Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿಂಗಳಿಗೆ 2.28 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಬೇಕು, ಕೇಂದ್ರ ಕೊಡಲ್ಲ ಅಂತಾ ಹೇಳ್ತಿದೆ – ಸಿಎಂ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಿಂಗಳಿಗೆ 2.28 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಬೇಕು, ಕೇಂದ್ರ ಕೊಡಲ್ಲ ಅಂತಾ ಹೇಳ್ತಿದೆ – ಸಿಎಂ ಕಿಡಿ

Bengaluru City

ತಿಂಗಳಿಗೆ 2.28 ಲಕ್ಷ ಮೆಟ್ರಿಕ್‌ ಟನ್‌ ಅಕ್ಕಿ ಬೇಕು, ಕೇಂದ್ರ ಕೊಡಲ್ಲ ಅಂತಾ ಹೇಳ್ತಿದೆ – ಸಿಎಂ ಕಿಡಿ

Public TV
Last updated: June 14, 2023 5:14 pm
Public TV
Share
3 Min Read
Siddaramaiah 1 5
SHARE

– ಎಫ್‌ಸಿಐ ಅಕ್ಕಿ ಕೊಡಲು ಕೇಂದ್ರ ಅಡ್ಡಗಾಲು
– ಕೇಂದ್ರ ಬಿಜೆಪಿ ಬಡವರ ವಿರೋಧಿ ಸರ್ಕಾರ
– ಛತ್ತಿಸ್‌ಗಡ, ತೆಲಂಗಾಣ ವಿವಿಧ ರಾಜ್ಯಗಳೊಂದಿಗೆ ಮಾತುಕತೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕಿದೆ. ಪ್ರತಿ ತಿಂಗಳು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಸುತ್ತೇವೆ ಅಂತಾ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್‌ಸಿಐ) ಒಪ್ಪಿಕೊಂಡು, ಈಗ ಕೇಂದ್ರ ಸರ್ಕಾರದ ಕೊಡದಂತೆ ತಡೆಹಿಡಿದಿದೆ. ಕೇಂದ್ರ ಸರ್ಕಾರ ಬಡವರ ವಿರೋಧಿ ಸರ್ಕಾರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಹಾಗೂ ಎಫ್‌ಸಿಐ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ಜಾರಿ ಮಾಡೋದಕ್ಕೆ ನಮ್ಮ ಎಫ್‌ಸಿಎ ಜತೆ ನಮ್ಮ ಅಧಿಕಾರಿಗಳು ಮಾತಾಡಿದ್ದರು. ನಾನೂ ಕೂಡ ನೇರವಾಗಿ ಮಾತನಾಡಿದ್ದೆ. 10 ಕೆಜಿ ಅಕ್ಕಿ ಕೊಡಲು ನಮಗೆ ಪ್ರತಿ ತಿಂಗಳು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕು ಅಂತಾ ಹೇಳಿದ್ದೆ. ಪ್ರತಿ ಕೆಜಿಗೆ 34 ರೂ. + 2 ರೂ. 60 ಪೈಸೆ ಟ್ರಾನ್ಸ್‌ಪೋರ್ಟ್‌ ಶುಲ್ಕ ಸೇರಿ ಒಂದು ಕೆಜಿ ಅಕ್ಕಿಗೆ 36.60 ರೂ.ಗೆ ಖರೀದಿ ಮಾಡಲು ತೀರ್ಮಾನ ಮಾಡಿದ್ದೆವು. ಎಫ್‌ಸಿಐ ಸಹ ಒಪ್ಪಿಕೊಂಡಿತ್ತು. ಇದರಿಂದ ರಾಜ್ಯ ಸರ್ಕಾರಕ್ಕೆ ತಿಂಗಳಿಗೆ 840 ಕೋಟಿ ರೂ.ನಂತೆ ವರ್ಷಕ್ಕೆ 10,092 ಕೋಟಿ ರೂ. ನಮಗೆ ಬೇಕಾಗುತ್ತದೆ. ನಮ್ಮ ಕ್ಯಾಬಿನೆಟ್‌ನಲ್ಲೂ ಕೊಡೋದಕ್ಕೆ ತೀರ್ಮಾನ ಮಾಡಿದ್ದೇವೆ ಎಂದು ನುಡಿದರು.

ನಾವು ಜೂನ್ 9 ರಂದು ಅಕ್ಕಿ ಕೋರಿ ಪತ್ರ ಬರೆದಿದ್ದೆವು. ಅಕ್ಕಿ ಕೊಡುತ್ತೇವೆ ಅಂತಾ ಒಪ್ಪಿ ಜೂನ್ 12 ರಂದು ಎಫ್‌ಸಿಐ ನಮಗೆ ಪತ್ರ ಬರೆದಿದ್ದರು. 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡೋದಕ್ಕೆ ಒಪ್ಪಿ ಪತ್ರ ಕಳಿಸಿದ್ರು. 13,819.485 ಮೆಟ್ರಿಕ್ ಟನ್ ಅಕ್ಕಿ ಕಳಿಸುವ ಬಗ್ಗೆ ಮತ್ತೊಂದು ಪತ್ರವನ್ನೂ ಬರೆದಿದ್ರು. ಒಟ್ಟು ಎರಡು ಒಪ್ಪಿಗೆ ಪತ್ರ ಬರೆದಿದ್ದರು. ಅದಾದ ಮೇಲೆ ಕೇಂದ್ರ ಸರ್ಕಾರ ಜೂನ್ 13 ರಂದು ಎಫ್‌ಸಿಐ ನವರಿಗೆ ಕೇಂದ್ರ ಸರ್ಕಾರದ ಗ್ರಾಹಕರ ಸರಬರಾಜು ಇಲಾಖೆ ಪತ್ರ ಬರೆದಿದೆ. ಓಪನ್ ಮಾರ್ಕೆಟ್ ನಲ್ಲಿ ಅಕ್ಕಿ, ಗೋದಿ ಮಾರಾಟ ನಿಲ್ಲಿಸುವ ಬಗ್ಗೆ ಕೇಂದ್ರ ಪತ್ರ ಬರೆದಿದೆ. ಗ್ರಾಹಕರ ಸರಬರಾಜು ಇಲಾಖೆಯಿಂದ ಎಫ್‌ಸಿಐಗೆ ಬರೆದ ಪತ್ರದಲ್ಲಿ ಅಕ್ಕಿ, ಗೋಧಿ ಮಾರಾಟ ಸ್ಥಗಿತ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಪ್ರಸ್ತಾಪಿಸಿದರು.

ಎಫ್‌ಸಿಐ ನಮ್ಮ ರಾಜ್ಯಕ್ಕೆ ಅಕ್ಕಿ ಕೊಡೋದಾಗಿ ಒಪ್ಪಿದ್ದರಿಂದ ನಾವು ಅಕ್ಕಿ ಜುಲೈ 1 ರಿಂದ ಕೊಡೋದಾಗಿ ಘೋಷಣೆ ಮಾಡಿದ್ವಿ. ಇವರ ಮೇಲೆ ನಂಬಿಕೆಯಿಟ್ಟು ಅಕ್ಕಿ ಕೊಡೋದಾಗಿ ಘೋಷಣೆ ಮಾಡಿದ್ದವು. ಈ ಕೇಂದ್ರ ಸರ್ಕಾರ ಈ ರೀತಿ ತೀರ್ಮಾನ ಮಾಡ್ತಿರೋದು ರಾಜಕೀಯ. ಈ ವಿಚಾರದಲ್ಲಿ ರಾಜಕೀಯ ಮಾಡಬಾರದಿತ್ತು. ಅಕ್ಕಿ ಇಟ್ಟುಕೊಂಡು ಕೊಡೋದಿಲ್ಲ ಅಂತಾ ಹೇಳ್ತಿರೋದು ಜನವಿರೋಧಿ ನೀತಿಯಾಗಿದೆ. ಈ ಯೋಜನೆಯಿಂದ ಕಾಂಗ್ರೆಸ್ ಸರ್ಕಾರದಕ್ಕೆ ಒಳ್ಳೆಯ ಹೆಸರು ಬರುತ್ತದೆ. ಅವರು ಜನಕಲ್ಯಾಣ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂಬ ಅಸೂಯೆಯಿಂದ ಮಹಾತ್ವಾಕಾಂಶಿ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುವ ಪ್ರಯತ್ನ ಮಾಡ್ತಿದೆ ಎಂದು ಆಕ್ರೋಶ ಹೊರಹಾಕಿದರು.

ಬೇರೆ ರಾಜ್ಯಗಳೊಂದಿಗೆ ಮಾತುಕತೆ: ನಮ್ಮ ಅನ್ನಭಾಗ್ಯ ಯೋಜನೆಯನ್ನ ನಿಲ್ಲಿಸೋದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ನಮಗೆ ಅಕ್ಕಿ ಸಿಗದಂತೆ ಮಾಡ್ತಿದೆ. ನಾವು ಈಗ ತೆಲಂಗಾಣ, ಛತ್ತೀಸ್‌ಗಡ, ತೆಲಂಗಾಣ ಸರ್ಕಾರದವರ ಜತೆ ಅಕ್ಕಿ ಕೊಡುವಂತೆ ಮಾತುಕತೆ ಮಾಡ್ತಿದೀವಿ. ಪಂಜಾಬ್‌ನಲ್ಲಿ ಅಕ್ಕಿ ಇಲ್ಲ ಅಂದಿದ್ದಾರೆ. ನಮ್ಮ ಸರ್ಕಾರ ಬಡವರ ಕಲ್ಯಾಣ ಮಾಡಲು ಹೊರಟರೇ ಕೇಂದ್ರದವರು ಅದಕ್ಕೆ ಅಡ್ಡಗಾಲು ಹಾಕ್ತಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ ಬಡವರ ವಿರೋಧಿಗಳು. ಅಕ್ಕಿ ಇಟ್ಟುಕೊಂಡು ಇಲ್ಲಾ ಅಂತಿದ್ದಾರೆ. ಅವರೇನು ಪುಕ್ಕಟ್ಟೆ ಕೊಡಲ್ಲ. ದುಡ್ಡು ಕೊಡ್ತೀವಿ ಅಂದರೂ ಅಕ್ಕಿ ಇಲ್ಲ ಅಂತಿದ್ದಾರೆ ಎಂದಿ ಕಿಡಿ ಕಾರಿದರು.

TAGGED:anna bhagyabjpCongress GuaranteeDK ShivakumarFCIGovernment of Indianarendra modisiddaramaiahಅನ್ನ ಭಾಗ್ಯ ಯೋಜನೆಕಾಂಗ್ರೆಸ್ಕಾಂಗ್ರೆಸ್‌ ಗ್ಯಾರಂಟಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows
Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories
CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood

You Might Also Like

medicine distributor suicide karwar
Crime

ಕಾರವಾರ| ಡಬಲ್ ಬ್ಯಾರಲ್ ಗನ್‌ನಿಂದ ಶೂಟ್ ಮಾಡಿಕೊಂಡು ಔಷಧಿ ವಿತರಕ ಆತ್ಮಹತ್ಯೆ

Public TV
By Public TV
53 seconds ago
french tourists visits lakkundi excavation site
Districts

ಲಕ್ಕುಂಡಿ ಉತ್ಖನನ ಸ್ಥಳಕ್ಕೆ ಫ್ರಾನ್ಸ್‌ ಪ್ರವಾಸಿಗರ ತಂಡ ಭೇಟಿ – ಪ್ರಜ್ವಲ್‌ ಪ್ರಾಮಾಣಿಕತೆಗೆ ಮೆಚ್ಚುಗೆ

Public TV
By Public TV
15 minutes ago
Dr Prabhakar Kore
Belgaum

KLE ಕಾರ್ಯಾಧ್ಯಕ್ಷ ಸ್ಥಾನದಿಂದ ಪ್ರಭಾಕರ ಕೋರೆ ನಿರ್ಗಮನ

Public TV
By Public TV
20 minutes ago
Eshwar Khandre
Bengaluru City

ಕಾಡ್ಗಿಚ್ಚು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲು ಈಶ್ವರ್ ಖಂಡ್ರೆ ಸೂಚನೆ

Public TV
By Public TV
25 minutes ago
Yadagiri Student Suicide
Crime

ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ – ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ FIR

Public TV
By Public TV
49 minutes ago
gold silver 1
Latest

Gold, Silver ಪ್ರಿಯರಿಗೆ ಶಾಕ್;‌ 10 ಗ್ರಾಂ ಚಿನ್ನಕ್ಕೆ 5,400 ರೂ, ಕೆಜಿ ಬೆಳ್ಳಿಗೆ 15,000 ರೂ. ಏರಿಕೆ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?