ಬಿಗ್ ಬಾಸ್ ಮನೆಯಲ್ಲಿ ಪ್ರೀತಿಸಿ ಮದ್ವೆಯಾಗಿದ್ದ ನಿವೇದಿತಾ ಗೌಡ, ಚಂದನ್ ಶೆಟ್ಟಿ ಅವರು ನಾಲ್ಕು ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದರು. ಹೊಂದಾಣಿಕೆ ಸಮಸ್ಯೆ ಎಂದು ಈ ಜೋಡಿ ಡಿವೋರ್ಸ್ ಪಡೆದಿತ್ತು. ಇಂದು ‘ಮುದ್ದು ರಾಕ್ಷಸಿ’ ಸಿನಿಮಾದ ಕೊನೆ ದಿನ ಶೂಟಿಂಗ್ನಲ್ಲಿ ಭಾಗಿಯಾಗಿದ್ರು. ಚಂದನ್ನ ಅಪ್ಪಿಕೊಂಡು ನಿವೇದಿತಾ ಕಣ್ಣೀರು ಹಾಕಿದ್ರು – ಅದಕ್ಕೆ ಅಪ್ಪಿಕೊಂಡೇ ಚಂದನ್ ಸಮಾಧಾನ ಮಾಡಿದ್ರು. ಒಂದು ಕ್ಷಣ ನಿವಿ-ಚಂದನ್ ಮತ್ತೆ ಒಂದಾದ್ರಾ ಅಂತ ಅಭಿಂಮಾನಿಗಳು ತಲೆ ಕೆಡಿಸಿಕೊಂಡಿದ್ರು. ಬಳಿಕವೇ ತಿಳಿಯಿತು ಇದು ಶೂಟಿಂಗ್ನ ಕ್ಲೈಮ್ಯಾಕ್ಸ್ ಸೀನ್ ಅಂತ.
ಬಳಿಕ ಸುದ್ದಿಗೋಷ್ಠಿ ಕರೆದು ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ಚಂದನ್ ಅಪ್ಪುಗೆಯ ಕುರಿತು ರಿಯಾಕ್ಟ್ ಮಾಡಿದ ನಿವೇದಿತಾ ಗೌಡ, ನಾಲ್ಕು ವರ್ಷ ನಾವು ಬಾಂಧವ್ಯ ಹೊಂದಿದ್ದೇವೆ. ನಿಜಕ್ಕೂ ಇದು ಎಮೋಷನಲ್ ಆಗಿತ್ತು. ಯಾವುದೇ ಪ್ರಾಜೆಕ್ಟ್ ಇದ್ದರೂ ಕೂಡ ಅದು ಮುಗಿಯುವಾಗ ಬೇಸರ ಆಗುತ್ತದೆ. ಹಾಗೆಯೇ ಈ ಸಿನಿಮಾ ಶೂಟಿಂಗ್ ಮುಗಿಯುತ್ತಿದೆ, ಹಾಗಾಗಿ ಅಳು ಬಂತು. ಈ ಸಿನಿಮಾ ಕಥೆ ತುಂಬ ಚೆನ್ನಾಗಿದೆ. ನಿರ್ದೇಶಕರು ಅಷ್ಟು ಚೆನ್ನಾಗಿ ನನಗೆ ಅರ್ಥ ಮಾಡಿಸಿದ್ರು. ಹಾಗಾಗಿ ಒಪ್ಪಿಕೊಂಡೇ. ಮುಂದೆಯೂ ಒಳ್ಳೇ ಸ್ಟೋರಿ ಬಂದ್ರೆ ಇಬ್ಬರು ಒಟ್ಟಿಗೆ ನಟಿಸುವ ಬಗ್ಗೆ ಯೋಚನೆ ಮಾಡ್ತೀವಿ ಅಂತ ಸಹ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಚಂದನ್ ಶೆಟ್ಟಿ, ಮನುಷ್ಯ ಅಂದಕೂಡಲೇ ಎಮೋಶನ್ಸ್ ಇರುತ್ತದೆ. ಹಾಗೆಯೇ ನಮಗೂ ನಾಲ್ಕು ವರ್ಷ ಜೊತೆಗಿದ್ದೆವು. ಈಗ ದೂರ ಆಗಿದ್ದೇವೆ. ನಿನ್ನೆ ರಾತ್ರಿಯಿಂದಲೇ ನಾನು ನನ್ನ ಮನಸ್ಸು ಗಟ್ಟಿಮಾಡಿಕೊಳ್ಳೋಣ ಅಂದುಕೊಂಡಿದ್ದೆ. ನಿಜಕ್ಕೂ ನಮಗೆ ಇದು ಎಮೋಷನಲ್ ಆಗಿರುತ್ತದೆ. ಪರ್ಸನಲ್, ಪ್ರೊಫೆಶನಲ್ ಎರಡನ್ನೂ ಒಟ್ಟಿಗೆ ತರೋದು ಒಳ್ಳೆಯದಲ್ಲ. ಆದರೆ ಇಬ್ಬರೂ ಕರಿಯರ್ನಲ್ಲಿ ಮುಂದುವರೆಯಲೇಬೇಕು. ಸಿನಿಮಾ ಕೆಲಸ ಆಗಿದ್ದರಿಂದ ಇಬ್ಬರೂ ಪ್ರೊಫೆಶನಲ್ ಆಗಿಯೇ ಇರ್ತೀವಿ. ಈ ಸಿನಿಮಾಕ್ಕೆ ನಾನು ಸಂಗೀತ ಸಂಯೋಜನೆ ಮಾಡಿಲ್ಲ. ಈ ಸಿನಿಮಾದಲ್ಲಿ ನಿವೇದಿತಾ ದೃಶ್ಯ ಜಾಸ್ತಿ ಇದೆ. ಅವರಿಗೆ ಬಾಯ್ಫ್ರೆಂಡ್ ಆಗಿ ಸಪೋರ್ಟ್ ಮಾಡಿರೋ ಪಾತ್ರದಲ್ಲಿ ನಾನು ನಟಿಸಿದ್ದೇನೆ ಅಂತ ಹೇಳಿದ್ದಾರೆ.