ಬೆಂಗಳೂರು: ಕುಡಿದ ಅಮಲಿನಲ್ಲಿ ಕ್ಷುಲಕ ಕಾರಣಕ್ಕೆ ಸ್ನೇಹಿತನ ತಲೆಯನ್ನು ಗೋಡೆಗೆ ಹೊಡೆದು ಕೊಲೆಗೈದ ಘಟನೆ ಹೊಸಕೋಟೆ ತಾಲೂಕಿನ ಮಲ್ಲಿಮಾಕನಪುರ ಗ್ರಾಮದಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ ಶಿವಕುಮಾರ್ (44) ಕೊಲೆಯಾದ ವ್ಯಕ್ತಿ. ವೆಸ್ಟ್ ಇಂಡಿಸ್ ಮೂಲದ ಬಾಬಿ ಅನ್ನುವವನು ಈ ಕೊಲೆ ಮಾಡಿದ್ದಾನೆ. ಗಾರೆ ಕೆಲಸ ಮಾಡುತ್ತಿದ್ದ ಶಿವಕುಮಾರ್ ಬಾಡಿಗೆ ಮನೆ ಮಾಡಿಕೊಂಡು ವಾಸವಿದ್ದರು. ಅವರ ಜತೆಗೆ ಬಾಡಿಗೆ ಮನೆಯಲ್ಲಿ ವೆಸ್ಟ್ ಇಂಡಿಸ್ ಮೂಲದ ಬಾಬಿಕೂಡ ವಾಸವಿದ್ದನು. ರಾತ್ರಿ ವೇಳೆ ಇಬ್ಬರು ಕುಡಿದು ಗಲಾಟೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕ್ಷುಲಕ ಕಾರಣಕ್ಕೆ ಅವರನ್ನು ಹತ್ಯೆಗೈದಿದ್ದಾನೆ. ಇದನ್ನೂ ಓದಿ: ಇಂದು ಕೇಂದ್ರ ಬಜೆಟ್ – ಆರ್ಥಿಕತೆಗೆ ಸಿಗುತ್ತಾ ‘ಬೂಸ್ಟರ್ ಡೋಸ್’..?
ಕೊಲೆ ಮಾಡಿದ ಬಾಬಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ನಂದಗುಡಿ ಪೊಲೀಸರು ಹಾಗೂ ಎಸ್ಪಿ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.