ನವದೆಹಲಿ: ಮನೆಯವರು ಪ್ರೀತಿಗೆ ಒಪ್ಪದ ಕಾರಣ ಜೋಡಿಯೊಂದು ಗುಟ್ಟಾಗಿ ಮದುವೆಯಾಗಿತ್ತು. ಇದರಿಂದ ಕೋಪಗೊಂಡು ಯುವತಿಯ ಮನೆಯವರು ವರನ ಗುಪ್ತಾಂಗವನ್ನು ಕಟ್ ಮಾಡಿ ವಿಕೃತಿ ಮರೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಹಲ್ಲೆಗೊಳಗಾದ 22 ವರ್ಷದ ಯುವಕನ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಆತನನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರೀತಿಸಿ ಮದುವೆಯಾಗಿದ್ದಾರೆ ಎನ್ನುವ ಕಾರಣಕ್ಕೆ ವರನ ಮೇಲೆ ಯುವತಿ ಮನೆಯವರು ಹಲ್ಲೆ ಮಾಡಿದ್ದಾರೆ. ಡಿಸೆಂಬರ್ 22ರಂದು ದೆಹಲಿಯ ರಜೌರಿ ಗಾರ್ಡನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕೊಲೆ ಯತ್ನ ಮತ್ತು ಅಪಹರಣ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ ಪ್ರಶಾಂತ್ ಗೌತಮ್ ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ವಾಜಪೇಯಿ ಹುಟ್ಟುಹಬ್ಬ: ಗಣ್ಯರಿಂದ ಗೌರವ ನಮನ
ಇಬ್ಬರು ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಬೇಕು ಎಂದು ನಿರ್ಧರಿಸಿದ್ದರು. ಮನೆಯವರು ಇವರ ಪ್ರೀತಿಗೆ ಒಪ್ಪಿಗೆ ಕೊಟ್ಟಿಲ್ಲ. ಹೀಗಾಗಿ ಇಬ್ಬರು ಗುಟ್ಟಾಗಿ ಮದುವೆಯಾಗಿದ್ದರು. ಇದು ಯುವತಿಯ ಮನೆಯವರನ್ನು ಕೆರಳಿಸಿತ್ತು. ಕುಟುಂಬದವರಿಂದ ಅಪಾಯವಿದೆ ಎಂದು ಇಬ್ಬರೂ, ಪೊಲೀಸರ ರಕ್ಷಣೆ ಕೋರಿದ್ದರು. ಇದನ್ನೂ ಓದಿ: ಕ್ರಿಸ್ಮಸ್ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್ ಕಲಾಕೃತಿ
ದಂಪತಿಯ ರಕ್ಷಣೆ ಕೋರಿ ರಾಜೌರಿ ಪೊಲೀಸ್ ಠಾಣೆ ಮೆಟ್ಟಿಲೇರಿರುವುದು ಯುವತಿಯ ಕುಟುಂಬದ ಸದಸ್ಯರಿಗೆ ಗೊತ್ತಾಯಿತು. ಹೀಗಾಗಿ ಅವರಿಬ್ಬರೂ ಪೊಲೀಸ್ ಠಾಣೆಯಿಂದ ಹೊರಬಂದ ತಕ್ಷಣ ಹುಡುಗಿಯ ಕುಟುಂಬ ಸದಸ್ಯರು ಅವರನ್ನು ಅಪಹರಿಸಿ, ಅಮಾನುಷವಾಗಿ ಥಳಿಸಿ ಯುವಕನ ಗುಪ್ತಾಂಗವನ್ನು ಕತ್ತರಿಸಿದ್ದಾರೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ. ಯುವಕ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ. ಇದನ್ನೂ ಓದಿ: ಮಹಿಳೆಯಿಂದ ವಂಚನೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ ನಾಗಶೇಖರ್