ನಟ ಕಿಚ್ಚ ಸುದೀಪ್ (Sudeep) ಕಾಂಗ್ರೆಸ್ (Congress) ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ ಎಂದಿದ್ದಾರೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarakiholi). ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಸುದೀಪ್ ಅವರು ಹೆಸರಾಂತ ನಟ. ಸಮಾಜದ ಬಗ್ಗೆ ಕಾಳಜಿ ಇರುವಂತವರು. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುವುದಾಗಿ ಅವರು ತಿಳಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ (Congress) ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಇಂದು ದಿಢೀರ್ ಅಂತ ಕಿಚ್ಚ ಸುದೀಪ್ (Sudeep) ಮನೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಮೊನ್ನೆಯಷ್ಟೇ ನಟಿ ರಮ್ಯಾ ಮೂಲಕ ಸುದೀಪ್ ಅವರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ ಸುದ್ದಿಯೂ ಹರಡಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಸುದೀಪ್ ಮನೆಗೆ ಹೋಗಿರುವುದು ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿತ್ತು. ಇದನ್ನೂ ಓದಿ: ಆದಿಲ್ ಬೇರೆ ಹುಡುಗಿ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ : ಕಣ್ಣೀರಿಟ್ಟ ನಟಿ ರಾಖಿ ಸಾವಂತ್
ನಾನೊಬ್ಬ ನಟ, ನನಗೆ ರಾಜಕೀಯ (Politics) ಗೊತ್ತಿಲ್ಲ. ಹಾಗಾಗಿ ಆ ಕ್ಷೇತ್ರಕ್ಕೆ ಹೋಗಲಾರೆ ಎಂದು ಹಲವಾರು ಬಾರಿ ಸುದೀಪ್ ಹೇಳಿದ್ದರೂ, ಪದೇ ಪದೇ ರಾಜಕಾರಣದಲ್ಲಿ ಸುದೀಪ್ ಹೆಸರು ಕೇಳಿ ಬರುತ್ತಲೇ ಇದೆ. ಕಳೆದ ಬಾರಿ ವಿಧಾನಸಭಾ ಚುನಾವಣೆ ವೇಳೆ, ಟಿಕೆಟ್ ಘೋಷಣೆಯಷ್ಟೇ ಬಾಕಿ ಎಂದು ಸುದ್ದಿ ಹರಿದಾಡಿತು. ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಅನೇಕ ಗಣ್ಯರು ಸುದೀಪ್ ಅವರನ್ನು ಭೇಟಿ ಮಾಡಿದ್ದರು. ಆದರೂ, ಸುದೀಪ್ ಯಾರ ಕೈಗೂ ಸಿಗಲಿಲ್ಲ.
ಡಿ.ಕೆ. ಶಿವಕುಮಾರ್ ಭೇಟಿಯ ಹಿಂದೆ ಯಾವ ಉದ್ದೇಶ ಇರಬಹುದು ಎಂದು ಸುದೀಪ್ ಆಪ್ತರಲ್ಲಿ ವಿಚಾರಿಸಿದಾಗ, ಅದು ರಾಜಕೀಯ ಭೇಟಿ ಅಲ್ಲ ಎಂದು ಗೊತ್ತಾಗಿದೆ. ಡಿಕೆಶಿ ಒಡೆತನದ ಮಾಲ್ ವೊಂದರಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಉದ್ಘಾಟನೆಗೆ ಸುದೀಪ್ ಅವರನ್ನು ಆಹ್ವಾನಿಸಲು ಹೋಗಿದ್ದರು ಎಂದು ಹೇಳಲಾಗುತ್ತಿದೆ. ಡಿಕೆಶಿಗೆ ನಲಪಾಡ್ ಕೂಡ ಜೊತೆಯಾಗಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k