ಇದರಲ್ಲಿ ವಿಷ ಇದ್ರೆ? – UP ಪೊಲೀಸರು ನೀಡಿದ ಚಹಾವನ್ನು ನಿರಾಕರಿಸಿದ ಅಖಿಲೇಶ್ ಯಾದವ್

Public TV
2 Min Read
Akhilesh Yadav

ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಅವರು ಭಾನುವಾರ ಉತ್ತರ ಪ್ರದೇಶದ ಪೊಲೀಸ್ (Uttar Pradesh) ಪ್ರಧಾನ ಕಚೇರಿಗೆ ಭೇಟಿ ನೀಡಿದ್ದು, ಅಲ್ಲಿ ಅವರು ಚಹಾವನ್ನು (Tea) ನಿರಾಕರಿಸಿದ್ದಾರೆ. ನೀವಿದರಲ್ಲಿ ವಿಷ (Poison) ಬೆರೆಸಿರಬಹುದು ಎನ್ನುತ್ತಾ ಯಾದವ್ ಸಂದೇಹ ವ್ಯಕ್ತಪಡಿಸಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.

Akhilesh Yadav 1

ವೀಡಿಯೋದಲ್ಲಿ ಅಖಿಲೇಶ್ ಯಾದವ್, ಪೊಲೀಸ್ ಸಿಬ್ಬಂದಿ ನೀಡಿದ ಚಹಾವನ್ನು ನಿರಾಕರಿಸಿರುವುದು ಕಂಡುಬಂದಿದೆ. ನಾನು ಇಲ್ಲಿ ಚಹಾ ಕುಡಿಯುವುದಿಲ್ಲ. ನಾವು ಹೊರಗಿನಿಂದ ಚಹಾ ತರಿಸಿಕೊಂಡು ಕುಡಿಯುತ್ತೇವೆ. ಬೇಕೆಂದರೆ ನಾವು ನಿಮ್ಮ ಬಳಿಯಿಂದ ಕಪ್ ತೆಗೆದುಕೊಳ್ಳುತ್ತೇವೆ. ನೀವು ನನಗೆ ವಿಷ ಕೊಟ್ಟರೆ ಏನು? ನನಗೆ ನಿಮ್ಮ ಬಗ್ಗೆ ನಂಬಿಕೆಯಿಲ್ಲ ಎಂದು ನೇರಾನೇರ ಹೇಳಿದ್ದಾರೆ. ಅವರ ಈ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಮೋದಿ, ಅಮಿತ್ ಶಾ ಕಂಡ್ರೆ ನಮಗಲ್ಲ, ಡಿಕೆಶಿಗೆ ಭಯ: ಆರ್. ಅಶೋಕ್

ವರದಿಗಳ ಪ್ರಕಾರ ಪಕ್ಷದ ಸಾಮಾಜಿಕ ಮಾಧ್ಯಮ ನಿರ್ವಾಹಕ ಮನೀಶ್ ಜಗನ್ ಅವರು ಟ್ವಿಟರ್‌ನಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಹಜರತ್‌ಗಂಜ್ ಪೊಲೀಸರು (Hazratganj Police) ಅವರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿದ್ದು, ಭಾನುವಾರ ಬೆಳಗ್ಗೆ ಅಗರ್ವಾಲ್ ಅವರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಮುಂಬೈ ದಾಳಿ ವೇಳೆ ನಾನೂ ಹೋಟೆಲ್‌ನಲ್ಲಿದ್ದೆ: ಪಾರಾದ ಥ್ರಿಲ್ಲಿಂಗ್ ಘಟನೆ ವಿವರಿಸಿದ ಅದಾನಿ

ಅಗರ್ವಾಲ್ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಸಲು ಅಖಿಲೇಶ್ ಯಾದವ್ ಡಿಜಿಪಿ ಕಚೇರಿಗೆ ತೆರಳಿದ್ದರು. ಅಲ್ಲಿ ಅವರು ಬಂಧನದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ ಹಾಗೂ ಅವರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *