Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾರಾಂತ್ಯ ರಸ್ತೆ ಬದಿ ಉತ್ಸವಕ್ಕೆ ದ.ಕ. ಜಿಲ್ಲಾಡಳಿತ ಯೋಜನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ವಾರಾಂತ್ಯ ರಸ್ತೆ ಬದಿ ಉತ್ಸವಕ್ಕೆ ದ.ಕ. ಜಿಲ್ಲಾಡಳಿತ ಯೋಜನೆ

Dakshina Kannada

ವಾರಾಂತ್ಯ ರಸ್ತೆ ಬದಿ ಉತ್ಸವಕ್ಕೆ ದ.ಕ. ಜಿಲ್ಲಾಡಳಿತ ಯೋಜನೆ

Public TV
Last updated: September 24, 2021 7:40 pm
Public TV
Share
3 Min Read
dakshina kannada dc
SHARE

– ಸ್ಥಳೀಯ ಕಲಾವಿದರು, ವ್ಯಾಪಾರಿಗಳಿಗೆ ವೇದಿಕೆ
– ಪ್ರವಾಸೋದ್ಯಮ, ಬೀಚ್ ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮ
– ಪ್ರವಾಸಿಗರನ್ನು ಸೆಳೆಯಲು ವಿವಿಧ ರೀತಿಯ ಯೋಜನೆ

ಮಂಗಳೂರು: ಕೊರೊನಾ 2ನೇ ಅಲೆ ತಗ್ಗುತ್ತಿರುವಂತೆಯೇ ಜಿಲ್ಲೆಯಲ್ಲಿ ಸ್ಥಳೀಯ ಕಲಾವಿದರು ಹಾಗೂ ವ್ಯಾಪಾರಿಗಳಿಗೆ ವೇದಿಕೆಯ ಜೊತೆಗೆ ಜಿಲ್ಲೆಯ ಜನರಿಗೆ ವೀಕೆಂಡ್ ಮನರಂಜನೆಗೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಇಂದು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಆಯೋಜಿಸಲಾದ ಜಿಲ್ಲಾಧಿಕಾರಿ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ನಗರದ ಪ್ರಮುಖ ರಸ್ತೆಗಳಾದ ಕದ್ರಿ ಪಾರ್ಕ್ ಎದುರು ಹಾಗೂ ಕ್ಲಾಕ್‍ಟವರ್ ನಿಂದ ಎ.ಬಿ.ಶೆಟ್ಟಿ ಸರ್ಕಲ್ ರಸ್ತೆಯಲ್ಲಿ ವಾರಾಂತ್ಯ ರಸ್ತೆ ಬದಿ ಉತ್ಸವ (Weekend Street Festival Mangaluru) ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

mng cng beach bandipur

ವಾರಾಂತ್ಯದ ದಿನಗಳಲ್ಲಿ (ಶನಿವಾರ, ಭಾನುವಾರ) ನಿಗದಿತ ರಸ್ತೆಯುದ್ದಕ್ಕೂ ಸ್ಥಳೀಯ ಆಹಾರ, ಕರಕುಶಲ ವಸ್ತುಗಳು ಸೇರಿದಂತೆ ತಾತ್ಕಾಲಿಕ ವ್ಯಾಪಾರ ಮಳಿಗೆಗಳು ಹಾಗೂ ಸ್ಥಳೀಯ ಕಲಾವಿದರಿಂದ ಮನರಂಜನಾ ಕಾರ್ಯಕ್ರಮಗಳ ಮೂಲಕ ಜನರಿಗೆ ಮನರಂಜನೆಯ ಜೊತೆಗೆ ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದೆ. ಈ ಉತ್ಸವ ವರ್ಷಪೂರ್ತಿ ವಾರಾಂತ್ಯದಲ್ಲಿ ನಿರಂತರ ನಡೆಸಲು ಚಿಂತನೆ ಮಾಡಲಾಗಿದೆ. ಕೊರೊನಾ ಪಾಸಿಟಿವಿಟಿ ದರ ಇನ್ನಷ್ಟು ಕಡಿಮೆಯಾಗುವ ಜೊತೆಗೆ ಮೂರನೇ ಅಲೆಯ ಆತಂಕವಿಲ್ಲದಿದ್ದರೆ ಇದನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: ಅ. 1ರಿಂದ ಥಿಯೇಟರ್‌ಗಳು ಹೌಸ್‍ಫುಲ್- ಕಂಡೀಷನ್ಸ್ ಅಪ್ಲೈ

ಬೀಚ್‍ಗಳ ಅಭಿವೃದ್ಧಿಗೆ ಕ್ರಮ: ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು. ಬೀಚ್‍ಗಳಿಗೆ ಆಗಮಿಸುವವರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ ಜೊತೆಗೆ ಹೋಟೆಲ್ ಮಾದರಿಯ ಊಟೋಪಾಚರ ವ್ಯವಸ್ಥೆಗೆ ಕ್ರಮ ವಹಿಸಲಾಗುವುದು ಎಂದರು.

ಬೆಂಗ್ರೆ ಬೀಚ್‍ನಲ್ಲಿ ಗಾಲ್ಫ್ ಕಾರ್ಸ್ ಗಾಗಿ 2007-08ನೇ ಸಾಲಿನಲ್ಲಿ ಓಪಸ್ ಲಗೂನಾ ಸಂಸ್ಥೆ ಟೆಂಡರ್ ವಹಿಸಿದ್ದು, ಸಂಸ್ಥೆಗೆ ಇದೀಗ ಸಿಆರ್ ಝಡ್ ಅನುಮತಿ ದೊರಕಿದೆ. ಇಲ್ಲಿ ಜಮೀನು ಒತ್ತುವರಿ ಸಮಸ್ಯೆ ಇರುವುದರಿಂದ ಸೂಕ್ತ ಕ್ರಮಗಳೊಂದಿಗೆ ರೆಸಾರ್ಟ್ ಮಾದರಿಯಲ್ಲಿ ಅಭಿವೃದ್ಧಿಪಡಿಸಿದರೆ ಸ್ಥಳೀಯ ಸುಮಾರು 800 ಮಂದಿಗೆ ಉದ್ಯೋಗವೂ ದೊರಕಲಿದೆ. ಈ ಕುರಿತಂತೆ ಕಳೆದ ಎರಡು ತಿಂಗಳ ಅವಧಿಯಲ್ಲಿ 6 ಸಭೆಗಳನ್ನು ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಇದನ್ನೂ ಓದಿ: ಎರಡು ತಿಂಗಳು ಕೊಡಗಿನಲ್ಲಿ ಪ್ರವಾಸೋದ್ಯಮ ಸಂಪೂರ್ಣ ಸ್ಥಗಿತಗೊಳಿಸಿ- ಸ್ಥಳೀಯರ ಆಗ್ರಹ

ಸಸಿಹಿತ್ಲು ಹಾಗೂ ತಣ್ಣೀರುಬಾವಿ ಬೀಚ್‍ನಲ್ಲಿ ಸರ್ಕಾರಿ ಸರ್ಫಿಂಗ್ ಸ್ಕೂಲ್ ಆರಂಭಿಸುವ ಪ್ರಸ್ತಾವನೆ ಇದೆ. ಸಸಿಹಿತ್ಲು ಬೀಚ್ ಅಭಿವೃದ್ಧಿಗೆ ಈಗಾಗಲೇ 5 ಕೋಟಿ ರೂ. ಬಿಡುಗಡೆಯಾಗಿದೆ. ಆದರೆ ಅಲ್ಲಿ ಯಾವುದೇ ರೀತಿಯ ತಾತ್ಕಾಲಿಕ ಮೂಲಭೂತ ಸೌಕರ್ಯಗಳನ್ನು ಮಾಡಿದರೂ ಕಡಲ್ಕೊರೆತದಿಂದ ಸಮಸ್ಯೆಯಾಗುವ ಕಾರಣ, ಅದನ್ನು ತಡೆಯುವ ನಿಟ್ಟಿನಲ್ಲಿ ಕ್ರಮಕ್ಕೆ ಚಿಂತನೆ ನಡೆಸಲಾಗಿದೆ ಎಂದರು.

ಜಂಗಲ್ ಲಾಡ್ಜ್ ಮಾದರಿಯಲ್ಲಿ ತಾತ್ಕಾಲಿಕ ಸಾಂಪ್ರದಾಯಿಕ ಗುಡಿಸಲುಗಳ ನಿರ್ಮಾಣ, ಮೇಲ್ಛಾವಣಿ ರಹಿತ ರೆಸ್ಟೋರೆಂಟ್‍ಗಳ ನಿರ್ಮಾಣ ಮಾಡುವ ಯೋಜನೆಯೂ ಇದೆ. ಪಿಲಿಕುಳ ಜೈವಿಕ ಉದ್ಯಾನವನವಾಗಿದ್ದು, ನೈಸರ್ಗಿಕ ರೀತಿಯಲ್ಲಿ ಇಲ್ಲಿ ಪ್ರಾಣಿ, ಪಕ್ಷಿಗಳ ವಾಸಕ್ಕೆ ಅವಕಾಶವಿದೆ. ಈಗಿರುವ ವನ್ಯಜೀವಿಗಳಿಗೆ ವಿಶೇಷ ಆಕರ್ಷಣೆಯಾಗಿ ಜಿರಾಫೆ, ಝೀಬ್ರಾ ಹಾಗೂ ಆನೆಗಳನ್ನು ಸೇರ್ಪಡೆಗೊಳಿಸಲು ಚಿಂತಿಸಲಾಗಿದೆ. ಇದೇ ವೇಳೆ ಜಿಲ್ಲೆಯ ಪ್ರಮುಖ ಆಕರ್ಷಣೆಯಾದ ಕಂಬಳವನ್ನು ಪಿಲಿಕುಳದಲ್ಲಿ ಮತ್ತೆ ನಡೆಸುವುದು, ನದಿ ಉತ್ಸವವನ್ನು ಆರಂಭಿಸುವ ಬಗ್ಗೆಯೂ ಆಲೋಚನೆ ಇದೆ ಎಂದು ವಿವರಿಸಿದರು. ಸಂವಾದದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಹರೀಶ್ ಮೋಟುಕಾನ ಇದ್ದರು.

TAGGED:beachdakshina kannadaDCDr. Rajendra KVPublic TVtourismWeekend Street Festivalಡಾ.ರಾಜೇಂದ್ರ ಕೆ.ವಿಡಿಸಿದಕ್ಷಿಣ ಕನ್ನಡಪಬ್ಲಿಕ್ ಟಿವಿಪ್ರವಾಸೋದ್ಯಮಬೀಚ್ವೀಕೆಂಡ್ ಸ್ಟ್ರೀಟ್ ಫೆಸ್ಟಿವಲ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
2 minutes ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
6 minutes ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
26 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
49 minutes ago
Dharwad Suicide
Dharwad

ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣಾದ ಕೇಸ್ – ಮೂವರು ಕಾನ್‌ಸ್ಟೆಬಲ್‌ಗಳು ಸಸ್ಪೆಂಡ್

Public TV
By Public TV
52 minutes ago
Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?