರಿ ಸರ್ಕಾರ ಮಾಡಿದ್ದರು. ಕಾಂಗ್ರೆಸ್ ಮುಳುಗುತ್ತಿರುವ ಹಡಗಾಗಿದೆ. ಇವರಿಗೆ ತಮ್ಮ ಭವಿಷ್ಯ ನಿರ್ಮಾಣವೇ ಗೊತ್ತಿಲ್ಲ. ಇಂಥವರು ಜನರ ಭವಿಷ್ಯ ನಿರ್ಮಾಣ ಮಾಡುತ್ತಾರಾ. ನಾನು ಹೇಳುತ್ತಿರುವುದು ಕೇವಲ ಭಾಷಣದ ಮಾತುಗಳಲ್ಲ. ಈ ಹಿಂದೆಯೂ ನುಡಿದಂತೆ ನಡೆದಿದ್ದೇನೆ. ಇವತ್ತು ಮೆಡಿಕಲ್, ತಾಂತ್ರಿಕ ಸ್ಪರ್ಧಾತ್ಮಕ ಪರೀಕ್ಷೆ, ಎಲ್ಲ ಭರ್ತಿ ಪರೀಕ್ಷೆಗಳು ಸ್ಥಳೀಯ ಭಾಷೆಯಲ್ಲಿ ಆಗುತ್ತಿವೆ. ಇದನ್ನೆಲ್ಲ ಜನರಿಗಾಗಿ ನಾವು ಮಾಡಿದ್ದೇವೆ ಎಂದು ತಮ್ಮ ಸರ್ಕಾರದ ಸಾಧನೆಗಳನ್ನ ಪ್ರಸ್ತುತಪಡಿಸಿದರು.

TAGGED:belagavibjpKarnataka Election 2023Modi RoadShownarendra modiಕರ್ನಾಟಕ ಎಲೆಕ್ಷನ್ನರೇಂದ್ರ ಮೋದಿಬಿಜೆಪಿಬೆಳಗಾವಿಮೋದಿ ರೋಡ್‌ ಶೋ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
3 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
3 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
3 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
3 hours ago
Caste Census
Bengaluru City

ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು

Public TV
By Public TV
4 hours ago
Narendra Modi
Latest

ಇವರಿಗೆ ಅಧಿಕಾರ ಒಂದೇ ಕುಟುಂಬದ ಕೈಯಲ್ಲಿರಬೇಕು, ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್, ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ: ಮೋದಿ ಆಕ್ರೋಶ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?