Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪಚುನಾವಣೆಯಲ್ಲಿ ಹಿನ್ನಡೆ, ಪಂಚರಾಜ್ಯಗಳ ಚುನಾವಣೆಯ ಮೇಲೆ ಕಣ್ಣು – ಕೃಷಿ ಕಾಯ್ದೆ ವಾಪಸ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉಪಚುನಾವಣೆಯಲ್ಲಿ ಹಿನ್ನಡೆ, ಪಂಚರಾಜ್ಯಗಳ ಚುನಾವಣೆಯ ಮೇಲೆ ಕಣ್ಣು – ಕೃಷಿ ಕಾಯ್ದೆ ವಾಪಸ್‌!

Latest

ಉಪಚುನಾವಣೆಯಲ್ಲಿ ಹಿನ್ನಡೆ, ಪಂಚರಾಜ್ಯಗಳ ಚುನಾವಣೆಯ ಮೇಲೆ ಕಣ್ಣು – ಕೃಷಿ ಕಾಯ್ದೆ ವಾಪಸ್‌!

Public TV
Last updated: November 19, 2021 8:08 pm
Public TV
Share
3 Min Read
Women Farmers
SHARE

ನವದೆಹಲಿ: ಕೃಷಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆದು ರೈತರಿಗೆ ಸಿಹಿ ಸುದ್ದಿ ನೀಡಿದೆ. ಈ ನಡುವೆ ಮೋದಿ ಸರ್ಕಾರ ಈ ಕಾಯ್ದೆಯನ್ನು ಹಿಂಪಡೆದಿದ್ದೇಕೆ ಎಂಬ ಪ್ರಶ್ನೆ ಕೂಡ ಮನೆಮಾಡಿದ್ದು, ಇದಕ್ಕೆ ಈ ಕಾರಣಗಳು ಪ್ರಮುಖವಾಗಿ ಗೋಚರಿಸುತ್ತಿದೆ.

ಕೇಂದ್ರ ಸರ್ಕಾರ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಬೆಲೆ ಖಾತ್ರಿ ಮತ್ತು ಕೃಷಿ ಸೇವೆಗಳ ಒಪ್ಪಂದ ಮಸೂದೆ, ಅಗತ್ಯ ಸರಕುಗಳ (ತಿದ್ದುಪಡಿ) ಮಸೂದೆಗಳನ್ನು 2020ರ ಸಪ್ಟೆಂಬರ್ 17 ರಂದು ಜಾರಿಗೊಳಿಸಿತ್ತು. ಈ ಕಾಯ್ದೆಗಳು ಜಾರಿಗೊಳಿಸುತ್ತಿದ್ದಂತೆ ರೈತರು ಈ ಮಸೂದೆ ವಿರುದ್ಧ ಪ್ರತಿಭಟನೆಗೆ ಮುಂದಾದರು. 2020 ನವೆಂಬರ್ 26 ರಿಂದ ಸಂಘು ಗಡಿ, ಟೆಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ಪ್ರತಿಭಟನೆಗೆ ಮುಂದಾಗಿದ್ದರು. ಮಸೂದೆ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಸಮಜಾಯಿಷಿ ನೀಡಿದರು ಕೂಡ ತಮ್ಮ ಪಟ್ಟು ಸಡಿಲಗೊಳಿಸದೆ ಪ್ರತಿಭಟನೆ ಮುಂದುವರಿಸಿದ್ದರು. ಇದನ್ನೂ ಓದಿ: ಕೃಷಿ ಕಾಯ್ದೆಗಳನ್ನು ಹಿಂಪಡೆದಿರೋ ವಿಚಾರ ಗೊತ್ತಿಲ್ಲ, ಆಗ ಹೊಲದಲ್ಲಿದ್ದೆ: ಸಚಿವ ಬಿ.ಸಿ.ಪಾಟೀಲ್

ಪ್ರಮುಖ ಕಾರಣಗಳು:
ಇದೀಗ ಕೇಂದ್ರ ಸರ್ಕಾರದ ಮುಂದಿರುವ ಪ್ರಮುಖ ಕಾರಣವನ್ನು ಮನವರಿಕೆ ಮಾಡಿಕೊಂಡು ಈ ಮಸೂದೆಯನ್ನು ಹಿಂಪಡೆಯುವ ನಿರ್ಧಾರ ಕೈಗೊಂಡಿದೆ. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆ, ಉತ್ತರಪ್ರದೇಶದಲ್ಲಿ ಬಿಜೆಪಿ ಜನಪ್ರಿಯತೆ ಕುಸಿದಿರುವ ಬಗ್ಗೆ ಸುಳಿವು. ಕಳೆದ ಚುನಾವಣೆಗಿಂತ ಈ ಬಾರಿ 100ಕ್ಕೂ ಅಧಿಕ ಸ್ಥಾನ ಕಳೆದುಕೊಳ್ಳುವ ಸುಳಿವು. ಮತಗಳಿಕೆ ಪ್ರಮಾಣದಲ್ಲೂ ಬಿಜೆಪಿಗೆ ಹಿನ್ನಡೆ ಆಗಬಹುದು ಎಂಬ ಲೆಕ್ಕಾಚಾರ ಮತ್ತು ಉತ್ತರಪ್ರದೇಶ ಹಲವು ಭಾಗಗಳಲ್ಲಿ ರೈತ ಹೋರಾಟದ ನೇರ ಪರಿಣಾಮ ಆತಂಕ ಮೂಡಿಸಿತ್ತು. ಈ ಪ್ರಮುಖ 5 ಕಾರಣಗಳು ಕೇಂದ್ರದ ಮುಂದೆ ಸವಾಲಾಗಿತ್ತು. ಹಾಗಾಗಿ ಈ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಬೀದಿಗಿಳಿದ ಜನರು ಕಾನೂನುಗಳನ್ನು ಮಾಡಲು ಪ್ರಾರಂಭಿಸಿದರೆ ಸರ್ಕಾರ ಯಾಕಿರಬೇಕು: ಕಂಗನಾ ಅಸಮಾಧಾನ

ಉತ್ತರ ಪ್ರದೇಶ, ಪಂಜಾಬ್ ಚುನಾವಣೆ:
ಇತ್ತಿಚೇಗಷ್ಟೆ ದೇಶದಾದ್ಯಂತ ಮುಕ್ತಾಯವಾದ ಉಪಚುನಾವಣೆಯಲ್ಲಿ ಬಿಜೆಪಿ ಸಣ್ಣ ಮಟ್ಟಿನ ಹಿನ್ನೆಡೆಯನ್ನು ಅನುಭವಿಸಿತ್ತು. ಮುಂದಿನ ವರ್ಷ ಉತ್ತರ ಪ್ರದೇಶ, ಪಂಜಾಬ್ ಸೇರಿ ಪಂಚರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ನಡೆದ ಉಪಚುನಾವಣೆಯಲ್ಲಿ ಹಿನ್ನಡೆಯಾದ ಹಿನ್ನೆಲೆಯಲ್ಲಿ ಎಚ್ಚೆತ್ತು ಮುಂದಿನ ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ಲಾನ್:
ಮುಂದಿನ ವಿಧಾನಸಭಾ ಚುನಾವಣೆಯ ಜೊತೆಗೆ ದೇಶದ ಬೆನ್ನೆಲುಬು ಎನಿಸಿಕೊಂಡಿರುವ ರೈತರ ಮನಗೆಲ್ಲುವುದು ಪ್ರಧಾನಿ ಮೋದಿ ಅವರಿಗೆ ಅನಿವಾರ್ಯ ಎನಿಸುವ ಮಟ್ಟಿಗೆ ಪರಿಸ್ಥಿತಿ ನಿರ್ಮಾಣವಾಗಿತ್ತು. ದೇಶದ ಮೂಲೆ ಮೂಲೆಯಿಂದ ರೈತರು ಮೋದಿ ಸರ್ಕಾರದ ಈ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ರೈತರು ಹೋರಾಟದ ಹಾದಿಯನ್ನು ಕೈ ಬಿಡುವ ಲಕ್ಷಣಗಳು ಕಾಣಿಸದೇ ಇದ್ದಾಗ ರೈತರನ್ನು ಎದುರು ಹಾಕಿಕೊಂಡರೆ ಭವಿಷ್ಯದಲ್ಲಿ ಪಕ್ಷದ ವರ್ಚಸ್ಸಿಗೆ ಹೊಡೆತ ಬೀಳಬಹುದು ಎನ್ನುವ ಮುನ್ನೆಚ್ಚರಿಕೆಯನ್ನು ಪಡೆದು ಎಚ್ಚರಿಕೆಯಿಂದ ಮುನ್ನುಗ್ಗುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪಟ್ಟು ಬಿಡದ ರೈತರು:
ಕೇಂದ್ರ ಸರ್ಕಾರದ ಕೃಷಿ ಮಸೂದೆಯನ್ನು ಜಾರಿಗೆ ತಂದೊಡನೆ, ರೈತರೊಂದಿಗೆ ವಿಪಕ್ಷಗಳು ಕೂಡ ಈ ಮಹತ್ವಾಕಾಂಕ್ಷೆಯ ಮೂರು ಕೃಷಿ ಕಾಯ್ದೆಗಳ ವಿರುದ್ಧ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದವು. ಆದರೆ ಬರ ಬರುತ್ತ ವಿಪಕ್ಷಗಳು ಸುಮ್ಮನಾದವು. ಆದರೆ ಇನ್ನೊಂದೆಡೆ ರೈತರು ಮಾತ್ರ ಈ ಮಸೂದೆ ವಿರುದ್ಧ ಹೋರಾಟ ನಿಲ್ಲಿಸಲಿಲ್ಲ. ಗಡಿಪ್ರದೇಶದಲ್ಲಿ ಮತ್ತು ರಸ್ತೆಗಿಳಿದು ಪ್ರತಿಭಟನೆ ಮುಂದುವರಿಸುತ್ತಿದ್ದರು. ರೈತರು ಕಳೆದ ಒಂದು ವರ್ಷದಿಂದ ಪ್ರತಿಭಟನೆ ಮುಮದುವರಿಸಿರುವುದನ್ನು ಗಮನಿಸಿದ ಮೋದಿ ಪ್ರತಿಭಟನೆಗೆ ಮಣಿದು ಕಾಯ್ದೆ ಹಿಂಪಡೆಯಲು ತೀರ್ಮಾನಿಸಿದಂತಿದೆ.

TAGGED:bjpfarmers lawnarendra modiಕೃಷಿ ಮಸೂದೆಕೇಂದ್ರ ಸರ್ಕಾರನರೇಂದ್ರ ಮೋದಿರೈತರು
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
10 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
13 minutes ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
31 minutes ago
plastics industry
Dakshina Kannada

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

Public TV
By Public TV
32 minutes ago
Flights
Latest

ಮಧ್ಯಪ್ರಾಚ್ಯ ಸಂಘರ್ಷ – ಭಾರತದ ಪ್ರವಾಸೋದ್ಯಮ, ವಿಮಾನಯಾನ ಕ್ಷೇತ್ರಕ್ಕೆ ಆತಂಕ

Public TV
By Public TV
45 minutes ago
Indian Origin Men Fined Rs 1.7 Lakh Each In for Spitting Paan On Streets
Latest

ಲಂಡನ್‌ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರಿಗೆ ತಲಾ 1.7 ಲಕ್ಷ ದಂಡ

Public TV
By Public TV
53 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?