Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Health

ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೇನು? – ಪರಿಹಾರವೇನು?

Public TV
Last updated: September 11, 2023 5:09 pm
Public TV
Share
3 Min Read
Austonuts
SHARE

ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಇತ್ತೀಚೆಗಷ್ಟೇ ಚಂದ್ರಯಾನ-3 (Chandrayaan-3) ಯಶಸ್ವಿ ಕಂಡು, ಇದೀಗ ಸೂರ್ಯಯಾನ ಯಶಸ್ಸಿನ ನಿರೀಕ್ಷೆಯಲ್ಲಿದೆ. ನಾವು ಗಗನಯಾತ್ರೆ ಎಂದಾಕ್ಷಣ ಸಾಮಾನ್ಯರ ಮನಸ್ಸಿನಲ್ಲಿ ಏನೋ ಒಂದು ಕೌತುಕ, ಮನಸ್ಸಿನಲ್ಲಿ ತಮ್ಮದೇ ಕಲ್ಪನೆ. ಗುರುತ್ವಾಕರ್ಷಣೆ ಇಲ್ಲದ ಬಾಹ್ಯಾಕಾಶದಲ್ಲಿ (Space) ಹಕ್ಕಿಯಂತೆ ಹಾರಾಡುವ ಅದ್ಭುತವೇ ಸರಿ. ಆದ್ರೆ ಬಾಹ್ಯಾಕಾಶದಲ್ಲಿ ಹಕ್ಕಿಗಳಂತೆ ಹಾರಾಡಿ ಮತ್ತು ಮನುಷ್ಯ ಸಹಜ ಜೀವನಕ್ಕೆ ತೆರೆದುಕೊಳ್ಳುವುದು ಅಷ್ಟು ಸುಲಭವಲ್ಲ. ಅದಕ್ಕೆಂದೇ ಸೂಕ್ತ ಮಾರ್ಪಾಡುಗಳನ್ನ ಮಾಡಿಕೊಳ್ಳಬೇಕಾಗುತ್ತೆ.

Contents
  • ಮೂಳೆಗಳು ಬಲಹೀನವಾಗುತ್ತವೆ:
  • ಹೃದಯ ಬಡಿತ ಹೆಚ್ಚಾಗುತ್ತೆ, ತಲೆ ಸುತ್ತು ಜಾಸ್ತಿಯಾಗುತ್ತೆ:
  • ದೃಷ್ಟಿಯ ಬದಲಾವಣೆಗಳು:
  • ಕ್ಯಾನ್ಸರ್‌ಗೆ ತುತ್ತಾಗುವ ಅಪಾಯವಿದೆ:
  • ಮಾನಸಿಕ ಪರಿಣಾಮಗಳೇನು?
  • ರೋಗನಿರೋಧಕ ಶಕ್ತಿ ಕುಗ್ಗಿಸುತ್ತೆ:
  • ವೆಸ್ಟಿಬ್ಯುಲರ್ ಸಮಸ್ಯೆಗಳು:

Astranauts

ಹೌದು. ಬಾಹ್ಯಾಕಾಶ ಪ್ರಯಾಣ ಕೈಗೊಂಡ ಬಳಿಕ, ಗಗನಯಾತ್ರಿಗಳು ಬಾಹ್ಯಾಕಾಶದ ಕನಿಷ್ಠ ಗುರುತ್ವಾಕರ್ಷಣೆಯ (Gravity) ಕಾರಣದಿಂದ ಒಂದಷ್ಟು ಆರೋಗ್ಯ ಸಂಬಂಧಿ ವಿಚಾರಗಳು (Health Issues) ಹಾಗೂ ಶಾರೀರಿಕ ಬದಲಾವಣೆಗಳನ್ನ ಎದುರಿಸುವ ಸಾಧ್ಯತೆಗಳಿವೆ. ಅದರಲ್ಲಿನ ಕೆಲವು ಪರಿಸ್ಥಿತಿಗಳನ್ನ ನಾವಿಲ್ಲಿ ಕಾಣಬಹುದು.

ಮೂಳೆಗಳು ಬಲಹೀನವಾಗುತ್ತವೆ:

ಬಾಹ್ಯಾಕಾಶ ಪ್ರಯಾಣದ ಸಂದರ್ಭದಲ್ಲಿ ದೀರ್ಘಕಾಲದ ತನಕ ಕನಿಷ್ಠ ಗುರುತ್ವಾಕರ್ಷಣೆಗೆ ಒಳಗಾಗುವುದು ಸ್ನಾಯು ಕ್ಷೀಣತೆಯ ಸಮಸ್ಯೆ ಉಂಟುಮಾಡಬಲ್ಲದು. ಅಂದರೆ, ಕಡಿಮೆ ದೈಹಿಕ ಚಟುವಟಿಕೆಗಳ ಕಾರಣದಿಂದ ಸ್ನಾಯುಗಳ ಅಂಗಾಂಶಗಳು ಕ್ರಮೇಣ ಕಡಿಮೆಯಾಗಿ, ಶಕ್ತಿ ಕಳೆದುಕೊಳ್ಳುತ್ತವೆ.

1 2

ಗಗನಯಾತ್ರಿಗಳು (Astronauts) ಸಾಮಾನ್ಯವಾಗಿ ಈ ಸಮಸ್ಯೆಯನ್ನ ಎದುರಿಸಿ, ಭೂಮಿಗೆ ಮರಳಿದ ಬಳಿಕ, ಸ್ನಾಯು ಭಾರ ಮತ್ತು ಶಕ್ತಿಯನ್ನ ಮರಳಿ ಪಡೆಯಲು ದೈಹಿಕ ಪುನರ್ವಸತಿ ಚಿಕಿತ್ಸೆ ಪಡೆಯಬೇಕಾಗುತ್ತದೆ. ಸ್ನಾಯು ಕ್ಷೀಣತೆಯ ಕಾರಣದಿಂದ, ದುರ್ಬಲತೆ ಮತ್ತು ಚಲನಹೀನತೆ ಉಂಟಾಗಬಹುದು. ಇದನ್ನ ಎದುರಿಸಲು, ಗಗನಯಾತ್ರಿಗಳು ದೈಹಿಕ ಚಿಕಿತ್ಸೆ, ಶಕ್ತಿ ತರಬೇತಿ ಹಾಗೂ ನಿರಂತರ ವ್ಯಾಯಾಮ ನಡೆಸುತ್ತಾರೆ. ಅದರೊಂದಿಗೆ ಮೂಳೆಯ ಸಾಂದ್ರತೆ ಕಳೆದುಕೊಳ್ಳುವುದು ಬಾಹ್ಯಾಕಾಶದಲ್ಲಿ ಇನ್ನೊಂದು ಕಳವಳಕಾರಿ ವಿಚಾರ. ಇದರಿಂದಾಗಿ ಮೂಳೆಗಳು ಬಲಹೀನವಾಗುತ್ತವೆ. ಗಗನಯಾತ್ರಿಗಳು ಇದನ್ನ ಎದುರಿಸಲು ನಿಯಮಿತ ವ್ಯಾಯಾಮ, ಉತ್ತಮ ಪೋಷಕಾಂಶಗಳ ಸೇವನೆಯಂತಹ ಕ್ರಮಗಳನ್ನ ಕೈಗೊಳ್ಳುತ್ತಾರೆ.

2 2

ಹೃದಯ ಬಡಿತ ಹೆಚ್ಚಾಗುತ್ತೆ, ತಲೆ ಸುತ್ತು ಜಾಸ್ತಿಯಾಗುತ್ತೆ:

ಬಾಹ್ಯಾಕಾಶ ಪ್ರಯಾಣ ಗಗನಯಾತ್ರಿಗಳಲ್ಲಿ ಆರ್ಥೋಸ್ಟಾಟಿಕ್ ಇಂಟಾಲರೆನ್ಸ್ (ಮಾನಸಿಕ ಅಸಹಿಷ್ಣುತೆ) ಸೇರಿದಂತೆ, ಹೃದಯದ ರಕ್ತನಾಳದ ಬದಲಾವಣೆಗಳನ್ನ ತರಬಲ್ಲದು. ಇದರ ಪರಿಣಾಮವಾಗಿ ಅವರಲ್ಲಿ ಕುಳಿತಲ್ಲಿಂದ ಅಥವಾ ಮಲಗಿದಲ್ಲಿಂದ ಎದ್ದು ನಿಲ್ಲುವಾಗ ತಲೆಸುತ್ತು, ಮೂರ್ಛೆ ಹೋಗುವುದು ಅಥವಾ ಹೃದಯ ಬಡಿತ ಪ್ರಮಾಣ ಹೆಚ್ಚಳ ಕಂಡುಬರಬಹುದು. ಈ ಪರಿಸ್ಥಿತಿ ರಕ್ತದೊತ್ತಡದ ನಿಯಂತ್ರಣದಲ್ಲಿನ ಬದಲಾವಣೆ ಹಾಗೂ ಸ್ವಯಂಚಾಲಿತ ನರಮಂಡಲದ ಕಾರ್ಯಾಚರಣೆಯ ಕಾರಣದಿಂದ ಉಂಟಾಗಬಹುದು. ಇದರ ಚಿಕಿತ್ಸೆ ಸಾಮಾನ್ಯವಾಗಿ ಜೀವನಶೈಲಿಯಲ್ಲಿನ ಬದಲಾವಣೆ, ಹೆಚ್ಚಿನ ದ್ರವ ಆಹಾರ ಮತ್ತು ಉಪ್ಪಿನ ಸೇವನೆ, ಸಂಕೋಚನ ವಸ್ತ್ರಗಳನ್ನು ಧರಿಸುವುದು (ದೇಹಕ್ಕೆ ಆರಾಮದಾಯಕ ಹಾಗೂ ಸುರಕ್ಷಿತ ಅನ್ನಿಸುವ ಉಡುಪುಗಳು) ಮತ್ತು ಕೆಲವು ಸಂದರ್ಭಗಳಲ್ಲಿ ಸುಗಮವಾಗಿ ಎದ್ದು ನಿಲ್ಲುವಂತಾಗಲು ಔಷಧೀಯ ಕ್ರಮಗಳನ್ನೂ ಒಳಗೊಂಡಿರುತ್ತದೆ.

ದೃಷ್ಟಿಯ ಬದಲಾವಣೆಗಳು:

ಕೆಲವು ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಕಣ್ಣಿನ ಸಮಸ್ಯೆಗಳನ್ನೂ ಎದುರಿಸುತ್ತಾರೆ. ಉದಾಹರಣೆಗೆ ಕಣ್ಣುಗಳಲ್ಲಿ ದ್ರವದ ಬದಲಾವಣೆಗಳು ದೃಷ್ಟಿಯನ್ನು ದುರ್ಬಲಗೊಳಿಸಬಹುದು. ಈ ಸ್ಥಿತಿಯನ್ನು ಸ್ಪೇಸ್ ಫ್ಲೈಟ್-ಅಸೋಸಿಯೇಟೆಡ್ ನ್ಯೂರೋ-ಆಕ್ಯುಲರ್ ಸಿಂಡ್ರೋಮ್ (ಎಸ್ಎಎನ್ಎಸ್) ಎಂದು ಕರೆಯಲಾಗುತ್ತದೆ.

3 2

ಕ್ಯಾನ್ಸರ್‌ಗೆ ತುತ್ತಾಗುವ ಅಪಾಯವಿದೆ:

ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಅಧಿಕ ಮಟ್ಟದ ಕಾಸ್ಮಿಕ್ ವಿಕಿರಣಕ್ಕೆ ಒಡ್ಡಿಕೊಳ್ಳುತ್ತಾರೆ. ಇದರ ಪರಿಣಾಮವಾಗಿ, ಕಾಲಾನಂತರದಲ್ಲಿ ಕ್ಯಾನ್ಸರ್ ಮತ್ತು ಇತರ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುವ ಅಪಾಯವು ಹೆಚ್ಚಾಗಿರುತ್ತದೆ.

ಮಾನಸಿಕ ಪರಿಣಾಮಗಳೇನು?

ಬಾಹ್ಯಾಕಾಶ ಯಾತ್ರೆಯು ಏಕಾಂತತೆ, ಬಂಧನದ ಭಾವ ಮೂಡಿಸುತ್ತದೆ ಮತ್ತು ಇದರಿಂದ ಉಂಟಾಗುವ ಒತ್ತಡವು ಮನಸ್ಥಿತಿಯಲ್ಲಿ ಬದಲಾವಣೆ ಉಂಟುಮಾಡಿ, ಆತಂಕ ಮತ್ತು ಖಿನ್ನತೆಯಂತಹ ಕೆಲವು ಮಾನಸಿಕ ಸಮಸ್ಯೆಗಳನ್ನ ತಂದೊಡ್ಡಬಹುದು.

4 1

ರೋಗನಿರೋಧಕ ಶಕ್ತಿ ಕುಗ್ಗಿಸುತ್ತೆ:

ಬಾಹ್ಯಾಕಾಶ ಯಾನವು ರೋಗನಿರೋಧಕ ವ್ಯವಸ್ಥೆಯನ್ನು ಬಹುತೇಕ ದುರ್ಬಲಗೊಳಿಸಿ, ಗಗನಯಾತ್ರಿಗಳನ್ನು ಸೋಂಕುಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿಸುತ್ತದೆ.

ವೆಸ್ಟಿಬ್ಯುಲರ್ ಸಮಸ್ಯೆಗಳು:

ಒಳಗಿವಿಯ ಸಮತೋಲನ ವ್ಯವಸ್ಥೆಯಲ್ಲಿ ಉಂಟಾಗುವ ಬದಲಾವಣೆಗಳು ಬಾಹ್ಯಾಕಾಶ ಯಾನದ ಸಮಯದಲ್ಲಿ ಮತ್ತು ಆಮೇಲೂ ದಿಕ್ಕು ತಪ್ಪಿಸುವಿಕೆ ಮತ್ತು ಚಲನೆಯಲ್ಲಿ ಅಸಮತೋಲನಕ್ಕೆ ಕಾರಣವಾಗಬಹುದು.

ಈ ಎಲ್ಲ ಆರೋಗ್ಯ ಸಮಸ್ಯೆಗಳನ್ನ ನಿಯಂತ್ರಿಸಲು, ಗಗನಯಾತ್ರಿಗಳು ತಮ್ಮ ಕಾರ್ಯಾಚರಣೆಗೆ ಪೂರ್ವದಲ್ಲಿ ಹಾಗೂ ಪೂರ್ಣಗೊಂಡ ಮೇಲೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನಗಳಿಗೆ ಒಳಗಾಗುತ್ತಾರೆ. ಜೊತೆಗೆ ಸೂಕ್ಷ್ಮ ಗುರುತ್ವಾಕರ್ಷಣೆಯ ನಕಾರಾತ್ಮಕ ಪರಿಣಾಮಗಳನ್ನ ಕಡಿಮೆ ಮಾಡಲು ತಮ್ಮ ಕಾರ್ಯಗಳ ಸಮಯದಲ್ಲೂ ಅವರು ವ್ಯಾಯಾಮ ಮತ್ತು ಪುನರ್ವಸತಿ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುತ್ತಾರೆ. ಅಲ್ಲದೇ, ಬಾಹ್ಯಾಕಾಶ ಯಾನಕ್ಕೆ ಸಂಬಂಧಿಸಿದ ಈ ಆರೋಗ್ಯ ಸವಾಲುಗಳನ್ನ ಇನ್ನಷ್ಟು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಮತ್ತು ಪರಿಹರಿಸಲು ಅನೇಕ ಸಂಶೋಧನೆಗಳು ಪ್ರಗತಿಯಲ್ಲಿವೆ.

ಮಾಹಿತಿ: ಗಿರೀಶ್ ಲಿಂಗಣ್ಣ (ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ)
– ಮೋಹನ ಬನ್ನಿಕುಪ್ಪೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:Aditya-L1AstronautsChandrayaan-3Health ProblemsISROspaceಆರೋಗ್ಯಗಗನಯಾತ್ರಿಗಳುಚಂದ್ರಯಾನ-3ಬಾಹ್ಯಾಕಾಶಸೂರ್ಯಯಾನ
Share This Article
Facebook Whatsapp Whatsapp Telegram

Cinema News

Sudeep 1
ಅಮ್ಮನ ಹೆಸರಿನಲ್ಲಿ ಸುದೀಪ್ ಹಸಿರು ಕ್ರಾಂತಿ
Cinema Latest Sandalwood
Vishnu memorial
ಅಭಿಮಾನ್‌ ಸ್ಟುಡಿಯೋ ಜಮೀನು ವಿವಾದ – ವಿಷ್ಣುಸೇನಾ ಸಮತಿಯಿಂದ ಅರಣ್ಯ ಸಚಿವರ ಭೇಟಿ
Cinema Latest Sandalwood Top Stories
SUDEEP
ಕಿಚ್ಚನ ಬರ್ತ್‌ಡೇ ಸೆಲಬ್ರೇಷನ್‌ಗೆ ಸ್ಥಳ, ಟೈಮಿಂಗ್ ಫಿಕ್ಸ್!
Cinema Latest Sandalwood Top Stories
Mangalapuram‌ movie
ರಿಷಿ ಹೊಸ ಸಿನಿಮಾಗೆ ಮುಹೂರ್ತ: ಬಿಗ್ ಬಾಸ್ ಸ್ಪರ್ಧಿ ನಾಯಕಿ
Cinema Latest Sandalwood Top Stories
Landlord Cinema
ದುನಿಯಾ ವಿಜಯ್ ಪುತ್ರಿ ರಿತನ್ಯಾ ಹುಟ್ಟುಹಬ್ಬಕ್ಕೆ ಲ್ಯಾಂಡ್ ಲಾರ್ಡ್ ಫಸ್ಟ್ ಲುಕ್
Cinema Latest Sandalwood

You Might Also Like

Chattisgarh Temple Theft Arrest
Crime

ದೇವರ ವಿರುದ್ಧವೇ ಸೇಡು – 10 ವರ್ಷಗಳಿಂದ ದೇವಸ್ಥಾನದ ಹುಂಡಿ ಹಣ ಕದಿಯುತ್ತಿದ್ದ HIV ಸೋಂಕಿತ ಅರೆಸ್ಟ್

Public TV
By Public TV
7 minutes ago
Jayanth 3
Bengaluru City

ಧರ್ಮಸ್ಥಳ ಬುರುಡೆ ಕೇಸ್‌ಗೆ ಬೆಂಗಳೂರಿನ ನಂಟು – ತಿಮರೋಡಿ ಆಪ್ತ ಜಯಂತ್ ಮನೆ ಜಾಲಾಡಿದ SIT

Public TV
By Public TV
26 minutes ago
PM Modi Gift Japan PM 4
Latest

ಜಪಾನ್‌ ಪ್ರಧಾನಿ, ಅವರ ಪತ್ನಿಗೆ ವಿಶೇಷ ಗಿಫ್ಟ್‌ ಕೊಟ್ಟ ಮೋದಿ – ಚಂದ್ರಶಿಲೆಯ ಬಟ್ಟಲು, ಪಶ್ಮಿನಾ ಶಾಲಿನ ವಿಶೇಷತೆ ಏನು?

Public TV
By Public TV
1 hour ago
Chunchi Falls Ramanagara
Districts

ಚುಂಚಿಫಾಲ್ಸ್ ಪ್ರವೇಶಕ್ಕೆ ಪ್ರವಾಸಿಗರ ಬಳಿ ಅಕ್ರಮ ಹಣ ವಸೂಲಿ – ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ದಾಖಲು

Public TV
By Public TV
1 hour ago
trishund mayureshwar ganpati
Latest

ಮೂರು ಸೊಂಡಿಲುಗಳ ಗಣೇಶನ ವಿಗ್ರಹವನ್ನು ಹೊಂದಿರುವ ದೇಶದ ಏಕೈಕ ದೇವಾಲಯವಿದು

Public TV
By Public TV
2 hours ago
Arasikere Murder
Crime

ಹಾಸನ | ಶಾಲೆಯಲ್ಲಿ ಮಕ್ಕಳ ನಡುವೆ ಗಲಾಟೆ – ತಂದೆಯ ಕೊಲೆಯಲ್ಲಿ ಅಂತ್ಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?