ಸಮೋಸ, ಬಾಳೆಹಣ್ಣು ತಿಂದು 2023ರ ಚಂದ್ರಗ್ರಹಣಕ್ಕೆ ಸ್ವಾಗತ – ಪ್ರಗತಿಪರರಿಂದ ವಿನೂತನ ಜಾಗೃತಿ

Public TV
1 Min Read
Samosa 2

ಬೆಂಗಳೂರು: ರಾತ್ರಿ ನಭೋಮಂಡಲದಲ್ಲಿ ಸಂಭವಿಸಿದ ಚಂದ್ರಗ್ರಹಣದ (Lunar Eclipse) ವಿಸ್ಮಯವನ್ನು ಹಲವು ಪ್ರಗತಿಪರರು ಆಹಾರ ಸೇವನೆ ಮಾಡುತ್ತಾ ಚಂದ್ರಗ್ರಹಣ ವೀಕ್ಷಣೆ ಮಾಡಿದ್ದಾರೆ. ʻಖಗೋಳ ವಿಸ್ಮಯ ಚಂದ್ರಗ್ರಹಣ ಸಂಭ್ರಮಿಸೋಣ, ಮೂಡನಂಭಿಕೆ ಅಳಿಸೋಣ, ಮಾನವೀಯತೆ ಉಳಿಸೋಣ, ವಿಜ್ಞಾನದೆಡೆಗೆ ನಮ್ಮ ನಡಿಗೆʼ ಎಂಬ ಘೋಷವಾಕ್ಯದೊಂದಿಗೆ ಸಮೋಸ (Samosa), ಬಾಳೆಹಣ್ಣು ತಿನ್ನುತ್ತಾ 2023ರ ಚಂದ್ರಗ್ರಹಣಕ್ಕೆ ಸ್ವಾಗತ ಕೋರಿದರು.

ಇಲ್ಲಿನ ಚಾಲುಕ್ಯ ವೃತ್ತದ ಬಳಿಯಿರುವ ಬಸವಣ್ಣ ಪ್ರತಿಮೆ (Basavanna Statue) ಮುಂದೆ ಜಮಾಯಿಸಿದ್ದ ಹಲವು ಪ್ರಗತಿಪರರು ʻಗ್ರಹಣದ ಸಮಯದಲ್ಲಿ ಊಟ ಮಾಡಬಾರದುʼ ಅನ್ನೋ ಜೋತಿಷಿಗಳ ನಂಬಿಕೆಗೆ ಸೆಡ್ಡು ಹೊಡೆದು ಆಹಾರ ಸೇವನೆ ಮಾಡಿದರು. ಗ್ರಹಣದ ಸಮಯದಲ್ಲಿ ಊಟ ಮಾಡಬಾರದು ಅನ್ನೋದು ಮೌಢ್ಯ, ಅದನ್ನ ವಿರೋಧಿಸಿ ಚಂದ್ರಗ್ರಹಣ ಸಂಭ್ರಮಿಸೋಣ ಎಂದು ಪ್ರಗತಿಪರರು ಕರೆ ನೀಡಿದ್ದಾರೆ. ನಟ ಚೇತನ್‌ ದಂಪತಿ ಕೂಡ ಈ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಚಂದ್ರಗ್ರಹಣ – ನೆಹರೂ ತಾರಾಲಯದಲ್ಲಿ ನಭೋಮಂಡಲ ವಿಸ್ಮಯ ದರ್ಶನ

ಮೂಢನಂಬಿಕೆ ವಿರೋಧಿ ಒಕ್ಕೂಟದಿಂದ ವಿಜ್ಞಾನದೆಡಗೆ ನಮ್ಮ ನಡಿಗೆ ಘೋಷವಾಕ್ಯದೊಂದಿಗೆ ಗ್ರಹಣದ ಬಗ್ಗೆ ಮೌಢ್ಯ ಬೇಡವೆಂದು ನೆಹರೂ ತಾರಾಲಯದಲ್ಲಿ (Nehru Planetarium) ಜಾಗೃತಿ ಮೂಡಿಸುವ ಪ್ರಯತ್ನವನ್ನು ಮಾಡಿತು. ಇದನ್ನೂ ಓದಿ: ಚಂದ್ರಗ್ರಹಣ – ನೆಹರೂ ತಾರಾಲಯದಲ್ಲಿ ನಭೋಮಂಡಲ ವಿಸ್ಮಯ ದರ್ಶನ

ಗ್ರಹಣ ವೀಕ್ಷಣೆಗೆ ಅಡ್ಡಿಯಾದ‌ ಮೋಡ: ಇನ್ನೂ ಚಂದ್ರಗ್ರಹಣ ವೀಕ್ಷಣೆಗೆ ಮೋಡ ಅಡ್ಡಿಯುಂಟು ಮಾಡಿದೆ. ನಸುಕಿನ 1:04 ಗಂಟೆಗೆ ಪೂರ್ಣ ಪ್ರಮಾಣದ ಗ್ರಹಣ ಆರಂಭವಾಗಿತ್ತು. 1 ಗಂಟೆ 30 ನಿಮಿಷಗಳ ವರೆಗೂ ಗ್ರಹಣ ಗೋಚರವಾಗುತ್ತಿತ್ತು. ಆ ನಂತರ ಸ್ಬಲ್ಪ ಸಮಯ ಮೋಡ ಅಡ್ಡಿಯಾಗಿದ್ದರಿಂದ ಗ್ರಹಣ ವೀಕ್ಷಣೆಗೂ ಅಡಚಣೆಯುಂಟಾಗಿತ್ತು. ಇದನ್ನೂ ಓದಿ: ಯಾವ ದೇಶದಲ್ಲೂ ಪೂರ್ಣ ಚಂದ್ರಗ್ರಹಣ ಕಾಣೋದಿಲ್ಲ: ವಿಜ್ಞಾನಿ ಆನಂದ್‌

Web Stories 
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article