Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಮನುಜರು ಹೆಸರಿನಲ್ಲಿ ವಾರಕ್ಕೆ ಎರಡು ಗಂಟೆ ಶಾಲಾ ಕಾಲೇಜುಗಳಲ್ಲಿ ವಿಮರ್ಶೆ, ಸಂವಾದ – ಶಿಕ್ಷಣಕ್ಕೆ ಸಿಕ್ಕಿದ್ದೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಾವು ಮನುಜರು ಹೆಸರಿನಲ್ಲಿ ವಾರಕ್ಕೆ ಎರಡು ಗಂಟೆ ಶಾಲಾ ಕಾಲೇಜುಗಳಲ್ಲಿ ವಿಮರ್ಶೆ, ಸಂವಾದ – ಶಿಕ್ಷಣಕ್ಕೆ ಸಿಕ್ಕಿದ್ದೇನು?

Bengaluru City

ನಾವು ಮನುಜರು ಹೆಸರಿನಲ್ಲಿ ವಾರಕ್ಕೆ ಎರಡು ಗಂಟೆ ಶಾಲಾ ಕಾಲೇಜುಗಳಲ್ಲಿ ವಿಮರ್ಶೆ, ಸಂವಾದ – ಶಿಕ್ಷಣಕ್ಕೆ ಸಿಕ್ಕಿದ್ದೇನು?

Public TV
Last updated: February 16, 2024 12:13 pm
Public TV
Share
3 Min Read
Budget Education
SHARE

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳು (Governmnet School) ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ (College)  ಮೂಲಭೂತ ಸೌಕರ್ಯಗಳನ್ನು ನೀಡಲು ನಮ್ಮ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, 2023-24ನೇ ಸಾಲಿನಲ್ಲಿ 600 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿರುತ್ತದೆ. 2024-25ನೇ ಸಾಲಿನಲ್ಲಿ ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳನ್ನು 850 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddramaiah) ತಮ್ಮ ಬಜೆಟ್ (Budget)  ಭಾಷಣದಲ್ಲಿ ಹೇಳಿದ್ದಾರೆ.

ಬಜೆಟ್‌ನಲ್ಲಿ ಏನಿದೆ?
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಗತ್ಯ ಮೂಲಸೌಕರ್ಯ ಒದಗಿಸಲು ನಮ್ಮ ಸರ್ಕಾರ ವಿಶೇಷ ಆಸಕ್ತಿ ವಹಿಸಿದೆ. ಸರ್ಕಾರಿ ಶಾಲೆಯ ಮಕ್ಕಳೂ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕೆಂಬ ಆಶಯದೊಂದಿಗೆ ನಮ್ಮ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಾಥಮಿಕ ಪೂರ್ವ ಪದವಿ ಹಂತದಿಂದ ಪೂರ್ವ ತರಗತಿಗಳವರೆಗಿನ ಶಿಕ್ಷಣವನ್ನು ಒಂದೇ ಸೂರಿನಡಿ ನೀಡುವ ಉದ್ದೇಶದಿಂದ ಆಯ್ದ ಶಾಲೆಗಳನ್ನು ಸಿ.ಎಸ್.ಆರ್. ಅನುದಾನದಡಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಅಭಿವೃದ್ಧಿ ಪಡಿಸಲಾಗುವುದು. ಇದನ್ನೂ ಓದಿ:  GST ಸಂಗ್ರಹಣೆ 18% ಹೆಚ್ಚಳ – 2.8 ಶತಕೋಟಿ ಡಾಲರ್‌ FDI ಹೂಡಿಕೆ

3 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ವಿಷಯದಲ್ಲಿ ಆಸಕ್ತಿ ಮೂಡಿಸಿ ಸಾಮರ್ಥ್ಯ ಹೆಚ್ಚಿಸಲು ಜೆ-ಪಾಲ್ ಸಂಸ್ಥೆಯ ಸಹಯೋಗದಲ್ಲಿ ಗಣಿತ-ಗಣಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ಮರು ಸಿಂಚನ ಕಾರ್ಯಕ್ರಮ ಜಾರಿಗೊಳಿಸಲಾಗುವುದು. ಇದನ್ನೂ ಓದಿ: Karnataka State Budget 2024- ರಾಜ್ಯ ಬಜೆಟ್ ನಲ್ಲಿ ಬಸವಣ್ಣ: ಸಾಂಸ್ಕೃತಿಕ ನಾಯಕನಿಗೆ ಜೈಕಾರ

Governmnet School

ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್‌ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಅಡಿಯಲ್ಲಿ ಒದಗಿಸಲು 50 ಕೋಟಿ ರೂ. ಮೀಸಲಿಡಲಾಗುವುದು. 2,000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು. ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು “ನಾವು ಮನುಜರು” ಹೆಸರಿನಲ್ಲಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಾರಕ್ಕೆ ಎರಡು ಗಂಟೆಗಳ ವಿಚಾರ-ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು. ಇದನ್ನೂ ಓದಿ: ಮಂಗಳೂರಿಗೆ ವಾಟರ್‌ ಮೆಟ್ರೋ?

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದೊಂದಿಗೆ ಸರ್ಕಾರಿ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು. ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು. ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 100 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಗಣಕ ವಿಜ್ಞಾನ ಸಂಯೋಜನೆಯನ್ನು ಪ್ರಾರಂಭಿಸಲಾಗುವುದು. ಇದನ್ನೂ ಓದಿ: Karnataka Budget 2024: ಅಲ್ಪಸಂಖ್ಯಾತರಿಗೆ ಬಂಪರ್‌ ಕೊಡುಗೆ – ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಘೋಷಣೆ

ವಿಜ್ಞಾನ ವಿಷಯಗಳಲ್ಲಿ 400 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ವಿಜ್ಞಾನ ಪ್ರಯೋಗಾಲಯಗಳನ್ನು ಉನ್ನತೀಕರಿಸಲು ತಲಾ 10 ಲಕ್ಷ ರೂ. ನಂತೆ ಅನುದಾನ ಒದಗಿಸಲಾಗುವುದು. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 20,000 ವಿದ್ಯಾರ್ಥಿಗಳಿಗೆ ನೀಟ್/ಜೆಇಇ/ಸಿಇಟಿ ತರಬೇತಿ ಕಾರ್ಯಕ್ರಮಗಳನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು. ಇದನ್ನೂ ಓದಿ: ಗ್ಯಾರಂಟಿ ಯೋಜನೆಯಿಂದ ಪ್ರತಿ ಕುಟುಂಬಕ್ಕೆ 50 ಸಾವಿರ ಸಿಗುತ್ತಿದೆ : ಸಿದ್ದರಾಮಯ್ಯ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ. ಇದನ್ನೂ ಓದಿ: ಇಸ್ಲಾಂ ಇರೋವರೆಗೂ ಜಗತ್ತಿಗೆ ನೆಮ್ಮದಿಯಿಲ್ಲ: ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ

TAGGED:#KarnatakaStateBudget2024budgetcollegeeducationGovernmentSchoolSiddramaiahಕರ್ನಾಟಕಬಜೆಟ್‌2024ಕಾಲೇಜುಬಜೆಟ್ಬೆಂಗಳೂರುಶಿಕ್ಷಣಸರ್ಕಾರಿಶಾಲೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post
Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories

You Might Also Like

trump crude oil
Latest

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

Public TV
By Public TV
17 minutes ago
summer
Bagalkot

ಮನೆಯಿಂದಾಚೆ ಬರೋ ಮುನ್ನ ಎಚ್ಚರ – ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಿಗೆ ತಾಪಮಾನ ಏರಿಕೆ ಎಚ್ಚರಿಕೆ

Public TV
By Public TV
17 minutes ago
Koppala Love Jihad 2
Crime

ಮುಸ್ಲಿಂ ಯುವಕನ 2 ಮೊಬೈಲ್‌ನಲ್ಲಿ ಯುವತಿಯರ 7,000 ಫೋಟೋಸ್‌, 9,700 ವಿಡಿಯೋಸ್‌ – ಹೌಹಾರಿದ ಪೊಲೀಸರು

Public TV
By Public TV
39 minutes ago
Weather 1
Bagalkot

ರಾಜ್ಯದ ಹಲವೆಡೆ ಇಂದು, ನಾಳೆ ಮಳೆ ಮುನ್ಸೂಚನೆ – ಹವಾಮಾನ ಇಲಾಖೆ

Public TV
By Public TV
41 minutes ago
Fitness Trainer 2
Bengaluru City

42ರ ಆಂಟಿ ಜೊತೆ 28ರ ಜಿಮ್ ಟ್ರೈನರ್‌ಗೆ ಸಂಬಂಧ? – ಬ್ಲಾಕ್ ಮೇಲ್‌ಗೆ ಸಿಲುಕಿ ಯುವಕ ಆತ್ಮಹತ್ಯೆ

Public TV
By Public TV
57 minutes ago
Virat Kohli 1
Cricket

PVR ಆರ್ಭಟ, ತವರಲ್ಲೇ ಮುಂಬೈಗೆ ನೀರು ಕುಡಿಸಿದ ಬೆಂಗಳೂರು – ಆರ್‌ಸಿಬಿಗೆ 18 ರನ್‌ಗಳ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?