Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು

Latest

ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು

Public TV
Last updated: June 14, 2022 4:11 pm
Public TV
Share
4 Min Read
subramanian swamy sonia gandhi rahul gandhi
SHARE

ಸುಬ್ರಮಣಿಯನ್‌ ಸ್ವಾಮಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ ಪ್ರಕರಣದಲ್ಲಿ ತಮಿಳುನಾಡಿನ ನಾಯಕಿ ಜಯಲಲಿತಾ ಅವರನ್ನೇ ಜೈಲಿಗೆ ಕಳುಹಿಸಿದ್ದ ಸುಬ್ರಮಣಿಯನ್‌ ಸ್ವಾಮಿ ನೀಡಿದ ದೂರು ಈಗ ಕಾಂಗ್ರೆಸ್‌ಗೆ ಸಂಕಷ್ಟ ತಂದಿದೆ. ಎಜಿಎಲ್‌ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಸುಬ್ರಮಣಿಯನ್‌ ಸ್ವಾಮಿ ನೀಡಿದ ಹಿನ್ನೆಲೆಯಲ್ಲಿ ಇಡಿ ಈಗ ರಾಹುಲ್‌ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿದೆ. ಹೀಗಾಗಿ ಇಲ್ಲಿ ಏನಿದು ಎಜೆಎಲ್‌ ಪ್ರಕರಣ? ಕಾಂಗ್ರೆಸ್‌ ನಾಯಕರ ಮೇಲಿರುವ ಆರೋಪ ಏನು ಇತ್ಯಾದಿ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಏನಿದು ಪ್ರಕರಣ?
1937ರಲ್ಲಿ ಮಾಜಿ ಪ್ರಧಾನಿ ಜವಾಹರ ಲಾಲ್‌ ನೆಹರೂ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷ ಅಸೋಸಿಯೇಟೆಡ್‌ ಜರ್ನಲ್ಸ್‌ ಲಿಮಿಟೆಡ್‌ (ಎಜೆಎಲ್‌) ಹೆಸರಿನಲ್ಲಿ ಕಂಪನಿಯನ್ನು ಆರಂಭಿಸಿತು. 1938ರಲ್ಲಿ ನೆಹರೂ ನೇತೃತ್ವದಲ್ಲಿ ಎಜೆಎಲ್‌ ಕಂಪನಿ ಇಂಗ್ಲಿಷ್‌ ಭಾಷೆಯ ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯನ್ನು ಆರಂಭಿಸಿತು.ಇದಾದ ಬಳಿಕ ನವಜೀವನ್‌ (ಹಿಂದಿ) ಮತ್ತು ಕ್ವಾಮಿ ಆವಾಜ್‌ (ಉರ್ದು) ಪತ್ರಿಕೆಗಳನ್ನು ಹೊರತಂದಿತ್ತು.

RAHUL GANDHI

ನೆಹರೂ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಎಜೆಎಲ್‌ ಕಂಪನಿಗೆ ಸಾಕಷ್ಟು ಪ್ರಮಾಣದಲ್ಲಿ ದೇಣಿಗೆ ಹರಿದುಬಂದಿತ್ತು. ಅಷ್ಟೇ ಅಲ್ಲದೇ ನೆಹರೂ ಅವರು ದೇಶದ ವಿವಿಧ ಭಾಗದಲ್ಲಿ ಜಮೀನನ್ನು ಮಂಜೂರು ಮಾಡಿದ್ದರು.

ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವಲ್ಲಿ ವೈಫಲ್ಯ, ಜಾಹೀರಾತು ಆದಾಯದ ಕೊರತೆ, ಆರ್ಥಿಕ ಸಂಕಷ್ಟ ಇನ್ನಿತರ ಕಾರಣದಿಂದ 2007ರ ಏಪ್ರಿಲ್‌ 1ರಂದು ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆ ಪ್ರಕಟಣೆಯನ್ನು ನಿಲ್ಲಿಸಲಾಯಿತು. ಹಾಗೇ ನವಜೀವನ್‌, ಕ್ವಾಮಿ ಆವಾಜ್‌ ಪತ್ರಿಕೆಗಳನ್ನು ನಿಲ್ಲಿಸಲಾಯಿತು.

sonia gandhi

ಯುಪಿಎ ಎರಡನೇ ಅವಧಿಯ ಸರ್ಕಾರದ ಅವಧಿಯ ವೇಳೆ 2011ರಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತಲಾ ಶೇ.38ರಷ್ಟು ಷೇರು ಹೂಡಿಕೆ ಮಾಡಿ ಯಂಗ್ ಇಂಡಿಯಾ ಲಿಮಿಟೆಡ್‌ (ವೈಐಎಲ್‌) ಹೆಸರಿನಲ್ಲಿ ಕಂಪನಿ ಆರಂಭಿಸಿದರು. ಸೋನಿಯಾ, ರಾಹುಲ್ ಅಲ್ಲದೇ ಆಸ್ಕರ್ ಫರ್ನಾಂಡಿಸ್‌ ಮತ್ತು ಮೋತಿಲಾಲ್‌ ವೋರಾ ಈ ಕಂಪನಿಯ ಆಡಳಿತ ಮಂಡಳಿ ಸೇರಿಕೊಂಡರು. ಈ ಪೈಕಿ ವೋರಾ ಮತ್ತು ಫರ್ನಾಂಡಿಸ್‌ ತಲಾ ಶೇ. 24ರಷ್ಟು ಷೇರುಗಳನ್ನು ಹೊಂದಿದ್ದರು.

ಹಣಕಾಸು ನಷ್ಟದಲ್ಲಿದ್ದ ಎಜೆಎಲ್‌ ಕಂಪನಿಯನ್ನು 90.21 ಕೋಟಿ ರೂ. ಮೊತ್ತಕ್ಕೆ ವೈಐಎಲ್‌ ಕಂಪನಿ ಖರೀದಿ ಮಾಡಿತು. 90 ಕೋಟಿ ಪೈಕಿ 50 ಲಕ್ಷ ಮೊತ್ತವನ್ನು ಕಾಂಗ್ರೆಸ್‌ ತನ್ನ ಖಜಾನೆಯಿಂದಲೇ ವರ್ಗಾಯಿಸಿದೆ. ಎಜೆಎಲ್‌ ಮಾಲೀಕತ್ವದ ಹೆರಾಲ್ಡ್‌ ಹೌಸ್‌ನ ನವೀಕರಣಕ್ಕೆ ವೈಐಎಲ್‌ 1 ಕೋಟಿ ರೂ. ನೆರವು ನೀಡಿದೆ.

CONGRESS 4

ಆರೋಪ ಏನು?
ಎಜೆಎಲ್ ಕಂಪನಿ ಆರ್ಥಿಕ ಸಂಕಷ್ಟದಲ್ಲಿ ಇದ್ದರೂ ಸುಮಾರು 5 ಸಾವಿರ ಕೋಟಿ ರೂ.ಗಳಷ್ಟು ಆಸ್ತಿಯನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ. ಇಷ್ಟೊಂದು ಆಸ್ತಿಯನ್ನು ಹೊಂದಿರುವ ಕಂಪನಿಯನ್ನು ಕೇವಲ 90 ಕೋಟಿ ರೂ.ಗೆ ಖರೀದಿಸಿದ್ದು ಹೇಗೆ ಎನ್ನುವುದು ಮೊದಲ ಪ್ರಶ್ನೆ. ಅಷ್ಟೇ ಅಲ್ಲದೇ ಎಜೆಎಲ್‌ ಕಂಪನಿಯನ್ನು ಆರಂಭಿಸಿದವರು ಜವಾಹರ ಲಾಲ್‌ ನೆಹರೂ. ಕಾಂಗ್ರೆಸ್‌ ಪಕ್ಷದ ನಾಯಕರೇ ಆರಂಭಿಸಿದ ಕಂಪನಿಗೆ ಕಾಂಗ್ರೆಸ್ ಪಕ್ಷದಿಂದಲೇ ಹಣವನ್ನು ವರ್ಗಾಯಿಸಿದ್ದು ಯಾಕೆ ಎನ್ನುವ ಪ್ರಶ್ನೆ ಎದ್ದಿದೆ.

ಸುಬ್ರಮಣಿಯನ್‌ ಸ್ವಾಮಿ ದೂರು
ಎಜೆಎಲ್‌ನ ಖರೀದಿ ವ್ಯವಹಾರದಲ್ಲಿ ಭಾರೀ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಾಣಿಸುತ್ತದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ 2012ರ ಜೂನ್‌ನಲ್ಲಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕಾಂಗ್ರೆಸ್‌ ಮುಖಂಡ ಮೋತಿ ಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್‌, ಪತ್ರಕರ್ತ ಸುಮನ್ ದುಬೆ, ದೂರಸಂಪರ್ಕ ಎಂಜಿನಿಯರ್‌ ಸ್ಯಾಮ್‌ ಪಿತ್ರೊಡ ಮತ್ತು ಯಂಗ್ ಇಂಡಿಯಾ ಲಿಮಿಟೆಡ್‌ ಕಂಪನಿಯನ್ನು ಪ್ರಮುಖ ಆರೋಪಿಗಳನ್ನಾಗಿ ಮಾಡಲಾಗಿದೆ. ಇವರಲ್ಲಿ ಮೋತಿ ಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್‌ ನಿಧನರಾಗಿದ್ದಾರೆ.

NEWS PAPER

ಎಜೆಎಲ್‌ ಕಂಪನಿಯ ಒಟ್ಟು ಆಸ್ತಿ ಹಾಗೂ ಅದರ ಖರೀದಿ ವ್ಯವಹಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಈ ಹಿಂದೆ ತಾಂತ್ರಿಕ ಕಾರಣಗಳಿಂದ ತನಿಖೆ ನಿಲ್ಲಿಸುವುದಾಗಿ ಜಾರಿ ನಿರ್ದೇಶನಾಲಯ(ಇಡಿ) ಹೇಳಿತ್ತು. ಆದರೆ ಈ ತನಿಖೆಯನ್ನು ಮತ್ತೆ ಆರಂಭಿಸುವುದಾಗಿ 2015ರ ಸೆಪ್ಟೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ ಪ್ರಕಟಿಸಿತ್ತು.

ಕಳೆದ ಏಪ್ರಿಲ್‌ ತಿಂಗಳಲ್ಲಿ ಕಾಂಗ್ರೆಸ್‌ ರಾಜ್ಯಸಭಾ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿತ್ತು. ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಇಡಿ ಸಮನ್ಸ್‌ ಜಾರಿ ಮಾಡಿದ್ದು ರಾಹುಲ್‌ ಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ. ಕೋವಿಡ್‌ ಮತ್ತು ಅನಾರೋಗ್ಯದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ವಿಚಾರಣೆಗೆ ಗೈರಾಗಿದ್ದು ಆರೋಗ್ಯ ಸುಧಾರಣೆಯಾದ ಬಳಿಕ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ.

PROTEST 2 1

ಜಯಲಲಿತಾ ವಿರುದ್ಧ ದೂರು
ಜಯಲಲಿತಾ ಸಿಎಂ ಆದ ಸಂದರ್ಭದಲ್ಲಿ ಕೇವಲ ಒಂದು ರೂಪಾಯಿ ಮಾತ್ರ ಸಂಬಳ ಪಡೆಯುವುದಾಗಿ ಘೋಷಿಸಿದ್ದರು. ಹೀಗಿದ್ದರೂ ಅವರ ಆಸ್ತಿ ವರ್ಷ ವರ್ಷ ಏರಿಕೆ ಆಗುತ್ತಿತ್ತು. 1989-90 ರಲ್ಲಿ ಆದಾಯ ಶೂನ್ಯ ಎಂದು ದಾಖಲಿಸಿದ್ದರೆ 1990-91ರಲ್ಲಿ 1.89 ಕೋಟಿ, 1991-92ರಲ್ಲಿ 5.82 ಕೋಟಿ ರೂ., 1992-93 ರಲ್ಲಿ 91.33 ಕೋಟಿ ರೂ. ಆದಾಯ ತೋರಿಸಿದ್ದರು. ಸಿಎಂ ಆಗಿದ್ದಾಗ ಆಕ್ರಮವಾಗಿ ಆದಾಯ ಸಂಪಾದಿಸಿದ್ದಾರೆ ಎಂದು ಆರೋಪಿಸಿ 1996ರಲ್ಲಿ ಸುಬ್ರಮಣಿಯನ್‌ ಸ್ವಾಮಿ ಕೋರ್ಟ್‌ನಲ್ಲಿ ಕ್ರಿಮಿನಲ್‌ ಕೇಸ್‌ ದಾಖಲಿಸಿ ಜೈಲಿಗೆ ಕಳುಹಿಸಿದ್ದರು. ಸುಪ್ರೀಂ ಕೋರ್ಟ್‌ ಈ ಪ್ರಕರಣದಲ್ಲಿ ಜಯಲಲಿತಾ ದೋಷಿ ಎಂದು ತೀರ್ಪು ನೀಡಿತ್ತು. ಆದರೆ ಈ ತೀರ್ಪು ಬರುವಷ್ಟರಲ್ಲಿ ಜಯಲಲಿತಾ ಮೃತಪಟ್ಟಿದ್ದರು.

TAGGED:bjpcongressEDRahul GandhiSonia GandhiYILಕಾಂಗ್ರೆಸ್ಜಾರಿಯಾ ನಿರ್ದೇಶನಾಲಯಬಿಜೆಪಿಯಂಗ್ ಇಂಡಿಯಾ ಲಿಮಿಟೆಡ್ರಾಹುಲ್ ಗಾಂಧಿಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
8 minutes ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
20 minutes ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
50 minutes ago
Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
2 hours ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
2 hours ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?