Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬಾಹ್ಯಾಕಾಶದಲ್ಲಿ ಮತ್ತೊಂದು ಸಾಧನೆಗೆ ನಾಸಾ-ಇಸ್ರೋ ಸಜ್ಜು: ಮುಂದಿನ ವರ್ಷ ‘NISAR’ ಉಪಗ್ರಹ ಉಡಾವಣೆ – ಏನಿದು ನಿಸಾರ್‌?

Public TV
Last updated: November 22, 2023 7:03 pm
Public TV
Share
5 Min Read
NISAR
SHARE

ಚಂದ್ರಯಾನ-3 ಸಕ್ಸಸ್ (Chandrayaan-3) ಹಾಗೂ ಸೂರ್ಯಯಾನ (Aditya L-1) ಯಶಸ್ವಿ ಉಡಾವಣೆ ಮಾಡಿದ ಭಾರತದ ಕಡೆ ಈಗ ಇಡೀ ಜಗತ್ತು ನೋಡುತ್ತಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಸಾಧನೆಗೆ ವಿಜ್ಞಾನ ಲೋಕ ಮೆಚ್ಚುಗೆ ವ್ಯಕ್ತಪಡಿಸಿದೆ. ಅಲ್ಲದೇ ಸ್ಪೇಸ್ (ಬಾಹ್ಯಾಕಾಶ) ವಲಯದಲ್ಲಿ ಹೊಸ ಅನ್ವೇಷಣೆಗಳಿಗಾಗಿ ಭಾರತದ ಜೊತೆ ಕೆಲಸ ಮಾಡಲು ಬೇರೆ ದೇಶಗಳ ವಿಜ್ಞಾನ ಸಂಸ್ಥೆಗಳು ಮುಂದೆ ಬರುತ್ತಿವೆ. ಅದರ ಮೊದಲ ಹೆಜ್ಜೆಯಾಗಿ ಇಸ್ರೋ ಜೊತೆ ಅಮೆರಿಕದ ನಾಸಾ ಕೈ ಜೋಡಿಸಿದೆ. ಈ ಎರಡೂ ಸಂಸ್ಥೆಗಳ ಕನಸಿನ ಕೂಸೇ ‘ನಿಸಾರ್’.

ಹೌದು, ನಾಸಾ-ಇಸ್ರೋ (NASA-ISRO) ಜಂಟಿಯಾಗಿ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ‘ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರೆಡಾರ್ (NISAR) ಉಪಗ್ರಹ ಮುಂದಿನ ವರ್ಷ ಅಂದರೆ, 2024 ಕ್ಕೆ ಉಡಾವಣೆಯಾಗಲಿದೆ. ಅದಕ್ಕೆ ಬೇಕಾದ ಎಲ್ಲಾ ತಯಾರಿ ಹಾಗೂ ಪರೀಕ್ಷೆಗಳನ್ನು ನಾಸಾ ಮತ್ತು ಇಸ್ರೋ ನಡೆಸುತ್ತಿವೆ. ಹಾಗಾದರೆ ಏನಿದು ಉಪಗ್ರಹ? ಇದರ ಉಡಾವಣೆ ಉದ್ದೇಶವೇನು? ಇದರಿಂದಾಗಬಹುದಾದ ಪ್ರಯೋಜನ ಏನು ಎಂಬ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ. ಇದನ್ನೂ ಓದಿ: PublicTV Explainer: ‘ಸೋಷಿಯಲ್‌’ನಲ್ಲಿ ಬೆತ್ತಲಾದ ‘ಡೀಪ್‌ಫೇಕ್’; ಏನಿದು ತಂತ್ರಜ್ಞಾನ? ಇದರ ಆಳ ಎಷ್ಟು? ಅಪರಾಧಕ್ಕೆ ಶಿಕ್ಷೆ ಏನು?

NISAR 2

ಏನಿದು ನಿಸಾರ್ ಉಪಗ್ರಹ?
ಅಮೆರಿಕ ಮತ್ತು ಭಾರತದ ಬಾಂಧವ್ಯವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆ ಇಡಲಾಗಿದೆ. 2014 ರಲ್ಲಿ ನಾಸಾ ಮತ್ತು ಇಸ್ರೋ ಸಹಭಾಗಿತ್ವ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಅದರನ್ವಯ ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರೆಡಾರ್ (ನಿಸಾರ್) ಅನ್ನು ನಿರ್ಮಿಸಲಾಯಿತು. ಮಾರ್ಚ್ ತಿಂಗಳಲ್ಲೇ ಈ ಉಪಗ್ರಹವು ಬೆಂಗಳೂರಿಗೆ ಬಂದಿಳಿದಿದೆ. ಅಮೆರಿಕನ್ ವಾಯುಪಡೆಯ ಸಿ-17 ಸಾರಿಗೆ ವಿಮಾನವು, ಕ್ಯಾಲಿಫೋರ್ನಿಯಾದಿಂದ ಹೊರಟು ಬೆಂಗಳೂರಿಗೆ ಈ ಉಪಗ್ರಹವನ್ನು ಹೊತ್ತು ತಂದಿತ್ತು. ಭಾರತ ಮತ್ತು ಅಮೆರಿಕದ ಬಾಹ್ಯಾಕಾಶ ಸಂಸ್ಥೆಗಳು ಮೊಟ್ಟಮೊದಲ ಬಾರಿಗೆ ಜಂಟಿಯಾಗಿ ಈ ಕಾರ್ಯಕ್ರಮವನ್ನು ರೂಪಿಸಿವೆ. ಈ ಯೋಜನೆಯು ವಿಶ್ವದ ಅತ್ಯಂತ ದುಬಾರಿ ‘ಭೂಮಿಯ ಇಮೇಜಿಂಗ್ ಉಪಗ್ರಹ’ಗಳಲ್ಲಿ ಒಂದಾಗಿದೆ.

ನಿಸಾರ್ ಉಡಾವಣೆ ಯಾಕೆ?
ಮನುಕುಲದ ಆಶ್ರಯ ತಾಣ ಭೂಮಿ. ಈ ಭೂಮಿಯಲ್ಲಿ ಯಾವಾಗ, ಏನೇನಾಗುತ್ತದೆ ಎಂಬುದನ್ನು ಪ್ರತಿಯೊಬ್ಬರು ಅರಿಯುವುದು ಮುಖ್ಯ. ಹವಾಮಾನ ಬದಲಾವಣೆ ಜೀವಸಂಕುಲದ ಮೇಲೆ ಅಪಾರ ಪರಿಣಾಮ ಬೀರಿದೆ. ಇದನ್ನು ಅರ್ಥಮಾಡಿಕೊಳ್ಳಲು ಭೂಮಿಯ ಮೇಲ್ಮೈ ಹೇಗೆ ಬದಲಾಗುತ್ತಿದೆ ಎಂಬುದನ್ನು ತಿಳಿಯುವುದು ಮುಖ್ಯ. ಈ ವಿಚಾರವನ್ನು ಮನಗಂಡು ‘ನಿಸಾರ್’ ಉಪಗ್ರಹ ಉಡಾವಣೆಗೆ ಇಸ್ರೋ-ನಾಸಾ ಸಂಸ್ಥೆಗಳು ಮುಂದಾಗಿವೆ. ಭೂ ಮೇಲ್ಮೈ ಬದಲಾವಣೆ, ಕರಗುವ ಮಂಜುಗಡ್ಡೆ, ಅರಣ್ಯ, ಭೂಕಂಪ, ಜ್ವಾಲಾಮುಖಿ ಎಲ್ಲವೂ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಇದರ ಬಗ್ಗೆ ಪ್ರತಿಯೊಬ್ಬರಿಗೂ ನಿಖರ ಮಾಹಿತಿ ಒದಗಿಸುವುದು ಈ ಉಪಗ್ರಹ ಉಡಾವಣೆಯ ಮುಖ್ಯ ಉದ್ದೇಶವಾಗಿದೆ. ಇದನ್ನೂ ಓದಿ: PublicTV Explainer: ಉಗುರಿಗೆ ಹೆದರಿದ ‘ಹೀರೋಸ್‌’; ವನ್ಯಜೀವಿ ಸಂರಕ್ಷಣಾ ಕಾಯ್ದೆ ಏನು ಹೇಳುತ್ತೆ? – ಅಪರಾಧಕ್ಕೆ ಶಿಕ್ಷೆ ಏನು?

NISAR 1

ಕಾಲಕಾಲಕ್ಕೆ ಭೂ ಮೇಲ್ಮೈನ ಹವಾಮಾನ ಬದಲಾವಣೆ ಯಾವ ಪ್ರಮಾಣದಲ್ಲಾಗುತ್ತದೆ. ಇದರಿಂದ ಜೀವ ಸಂಕುಲದ ಮೇಲೆ ಆಗುತ್ತಿರುವ ಹಾಗೂ ಮುಂದಾಗಬಹುದಾದ ಪರಿಣಾಮಗಳ ಕುರಿತು ಪೂರಕ ಮಾಹಿತಿ ಒದಗಿಸಲು ನಿಸಾರ್ ಉಡಾವಣಾ ಯೋಜನೆ ಸಹಕಾರಿಯಾಗಲಿದೆ. ಜೊತೆಗೆ ಹಿಮ ಪರ್ವತ, ನದಿ ಪಾತ್ರಗಳಲ್ಲಿ ಬದಲಾವಣೆ ಬಗ್ಗೆಯೂ ಡೇಟಾ ಸಂಗ್ರಹಿಸಿ ಉಪಗ್ರಹ ಒದಗಿಸುತ್ತದೆ. ಭೂಕಂಪ ಸೇರಿದಂತೆ ಅನೇಕ ಪ್ರಕೃತಿ ವಿಕೋಪಗಳಿಗೆ ಸಂಬಂಧಿಸಿದಂತೆ ಉಪಯುಕ್ತ ಮಾಹಿತಿಗಳು ಇದರಿಂದ ಸಿಗಲಿದೆ. ಮುಂದಿನ ದಿನಗಳಲ್ಲಿ ಸಂಭವನೀಯ ಪ್ರಕೃತಿ ವಿಕೋಪಗಳಿಗೆ ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳಿಗೆ ಇದರಿಂದ ಸಿಗುವ ಮಾಹಿತಿ ನೆರವಾಗಲಿದೆ.

ಉಪಗ್ರಹ ಕಾರ್ಯವೇನು?
ನಿಸಾರ್ ಉಪಗ್ರಹ ಭೂಮಿಯ ಕೆಳಹಂತದ ಕಕ್ಷೆಯಲ್ಲಿ ನೆಲೆ ನಿಂತು ಭೂಮಿಯನ್ನು ಗಮನಿಸುತ್ತದೆ. ಇಡೀ ಭೂಮಿಯ ನಕ್ಷೆಯನ್ನು 12 ದಿನಗಳಲ್ಲಿ ರೂಪಿಸಿ, ಭೂ ವ್ಯವಸ್ಥೆ, ಹಿಮ ಪ್ರದೇಶ, ಸಸ್ಯ ಸಂಪತ್ತು, ಸಮುದ್ರದ ನೀರಿನ ಮಟ್ಟ ಏರಿಕೆ, ಅಂತರ್ಜಲ ಎಲ್ಲಾ ಬಗೆಯ ನೈಸರ್ಗಿಕ ದುರಂತಗಳ ನಿಯಮಿತ ದತ್ತಾಂಶವನ್ನು ಪ್ರಾದೇಶಿಕವಾಗಿ ಮತ್ತು ತಾತ್ಕಾಲಿಕವಾಗಿ ಒದಗಿಸುವ ಕಾರ್ಯ ನಿರ್ವಹಿಸುತ್ತದೆ. ಇದನ್ನೂ ಓದಿ: PublicTV Explainer: ಚಂದ್ರ, ಸೂರ್ಯಯಾನ ಆಯ್ತು.. ಈಗ ಶುಕ್ರನ ಮೇಲೆ ಇಸ್ರೋ ಕಣ್ಣು – ಶುಕ್ರಯಾನ ಯಾವಾಗ?

NISAR isro and nasa

ಈ ಉಪಗ್ರಹವು ಮೂರು ವರ್ಷ ಕಾರ್ಯನಿರ್ವಹಿಸಲಿದೆ. ಭೂಭಾಗ, ಹಿಮ ಆವೃತ ಪ್ರದೇಶಗಳ ಮೇಲ್ಮೈಯ ಬದಲಾವಣೆಗಳನ್ನು 12 ದಿನಗಳಿಗೊಮ್ಮೆ ಸಮೀಕ್ಷೆ ಮಾಡಲಿದೆ. ಉಪಗ್ರಹ ಕಾರ್ಯಾರಂಭ ಮಾಡಿದ 90 ದಿನಗಳ ಬಳಿಕ ಸಮೀಕ್ಷೆಯನ್ನು ಆರಂಭಿಸುತ್ತದೆ. ನಿಸಾರ್ ವರ್ಷವಿಡೀ ಹಗಲು-ರಾತ್ರಿ ಡೇಟಾವನ್ನು ಸಂಗ್ರಹಿಸುತ್ತದೆ. ಸಂಶ್ಲೇಷಿತ ದ್ಯುತಿರಂಧ್ರ ರೆಡಾರ್ ಅತ್ಯಾಧುನಿಕ ಸಾಧನವಾಗಿದ್ದು, ಹೆಚ್ಚಿನ ರೆಸಲ್ಯೂಶನ್ ಚಿತ್ರಗಳನ್ನು ಸೆರೆ ಹಿಡಿಯುವ ಸಾಮರ್ಥ್ಯ ಹೊಂದಿದೆ.

ಏನಿದು ಎಲ್-ಬ್ಯಾಂಡ್, ಎಸ್-ಬ್ಯಾಂಡ್?
ಎಸ್‌ಯುವಿ ಗಾತ್ರದ ಉಪಗ್ರಹವು ಸುಮಾರು 2,800 ಕೆಜಿ ಭಾರವಿದೆ. ಎಲ್ ಮತ್ತು ಎಸ್-ಬ್ಯಾಂಡ್ ಸಿಂಥೆಟಿಕ್ ಅಪರ್ಚರ್ ರೆಡಾರ್ ಉಪಕರಣಗಳನ್ನು ಇದು ಒಳಗೊಂಡಿದೆ. ನಾಸಾ ಪ್ರಕಾರ, ಎಲ್-ಬ್ಯಾಂಡ್ 24 ಸೆಂ.ಮೀ ತರಂಗಾಂತರದಲ್ಲಿ ಕಾರ್ಯ ನಿರ್ವಹಿಸುತ್ತದೆ. ಎಲ್-ಬ್ಯಾಂಡ್ ತರಂಗಾಂತರಗಳನ್ನು ಜಿಪಿಎಸ್ ಘಟಕಗಳಿಗೆ ಬಳಸಲಾಗುತ್ತದೆ. ಮೋಡ, ಮಂಜು, ಮಳೆ, ಬಿರುಗಾಳಿ, ಮಳೆಯನ್ನೂ ಭೇದಿಸಿ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತದೆ. ಇದು ರೆಡಾರ್ ಸಿಗ್ನಲ್‌ಗಳು ದಟ್ಟ ಅರಣ್ಯದಲ್ಲೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಹಾಯ ಮಾಡುತ್ತದೆ. ಅದೇ ರೀತಿ ಎಸ್-ಬ್ಯಾಂಡ್ 12 ಸೆ.ಮೀ ಕಡಿಮೆ ತರಂಗಾಂತರದಲ್ಲಿ ಕಾರ್ಯ ನಿರ್ವಹಿಸುತ್ತದೆ. ಬಾಹ್ಯಾಕಾಶ ನೌಕೆ ಮತ್ತು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದೊಂದಿಗೆ ಸಂವಹನ ನಡೆಸಲು ನಾಸಾ ಬಳಸುತ್ತದೆ. ಇದು ಮೋಡಗಳನ್ನು ಭೇದಿಸಿ ಅಧ್ಯಯನ ನಡೆಸುವ ಸಾಮರ್ಥ್ಯ ಹೊಂದಿದೆ. ಇದನ್ನೂ ಓದಿ: PublicTV Explainer: ನೀಲಿ ಆರ್ಥಿಕತೆ ಎಂದರೇನು? – ಭಾರತದಲ್ಲಿ ಹೇಗೆ ಕೆಲಸ ಮಾಡುತ್ತಿದೆ; ಕರ್ನಾಟಕದಲ್ಲಿ ನಿರೀಕ್ಷೆ ಏನು?

ರೆಡಾರ್ ಪ್ರತಿಫಲಕ ಆಂಟೆನಾ, ನಿಯೋಜಿಸಬಹುದಾದ ಬೂಮ್, ವಿಜ್ಞಾನ ದತ್ತಾಂಶಕ್ಕಾಗಿ ಹೈ-ರೇಟ್ ಕಮ್ಯುನಿಕೇಷನ್ ಸಬ್‌ಸಿಸ್ಟಮ್, ಜಿಪಿಎಸ್ ರಿಸೀವರ್ಸ್, ಘನ-ಸ್ಥಿತಿಯ ರೆಕಾರ್ಡರ್ ಮತ್ತು ಪೇಲೋಡ್ ಡೇಟಾ ಸಬ್‌ಸಿಸ್ಟಮ್ ಉಪಕರಣಗಳನ್ನು ನಾಸಾ ಒದಗಿಸಿದೆ. ಎಸ್-ಬ್ಯಾಂಡ್ ರಾಡಾರ್, ಉಡಾವಣಾ ವಾಹನ ಮತ್ತು ಸಂಬಂಧಿತ ಉಡಾವಣಾ ಸೇವೆಗಳನ್ನು ಇಸ್ರೋ ಒದಗಿಸಿದೆ.

2024ಕ್ಕೆ ಲಾಂಚ್?
ಜಿಎಸ್‌ಎಲ್‌ವಿ ರಾಕೆಟ್ ಮೂಲಕ ಶ್ರೀಹರಿಕೋಟದಿಂದ ಉಡಾವಣೆಗೊಳ್ಳಲಿದೆ. ಈ ಉಪಗ್ರಹವು 2024ರ ಮೊದಲ ಮೂರು ತಿಂಗಳ ಒಳಗಾಗಿ ಉಪಗ್ರಹ ಉಡಾವಣೆಯಾಗುವ ಸಾಧ್ಯತೆ ಇದೆ. ಈ ಯೋಜನೆಗೆ ಅಂದಾಜು 13,500 ಕೋಟಿ ರೂ. ವೆಚ್ಚ ಮಾಡಲಾಗಿದೆ. ಉಪಗ್ರಹ ಉಡಾವಣೆಗೂ ಮುನ್ನ ಕೆಲವು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಕಂಪನವೂ ಸೇರಿ ಕೆಲವು ಪರೀಕ್ಷೆಗಳು ನಡೆಯುತ್ತದೆ. ಈಗಾಗಲೇ ಕಂಪನ ಪರೀಕ್ಷೆ ನಡೆದಿದ್ದು, ಕಾರ್ಯಕ್ಷಮತೆ ಪರೀಕ್ಷೆ ನಡೆಯಬೇಕಿದೆ. ಸಿಸ್ಟಮ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳಲು ಬ್ಯಾಟರಿ ಮತ್ತು ಸಿಮ್ಯುಲೇಶನ್ ಪರೀಕ್ಷೆಗಳು ನಡೆಯಲಿವೆ. ನಿಸಾರ್ ಯೋಜನೆಯು ಈ ಹಿಂದೆ ನಡೆಸಿರುವ ಎಲ್ಲಾ ಕಾರ್ಯಾಚರಣೆಗಳಿಗಿಂತ ಉತ್ತಮದ್ದಾಗಿದೆ ಎನ್ನುತ್ತಾರೆ ನಾಸಾ ಜೆಟ್ ಪ್ರೊಪಲ್ಷನ್ ಲ್ಯಾಬೊರೇಟರಿ ನಿರ್ದೇಶಕಿ ಡಾ. ಲೌರಿ ಲೆಶಿನ್. ಇದನ್ನೂ ಓದಿ: PublicTV Explainer: ಭಾರತೀಯ ವಿಜ್ಞಾನಿಗಳಿಂದ ‘ಏಲಿಯನ್‌ ಗ್ರಹ’ ಪತ್ತೆ – ಇಲ್ಲಿ ಅನ್ಯಗ್ರಹ ಜೀವಿಗಳು ಇವೆಯೇ?

TAGGED:Aditya L-1 MissionChandrayaan-3ISRONASANISARಆದಿತ್ಯ L-1ಇಸ್ರೋಚಂದ್ರಯಾನ-3ನಾಸಾನಿಸಾರ್‌
Share This Article
Facebook Whatsapp Whatsapp Telegram

You Might Also Like

Akash Deep
Cricket

536 ರನ್‌ಗಳ ಭರ್ಜರಿ ಮುನ್ನಡೆ – ಭಾರತದ ಬಿಗಿ ಹಿಡಿತದಲ್ಲಿ ಆಂಗ್ಲರ ಒದ್ದಾಟ

Public TV
By Public TV
2 hours ago
Neeraj Chopra 1
Bengaluru City

ಬೆಂಗಳೂರು | `ಎನ್‌ಸಿ ಕ್ಲಾಸಿಕ್‌’ನಲ್ಲಿ ನೀರಜ್‌ ಚೋಪ್ರಾಗೆ ಪ್ರಥಮ ಸ್ಥಾನ

Public TV
By Public TV
2 hours ago
Shivamogga
Bengaluru City

ಶಿವಮೊಗ್ಗ | ರಾಗಿಗುಡ್ಡದಲ್ಲಿ ಅನ್ಯಕೋಮಿನ ಯುವಕರ ದುಷ್ಕೃತ್ಯ – ಗಣಪತಿ ವಿಗ್ರಹ, ನಾಗರ ಕಲ್ಲಿಗೆ ಅಪಮಾನ ಆರೋಪ

Public TV
By Public TV
3 hours ago
Ramesh Jarkiholi
Belgaum

ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣ – ರಮೇಶ್‌ ಜಾರಕಿಹೊಳಿ ಪುತ್ರನ ವಿರುದ್ಧ ಎಫ್‌ಐಆರ್‌

Public TV
By Public TV
3 hours ago
Anekal Marriage
Bengaluru Rural

ಬೆಂಗಳೂರು | ಅಪ್ರಾಪ್ತೆಯನ್ನು ಕರೆದೊಯ್ದು ಮದುವೆಗೆ ಯತ್ನ – ಆರೋಪಿ ಅರೆಸ್ಟ್

Public TV
By Public TV
3 hours ago
Eshwar Khandre 2
Districts

ರಾಜ್ಯದಾದ್ಯಂತ 3 ಕೋಟಿ ಸಸಿ ನೆಡಲಾಗುವುದು: ಈಶ್ವರ್‌ ಖಂಡ್ರೆ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?