Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏನಿದು ಸಿಡಿಎಸ್ ಹುದ್ದೆ? ಈ ಹುದ್ದೆಯನ್ನು ಸೃಷ್ಟಿಸಿದ್ದು ಯಾಕೆ? – ಇಲ್ಲಿದೆ ಸಮಗ್ರ ವಿವರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಏನಿದು ಸಿಡಿಎಸ್ ಹುದ್ದೆ? ಈ ಹುದ್ದೆಯನ್ನು ಸೃಷ್ಟಿಸಿದ್ದು ಯಾಕೆ? – ಇಲ್ಲಿದೆ ಸಮಗ್ರ ವಿವರ

Latest

ಏನಿದು ಸಿಡಿಎಸ್ ಹುದ್ದೆ? ಈ ಹುದ್ದೆಯನ್ನು ಸೃಷ್ಟಿಸಿದ್ದು ಯಾಕೆ? – ಇಲ್ಲಿದೆ ಸಮಗ್ರ ವಿವರ

Public TV
Last updated: December 8, 2021 7:32 pm
Public TV
Share
3 Min Read
Bipin Rawat
SHARE

ನವದೆಹಲಿ: ಭಾರತದ ಇತಿಹಾಸದಲ್ಲಿ ಬಿಪಿನ್ ರಾವತ್ ಅವರು ಪ್ರಥಮ ರಕ್ಷಣಾ ಪಡೆಗಳ ಮುಖ್ಯಸ್ಥ  (ಸಿಡಿಎಸ್)ರಾಗಿ ನೇಮಕಗೊಂಡಿದ್ದರು. ಭೂ, ವಾಯು ಮತ್ತು ನೌಕಾ ಸೇನೆಗಳ ನಡುವೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಿಡಿಎಸ್ ಹುದ್ದೆಯನ್ನು ಸೃಷ್ಟಿಸಲಾಗಿತ್ತು. ಈ ಹೊಸ ಹಾಗೂ ಪ್ರಮುಖ ಹುದ್ದೆಗೆ 2021 ಜನವರಿಯಲ್ಲಿ ಬಿಪಿನ್ ರಾವತ್ ಅವರನ್ನು ಕೇಂದ್ರ ಸರ್ಕಾರ ನೇಮಿಸಿತ್ತು.

CDS BIPIN RAWAT

ಜನರಲ್ ಬಿಪಿನ್ ರಾವತ್ ಅವರನ್ನು ನೇಮಕ ಮಾಡಿದ ಬಳಿಕ ಕೇಂದ್ರ ಸರ್ಕಾರ, ಮಿಲಿಟರಿ ಅಫೇರ್ಸ್ ಡಿಪಾರ್ಟ್‍ಮೆಂಟ್ ಎಂಬ ಹೊಸ ಇಲಾಖೆಯನ್ನು ಸೃಷ್ಟಿಸಿತ್ತು. ಕೇಂದ್ರ ಸರ್ಕಾರ ಹಾಗೂ ಮೂರು ಪಡೆಗಳ ಮಧ್ಯೆ ಸಮನ್ವಯ ತರುವ ಕೆಲಸವನ್ನು ಸಿಡಿಎಸ್ ಅವರದ್ದಾಗಿದೆ. ಈ ಹುದ್ದೆಯಲ್ಲಿರುವ ಬಿಪಿನ್ ರಾವತ್ ಅವರು 4 ಸ್ಟಾರ್ ಹೊಂದಿರುವ ಮಿಲಿಟರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದನ್ನೂ ಓದಿ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ದುರ್ಮರಣ

ಜವಾಬ್ದಾರಿ ಏನು?
ಸಿಡಿಎಸ್ ಪ್ರಸ್ತುತ ಇರುವ ಸೇನೆಯ ಮೂರು ವಿಭಾಗಕ್ಕೆ (ಭೂ, ವಾಯು, ನೌಕಾಪಡೆ) ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡುವ ಏಕೈಕ ಸಮನ್ವಯ ಅಧಿಕಾರಿಯಾಗಿದ್ದರು. ಭಾರತದ ಭೂ ಸೇನೆ, ನೌಕಾದಳ ಮತ್ತು ವಾಯುದಳಕ್ಕೆ ಸಂಬಂಧಿಸಿದ ಸಲಹೆಯನ್ನು ಸರ್ಕಾರಕ್ಕೆ ನೀಡುವ ಸಿಂಗಲ್ ಪಾಯಿಂಟ್ ಅಧಿಕಾರ ಅವರದ್ದಾಗಿದೆ.

bipin rawat

ಮಿಲಿಟರಿ ಅಫೇರ್ಸ್ ಡಿಪಾರ್ಟ್‍ಮೆಂಟ್‍ಗೆ ದೆಹಲಿಯ ಸೌಥ್ ಬ್ಲಾಕ್‍ನಲ್ಲಿ ಕಚೇರಿ ಒದಗಿಸಲಾಗಿದ್ದು, ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಸಿಡಿಎಸ್ ಹುದ್ದೆಗೆ ಪ್ರತ್ಯೇಕ ಕಾರಿನ ಧ್ವಜ, ಟೋಪಿ, ಭುಜ ಪಟ್ಟಿ, ಮತ್ತು ಬೆಲ್ಟ್ ಅನ್ನು ವಿನ್ಯಾಸ ಮಾಡಲಾಗಿದೆ.

ಮೂರು ಸೇನೆಗಳ ನಡುವೆ ಉತ್ತಮ ಸಂವಹನ ಸಮನ್ವಯ ಸಾಧಿಸುವುದು ಮುಖ್ಯ ಉದ್ದೇಶ. ಸೇನೆಗೆ ಹಂಚಿಯಾಗುವ ನಿಧಿಯನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು. ಮೂರು ಸೇನೆಗಳ ಸಂಬಂಧ ಏಕ ವ್ಯಕ್ತಿಯಾಗಿ ಪ್ರಧಾನಿಗಳಿಗೆ ಸಲಹೆ ನೀಡುವುದು. ಮೂರು ಸೇನೆಗಳ ಸಂಬಂಧ ಆಡಳಿತ್ಮಾಕ ನಿರ್ಧಾರಗಳನ್ನು ತೆಗೆದುಕೊಳ್ಳುವುದು. ತ್ರಿಸೇನೆಗಳ ಜಂಟಿ ನಿರ್ವಹಣೆ ಹಾಗೂ ತರಬೇತಿ ಕೂಡಾ ಈ ಮಹಾದಂಡನಾಯಕ ವ್ಯಾಪ್ತಿಯಲ್ಲಿ ಬರುತ್ತದೆ. ಸೈಬರ್, ಬಾಹ್ಯಾಕಾಶ, ವಿಶೇಷ ಭದ್ರತಾ ದಳಗಳು ಕೂಡಾ ಸಿಡಿಎಸ್ ಕಚೇರಿ ವ್ಯಾಪ್ತಿಗೆ ಬರುತ್ತದೆ. ಇದನ್ನೂ ಓದಿ: 2015ರಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಪಾರಾಗಿದ್ದರು ಬಿಪಿನ್ ರಾವತ್

ಸಿಡಿಎಸ್ ವಿಶೇಷತೆ ಏನು?:
ಭೂ, ವಾಯು ಹಾಗೂ ನೌಕಾ ಪಡೆಗಳಿಗೆ ಪ್ರತ್ಯೇಕ ಮುಖ್ಯಸ್ಥರಿದ್ದಾರೆ. ರಾಷ್ಟ್ರಪತಿಗಳು ನೇತೃತ್ವ, ಆದೇಶದಂತೆ ಮೂರು ಪಡೆಗಳು ಕಾರ್ಯನಿರ್ವಹಿಸುತ್ತಿವೆ. ಕೇಂದ್ರ ಸರ್ಕಾರ ಹಾಗೂ ಮೂರು ಪಡೆಗಳ ಮಧ್ಯೆ ಸಮನ್ವಯ ತರುವ ಕೆಲಸವನ್ನು ಸಿಡಿಎಸ್ ಮಾಡುತ್ತಿದ್ದರು. ಈ ಹುದ್ದೆಗೆ ಆಯ್ಕೆ ಆಗಿರುವ 4 ಸ್ಟಾರ್ ಹೊಂದಿರುವ ಮಿಲಿಟರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

BIPIN RAWATH

20 ವರ್ಷಗಳ ಹಿಂದೆಯೇ ಪ್ರಸ್ತಾಪ:
20 ವರ್ಷಗಳ ಹಿಂದೆಯೇ ಸಿಡಿಎಸ್ ವಿಚಾರ ಪ್ರಸ್ತಾಪವಾಗಿತ್ತು. ಆದರೆ ಕಾರ್ಯರೂಪಕ್ಕೆ ಬಾರದೇ ಹಾಗೆ ಉಳಿದಿತ್ತು. ಕಾರ್ಗಿಲ್ ಯುದ್ಧದ ನಂತರ ಭದ್ರತಾ ಲೋಪ ಮತ್ತು ಸೇನಾಪಡೆಗಳ ನಡುವೆ ಇರುವ ಅಂತರಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡಲು 1999ರಲ್ಲಿ ಸಂಸತ್ತಿನ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು. ಈ ಸಮಿತಿಯ ನೇತೃತ್ವವನ್ನು ಅಂದಿನ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರು ವಹಿಸಿಕೊಂಡಿದ್ದರು. ಸುದೀರ್ಘ ಅಧ್ಯಯನ ನಡೆಸಿದ ಸಮಿತಿಯು, ಮೂರೂ ಸೇನಾಪಡೆಗಳ ನಡುವೆ ಹಲವೆಡೆ ಸಂವಹನ ಮತ್ತು ಹೊಂದಾಣಿಕೆಯ ಕೊರತೆಯಾಗಿದ್ದನ್ನು ಗುರುತಿಸಿತ್ತು. ಹೀಗಾಗಿ ಮೂರೂ ಸೇನಾಪಡೆಗಳು ಸೇರಿ ಓರ್ವ ಮುಖ್ಯಸ್ಥರನ್ನು ನೇಮಿಸುವಂತೆ ವರದಿ ನೀಡಿತ್ತು. ಆದರೆ ಬದಲಾದ ರಾಜಕೀಯ ಹಾಗೂ ಅಧಿಕಾರಿಗಳ ಆಕ್ಷೇಪದಿಂದಾಗಿ ಸಮಿತಿಯ ಶಿಫಾರಸು ಕಾರ್ಯರೂಪಕ್ಕೆ ಬಂದಿರಲಿಲ್ಲ.

2012 ರಲ್ಲಿ ನರೇಶ್ ಚಂದ್ರಾ ನೇತೃತ್ವದ ಟಾಸ್ಕ್ ಫೆÇೀರ್ಸ್, 2016 ರಲ್ಲಿ ಲೆಫ್ಟಿನೆಂಟ್ ಜನರಲ್ ಡಿಬಿ ಶೇಕತ್‍ಕಾರ್ ಸಮಿತಿ ಸಿಡಿಎಸ್ ನೇಮಕವಾಗಬೇಕೆಂದು ತನ್ನ ವರದಿಯಲ್ಲಿ ಶಿಫಾರಸು ಮಾಡಿತ್ತು. ಮೂರು ಸೇನೆಯ ಪ್ಲಾನಿಂಗ್, ಬಜೆಟ್, ಸಂಗ್ರಹಣೆ, ಶಸ್ತ್ರಾಸ್ತ್ರ ಖರೀದಿ, ತರಬೇತಿ ವಿಚಾರದ ಬಗ್ಗೆ ಸಿಡಿಎಸ್ ಗಮನ ಹರಿಸಿ ಕೇಂದ್ರ ರಕ್ಷಣಾ ಇಲಾಖೆಯ ಜೊತೆ ಸೇತುವೆಯಾಗಿ ಕೆಲಸ ಮಾಡಲಿದೆ.

cds

ಘೋಷಣೆ ಮಾಡಿದ್ದ ಮೋದಿ:
2019ರ ಸ್ವಾತಂತ್ರ್ಯ ದಿನದಂದು ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ಭೂ, ವಾಯು ಹಾಗೂ ನೌಕಾ ಪಡೆಗಳು ನಮ್ಮ ಹೆಮ್ಮೆ. ಈ ಮೂರೂ ಸೇನಾ ಪಡೆಗಳ ಮಧ್ಯೆ ಸಮನ್ವಯತೆ ತರುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ನೇಮಕ ಮಾಡಲಾಗುತ್ತದೆ ಎಂದು ಐತಿಹಾಸಿಕ ಘೋಷಣೆ ಮಾಡಿದ್ದರು. ಇದನ್ನೂ ಓದಿ: ಬಿಪಿನ್ ರಾವತ್ ಸ್ಥಿತಿ ಗಂಭೀರ – Mi-17 V5 ಹೆಲಿಕಾಪ್ಟರ್ ವಿಶೇಷತೆ ಏನು?

ಸಿಡಿಎಸ್ ನೇಮಕಕ್ಕಾಗಿ ದೀರ್ಘಕಾಲದಿಂದ ಸೇನಾ ಅಧಿಕಾರಿಗಳು ಒತ್ತಾಯಿಸುತ್ತಾ ಬಂದಿದ್ದಾರೆ. ಸದ್ಯ ನಾವು ಅದನ್ನು ಕಾರ್ಯಗತಕ್ಕೆ ತರಲು ನಿರ್ಧಸಿದ್ದೇವೆ. ಈ ನೇಮಕವು ಮೂರು ಪಡೆಗಳ ಉನ್ನತ ಮಟ್ಟದಲ್ಲಿ ಪರಿಣಾಮಕಾರಿ ನಾಯಕತ್ವವನ್ನು ನೀಡಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದರು.

TAGGED:bipin rawat demiseCDSindiaಬಿಪಿನ್ ರಾವತ್ರಕ್ಷಣಾ ಪಡೆಗಳ ಮುಖ್ಯಸ್ಥ
Share This Article
Facebook Whatsapp Whatsapp Telegram

Cinema news

CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories
Gilli 1
ದೇಶ ಕಾಯುವ ಯೋಧರಿಂದ ಹಿಡಿದು ಎಲ್ರೂ ಪ್ರೀತಿ ಕೊಟ್ಟು, ಸಪೋರ್ಟ್ ಮಾಡಿದ್ದೀರಿ: ಗಿಲ್ಲಿ ನಟ
Cinema Latest Main Post Sandalwood TV Shows

You Might Also Like

kalaburagi reels death
Kalaburagi

ಕಲಬುರಗಿ| ರೀಲ್ಸ್ ಮಾಡುತ್ತ ಟ್ರ್ಯಾಕ್ಟರ್‌ ಕೆಳಗೆ ಬಿದ್ದ ಚಾಲಕ; ಚಕ್ರಕ್ಕೆ ಸಿಲುಕಿ ಸಾವು

Public TV
By Public TV
3 minutes ago
Nikhil Kumaraswamy
Districts

ರಾಜ್ಯಪಾಲರ ಘನತೆಗೆ ಕಾಂಗ್ರೆಸ್ ಅಗೌರವ ತೋರಿದೆ, ಸದಾಕಾಲ ಕೇಂದ್ರದ ಜೊತೆ ಸಂಘರ್ಷ ಸರಿಯಲ್ಲ: ನಿಖಿಲ್

Public TV
By Public TV
10 minutes ago
Trump unveils Board of Peace India absent from stage Pakistan joins
Latest

ಅಸ್ತಿತ್ವಕ್ಕೆ ಬಂತು ಟ್ರಂಪ್‌ ಕನಸಿನ ಬೋರ್ಡ್‌ ಆಫ್‌ ಪೀಸ್‌ – ಪಾಕಿಸ್ತಾನವೂ ಸದಸ್ಯ ದೇಶ

Public TV
By Public TV
19 minutes ago
dharwad murder case man set to marry her strangled her to death
Crime

ಧಾರವಾಡ | ಯುವತಿಯ ಕೊಲೆ ಕೇಸ್ – ಮದುವೆ ಆಗಬೇಕಿದ್ದ ಯುವಕನೇ ವಿಲನ್

Public TV
By Public TV
35 minutes ago
woman arrested for blackmailing swamiji ccb police bengaluru
Bengaluru City

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಹನಿಟ್ರ್ಯಾಪ್? – ಬ್ಲ್ಯಾಕ್‌ಮೇಲ್‌ ಮಾಡಿದ್ದ ಮಹಿಳೆ ಬಂಧನ

Public TV
By Public TV
55 minutes ago
cocaine bengaluru airport
Crime

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 38 ಕೋಟಿ ಮೌಲ್ಯದ ಕೊಕೇನ್ ಸೀಜ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?