Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನವಮಿಯ ಹಿನ್ನೆಲೆ ಏನು?- ಆಚರಣೆ ಹೇಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಮನವಮಿಯ ಹಿನ್ನೆಲೆ ಏನು?- ಆಚರಣೆ ಹೇಗೆ?

Latest

ರಾಮನವಮಿಯ ಹಿನ್ನೆಲೆ ಏನು?- ಆಚರಣೆ ಹೇಗೆ?

Public TV
Last updated: April 17, 2024 7:49 am
Public TV
Share
2 Min Read
Ram Navami
SHARE

ಚೈತ್ರಮಾಸದಲ್ಲಿ ಯುಗಾದಿಯ ನಂತರ ಬರುವ ಅತಿಮುಖ್ಯ ಹಬ್ಬವೆಂದರೆ ಅದು ಶ್ರೀರಾಮನವಮಿ. ಭಾರತ ದೇಶದಲ್ಲಿ ಆರ್ಯ ಸಂಸ್ಕೃತಿಗೆ ಸೇರಿದ ಎಲ್ಲಾ ಜನರು ಆತ್ಮೀಯತೆಯಿಂದ ಆಚರಿಸುವ ಹಬ್ಬ ಇದಾಗಿದೆ. ಹಿಂದೂಗಳ ಹೃದಯ ಸಾಮ್ರಾಟ, ಮರ್ಯಾದ ಪುರುಷೋತ್ತಮ, ದಶರಥ ನಂದನ ಶ್ರೀರಾಮ ಹುಟ್ಟಿದ ದಿನವನ್ನು ಶ್ರೀರಾಮನವಮಿ (Ram Navami) ಹಬ್ಬವೆಂದು ಆಚರಣೆ ಮಾಡಲಾಗುತ್ತದೆ.

ಪೌರಾಣಿಕ ಹಿನ್ನೆಲೆ:
ಧರ್ಮ ಶಾಸ್ತ್ರಗಳ ಪ್ರಕಾರ, ಅಯೋಧ್ಯೆಯ ರಾಜನಾದ ದಶರಥನಿಗೆ ಕೌಸಲ್ಯಾ, ಕೈಕೇಯೀ ಹಾಗೂ ಸುಮಿತ್ರೆ ಎಂಬ ಮೂರು ಜನ ಪತ್ನಿಯರಿದ್ದರು. ಆದರೆ ಯಾರಿಗೂ ಪುತ್ರ ಸಂತಾನವಾಗಿರಲಿಲ್ಲ. ನಂತರ ದಶರಥನು ಋಷಿಮುನಿಗಳ ಸಲಹೆಯಂತೆ ಪುತ್ರಕಾಮೇಷ್ಠಿ ಯಾಗವನ್ನು ಮಾಡಿಸಿದ. ಈ ಯಜ್ಞದಿಂದ ಸಂತುಷ್ಟನಾದ ಪ್ರಜಾಪತಿಯು ದಶರಥನಿಗೆ ದಿವ್ಯಪಾಯಸವನ್ನು ನೀಡುತ್ತಾನೆ. ಈ ದಿವ್ಯ ಪಾಯಸವನ್ನು ದಶರಥನು ತನ್ನ ಮೂವರು ಪತ್ನಿಯರಿಗೂ ಹಂಚುತ್ತಾನೆ. ಇದರಂತೆ ಚೈತ್ರ ಮಾಸದ ಶುಕ್ಲಪಕ್ಷದ ನವಮಿ ತಿಥಿಯಂದು ಮಧ್ಯಾಹ್ನ ಪುನರ್ವಸು ನಕ್ಷತ್ರದಲ್ಲಿ ಕೌಸಲ್ಯೆಗೆ ರಾಮನೂ, ಪುಷ್ಯನಕ್ಷತ್ರದ ದಶಮಿಯಂದು ಸೂರ್ಯೋದಯಕ್ಕೆ ಮುನ್ನ ಕೈಕೇಯಿಗೆ ಭರತನೂ, ಅದೇ ದಿನ ಆಶ್ಲೇಷಾ ನಕ್ಷತ್ರದಲ್ಲಿ ಮಧ್ಯಾಹ್ನ ಲಕ್ಷ್ಮಣ, ಶತ್ರುಘ್ನರೂ ಜನಿಸುತ್ತಾರೆ. ಹೀಗೆ ರಾಮನು ಜನಿಸಿದ ನವಮಿಯಂದು ರಾಮನವಮಿಯನ್ನಾಗಿ ಆಚರಿಸುತ್ತಾರೆ.

Rama

ಅಯೋಧ್ಯೆಯ ರಾಜ ದಶರಥ ಹಾಗೂ ಕೌಸಲ್ಯೆಯ ಪುತ್ರನಾಗಿ ಮಹಾವಿಷ್ಣುವಿನ ಏಳನೇ ಅವತಾರವಾಗಿ ಶ್ರೀರಾಮನು ಜನಿಸುತ್ತಾನೆ. ಹಿಂದೂ ಗ್ರಂಥಗಳಲ್ಲಿ ಉಲ್ಲೇಖವಿರುವಂತೆ ನಾಲ್ಕು ಯುಗಗಳಲ್ಲಿ ಒಂದಾದ ತ್ರೇತಾಯುಗದಲ್ಲಿ ರಾಮನು ಜನಿಸಿದನು. ಈ ದಿನ ಶ್ರೀರಾಮನನ್ನು ಪೂಜಿಸಿದರೆ ಕೆಟ್ಟ ಶಕ್ತಿಗಳು ನಿವಾರಣೆಯಾಗಿ, ಭೂಮಿಯ ಮೇಲೆ ದೈವೀಕ ಶಕ್ತಿಯು ನೆಲೆಸುತ್ತದೆ ಎಂಬ ನಂಬಿಕೆಯಿದೆ.

ಆಚರಣೆ ಹೇಗೆ?
ಅನೇಕ ಕಡೆಗಳಲ್ಲಿ ಚೈತ್ರ ಮಾಸದ ಪ್ರತಿಪಾದದಿಂದ ಒಂಭತ್ತು ದಿನಗಳವರೆಗೆ ರಾಮನವಮಿ ಉತ್ಸವವು ನಡೆಯುತ್ತದೆ. ರಾಮನವಮಿಯಂದು ಶ್ರೀರಾಮನನ್ನು ಪೂಜಿಸಿ, ಅರ್ಚಿಸಲಾಗುತ್ತದೆ. ಈ ದಿನದಂದು ಉಪವಾಸವನ್ನು ಮಾಡಿದರೆ ಅತ್ಯಂತ ಶ್ರೇಷ್ಠ. ರಾಮನವಮಿಯಂದು ಬೆಳಗ್ಗೆಯಿಂದ ಮರುದಿನ ಬೆಳಗ್ಗೆಯವರೆಗೂ ಉಪವಾಸವನ್ನು ಕೈಗೊಳ್ಳಬೇಕು. ಈ ಸಮಯದಲ್ಲಿ ಶ್ರೀರಾಮ ಜಪ, ರಾಮಾಯಣ ಪಾರಾಯಣ, ಶ್ರೀರಾಮ ಸೀತಾ ಕಲ್ಯಾಣ್ಯೋತ್ಸವವನ್ನೂ ಮಾಡಬಹುದು.

ಕೆಲವೆಡೆ ಪ್ರತಿಪಾದದಿಂದ ನವಮಿಯವರೆಗೂ ಒಂಭತ್ತು ದಿನಗಳಲ್ಲಿ ಭಜನೆ ಹಾಗೂ ಕೀರ್ತನೆಗಳನ್ನು ಆಯೋಜಿಸುತ್ತಾರೆ. ಈ ದಿನ ಕೆಲವು ಭಕ್ತರು ಕಟ್ಟುನಿಟ್ಟಾದ ಉಪವಾಸ ವ್ರತವನ್ನು ಆಚರಿಸುತ್ತಾರೆ ಮತ್ತು ನಿರಾಹಾರ ಉಪವಾಸವನ್ನೂ ಮಾಡುವವರಿದ್ದಾರೆ. ಕೆಲವರು ಸೌಮ್ಯವಾದ ಉಪವಾಸವನ್ನು ಆಚರಿಸಿ, ನೀರು ಹಾಗೂ ಹಣ್ಣುಗಳನ್ನು ಸೇವಿಸುತ್ತಾರೆ. ರಾಮನವಮಿಯಂದು ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಗೆ ಭೇಟಿ ನೀಡಿ ಸರಯೂ ನದಿಯಲ್ಲಿ ಮಿಂದು ಶ್ರೀರಾಮನ ದರ್ಶನ ಮಾಡಿ ಪಾವನರಾಗುತ್ತಾರೆ.

Ayodhya Ram Lalla 1

ಅಯೋಧ್ಯೆಯಲ್ಲಿ ರಾಮನವಮಿ ಆಚರಣೆ:
ಶ್ರೀರಾಮ ಜನಿಸಿದ ಸ್ಥಳ ಅಯೋಧ್ಯೆಯಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಹಬ್ಬದ ದಿನದಂದು ರಾಮನ ಭಜನೆ, ಕೀರ್ತನೆ ಹಾಗೂ ಮೆರವಣಿಗಳನ್ನು ನಡೆಸಲಾಗುತ್ತದೆ. ರಾಮನವಮಿಯಂದು ಸೂರ್ಯ ದೇವನ ಪ್ರಾರ್ಥನೆಯೊಂದಿಗೆ ಹಬ್ಬ ಆರಂಭವಾಗುತ್ತದೆ. ಏಕೆಂದರೆ, ಶ್ರೀರಾಮನು ಸೂರ್ಯವಂಶಸ್ಥನಾಗಿದ್ದು, ಶಕ್ತಿಯ ಪ್ರತೀಕವಾಗಿರುವ ಸೂರ್ಯ ದೇವರ ಆರಾಧನೆ ಮೂಲಕ ರಾಮನವಮಿ ಆರಂಭವಾಗುತ್ತದೆ. ಹಬ್ಬದ ದಿನದಂದು ರಾಮನ ಸ್ತೋತ್ರ ಹಾಗೂ ಭಜನೆಗಳನ್ನು ಹಾಡುವ ಮೂಲಕ ದೇವರನ್ನು ಸಂಪ್ರೀತಿಗೊಳಿಸಲಾಗುತ್ತದೆ.

ಹಬ್ಬದ ದಿನದಂದು ಪ್ರತಿಯೊಬ್ಬರೂ ಜಾತಿ, ಧರ್ಮವೆಂಬ ಕಟ್ಟಳೆಗಳನ್ನು ಬದಿಗೊತ್ತಿ ಕೋಸಂಬರಿ, ಮಜ್ಜಿಗೆ ಹಾಗೂ ಪಾನಕಗಳನ್ನು ಹಂಚುವ ಮೂಲಕ ಸೌಹಾರ್ದತೆಯನ್ನು ಮೆರೆಯುತ್ತಾರೆ.

TAGGED:celebrationfestivalram navami
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

Iran War LPG Gas Shortage 12 Commercial LPG Cylinder found in the HK Patil program Gadag
Districts

ಗ್ಯಾಸ್ ಸಿಲಿಂಡರ್‌ಗೆ ಜನರ ಪರದಾಟ – ಹೆಚ್‌ಕೆ ಪಾಟೀಲ್‌ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ

Public TV
By Public TV
3 minutes ago
Sunil Kumar 2
Bengaluru City

ಸಚಿವರಿಂದ ಸಮರ್ಪಕ ಉತ್ತರ ಇಲ್ಲ – ಸಿಎಂ ಈ ವಿಷಯದಲ್ಲಿ ಅಸಹಾಯಕರಾಗಿದ್ದಾರೆ: ಸುನೀಲ್‌ಕುಮಾರ್ ಟೀಕೆ

Public TV
By Public TV
39 minutes ago
Madhu bangarappa
Bengaluru City

ಹೆರಿಗೆಗೆ 15 ದಿನ ಮುಂಚಿತವಾಗಿಯೇ ಶಿಕ್ಷಕಿಯರಿಗೆ ರಜೆ: ಮಧು ಬಂಗಾರಪ್ಪ

Public TV
By Public TV
53 minutes ago
odisha bjd congress flag
Latest

ಒಡಿಶಾದಲ್ಲಿ ಬಿಜೆಡಿ, ಕಾಂಗ್ರೆಸ್‌ನಿಂದ ಕ್ರಾಸ್‌ ವೋಟ್‌ – ಬಿಜೆಪಿ ಅಭ್ಯರ್ಥಿಗೆ 10 ಶಾಸಕರ ಮತ

Public TV
By Public TV
54 minutes ago
HD Revanna
Districts

ಹಾಸನ ಡಿಸಿ, ಹೊಳೆನರಸೀಪುರ ತಾ.ಪಂ. ಇಓ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಹೆಚ್.ಡಿ.ರೇವಣ್ಣ

Public TV
By Public TV
1 hour ago
Vijayapura Police
Districts

22 ಕೇಸ್‌ನ 36 ಜನ ಅರೆಸ್ಟ್ – 1.27 ಕೋಟಿ ಮೌಲ್ಯದ ಚಿನ್ನಾಭರಣ, 2 ಕಾರು, 17 ಬೈಕ್ ಜಪ್ತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?