Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರಬಲ್ ಶೂಟರ್ ಮುಂದಿವೆ ಸಾಲು ಸಾಲು ಸವಾಲುಗಳು – ಡಿಕೆಶಿಗೆ ಪಟ್ಟ ನೀಡಿದ್ದು ಯಾಕೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಟ್ರಬಲ್ ಶೂಟರ್ ಮುಂದಿವೆ ಸಾಲು ಸಾಲು ಸವಾಲುಗಳು – ಡಿಕೆಶಿಗೆ ಪಟ್ಟ ನೀಡಿದ್ದು ಯಾಕೆ?

Bengaluru City

ಟ್ರಬಲ್ ಶೂಟರ್ ಮುಂದಿವೆ ಸಾಲು ಸಾಲು ಸವಾಲುಗಳು – ಡಿಕೆಶಿಗೆ ಪಟ್ಟ ನೀಡಿದ್ದು ಯಾಕೆ?

Public TV
Last updated: March 11, 2020 5:37 pm
Public TV
Share
2 Min Read
DK Shivakumar KPCC President
SHARE

ಬೆಂಗಳೂರು: ಕೊನೆಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಪಟ್ಟವನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಾಲು ಸಾಲು ಅಡೆತಡೆಗಳ ನಡುವೆಯೂ ಡಿ.ಕೆ.ಶಿವಕುಮಾರ್ ಕೆಪಿಸಿಸಿಯ ಚುಕ್ಕಾಣಿ ಹಿಡಿದಿದ್ದಾರೆ. ಸಾಕಷ್ಟು ಅಡೆತಡೆಗಳಿದ್ದರೂ ಡಿ.ಕೆ.ಶಿವಕುಮಾರ್ ಕೆಲವು ಪ್ರಮುಖ ಅಂಶಗಳಿಂದಲೇ ಅಧ್ಯಕ್ಷ ಸ್ಥಾನಕ್ಕೇರಿರುವುದು ಎಂಬ ಲೆಕ್ಕಾಚಾರಗಳು ಕಾಂಗ್ರೆಸ್ ಪಡಸಾಲೆಯಲ್ಲಿ ಆರಂಭಗೊಂಡಿವೆ.

ನೇಮಕಕ್ಕೆ ಕಾರಣವಾದ ಅಂಶಗಳು: ಡಿ.ಕೆ.ಶಿವಕುಮಾರ್ ಮೊದಲಿನಿಂದಲೂ ಟ್ರಬಲ್ ಶೂಟರ್ ಇಮೇಜ್ ಹೊಂದಿದ್ದಾರೆ. ಪಕ್ಷವನ್ನು ಸೋಲಿನ ಕಷ್ಟಗಳಿಂದ ಪಾರು ಮಾಡುವ ಶಕ್ತಿ ಡಿ.ಕೆ.ಶಿವಕುಮಾರ್ ಅವರಲ್ಲಿದೆ ಎಂಬುವುದು ಹೈಕಮಾಂಡ್ ನಂಬಿಕೆ.

Satish Jarkiholi KPCC

ಗುಜರಾತ್ ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಸೋನಿಯಾ ಆಪ್ತ ಅಹಮದ್ ಪಟೇಲ್ ಅವರನ್ನು ಜಯಗಳಿಸಲು ಶಾಸಕರನ್ನು ರೆಸಾರ್ಟಿನಲ್ಲಿ ಇಟ್ಟ ಜವಾಬ್ದಾರಿಯಿಂದಲೇ ಡಿ.ಕೆ.ಶಿವಕುಮಾರ್ ಐಟಿ, ಇಡಿಯ ಸಂಕಷ್ಟಕ್ಕೆ ಒಳಗಾಗಬೇಕಾಯ್ತು. ಹಾಗಾಗಿ ಋಣ ಸಂದಾಯಕ್ಕಾಗಿ ಡಿ.ಕೆ. ಶಿವಕುಮಾರ್ ನೇಮಕವಾಗಿರುವ ಸಾಧ್ಯತೆಗಳಿವೆ.

ಈ ಹಿಂದೆ ಪಕ್ಷ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲಾ ಪಕ್ಷದ ನೆರವಿಗೆ ಡಿಕೆ ಶಿವಕುಮಾರ್ ನಿಂತಿದ್ದು ಸಹ ಹೈ ಕಮಾಂಡ್ ಮೆಚ್ಚುಗೆಗೆ ಪಾತ್ರವಾಗಿತ್ತು. ಕರ್ನಾಟಕ ಶಾಸಕರು ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದಾಗಲೂ ಡಿಕೆಶೀ ಹೋಟೆಲ್ ಮುಂದೆ ಪ್ರತಿಭಟಿಸಿದ್ದು ಹೈಕಮಾಂಡ್ ಮೆಚ್ಚುಗೆಗೆ ಪಾತ್ರವಾಗಿತ್ತು.

Salim Ahmed KPCC

ನಾಯಕತ್ವದ ಕೊರತೆ ಎದುರಿಸುತ್ತಿರುವ ಕರ್ನಾಟಕ ಕಾಂಗ್ರೆಸ್ ನಲ್ಲಿ ಸದ್ಯಕ್ಕೆ ಡಿಕೆ ಶಿವಕುಮಾರ್ ಅನಿವಾರ್ಯ ಅನ್ನೋ ಕಾರ್ಯಕರ್ತರ ಹಾಗೂ ಹಿರಿಯ ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಈ ಎಲ್ಲ ಅಂಶಗಳಿಂದಲೇ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಪಟ್ಟ ದೊರಕಿದೆ ಎಂಬ ಮಾತುಗಳು ಕೇಳಿ ಬಂದಿವೆ.

ಮುಂದಿವೆ ಸವಾಲುಗಳು: ಕೆಪಿಸಿಸಿ ಸ್ಥಾನಗಳಿಗಾಗಿ ರಾಜ್ಯ ಕಾಂಗ್ರೆಸ್‍ನಲ್ಲಿ ಮೂಲ ಮತ್ತು ವಲಸಿಗ ಎಂಬ ಎರಡು ಬಣಗಳು ಕಾಣಿಸಿಕೊಂಡಿದ್ದವು. ಈಗ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಿ.ಕೆ.ಶಿವಕುಮಾರ್ ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗಬೇಕಿದೆ. ಇದರ ಜೊತೆಗೆ ತಮ್ಮ ವಿರುದ್ಧ ಇರುವ ಕಾನೂನು ತೊಡುಕಗಳನ್ನು ನಿವಾರಿಸಿಕೊಳ್ಳಬೇಕಿದೆ. ಈಗಿನಿಂದಲೇ ಪಕ್ಷವನ್ನು ಭದ್ರವಾಗಿ ಸಂಘಟಿಸಿ ಮುಂಬರುವ ಬಿಬಿಎಂಪಿ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಗೆಲ್ಲುವಂತೆ ಮಾಡಬೇಕು.

EShwar Khandre KPCC

ಪಕ್ಷದಲ್ಲಿಯ ರಾಜಕಾರಣವನ್ನು ಬದಿಗಿಟ್ಟು, ಬಿಜೆಪಿ ವಿರುದ್ಧ ಹೋರಾಟ ಮಾಡಬೇಕಾದದ್ದು ಕಾಂಗ್ರೆಸ್‍ಗೆ ಅನಿವಾರ್ಯವಾಗಿದೆ. ಕೆಪಿಸಿಸಿ ಪದಾಧಿಕಾರಿಗಳ ನೇಮಕ, ಜಾತಿ, ಪ್ರಾಂತ್ಯ, ಹಿರಿತನದ ಆಧಾರದ ಮೇಲೆ ಪದಾಧಿಕಾರಿಗಳ ಹಂಚಿಕೆ ಮಾಡಬೇಕು. ಜೊತೆಗೆ ಸಿದ್ದರಾಮಯ್ಯ, ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಬಣದ ಬೆಂಬಲಿಗರಿಗೆ ಸ್ಥಾನಮಾನ ನೀಡಿ ವಿಶ್ವಾಸಕ್ಕೆ ತಗೆದುಕೊಳ್ಳಬೇಕು.

KPCC Siddu Kharge Param Khandre

ಜೆಡಿಎಸ್ ಪ್ರಾಬಲ್ಯವಿರುವ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮುಂದಾಗಬೇಕು. ಕಳೆದ ಎರಡು ವರ್ಷಗಳಲ್ಲಿದ್ದ ಜೆಡಿಎಸ್ ಜೊತೆಗಿನ ಸಾಫ್ಟ್ ಕಾರ್ನರ್ ನ್ನು ಡಿ.ಕೆ.ಶಿವಕುಮಾರ್ ಎದುರಿಸಬೇಕು. ಸಮುದಾಯದ ಮತ ಗಳಿಕೆ ಆಗಬೇಕಾದ್ರೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ರಾಜಕೀಯವಾಗಿ ಎದುರು ಹಾಕಿಕೊಳ್ಳಲೇಬೇಕು.

ಕೆಪಿಸಿಸಿ ಹೊಸ ಸಾರಥಿಯಾಗಿರುವ ಡಿ.ಕೆ.ಶಿವಕುಮಾರ್ ಮುಂದಿನ ಹಾದಿ ಸುಲಭದಾಗಿಲ್ಲ. ಡಿಕೆಶಿ ಜೊತೆಯಲ್ಲಿಯೇ ಮೂವರ ಕಾರ್ಯಾಧ್ಯಕ್ಷರ ನೇಮಕವಾಗಿದೆ. ಈ ಮೂವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹೋದಲ್ಲಿ ಡಿ.ಕೆ.ಶಿವಕುಮಾರ್ ದಾರಿ ಕಷ್ಟವಾಗಲಿದೆ. ಜೊತೆಗೆ ವಿಪಕ್ಷ ನಾಯಕ, ಸಿಎಲ್ ಪಿ ನಾಯಕ ಸಿದ್ದರಾಮಯ್ಯನವರ ಬೆಂಬಲವೂ ಡಿ.ಕೆ.ಶಿವಕುಮಾರ್ ಅವರಿಗೆ ಅನಿವಾರ್ಯತೆ ಇದೆ.

TAGGED:congressDK ShivakumarKPCC PresidentPublic TVಕಾಂಗ್ರೆಸ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post

You Might Also Like

jail reel
Crime

ಜೈಲಲ್ಲಿ ಬಾಯ್‌ಫ್ರೆಂಡ್‌ ಜೊತೆ ರೀಲ್ಸ್‌ ಮಾಡಿದ ಯುವತಿ

Public TV
By Public TV
18 minutes ago
Donald Trump
Latest

ಕೆನಡಾ ಮಾರಾಟ ಮಾಡುವ ವಿಮಾನಗಳಿಗೆ 50% ಸುಂಕ ವಿಧಿಸಿದ ಟ್ರಂಪ್‌

Public TV
By Public TV
20 minutes ago
RCB 7
Cricket

ಹ್ಯಾರಿಸ್‌, ಮಂಧಾನ ಆರ್ಭಟಕ್ಕೆ ವಾರಿಯರ್ಸ್‌ ಬರ್ನ್‌ – ಭರ್ಜರಿ ಜಯದೊಂದಿಗೆ ಫೈನಲ್‌ಗೆ RCB ಎಂಟ್ರಿ!

Public TV
By Public TV
9 hours ago
01 28
Big Bulletin

ಬಿಗ್‌ ಬುಲೆಟಿನ್‌ 29 January 2026 ಭಾಗ-1

Public TV
By Public TV
9 hours ago
02 24
Big Bulletin

ಬಿಗ್‌ ಬುಲೆಟಿನ್‌ 29 January 2026 ಭಾಗ-2

Public TV
By Public TV
9 hours ago
03 21
Big Bulletin

ಬಿಗ್‌ ಬುಲೆಟಿನ್‌ 29 January 2026 ಭಾಗ-3

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?