ನಾವು ಗೆಲ್ಲಬೇಕು ಅಂದ್ರೆ ಸಿಪಿವೈ ಅವರಿಗೆ ಟಿಕೆಟ್ ಕೊಡಬೇಕು: ಬೆಲ್ಲದ್ ಬ್ಯಾಟಿಂಗ್

Public TV
1 Min Read
aravind Bellad 2 1

ಹುಬ್ಬಳ್ಳಿ: ನಾವು ಗೆಲ್ಲಬೇಕು ಅಂದ್ರೆ ಯೋಗೇಶ್ವರ್ ( C P Yogeshwar) ಅವರಿಗೆ ಟಿಕೆಟ್ ಕೊಡಬೇಕು. ಕರ್ನಾಟಕದಲ್ಲಿ ಮೂರು ಉಪಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ (Aravind Bellad) ಹೇಳಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಮನಸ್ಸಿನಲ್ಲಿ ಯೋಗೇಶ್ವರ್ ಅಭ್ಯರ್ಥಿ ಆಗಬೇಕು ಅನ್ನೋ ಆಸೆ ಇದೆ. ಅವರೇ ಚನ್ನಪಟ್ಟಣ ಅಭ್ಯರ್ಥಿ ಆಗಬೇಕು. ಯೋಗೇಶ್ವರ್ ಎನ್‌ಡಿಎ ಅಭ್ಯರ್ಥಿ ಆಗಬೇಕು. ನಮ್ಮೆಲ್ಲರಿಗೂ ಯೋಗೇಶ್ವರ್ ಅವರನ್ನೇ ಅಭ್ಯರ್ಥಿ ಮಾಡಬೇಕು ಅನ್ನೋ ಒತ್ತಾಯ ಇದೆ. ನಾವೆಲ್ಲ ಕುಮಾರಸ್ವಾಮಿ ಅವರಿಗೆ ಮನವರಿಕೆ ಮಾಡುತ್ತೇವೆ. ಅಂತಿಮವಾಗಿ ಕುಮಾರಸ್ವಾಮಿ ತೀರ್ಮಾನ ಮಾಡುತ್ತಾರೆ. ಹಾಗೇ ನೋಡಿದರೆ ಕುಮಾರಸ್ವಾಮಿ ಅವರೇ ಯೋಗಿಶ್ವರ್ ಅವರನ್ನು ಕರೆದು ಟಿಕೇಟ್ ನೀಡಬೇಕು ಎಂದು ಹೇಳಿದರು. ಇದನ್ನೂ ಓದಿ: ಮುಡಾ ಕೇಸ್‌ನಲ್ಲಿ ಹಣಕಾಸು ವಹಿವಾಟು ನಡೆದಿಲ್ಲ, ಹಣಕಾಸಿನ ವಿಚಾರ ಎಲ್ಲೂ ತನಿಖೆಯಾಗಿಲ್ಲ: ಡಿ.ಕೆ.ಸುರೇಶ್

ನಾನು ಶಿಗ್ಗಾಂವಿ ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ (Basavaraj Bommai) ಕುಟುಂಬಕ್ಕೆ ಅವಕಾಶ ಕೊಡಬೇಕು ಎಂಬ ಕೂಗು ಕೇಳಿಬರುತ್ತಿದೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ತೀರ್ಮಾನಕ್ಕೆ ಬೊಮ್ಮಾಯಿ ಬದ್ಧವಾಗಿರಬೇಕು. ಹೈಕಮಾಂಡ್ ಕೂಡಾ ಎಲ್ಲ ಆಯಾಮಗಳಲ್ಲಿ ಸರ್ವೆ ಮಾಡಿದೆ. ಕೋರ್ ಕಮಿಟಿಯಿಂದ ಮೂರ್ನಾಲ್ಕು ಹೆಸರು ಹೋಗಿರುವ ಬಗ್ಗೆ ಮಾಹಿತಿ ಇದೆ. ಪಕ್ಷ ಅಂದ ಮೇಲೆ ಭಿನ್ನಾಭಿಪ್ರಾಯ ಸಹಜ. ಪಕ್ಷದಲ್ಲಿ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದರು. ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ

Share This Article