ಸೋಲು ಒಪ್ಕೋತೀವಿ ಆದ್ರೆ ಇವಿಎಂ ಮೇಲೆ ಅನುಮಾನ ಇದೆ: ಶಿವರಾಜ್ ತಂಗಡಗಿ

Public TV
1 Min Read
Shivaraj Tangadagi 1

ಕೊಪ್ಪಳ: ಸೋಲನ್ನ ಒಪ್ಕೋತೀವಿ ಆದ್ರೆ ಈಗಲೂ ನಮಗೆ ಇವಿಎಂ (EVM) ಮೇಲೆ ಅನುಮಾನ ಇದೆ ಎಂದು ಸಚಿವ ಶಿವರಾಜ ತಂಗಡಗಿ (Shivaraj Tangadagi) ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದ ಕುರಿತು ಕನಕಗಿರಿಯಲ್ಲಿ (Kanakagiri) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು (BJP) ತಮಗೆ ಬೇಕಾದ ಕಡೆಯಲ್ಲಿ ಇವಿಎಂ ಮೂಲಕ ಗೆಲ್ಲುತ್ತಾರೆ. ಅವರು ಇವಿಎಂನಿಂದಲೇ ಗೆಲ್ಲೋದು. ಬೇರೆ ಯಾವುದರಿಂದಲೂ ಗೆಲ್ಲಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಮೋದಿ ಅಮೆರಿಕ ಪ್ರವಾಸದ ಬಳಿಕವೇ ದೆಹಲಿಯಲ್ಲಿ ಸರ್ಕಾರ ರಚನೆ?

ಮಹಾರಾಷ್ಟ್ರ ಚುನಾವಣೆಯ ಸಮಯದಲ್ಲೂ ಹೀಗೆ ಆಗಿದೆ. ಅದರ ಬಗ್ಗೆ ರಾಹುಲ್ ಗಾಂಧಿಯವರು ಪ್ರಸ್ತಾಪ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ತೊಗರಿ ಬೆಳೆಗಾರರಿಗೆ ಸಿಹಿ ಸುದ್ದಿ – ಕೇಂದ್ರದ ಬೆಂಬಲ ಬೆಲೆ ಜೊತೆಗೆ ರಾಜ್ಯದಿಂದ ಪ್ರೋತ್ಸಾಹ ಧನ

Share This Article