Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

‘ನಾಗರಪಂಚಮಿ’ ವಿಶೇಷತೆ ಏನು?

Public TV
Last updated: August 2, 2022 7:34 am
Public TV
Share
3 Min Read
naga panchami 3
SHARE

ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸುವ ಹಬ್ಬವೇ ‘ನಾಗರಪಂಚಮಿ’. ನಾಗರ ಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿರುವ ಜಾಗಕ್ಕೆ ಹೋಗಿ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ. ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಪ್ರತೀತಿ ಸಹ ಇದೆ.

NAGARA PANCHAMI MAIN

ಪಂಚಮಿಯ ವೈಶಿಷ್ಟ್ಯ
ಸಾತ್ತ್ವಿಕತೆ ಗ್ರಹಿಸಲು ನಾಗರಪಂಚಮಿ ಉಪಯುಕ್ತ ಕಾಲ. ಪಂಚಪ್ರಾಣಗಳೇ ಪಂಚನಾಗಗಳಾಗಿವೆ. ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಈ ದಿನದಂದು ಶೇಷನಾಗ ಮತ್ತು ಶ್ರೀವಿಷ್ಣುವಿಗೆ ಮುಂದಿನಂತೆ ಪ್ರಾರ್ಥನೆ ಮಾಡಿದರೆ ಒಳ್ಳೆಯದು.

Nagara Panchami 2

ಪ್ರಾರ್ಥನೆಯ ವೇಳೆ, ದೇವತೆಗಳ ಶಕ್ತಿಯು ನನ್ನ ಪಂಚಪ್ರಾಣಗಳಲ್ಲಿ ಸಂಗ್ರಹವಾಗಿ ಅದು ಈಶ್ವರ ಪ್ರಾಪ್ತಿಗಾಗಿ ಮತ್ತು ರಾಷ್ಟ್ರ ರಕ್ಷಣೆಗಾಗಿ ಉಪಯೋಗವಾಗಲಿ. ನನ್ನ ಪಂಚಪ್ರಾಣದ ಶುದ್ಧಿಯಾಗಲಿ. ನಾಗದೇವತೆಯು ಸಂಪೂರ್ಣ ಬ್ರಹ್ಮಾಂಡದ ಕುಂಡಲಿನಿಯಾಗಿದ್ದಾನೆ. ಪಂಚಪ್ರಾಣವೆಂದರೆ ಪಂಚಭೌತಿಕ ತತ್ತ್ವದಿಂದ ಉಂಟಾದ ಶರೀರದ ಸೂಕ್ಷ್ಮರೂಪವಾಗಿದೆ ಎಂದು ಪುರಾಣಗಳಲ್ಲಿ ನಂಬಲಾಗಿದೆ.

naga panchami 2

ಹೆಣ್ಣುಮಕ್ಕಳ ಹಬ್ಬ
ನಾಗರಪಂಚಮಿ ಮಾಂಗಲ್ಯಪ್ರದ ಹಾಗೂ ಸಂತಾನಪ್ರದ ಎಂಬ ನಂಬಿಕೆ. ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ವಿಶೇಷತೆಗಳಿಂದ ಕೂಡಿರುತ್ತದೆ. `ನಾಗರ ಪಂಚಮಿ ಬಂತು, ಅಣ್ಣ ಬರುತ್ತಾನೆ ಕರೆಯಾಕ, ಕರಿ ಸೀರೆ ಉಡಿಸಾಕ’ ಎನ್ನುವ ಜಾನಪದ ಹಾಡು ಹಬ್ಬದ ವಿಶೇಷತೆ ಸಾರುತ್ತದೆ. ತವರಿಗೆ ಹೆಣ್ಣುಮಕ್ಕಳನ್ನು ಆಹ್ವಾನಿಸಿ, ಉಡುಗೊರೆ ನೀಡಿ ಗೌರವಿಸಲಾಗುತ್ತದೆ.

Nagara Panchami 1

ಉಪವಾಸದ ಮಹತ್ವ
ನಾಗರಪಂಚಮಿಯಂದು ಮಾಡಿದ ಉಪವಾಸದ ಮಹತ್ವವೆಂದರೆ ಈ ಹಿಂದೆ ಸತ್ಯೇಶ್ವರೀ ಎಂಬ ಹೆಸರಿನ ದೇವಿಯಿದ್ದಳು. ಸತ್ಯೇಶ್ವರನು ಅವಳ ಸಹೋದರನಾಗಿದ್ದನು. ಸತ್ಯೇಶ್ವರನು ನಾಗರಪಂಚಮಿಯ ಹಿಂದಿನ ದಿನ ಮೃತ ಹೊಂದಿದನು. ಆಗ ಸಹೋದರನ ಸಾವಿನಿಂದ ಶೋಕದಲ್ಲಿ ಸತ್ಯೇಶ್ವರಿಯು ಆಹಾರವನ್ನು ಸ್ವೀಕರಿಸಲಿಲ್ಲ. ಅದಕ್ಕೆ ಸತ್ಯೇಶ್ವರಿಗೆ ಅವಳ ಸಹೋದರನು ನಾಗರೂಪದಲ್ಲಿ ಕಂಡನು. ಅದಕ್ಕೆ ಆ ದಿನ ಮಹಿಳೆಯರು ಸಹೋದರನ ಹೆಸರಿನಲ್ಲಿ ಉಪವಾಸ ಮಾಡುತ್ತಾರೆ.

naga panchami 1

ಸಹೋದರನಿಗೆ ಅಖಂಡ ಆಯುಷ್ಯ ಪ್ರಾಪ್ತವಾಗಲಿ ಮತ್ತು ಅವನು ಪ್ರತಿಯೊಂದು ದುಃಖ ಮತ್ತು ಸಂಕಟಗಳಿಂದ ಪಾರಾಗಲಿ ಎನ್ನುವುದು ಸಹ ಈ ಉಪವಾಸದ ಹಿಂದಿನ ಕಾರಣವಾಗಿದೆ. ನಾಗರಪಂಚಮಿಯ ಹಿಂದಿನ ದಿನ ಪ್ರತಿಯೊಬ್ಬ ಸಹೋದರಿಯು ದೇವರಲ್ಲಿ ಮೊರೆ ಇಡುವುದರಿಂದ ಅವಳ ಸಹೋದರನಿಗೆ ಲಾಭವಾಗುತ್ತದೆ. ಅವನ ರಕ್ಷಣೆಯಾಗುತ್ತದೆ.

Nagara Panchami 7

ಪೂಜೆ
ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರತೆಯ ಒಂಬತ್ತು ಪ್ರಮುಖ ಗುಂಪುಗಳಾಗಿವೆ.

Nagara Panchami 3

ನಾಗ ಪಂಚಮಿ ಜಾನಪದ ಕಥೆ
ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಒಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು. ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ನಾಗರಹಾವೊಂದು ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು.

naga panchami

ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು. ನಾನು ಯಾರನ್ನು ಅಣ್ಣ ಎಂದು ಕರೆಯಲಿ ಎಂದು ಕಣ್ಣೀರಿಟ್ಟಳು. ತದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣಾಪಾಯದಿಂದ ಕಾಪಾಡಿತು. ನಂತರ ಅಣ್ಣ – ತಂಗಿ ಇಬ್ಬರು ಸೇರಿ ನಾಗರಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

Live Tv
[brid partner=56869869 player=32851 video=960834 autoplay=true]

TAGGED:Naga PanchamiPanchamipoojaShravan Masaನಾಗಪಂಚಮಿಪಂಚಮಿಪೂಜೆಶ್ರಾವಣ ಮಾಸ
Share This Article
Facebook Whatsapp Whatsapp Telegram

Cinema news

Sathish Ninasam 2
ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್
Cinema Latest Sandalwood
Mango Pachcha
ಮ್ಯಾಂಗೋ ಪಚ್ಚನ ಹಸ್ರವ್ವ ಹಾಡು ರಿಲೀಸ್ : ಕಿಚ್ಚನ ಅಳಿಯನ ಸಿನಿಮಾ
Cinema Latest Sandalwood Top Stories
gilli rajat bigg boss
ತಿಂದಾಕೋ ಇವ್ರಿಗೆ ಇಷ್ಟು ಇರಬೇಕಾದ್ರೆ, ಇನ್ನು ತಂದಾಕೋ ನಮಗೆಷ್ಟು ಇರ್ಬೇಡ: ಗೆಸ್ಟ್‌ಗಳಿಗೆ ಗಿಲ್ಲಿ ಹೀಗನ್ನೋದಾ?
Cinema Latest Main Post TV Shows
Dharmam
ಧರ್ಮಂ ಟ್ರೈಲರ್ ಮೆಚ್ಚಿ ಸಾಥ್ ಕೊಟ್ಟ ಕಾಟೇರ ನಿರ್ದೇಶಕ
Cinema Latest Sandalwood Top Stories

You Might Also Like

Odanadi Parashu
Chitradurga

ಆರೋಪಿಗಳನ್ನು ರಕ್ಷಿಸಲು ತನಿಖಾಧಿಕಾರಿಗಳು ಸರಿಯಾದ ದಾಖಲೆ ಸಲ್ಲಿಸಿರಲಿಲ್ಲ: ಒಡನಾಡಿ ಪರಶು

Public TV
By Public TV
1 minute ago
MURUGHA SHREE
Chitradurga

ಪೋಕ್ಸೋ ಪ್ರಕರಣದಲ್ಲಿ ಬಿಗ್‌ ರಿಲೀಫ್‌ – ಮುರುಘಾ ಶ್ರೀ ನಿರ್ದೋಷಿ

Public TV
By Public TV
6 minutes ago
Gautam Gambhir
Cricket

ಭಾರತೀಯ ಕ್ರಿಕೆಟ್‌ ಮುಖ್ಯ, ನಾನಲ್ಲ – ಕೋಚ್‌ ಹುದ್ದೆಗೆ ಗುಡ್‌ ಬೈ ಹೇಳ್ತಾರಾ ಗಂಭೀರ್‌?

Public TV
By Public TV
16 minutes ago
Piyush Goyal HDK
Bidar

ಕರ್ನಾಟಕದ 9 ಜಿಲ್ಲೆಗಳನ್ನೊಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಕೇಂದ್ರದ ಒಲವು

Public TV
By Public TV
20 minutes ago
Al Falah University
Latest

ಅಲ್ ಫಲಾಹ್ ವಿವಿಗೆ ಅಲ್ಪಸಂಖ್ಯಾತ ಸ್ಥಾನಮಾನ ರದ್ದಾಗುವ ಭೀತಿ

Public TV
By Public TV
24 minutes ago
railway food 1
Latest

ರೈಲ್ವೆಗಳಲ್ಲಿ ಕೇವಲ ಹಲಾಲ್ ಮಾಂಸ – ರೈಲ್ವೆ ಬೋರ್ಡ್‌ಗೆ NHRC ನೋಟಿಸ್

Public TV
By Public TV
45 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?