ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಮತದಾರ ಯಾವ ಪಕ್ಷಕ್ಕೂ ಬಹುಮತವನ್ನು ನೀಡಿಲ್ಲ. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಜೊತೆಯಾಗಿ ಸರ್ಕಾರ ರಚನೆಗೆ ಮುಂದಾಗಿವೆ. ಇನ್ನು 104 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಮಂಗಳವಾರ ರಾಜ್ಯಪಾಲರನ್ನು ಭೇಟಿಯಾಗಿ ಎರಡು ದಿನಗಳ ಕಾಲಾವಕಾಶ ಕೋರಿದೆ.
ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ನಡುವೆ ಸಂಧಾನ ನಡೆದಿದೆ. ಇಂದು ಎರಡೂ ಪಕ್ಷಗಳ ನಿಯೋಗ ಜೊತೆಯಾಗಿ ಸೇರಿ ಜಂಟಿ ಸಭೆ ನಡೆಸಲಿವೆ. ಆದರೆ ಮೈತ್ರಿಗಾಗಿ ನಡೆದ ಸಂಧಾನದಲ್ಲಿ ಏನೆಲ್ಲಾ ಚರ್ಚೆಯಾಯ್ತು?
ಜೆಡಿಎಸ್- ಕಾಂಗ್ರೆಸ್ ಸಂಧಾನ
ಸೂತ್ರ- 1
ಜೆಡಿಎಸ್ಗೆ ಮುಖ್ಯಮಂತ್ರಿ ಹುದ್ದೆ
ಕಾಂಗ್ರೆಸ್ಗೆ ದಲಿತ ಡಿಸಿಎಂ ಸ್ಥಾನ
ಸೂತ್ರ- 2
ಪೂರ್ಣಾವಧಿಗೆ ಜೆಡಿಎಸ್ಗೆ ಬೆಂಬಲ
ತಲಾ 16 ಸಚಿವ ಸ್ಥಾನಗಳ ಹಂಚಿಕೆ
ಸೂತ್ರ- 3
ಉಭಯ ಪ್ರಣಾಳಿಕೆ ಅನುಷ್ಠಾನಕ್ಕೆ ಸಮನ್ವಯ ಸಮಿತಿ
ಇಬ್ಬರಿಗೂ ಒಪ್ಪಿಗೆ ಆಗುವ ಭರವಸೆಗಳ ಈಡೇರಿಕೆ
ಇತ್ತ ಬಿಜೆಪಿ ಸರ್ಕಾರ ರಚನೆಗೆ ಎರಡು ದಿನಗಳ ಅವಕಾಶ ಕೋರದಿ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ತಮ್ಮ ಪಕ್ಷದ ಶಾಸಕರನ್ನು ಹಿಡಿತದಲ್ಲಿಟ್ಟುಕೊಳ್ಳಲು ರೆಸಾರ್ಟ್ ರಾಜಕೀಯದ ಮೊರೆ ಹೋಗಬಹುದು. ಬಿಜೆಪಿ ಬಹುಮತ ಸಾಬೀತು ಮಾಡೋವರೆಗೆ ತಮ್ಮ ಶಾಸಕರನ್ನು ಅವರಿಗೆ ಸಿಗದಂತೆ ನೋಡಿಕೊಳ್ಳುವಂತೆ ಮಾಡುವ ಸಾಧ್ಯತೆಗಳಿವೆ.