Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗಮಂಡಲ ಎಂದರೇನು? ಇದರ ಆಚರಣೆ, ಮಹತ್ವವೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನಾಗಮಂಡಲ ಎಂದರೇನು? ಇದರ ಆಚರಣೆ, ಮಹತ್ವವೇನು?

Karnataka

ನಾಗಮಂಡಲ ಎಂದರೇನು? ಇದರ ಆಚರಣೆ, ಮಹತ್ವವೇನು?

Public TV
Last updated: July 29, 2025 8:48 am
Public TV
Share
3 Min Read
Nagamandala
SHARE

ಭಾರತದ ದಕ್ಷಿಣ ಭಾಗದಲ್ಲಿ ಆಚರಿಸಲಾಗುವ ಪ್ರಮುಖ ನಾಗಪೂಜಾ ವಿಧಾನಗಳಲ್ಲಿ ನಾಗಮಂಡಲ (Nagamandala) ಪೂಜೆಯು ಅತ್ಯಂತ ಪವಿತ್ರವಾದ ಹಾಗೂ ಶ್ರದ್ಧಾ ಭಕ್ತಿಯಿಂದ ಕೂಡಿರುವ ಒಂದು ಶಕ್ತಿಶಾಲಿ ಆಚರಣೆ ಆಗಿದೆ. ಕರಾವಳಿ ಕರ್ನಾಟಕದ ತುಳುನಾಡಿನಲ್ಲಿ ಇದು ವಿಶೇಷವಾಗಿ ಪ್ರಸಿದ್ಧವಾಗಿದ್ದು, ಈ ನಾಗಮಂಡಲಕ್ಕೆ ನಾನಾ ಅಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಜ್ಯೋತಿಷ್ಯಶಾಸ್ತ್ರದ ಹಿನ್ನೆಲೆಯನ್ನು ಹೊಂದಿದೆ.

Nagamandala 2

ನಾಗಮಂಡಲ ಎಂದರೇನು?

ನಾಗಮಂಡಲ ಎಂದರೆ ನಾಗ ದೇವತೆಯು ನೃತ್ಯ ರೂಪದಲ್ಲಿ ಪೂಜಿಸಲ್ಪಡುವ ಒಂದು ವಿಶಿಷ್ಟ ಆಚರಣೆ. ಇದು ನಾಗದೋಷ ನಿವಾರಣೆಗೆ ಮತ್ತು ಕುಟುಂಬದ ಕ್ಷೇಮ ಸಮೃದ್ಧಿಗೆ ಮಾಡಲಾಗುವ ಒಂದು ದೇವಪೂಜೆ. ಇದರಲ್ಲಿ ಎರಡು ಪ್ರಮುಖ ಪಾತ್ರಗಳು ಇರುತ್ತವೆ. ಅವುಗಳೆಂದರೆ ವೈದ್ಯರು(ಹೆಣ್ಣು ನಾಗ) ಮತ್ತು ಪಾತ್ರಿ(ನಾಗದ ಪುರುಷನ ಪ್ರತಿನಿಧಿ).

ಆಚರಣೆ ಹೇಗೆ ನಡೆಯುತ್ತದೆ?

ಮಂಡಲ: ಪೂಜೆಗೆ ಮುನ್ನ ನೆಲದಲ್ಲಿ ನಾಗ ದೇವರಿಗೆ ಸಂಬಂಧಿಸಿದ ರಂಗೋಲಿಯನ್ನು ಬಿಡಿಸಲಾಗಿರುತ್ತದೆ. ಇದನ್ನು ನಾಗಮಂಡಲ ಎಂದು ಕರೆಯುತ್ತಾರೆ. 2-3 ಅಡಿ ಎತ್ತರದ ಚೌಕಾಕಾರದ ವೇದಿಕೆಯನ್ನು ನಿರ್ಮಿಸುತ್ತಾರೆ. ಚಪ್ಪರದ ಸುತ್ತ ರೇಷ್ಮೆ ವಸ್ತ್ರದಿಂದ ಅಲಂಕರಿಸಿರುತ್ತಾರೆ. ಚಪ್ಪರವನ್ನು ಅಡಿಕೆಯ ಹಿಂಗಾರದಿಂದ, ಅಡಿಕೆಯ ಮಾಲೆಯಿಂದ, ಬಾಳೆಗೊನೆ ಹಾಗೂ ಎಳನೀರಿನಿಂದ ಶೃಂಗರಿಸುತ್ತಾರೆ.

Nagamandala 3

ಕೊಳನಾಗ: ಏಳು ಹೆಡೆಯ ದೊಡ್ಡ ಸರ್ಪದ ಚಿತ್ರಣಕ್ಕೆ ಕೊಳನಾಗ, ಗುಳಿಕ, ಅಥವಾ ಕಾಡ್ಯ ಎನ್ನುತ್ತಾರೆ.

ನಾಗಯಕ್ಷ: ಕೊಳನಾಗನ ಸಮೀಪದಲ್ಲಿಯೇ ಕೇವಲ ಹೆಡೆಯಂತೆ ಕಾಣುವ ಒಂದು ರೂಪಕ್ಕೆ ಎರಡು ಕಣ್ಣುಗಳನ್ನು ಚಿತ್ರಿಸುತ್ತಾರೆ. ಇದರ ಆಕಾರ ಶಂಖವನ್ನು ಹೋಲುತ್ತದೆ. ಇದನ್ನು ಕೆಲವರು ಮರಿನಾಗ ಎಂದರೆ ಕೆಲವರು ನಾಗಯಕ್ಷಿ ಎನ್ನುತ್ತಾರೆ.

ಬ್ರಹ್ಮ: ಕೊಳನಾಗನ ಎಡಭಾಗದಲ್ಲಿ ಕೆಳಗೆ ಒಂದು ವಿಶಿಷ್ಟ ಮಾನವಾಕೃತಿಯನ್ನು ಚಿತ್ರಿಸುತ್ತಾರೆ. ಇದಕ್ಕೆ ಕೈ ಕಾಲುಗಳಿಲ್ಲ. ಗಂಡುರೂಪ, ಮೀಸೆ ಇದೆ. ಹೊರಚಾಚಿದಂತಿರುವ ಹಲ್ಲುಗಳು, ಹಾಗೂ ಎರಡು ಕೋರೆ ಹಲ್ಲುಗಳಿವೆ. ತಲೆಗೆ ಚೂಪಾದ ಟೊಪ್ಪಿಗೆಯನ್ನು ಧರಿಸಿದಂತೆ ಕಾಣುತ್ತದೆ. ಇದನ್ನು ವೈದ್ಯರು ಬ್ರಹ್ಮಯಕ್ಷ ಎನ್ನುತ್ತಾರೆ. ತುಳುವರು ಬೆರ್ಮೆರ್ ಎನ್ನುತ್ತಾರೆ.

Nagamandala 1

ತ್ರಿಶೂಲ: ನಾಗನ ಹೆಡೆಯ ಮೇಲುಭಾಗಕ್ಕೆ ಒಂದು ತ್ರಿಶೂಲವನ್ನು ಬರೆಯುತ್ತಾರೆ. ಇದರ ಕೆಳಭಾಗವು ಬಲಭಾಗಕ್ಕೆ ಸ್ವಲ್ಪ ಬಾಗಿರುತ್ತದೆ.

ಗಣಪತಿ: ಬಲತುದಿಗೆ ಸೇರಿಕೊಂಡಂತೆ ತ್ರಿಕೋನಗಳಿಂದ ರಚಿತವಾದ ವೃತ್ತಾಕಾರವಿದೆ. ಇದು ಶ್ರೀಚಕ್ರವನ್ನು ಹೋಲುತ್ತದೆ. ಇದಕ್ಕೆ ಮಂಡಲವನ್ನು ರಚಿಸುವ ವೈದ್ಯರು ಗಣಪತಿ ಎನ್ನುತ್ತಾರೆ.

ಪ್ರೇತಯಕ್ಷ: ಇದೊಂದು ಎರಡು ಕಣ್ಣುಗಳುಳ್ಳ ವಿಶಿಷ್ಟ ಆಕೃತಿಯಾಗಿದೆ.

Nagamandala 5

ನಾಗಮಂಡಲ ನೃತ್ಯ: ನಾಗಮಂಡಲದ ಸುತ್ತ ನೃತ್ಯದಲ್ಲಿ ಇಬ್ಬರು ಪ್ರಧಾನ ಪಾತ್ರ ವಹಿಸುತ್ತಾರೆ. ಒಬ್ಬರು ನಾಗಪಾತ್ರಿಯಾಗಿರುತ್ತಾರೆ. ಅವರು ಮುಂಗೈಗೆ ಕಡಗ, ಮೈಗೆ ಕೆಂಪುಬಟ್ಟೆ, ಕೆದರಿದ ಕೂದಲು, ಕೊರಳಿನಲ್ಲಿ ನಾಗನ ಚಿಹ್ನೆಯ ಪದಕವಿರುವ ಹಾರವನ್ನು ಧರಿಸಿರುತ್ತಾರೆ.

ಇನ್ನೊಂದು ಪ್ರಧಾನ ಪಾತ್ರ ವೈದ್ಯರು ಎನ್ನುತ್ತಾರೆ. ವೈದ್ಯರು ಅರ್ಧನಾರಿ ವೇಷವನ್ನು ಧರಿಸಿರುತ್ತಾರೆ. ಯಕ್ಷಗಾನ ಬಡಗುತಿಟ್ಟಿನ ಸ್ತ್ರೀವೇಷವನ್ನು ಹೋಲುವ ಇವರು ಕೆಂಪುಬಣ್ಣದ ಚೌಕುಳಿಸೀರೆ, ಕಾಲಿಗೆ ಗೆಜ್ಜೆ, ಕೊರಳಿಗೆ ಗುಂಡುಸರ, ಸೊಂಟಕ್ಕೆ ಬೆಳ್ಳಿಪಟ್ಟಿ, ಕೈಗೆ ಚಿನ್ನದ ಕಡಗ, ತಲೆಗೆ ಮುಂಡಾಸು, ಜರಿರುಮಾಲು ಧರಿಸುತ್ತಾರೆ. ಹಾಡುವ ಹಿಮ್ಮೇಳದ ಮೂರು ಜನ ವೈದ್ಯರು ಬಿಳಿಧೋತರವನ್ನು ಕಚ್ಚೆ ಹಾಕಿ ಉಟ್ಟು, ಬಿಳಿ ಅಂಗಿ ತೊಟ್ಟಿರುತ್ತಾರೆ. ನಾಗಮಂಡಲದ ವೇದಿಕೆಯ ಮಧ್ಯಭಾಗದಲ್ಲಿ ರಚಿಸಿದ ಚಿತ್ತಾರದ ಸುತ್ತ ಪಾತ್ರಿ ಮತ್ತು ವೈದ್ಯರು ನರ್ತಿಸುತ್ತಾರೆ.

Nagamandala 4

ನಾಗಮಂಡಲ ಪೂಜೆಯ ಹಿಂದಿನ ತಾತ್ವಿಕ ಅರ್ಥ : ನಾಗ ದೇವತೆಗಳನ್ನು ಭೂಮಿ, ಜಲ, ಅಡಿಸ್ಥಾನ ಶಕ್ತಿಗಳ ಪ್ರತಿನಿಧಿಗಳಾಗಿ ಪರಿಗಣಿಸಲಾಗುತ್ತದೆ. ಈ ಪೂಜೆಯು ದುಷ್ಟಶಕ್ತಿಗಳನ್ನು ನಿವಾರಿಸಿ ಆತ್ಮಶುದ್ಧಿಗೆ ಕಾರಣವಾಗುತ್ತದೆ. ಮನೆಯಲ್ಲಿ ಸಂತಾನ ಸಮಸ್ಯೆ, ಕುಲದ ಅಭಿವೃದ್ದಿ ಅಡಚಣೆ, ವಿವಾಹ ವಿಳಂಬ, ವ್ಯಾಧಿ ಸಮಸ್ಯೆಗಳಾಗಿದ್ದರೆ ನಾಗಮಂಡಲ ಮಾಡಿದರೆ ಶಾಂತಿ ಸಿಗುತ್ತದೆ ಎಂಬ ನಂಬಿಕೆ ಇದೆ.

ನಾಗಮಂಡಲ ಪೂಜೆಯು ಕೇವಲ ಧಾರ್ಮಿಕ ಆಚರಣೆ ಮಾತ್ರವಲ್ಲ. ಇದು ಪ್ರಕೃತಿ, ಪವಿತ್ರತೆಯ ಮಿಶ್ರಣವಾಗಿದೆ. ಪೂರ್ವಜರಿಂದ ಬಂದಿರುವ ಈ ಪಾರಂಪರಿಕ ಆಚರಣೆಯು ಕರಾವಳಿ ಭಾಗಗಳಲ್ಲಿ ಇಂದಿಗೂ ಚಾಲ್ತಿಯಲ್ಲಿದೆ.

TAGGED:dakshina kannadakarnatakanagamandalaNagar Panchamiudupiನಾಗಮಂಡಲನಾಗರ ಪಂಚಮಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Donald Trump 1
Latest

ಇರಾನ್‌ಗೆ ಉಳಿದಿರೋದು ಇನ್ನು 48 ಗಂಟೆ ಮಾತ್ರ: ಹಾರ್ಮುಜ್ ಓಪನ್ ಡೆಡ್‌ಲೈನ್ ನೆನಪಿಸಿದ ಟ್ರಂಪ್

Public TV
By Public TV
11 minutes ago
Crude bomb explosion in Thirthahalli Elderly woman seriously injured
Crime

ತೀರ್ಥಹಳ್ಳಿ | ನಾಡಬಾಂಬ್‌ ಸ್ಫೋಟ – ವೃದ್ಧೆಗೆ ಗಂಭೀರ ಗಾಯ

Public TV
By Public TV
22 minutes ago
Right to Information
Latest

ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್

Public TV
By Public TV
1 hour ago
kalaburagi meeting
Kalaburagi

ಕಲಬುರಗಿಯಲ್ಲಿ ಹಿಟ್ ‍& ರನ್ ಅಪಘಾತ ಪ್ರಕರಣಗಳಲ್ಲಿ 26 ಸಂತ್ರಸ್ತರಿಗೆ ಪರಿಹಾರ ಧನ ಮಂಜೂರು

Public TV
By Public TV
2 hours ago
H.D Kumaraswamy
Davanagere

ಗ್ಯಾಸ್ ಅಭಾವ – ಆಟೋ ಚಾಲಕರಿಗೆ ಸಣ್ಣಪುಟ್ಟ ಸಮಸ್ಯೆಯಾಗಿದೆ, ಮೋದಿ ದೊಡ್ಡ ಡ್ಯಾಮೇಜ್‌ ತಪ್ಪಿಸಿದ್ದಾರೆ: ಹೆಚ್‌ಡಿಕೆ

Public TV
By Public TV
2 hours ago
Pakistan UAE
Latest

ಇರಾನ್‌ ಯುದ್ಧ; 18,548 ಕೋಟಿ ಸಾಲ ವಾಪಸ್‌ ಕೊಡುವಂತೆ ಪಾಕಿಸ್ತಾನಕ್ಕೆ ಯುಎಇ ಒತ್ತಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?