ನವದೆಹಲಿ/ಬೆಂಗಳೂರು: ಕೇಂದ್ರ ಸರ್ಕಾರ 2026-27ರ ಬಜೆಟ್ ಪ್ರಸ್ತುತ ಪಡಿಸಿದೆ. ನಿರ್ಮಲಾ ಸೀತಾರಾಮನ್ ಅವರು ಸತತ 9ನೇ ಬಜೆಟ್ ಮಂಡಿಸಿದರು. ಈ ಮೂಲಕ ದೇಶದಲ್ಲಿ ಅತ್ಯಧಿಕ ಬಜೆಟ್ ಮಂಡಿಸಿದ ಹಣಕಾಸು ಸಚಿವೆಯಾಗಿ ದಾಖಲೆ ಬರೆದಿದ್ದಾರೆ. ಈ ಬಜೆಟ್ನಲ್ಲಿ ಕರ್ನಾಟಕಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹಲವು ಕೊಡುಗೆಗಳನ್ನೂ ಘೋಷಿಸಿದ್ದಾರೆ. ಬೆಟ್ಟದಷ್ಟು ನಿರೀಕ್ಷೆಗಳೂ ಈಡೇರಿದೇ ಉಳಿದಿವೆ. ಅದೇನು ಅಂತ ನೋಡೋದಾದ್ರೆ…
Budget 2026 Betrays Karnataka.
One corridor announced. Zero commitment.
Despite Karnataka driving India’s economy, the Centre denies its rightful share under the 16th Finance Commission.
No funds for infrastructure.
No support for cities, farmers or jobs.
This is deliberate… pic.twitter.com/p1NROhhwAm
— Karnataka Congress (@INCKarnataka) February 1, 2026
ಕರ್ನಾಟಕಕ್ಕೆ ಪ್ರತ್ಯಕ್ಷ & ಪರೋಕ್ಷವಾಗಿ ಸಿಕ್ಕಿದ್ದೇನು?
* ಹೈ-ಸ್ಪೀಡ್ ರೈಲ್ ಕಾರಿಡಾರ್ಗಳು:
ಹೈದರಾಬಾದ್- ಬೆಂಗಳೂರು ಮತ್ತು ಚೆನ್ನೈ-ಬೆಂಗಳೂರು ಮಾರ್ಗಗಳಲ್ಲಿ ಹೈ-ಸ್ಪೀಡ್ ರೈಲುಗಳ ಅಭಿವೃದ್ಧಿ.
* ಟರ್ಟಲ್ ಟ್ರೈಲ್ಸ್ (ಕಡಲಾಮೆ ಮಾರ್ಗಗಳು):
ಒಡಿಶಾ, ಕರ್ನಾಟಕ ಮತ್ತು ಕೇರಳದ ಕರಾವಳಿ ಪ್ರದೇಶಗಳಲ್ಲಿ ಕಡಲಾಮೆಗಳ ಮೊಟ್ಟೆಯಿಡುವ ಸ್ಥಳಗಳಲ್ಲಿ ಪ್ರಕೃತಿ-ಆಧಾರಿತ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಯೋಜನೆ. ಇದು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಮತ್ತು ಸಂರಕ್ಷಣೆಯನ್ನು ಉತ್ತೇಜಿಸುತ್ತದೆ.
* ಗಂಧದ ಮರಗಳ ಪುನರುಜ್ಜೀವನ ಯೋಜನೆ:
ಶ್ರೀಗಂಧದ ಉದ್ಯಮ ಪುನರುಜ್ಜೀವನಗೊಳಿಸುವ ವಿಶೇಷ ಯೋಜನೆ, ರಾಜ್ಯದಲ್ಲಿ ಶ್ರೀಗಂಧ ಬೆಳೆಯುವ ರೈತರಿಗೆ ಅನುಕೂಲ
* ಕೋಕೋ ಮತ್ತು ತೆಂಗು ಬೆಳಗಾರರಿಗೆ ವಿಶೇಷ ಯೋಜನೆ:
ಕೋಕೋ ಮತ್ತು ತೆಂಗು ಉತ್ಪನ್ನಗಳಿಗೆ ವಿಶೇಷ ಯೋಜನೆಗಳು. ತೆಂಗು ಉತ್ಪಾದನೆಯನ್ನು ಹೆಚ್ಚಿಸಲು ಮೂರು ಕೋಟಿ ಫಲಾನುಭವಿಗಳಿಗೆ ನಿಧಿ ನೀಡಲಾಗುತ್ತದೆ. ಇದು ತುಮಕೂರು, ಮಂಗಳೂರು, ಉಡುಪಿ ಮತ್ತು ಕಾರವಾರ ಪ್ರದೇಶಗಳ ರೈತರಿಗೆ ಪ್ರಯೋಜನಕಾರಿ.
A Failed Budget 2026.
Youth search for jobs that no longer exist.
Factories slow down, opportunities disappear.
Investors lose confidence and pull back.
Household savings are stretched to the breaking point.
Farmers continue to struggle, unheard and unsupported.
Global economic… pic.twitter.com/uDQrGmklWr
— Karnataka Congress (@INCKarnataka) February 1, 2026
* ಕರಾವಳಿ ಪ್ರದೇಶಗಳಲ್ಲಿ ಪರ್ವತಾರೋಹಣ:
ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಮೌಂಟೇನ್ ಟ್ರೆಕ್ಕಿಂಗ್ಗೆ ಅನುಮತಿ, ಇದು ಪ್ರವಾಸೋದ್ಯಮ ಉತ್ತೇಜಿಸುತ್ತದೆ
* ರಾಜ್ಯಗಳಿಗೆ ಹಣಕಾಸು ಆಯೋಗದ ಅನುದಾನ:
ಎಲ್ಲಾ ರಾಜ್ಯಗಳಿಗೆ (ಕರ್ನಾಟಕ ಸೇರಿದಂತೆ) 1.4 ಲಕ್ಷ ಕೋಟಿ ರೂ. ಅನುದಾನ. ಇದರಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಮತ್ತು ವಿಪತ್ತು ನಿರ್ವಹಣೆಗೆ ನಿಧಿ ಸೇರಿದೆ.
* ಸಿಟಿ ಇಕನಾಮಿಕ್ ರೀಜನ್ಗಳು (CER):
ಪ್ರತಿ CERಗೆ 5 ವರ್ಷಗಳಲ್ಲಿ 5,000 ಕೋಟಿ ರೂ. ಹಂಚಿಕೆ. ಟೈರ್-2 ಮತ್ತು ಟೈರ್-3 ನಗರಗಳ ಅಭಿವೃದ್ಧಿಗೆ ಗಮನ, ಇದರಡಿ ಕರ್ನಾಟಕದಲ್ಲಿನ ಎರಡು ಮತ್ತು ಮೂರನೇ ಹಂತದ ನಗರಗಳು ಪ್ರಯೋಜನ ಪಡೆಯಬಹುದು.
* MSME ಗ್ರೋತ್ ಫಂಡ್:
10,000 ಕೋಟಿ ರೂ. ನಿಧಿ ಮೀಸಲಿಟ್ಟಿದ್ದು ಇದು ಕರ್ನಾಟಕದ ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಬೆಂಬಲಿಸುತ್ತದೆ
* ರಾಷ್ಟ್ರೀಯ ಟೆಕ್ಸ್ಟೈಲ್ ಪಾಲಿಸಿ ಮತ್ತು ಮೆಗಾ ಟೆಕ್ಸ್ಟೈಲ್ ಪಾರ್ಕ್ಗಳು:
ಟೆಕ್ಸ್ಟೈಲ್ ಉದ್ಯಮವನ್ನು ಉತ್ತೇಜಿಸುವ ಯೋಜನೆಗಳು, ಕರ್ನಾಟಕದ ಟೆಕ್ಸ್ಟೈಲ್ ಹಬ್ಗಳಿಗೆ ಪ್ರಯೋಜನ
* ಮಹಿಳಾ ಸಬಲೀಕರಣ ಯೋಜನೆಗಳು:
‘ಸ್ಟ್ರೀ ಮಾರ್ಟ್’ ಯೋಜನೆ ಮತ್ತು ಪ್ರತಿ ಜಿಲ್ಲೆಯಲ್ಲಿ ಮಹಿಳಾ ವಸತಿ ಸೌಲಭ್ಯಗಳ ರಾಜ್ಯಕ್ಕೂ ದೊರೆಯಲಿದೆ
* ಇತರ ರಾಷ್ಟ್ರೀಯ ಯೋಜನೆಗಳು:
ಸೆಮಿಕಂಡಕ್ಟರ್ ಮಿಷನ್ 2.0, ಎಲೆಕ್ಟ್ರಾನಿಕ್ಸ್ ಕಾಂಪೋನೆಂಟ್ ಉತ್ಪಾದನೆಗೆ 40,000 ಕೋಟಿ ರೂ., ಬಯೋಫಾರ್ಮಾ ಶಕ್ತಿ ಯೋಜನೆಗೆ 10,000 ಕೋಟಿ ರೂ., ಕರ್ನಾಟಕದ ಟೆಕ್ ಮತ್ತು ಫಾರ್ಮಾ ಹಬ್ಗಳಿಗೆ ಪರೋಕ್ಷ ಪ್ರಯೋಜನ.
ಈಡೇರದ ಕರ್ನಾಟಕದ ನಿರೀಕ್ಷೆಗಳು
* ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ಈಗಾಗಲೇ ಘೋಷಿಸಲಾಗಿರುವ 5,300 ಕೋಟಿ ರೂ. ಇನ್ನು ಬಿಡುಗಡೆಯಾಗಿಲ್ಲ, ಈ ಬಾರಿಯೂ ಇದರ ಪ್ರಸ್ತಾಪ ಇಲ್ಲ.
* ಕರ್ನಾಟಕಕ್ಕೆ ಹಣಕಾಸು ಆಯೋಗ ಶಿಫಾರಸು ಮಾಡಿರುವ 11,495 ಕೋಟಿ ರೂ. ಅನುದಾನ ಬಿಡುಗಡೆಗೆ ಬೇಡಿಕೆ ಇತ್ತು, ಈಗ 16ನೇ ಹಣಕಾಸು ಆಯೋಗದ ಶಿಫಾರಸ್ಸು ಶುರುವಾಗಿದ್ದು ಬಹುತೇಕ ಈ ಹಣ ಬರುವುದು ಅನುಮಾನವಾಗಿದೆ.
* ಬೆಂಗಳೂರು ಅಭಿವೃದ್ಧಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಕೇಳಲಾಗಿತ್ತು, ಅದು ಸಾಧ್ಯವಾಗಿಲ್ಲ.
* ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕೋರಲಾಗಿತ್ತು. ಈ ಬಗ್ಗೆ ನೇರ ಉಲ್ಲೇಖಗಳಿಲ್ಲ.
* ಬಹುಬೇಡಿಕೆಯ ರಾಯಚೂರಿಗೆ ಎಐಐಎಂಎಸ್ ಘೋಷಣೆಯಾಗಿಲ್ಲ.


