ಬೆಂಗಳೂರು: ನಾವು ಅಹಮದಾಬಾದ್ (Ahmedabad) ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡುವುದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿರುಗೇಟು ನೀಡಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ. ಅಕಸ್ಮಾತ್ 500 ಮೀ. ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈ ದುರಂತದಿಂದ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿಸಿದೆವು. ಈ ಅಪಘಾತ ಕುರಿತು ಬ್ಲ್ಯಾಕ್ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕಲಬುರಗಿ | ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶ ಸಾವು
ಈ ಘಟನೆ ನಂತರ ವಿಮಾನಯಾನ ಸಚಿವರ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡುತ್ತಿವೆ ಎಂದು ಕೇಳಿದಾಗ, ಬಿಜೆಪಿ ಹಾಗೂ ಜೆಡಿಎಸ್ನವರಿಗೆ ಹೆಣದ ಮೇಲೆ ರಾಜಕೀಯ ಮಾಡುವುದೇ ಕೆಲಸ. ನಾವು ಹಳೇ ಪ್ರಕರಣ ಹಾಗೂ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಟೀಕೆ ಮಾಡಬಹುದು. ಆದರೆ ನಾವು ಅವರ ಮಟ್ಟಕ್ಕೆ ಇಳಿಯುವುದಿಲ್ಲ. ಈ ವಿಚಾರದಲ್ಲಿ ಅನೇಕ ತಾಂತ್ರಿಕ ಅಂಶಗಳಿವೆ. ನಾನು ಅವುಗಳ ತಜ್ಞನಲ್ಲ. ಈ ಎಲ್ಲಾ ವಿಚಾರವಾಗಿ ಚರ್ಚೆ ಆಗುತ್ತಿದೆ. ಆದರೆ ಈ ವಿಚಾರವನ್ನು ರಾಜಕೀಯಗೊಳಿಸುವ ವ್ಯಕ್ತಿ ನಾನಲ್ಲ. ಈ ಸಮಯದಲ್ಲಿ ಕೇಂದ್ರ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಇದು ದೇಶದ ಗಂಭೀರ ವಿಚಾರ ಎಂದಿದ್ದಾರೆ.
ರಾಜ್ಯ ಸರ್ಕಾರ ವಸೂಲಿ ಮಾಡುತ್ತಿರುವ ತೆರಿಗೆ ನೋಡಿದರೆ ನನ್ನ ಸರ್ಕಾರ ಇದ್ದಿದ್ದರೆ ಗೃಹಲಕ್ಷ್ಮಿಗೆ 5 ಸಾವಿರ ರೂ. ಕೊಡುತ್ತಿದ್ದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, ಬಹಳ ಸಂತೋಷ. ಅವರು ಆರೋಗ್ಯಕರವಾಗಿರಲಿ ಎಂದು ವ್ಯಂಗ್ಯವಾಡಿದ್ದಾರೆ.ಇದನ್ನೂ ಓದಿ: ಫಿನಿಕ್ಸ್ ಶೂಟಿಂಗ್ ವೇಳೆ ಅವಘಡ – ಪೆಟ್ರೋಲ್ ಬಾಂಬ್ ಎಸೆತಕ್ಕೆ ಭಾಸ್ಕರ್ ಶೆಟ್ಟಿಗೆ ಗಾಯ