ಉಡುಪಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನ (Supreme Court) ತೀರ್ಪನ್ನ ನಾವು ಪಾಲಿಸಬೇಕು. ನೆಲ-ಜಲವನ್ನು ರಕ್ಷಣೆ ಮಾಡುವ ಕೆಲಸವನ್ನು ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯಾದ್ಯಂತ ಜನತಾದರ್ಶನ ಕಾರ್ಯಕ್ರಮ ಉದ್ಘಾಟನೆ ಮಾಡಿ ಬಳಿಕ ಮಾತನಾಡಿದರು. ಬೇಗ ಮಳೆ ಆಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇವೆ. ರಾಜ್ಯ ಸರ್ಕಾರ ಎಲ್ಲಾ ವರದಿಗಳನ್ನು ಇಟ್ಟು ಸುಪ್ರೀಂ ನಲ್ಲಿ ವಾದ ಮಾಡಿದೆ ಎಂದರು.
ಇದೇ ವೇಳೆ ರಾಜ್ಯ ಸರ್ಕಾರದ ಬಳಿ ವೈಜ್ಞಾನಿಕ ವರದಿ ಇಲ್ಲ, ವಾದ ಮಂಡಿಸಿಲ್ಲ ಎಂಬ ಶೋಭಾ ಕರಂದ್ಲಾಜೆಯ (Shobha Karandlaje) ಆರೋಪಕ್ಕೆ ಪ್ರತಿಕ್ರಿಯಿಸಿ, ವಾದ ಹೇಗೆ ಮಾಡಬೇಕು ಎಂದು ಶೋಭಾ ಕರಂದ್ಲಾಜೆ ಹೇಳಿಕೊಡಲಿ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ಮಂಗಳವಾರ ಗೊಂದಲ ಇಲ್ಲದೇ ಬೆಂಗ್ಳೂರು ಬಂದ್ ಆಗ್ಬೇಕು: ಬಿಎಸ್ವೈ
ನಾವು ಅತ್ಯಧಿಕ ಸೀಟು ಗೆದ್ದು ಐದು ಗ್ಯಾರಂಟಿ ಕೊಟ್ಟಿದ್ದೇವೆ. ಸರಕಾರದ ಕೆಲಸ ಕೈಗೆಟಕಲು ಜನತಾದರ್ಶನ ಯೋಜನೆ ರೂಪಿಸಿದ್ದೇವೆ. ಪ್ರತಿ ತಿಂಗಳು 25 ರಂದು ಜಿಲ್ಲಾಡಳಿತ ಜನತಾದರ್ಶನ ಸಭೆ ಮಾಡುತ್ತದೆ ಎಂದರು.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]