ಬೆಂಗಳೂರು: ರಾಜ್ಯದ ಎಲ್ಲಾ ಗೊಲ್ಲರಹಟ್ಟಿಗಳನ್ನು, ತಾಂಡಾಗಳನ್ನು ಕಂದಾಯ ಗ್ರಾಮವಾಗಿ (Revenue Villag) ಮಾಡುವುದಾಗಿ ಕಂದಾಯ ಸಚಿವ ಆರ್ ಅಶೋಕ್ (R Ashok) ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್ (Legislative Council) ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ಗೊಲ್ಲರಹಟ್ಟಿ ಬಗ್ಗೆ ಪ್ರಶ್ನೆ ಕೇಳಿದರು. ರಾಜ್ಯದಲ್ಲಿ ಎಷ್ಟು ಗೊಲ್ಲರಹಟ್ಟಿಗಳು ಇವೆ? ಇವುಗಳನ್ನು ಕಂದಾಯ ಗ್ರಾಮ ಮಾಡಲು ಸರ್ಕಾರ ಯಾವ ಕ್ರಮ ತೆಗೆದುಕೊಂಡಿದೆ? ಶೀಘ್ರವಾಗಿ ಎಲ್ಲಾ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಮಾಡಬೇಕು ಎಂದು ಆಗ್ರಹ ಮಾಡಿದರು.
ಇದಕ್ಕೆ ಉತ್ತರ ನೀಡಿದ ಸಚಿವ ಅಶೋಕ್, ರಾಜ್ಯದಲ್ಲಿ 195 ಗೊಲ್ಲರಹಟ್ಟಿಗಳು ಇವೆ. 187 ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತನೆ ಮಾಡಲು ಡಿಸಿ ಗಳು ಶಿಫಾರಸು ಮಾಡಿದ್ದಾರೆ. ಈ ಪೈಕಿ 106 ಗೊಲ್ಲರಹಟ್ಟಿಗಳನ್ನು ಪ್ರಾಥಮಿಕ ಅಧಿಸೂಚನೆ ಮತ್ತು 72 ಗೊಲ್ಲರಹಟ್ಟಿಗಳನ್ನು ಅಂತಿಮ ಅಧಿಸೂಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಮತ್ತೆ ಬಿಜೆಪಿ V/S ಕಾಂಗ್ರೆಸ್ ಕಮಿಷನ್ ಕದನ- ಕಾಂಗ್ರೆಸ್ನಿಂದ ಹೊಸ ಪೊಲಿಟಿಕಲ್ ಚಾರ್ಜ್ಶೀಟ್
ನಾನು ಅಧಿಕಾರಕ್ಕೆ ಬಂದ ಮೇಲೆ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮ ಮಾಡುವ ಕೆಲಸ ಮಾಡಿದ್ದೇನೆ. ಮುಂದಿನ ವಾರ ದಾವಣಗೆರೆಯಲ್ಲಿ 50 ಸಾವಿರ ಜನರಿಗೆ ಹಕ್ಕುಪತ್ರ ಕೊಡುವ ಐತಿಹಾಸಿಕ ತೀರ್ಮಾನ ಮಾಡಿದ್ದೇವೆ. ರಾಜ್ಯದ ಎಲ್ಲಾ ಗೊಲ್ಲರಹಟ್ಟಿಗಳನ್ನು, ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಮಾಡುವ ಕೆಲಸ ನಮ್ಮ ಸರ್ಕಾರ ಮಾಡುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಬಿಜೆಪಿಗೆ ಮತ್ತೆ ಅಧಿಕಾರ – ಬಿ.ಎಸ್ ಯಡಿಯೂರಪ್ಪ ವಿಶ್ವಾಸ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k