Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಜರಾತ್‌ನಲ್ಲಿ ಬಿಟ್ಟು ಬಿಡದೇ ಕಾಡುತ್ತಿರುವ ಚಾಂದಿಪುರ ವೈರಸ್‌ – ಏನಿದರ ಲಕ್ಷಣ?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Explainer

ಗುಜರಾತ್‌ನಲ್ಲಿ ಬಿಟ್ಟು ಬಿಡದೇ ಕಾಡುತ್ತಿರುವ ಚಾಂದಿಪುರ ವೈರಸ್‌ – ಏನಿದರ ಲಕ್ಷಣ?

Public TV
Last updated: July 23, 2024 9:45 pm
Public TV
Share
3 Min Read
1
SHARE

ಗುಜರಾತ್‌ನಲ್ಲಿ (Gujarat) ಪತ್ತೆಯಾಗಿರುವ ಚಾಂದಿಪುರ ವೈರಸ್‌ (Chandipura virus) ಈಗಾಗಲೇ 32 ಜನರ ಬಲಿ ಪಡೆದಿದೆ. ಅಲ್ಲದೇ ಇದರೊಂದಿಗೆ 13 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 84ಕ್ಕೆ ತಲುಪಿದೆ. ಇನ್ನೂ ಜೂ.21 ರಂದು ಗುಜರಾತ್‌ನಲ್ಲಿ 5 ಜನ ಚಾಂದಿಪುರ ವೈರಸ್‌ಗೆ ಬಲಿಯಾಗಿದ್ದರು.    

2

ಚಾಂದಿಪುರ ವೈರಸ್ ಸೋಂಕು ಹೆಚ್ಚಾಗಿ ಮಕ್ಕಳಿಗೆ ಬಾಧಿಸುತ್ತದೆ. ಅದರಲ್ಲಿಯೂ 9 ತಿಂಗಳಿನಿಂದ 14 ವರ್ಷದ ಮಕ್ಕಳಿಗೆ ಬಾಧಿಸುವ ಸಾಧ್ಯತೆ ಹೆಚ್ಚು. ಈ ವೈರಸ್ ಮಕ್ಕಳ ಮೇಲೆ ದಾಳಿ ಮಾಡಿದಾಗ ಮೊದಲಿಗೆ ಜ್ವರ, ಅತಿಸಾರ, ವಾಂತಿ, ಎನ್ಸೆಫಾಲಿಟಿಸ್ ಎಂದು ಕರೆಯಲ್ಪಡುವ ಮೆದುಳಿನ ಜ್ವರದಂತಹ ರೋಗಲಕ್ಷಣಗಳು ಕಂಡುಬರುತ್ತದೆ. ಇನ್ನೂ ಕರ್ನಾಟಕ ಸೇರಿದಂತೆ ದೇಶದ ಕೆಲವೆಡೆ ಡೆಂಗ್ಯೂ ಹಾವಳಿ ಹೆಚ್ಚಾಗುತ್ತಿದೆ. ಇತ್ತ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದ ಸದ್ದು ಮಾಡುತ್ತಿದೆ. ಅಲ್ಲದೇ ಕೇರಳದಲ್ಲಿ ನಿಫಾ ವೈರಸ್‌ಗೆ 14 ವರ್ಷದ ಬಾಲಕ ಬಲಿಯಾಗಿದ್ದು, ಇತ್ತೀಚೆಗೆ ವರದಿಯಾಗಿತ್ತು. ಈ ಮಧ್ಯೆ ಗುಜರಾತ್‌ನಲ್ಲಿ ಚಾಂದಿಪುರ ವೈರಸ್ ಪತ್ತೆಯಾಗಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. 

ಚಾಂದಿಪುರ ವೈರಸ್ – ಈ ಹೆಸರೇಕೆ?

ಮಹಾರಾಷ್ಟ್ರದ ಚಾಂದಿಪುರದಲ್ಲಿ 1965ರಲ್ಲಿ ಇದು ಮೊದಲ ಬಾರಿ ಕಾಣಿಸಿಕೊಂಡಿತ್ತು. ಹೀಗಾಗಿ ಇದನ್ನು ಚಾಂದಿಪುರ ವೈರಸ್‌ ಎಂದು ಕರೆಯುತ್ತಾರೆ. ಚಾಂದಿಪುರ ವೈರಸ್ ಸೋಂಕು ಹೆಚ್ಚಾಗಿ ಮಕ್ಕಳಿಗೆ ಬಾಧಿಸುತ್ತದೆ. ಇದು ರಾಬ್ಡೋವೆರಿಡೆ ವರ್ಗಕ್ಕೆ ಸೇರಿದ ವೈರಸ್ ಆಗಿದೆ. ಈ ವೈರಸ್ ಮಕ್ಕಳ ಮೇಲೆ ದಾಳಿ ಮಾಡಿದಾಗ ಮೊದಲಿಗೆ ಜ್ವರ, ಅತಿಸಾರ, ವಾಂತಿ, ಎನ್ಸೆಫಾಲಿಟಿಸ್ ಎಂದು ಕರೆಯಲ್ಪಡುವ ಮೆದುಳಿನ ಜ್ವರದಂತಹ ರೋಗ‌ ಲಕ್ಷಣಗಳನ್ನು ತೋರಿಸುತ್ತದೆ. ಈ ವೈರಸ್ ವಿರುದ್ಧ ಯಾವುದೇ ಲಸಿಕೆ ಇಲ್ಲದ ಕಾರಣ ಇದನ್ನು ಇನ್ನಷ್ಟು ಅಪಾಯಕಾರಿ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. 

 4

ರೋಗ ಲಕ್ಷಣ

ಚಾಂದಿಪುರ ವೈರಸ್ ಸೋಂಕಿದ್ದವರಿಗೆ ಸಾಮಾನ್ಯ ಜ್ವರದ ಲಕ್ಷಣ ಕಂಡು ಬರುತ್ತದೆ. ಬಳಿಕ ದಿಢೀರ್ ಜ್ವರ, ತೀವ್ರ ತಲೆನೋವು, ವಾಂತಿ, ಸ್ನಾಯು ಸೆಳೆತ, ಉಸಿರಾಟದ ತೊಂದರೆ, ಪ್ರಜ್ಞಾಹೀನತೆ, ಅರೆನಿದ್ರಾವಸ್ಥೆ ಜಾರುತ್ತಾರೆ. ತಕ್ಷಣ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ವ್ಯಕ್ತಿ ಸಾವಿಗೀಡಾಗುತ್ತಾನೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. 

ಸಾಂಕ್ರಾಮಿಕ ರೋಗವೇ?

ಇದು ಸಾಂಕ್ರಾಮಿಕ ರೋಗ ಅಲ್ಲದಿದ್ದರೂ ಸೊಳ್ಳೆ, ನೊಣ, ಉಣ್ಣೆಗಳಿಂದ ಈ ಸೋಂಕು ಹರಡುತ್ತದೆ. ಕಾಯಿಲೆಗೆ ಶುಚಿತ್ವ ಕೊರತೆಯೇ ಮುಖ್ಯ ಕಾರಣ. ಸದ್ಯ ಈ ರೀತಿಯ ಅನೇಕ ಪ್ರಕರಣಗಳು ಗುಜರಾತ್‌ನಲ್ಲಿ ಕಂಡುಬಂದಿವೆ. ಗುಜರಾತ್‌ನ ಸಬರ್‌ಕಾಂಠಾ ರಾವಳಿ, ಮಹಿಸಾರ, ಖೇಡಾ ಜಿಲ್ಲೆಗಳಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ ರಾಜಸ್ಥಾನ, ಮಧ್ಯ ಪ್ರದೇಶದಲ್ಲಿಯೂ ಸೋಂಕು ಬಾಧಿಸಿರುವುದು ವರದಿಯಾಗಿದೆ. ಶಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

3

ರೋಗದಿಂದ ಪಾರಾಗುವುದು ಹೇಗೆ?

ಚಾಂದಿಪುರ ವೈರಸ್‌ನಿಂದ ತಪ್ಪಿಸಿಕೊಳ್ಳಲು ನೈರ್ಮಲ್ಯ ಕಾಪಾಡುವುದು ಅಗತ್ಯ. ಸೊಳ್ಳೆ, ನೊಣ ಮತ್ತು ಕೀಟಗಳು ಕಡಿಯದಂತೆ ಎಚ್ಚರ ವಹಿಸಿ. ಮಕ್ಕಳಿಗೆ ರಾತ್ರಿ ಪೂರ್ಣ ತೋಳಿನ ಬಟ್ಟೆಗಳನ್ನು ತೊಡಿಸಿ. ಸೊಳ್ಳೆಗಳು ಮತ್ತು ಕೀಟಗಳಿಂದ ತಪ್ಪಿಸಿಕೊಳ್ಳಲು ಸೊಳ್ಳೆ ಪರದೆಗಳನ್ನು ಬಳಸಬೇಕು. ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿಡಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸಾಕು ಪ್ರಾಣಿಗಳ ಬಳಿಗೆ ತೆರಳುವಾಗ ಎಚ್ಚರವಹಿಸಬೇಕು.

ಚಾಂದಿಪುರ ವೈರಸ್‌ ನಿಯಂತ್ರಣ ಹೇಗೆ?

ಸ್ವಚ್ಛತೆ: ಸಾಬೂನು ಮತ್ತು ನೀರಿನಿಂದ ನಿಯಮಿತವಾಗಿ ಕೈಗಳನ್ನು ತೊಳೆಯುವುದು, ವಿಶೇಷವಾಗಿ ಪ್ರಾಣಿಗಳನ್ನು ಮುಟ್ಟಿದ ನಂತರ ಅಥವಾ ಸಂಭಾವ್ಯವಾಗಿ ಕಲುಷಿತಗೊಂಡ ಪರಿಸರದಲ್ಲಿ ಓಡಾಡಿದ ನಂತರ ಸ್ನಾನ ಮಾಡಬೇಕು. ಕಾಡು ಪ್ರಾಣಿಗಳು ಮತ್ತು ಅವುಗಳ ಆವಾಸಸ್ಥಾನಗಳೊಂದಿಗೆ ಸಂಪರ್ಕವನ್ನು ಕಡಿಮೆ ಮಾಡುವುದು.

ಈ ನಡುವೆ ಚಾಂದಿಪುರ ವೈರಸ್ ತಡೆಗಟ್ಟಲು ರಾಜ್ಯ ಸರ್ಕಾರ ಈಗಾಗಲೇ 1.16 ಲಕ್ಷ ಮನೆಗಳಿಗೆ ಸೋಂಕು ನಿರೋಧಕಗಳನ್ನು ಸಿಂಪಡಣೆ ಮಾಡಿದ್ದು, 19,000 ಸ್ಥಳಗಳಲ್ಲಿ ತಪಾಸಣೆಗಳನ್ನು ನಡೆಸುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗುಜರಾತ್, ರಾಜಸ್ಥಾನ ಹಾಗೂಮಧ್ಯ ಪ್ರದೇಶಗಳಿಗೆಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸೂಚನೆ ಹೊರಡಿಸಿದೆ. ಇಲ್ಲಿಯವರೆಗೂ ಸುಮಾರು 50,000 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಪರೀಕ್ಷಿಸಲಾಗಿದೆ ಮತ್ತು ಹೆಚ್ಚಿನ ಪರೀಕ್ಷೆಗಾಗಿ ಐವಿಗೆ ಶಂಕಿತ ಪ್ರಕರಣಗಳ ಮಾದರಿಗಳನ್ನು ಕಳುಹಿಸಲು ಎಲ್ಲಾ ಜಿಲ್ಲಾ ಮತ್ತು ಗ್ರಾಮೀಣ ಆಸ್ಪತ್ರೆಗಳಿಗೆ ಸೂಚನೆಗಳನ್ನು ನೀಡಲಾಗಿದೆ.

Share This Article
Facebook Whatsapp Whatsapp Telegram
Previous Article darshan in jail ಜೈಲಲ್ಲಿ ಧ್ಯಾನ, ಅಧ್ಯಾತ್ಮ ಪುಸ್ತಕಗಳ ಓದು – ಅಧ್ಯಾತ್ಮದತ್ತ ದರ್ಶನ್ ಒಲವು?
Next Article Koramangala Ladies PG Murder ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ

Latest Cinema News

bigg boss 12 kannada contestants
ಬಿಗ್‌ಬಾಸ್ ಮನೆಗೆ ಈ ಬಾರಿ ಯಾರು ಹೋಗ್ತಾರೆ? ಹರಿದಾಡುತ್ತಿದೆ ಹಲವು ಹೆಸರುಗಳು
Cinema Latest Main Post Sandalwood
Megha Shetty
BBK 12 | ದೊಡ್ಮನೆಗೆ ಹೋಗ್ತಾರಾ ನಟಿ ಮೇಘಾ ಶೆಟ್ಟಿ?
Cinema Latest Sandalwood Top Stories
Ramya Ravichandran
ತುಮಕೂರು ದಸರಾಗೆ ರಮ್ಯಾ – ರವಿಚಂದ್ರನ್
Cinema Districts Karnataka Latest Sandalwood Top Stories Tumakuru
Kolar Dhruva Sarja
ಕೋಲಾರ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ
Cinema Districts Karnataka Kolar Latest Sandalwood Top Stories
Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories

You Might Also Like

Mother who killed third daughter sent to prison Toranagallu Ballari
Bellary

ಕಾಲುವೆಗೆ ಎಸೆದು ಕೊಲೆ – ಮೂರನೇ ಹೆಣ್ಣು ಮಗುವನ್ನು ಹತೈಗೈದ ತಾಯಿ ಜೈಲಿಗೆ

6 minutes ago
Lovers
Crime

ದುಷ್ಕರ್ಮಿಗಳಿಂದ ಪ್ರಿಯಕರನ ಹತ್ಯೆ – ಮನನೊಂದು ಆತ್ಮಹತ್ಯೆಗೆ ಶರಣಾದ ಯುವತಿ

10 minutes ago
India vs Pakistan
Cricket

ಟಾಸ್‌ ಗೆದ್ದ ಭಾರತ ಫೀಲ್ಡಿಂಗ್‌ ಆಯ್ಕೆ – ಬೂಮ್‌ ಬೂಮ್‌ ಇಸ್‌ ಬ್ಯಾಕ್‌

34 minutes ago
bagalkote jayamruthyunjaya swamiji
Bagalkot

ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಬಸವಜಯಮೃತ್ಯುಂಜಯ ಶ್ರೀ ಉಚ್ಚಾಟನೆ

40 minutes ago
Caste Census 1
Bengaluru City

Caste Census | ವಿವಾದದ 33 ಜಾತಿಗಳನ್ನ ಕೈ ಬಿಟ್ಟ ಆಯೋಗ; ಮತಾಂತರ ಆಗಿದ್ದರೆ ಆ ಧರ್ಮವೇ ಫಿಕ್ಸ್

1 hour ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?