Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಖಮೇನಿ ಕೈ ಬೆರಳಲ್ಲಿರೋ ನೀಲಿ ಕಲ್ಲಿನ ಉಂಗುರದ ರಹಸ್ಯವೇನು? ಇದು ಇರೋವರೆಗೂ ಸೋಲೇ ಇಲ್ವಾ?

Public TV
Last updated: June 24, 2025 1:00 am
Public TV
Share
4 Min Read
Khameni Logo
SHARE

ಮಧ್ಯಪ್ರಾಚ್ಯ ದೇಶಗಳಾದ ಇಸ್ರೇಲ್‌ ಹಾಗೂ ಇರಾನ್‌ (Israel Vs Iran) ಮಧ್ಯೆ ನಡೆಯುತ್ತಿರುವ ಯುದ್ಧಕ್ಕೆ ಈಗ ವಿಶ್ವದ ದೊಡ್ಡಣ್ಣ ಅಮೆರಿಕ ಅಧಿಕೃತವಾಗಿ ಪ್ರವೇಶಿಸಿದ ಮರುದಿನವೇ ಪರಿಸ್ಥಿತಿ ಉದ್ವಿಗ್ನತೆಗೆ ತಿರುಗಿದೆ. ಇರಾನ್‌ನ ಫೋರ್ಡೋ, ನಟಾಂಜ್ ಮತ್ತು ಇಸ್ಫಹಾನ್ ಪರಮಾಣು ಸ್ಥಾವರಗಳ ಮೇಲೆ ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ ನಿಂದ ದಾಳಿ ನಡೆಸಿದ ಬೆನ್ನಲ್ಲೇ ಕತಾರ್‌ನಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ರಾತ್ರೋ ರಾತ್ರಿ ಮಿಸೈಲ್‌ ದಾಳಿ ನಡೆಸಿದೆ. ಆದ್ರೆ ಈ ದಾಳಿಯನ್ನು ಅಮೆರಿಕ ಸೇನೆ ಸಮರ್ಥವಾಗಿ ಎದುರಿಸಿದೆ.

ಇರಾನ್‌ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಎಚ್ಚರಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಇರಾನ್‌ ಸೇನೆ ಅಮೆರಿಕ ಸೇನಾ (US Military Base) ನೆಲೆಗಳ ಮೇಲೆ ದಾಳಿ ನಡೆಸಿದೆ. ಜೊತೆಗೆ ಹಾರ್ಮುಜ್‌ ಜಲಸಂಧಿ ಬಂದ್‌ ಮಾಡುವ ನಿರ್ಧಾರಕ್ಕೆ ಮುಂದಾಗುತ್ತಿದೆ. ಈ ಎಲ್ಲ ಬೆಳವಣಿಗೆಗಳ ನಡುವೆ ಬಂಕರ್‌ನಲ್ಲೇ ಅಡಗಿ ಕುಳಿತಿರೋ ಖಮೇನಿ ಬಗ್ಗೆ ಸ್ಫೋಟಕ ರಹಸ್ಯವೊಂದು ಬೆಳಕಿಗೆ ಬಂದಿದೆ. ಅದುವೆ ʻನೀಲಿ ಕಲ್ಲಿನ ಉಂಗುರʼ (Gemstones). ಈ ಉಂಗುರ ಖಮೇನಿ ಕೈಯಲ್ಲಿ ಇರೋವರೆಗೂ ಆತನೇ ಸೋಲೇ ಇಲ್ಲವಂತೆ ಎಂದೂ ಕೂಡ ಹೇಳಲಾಗುತ್ತಿದೆ. ಬನ್ನಿ ಹಾಗಿದ್ರೆ ಆ ನೀಲಿ ಉಂಗುರದ ರಹಸ್ಯ ತಿಳಿಯೋಣ….

Khameni Logo 2

ಅಯತೊಲ್ಲಾ ಅಲಿ ಖಮೇನಿ ಅವರ ಪ್ರತಿ ಫೋಟೋ ಅಥವಾ ಯಾವುದೇ ವಿಡಿಯೋ ನೋಡುವಾಗಲೂ ಅವರ ಕೈ ಬೆರಳಿನಲ್ಲಿ ಕಲ್ಲಿನಿಂದ ಕೂಡಿದ ನೀಲಿ ಬಣ್ಣದ ಉಂಗುರವೊಂದು ಕಾಣುತ್ತದೆ. ಈ ಹಿಂದೆ ಇಸ್ಲಾಮಿಕ್‌ ಕ್ರಾಂತಿಯನ್ನೇ ಸೃಷ್ಟಿಸಿದ ರುಹೊಲ್ಲಾ ಖಮೇನಿ ಕೂಡ ಕೆಂಪು-ಕಂದು ಅಥವಾ ನೀಲಿ ಕಲ್ಲಿನ ಉಂಗುರಗಳನ್ನು ಧರಿಸುತ್ತಿದ್ದರು. ಆದ್ರೆ ಇದು ಕೇವಲ ಹವ್ಯಾಸವಾಗಿರಲಿಲ್ಲ. ಒಂದೆಡೆ ರತ್ನಗಳ ಮೇಲಿನ ಪ್ರೀತಿಯಾದ್ರೆ, ಇನ್ನೊಂದೆಡೆ ಶಿಯಾ ಸಂಪ್ರದಾಯದ ಭಾಗವಾಗಿತ್ತು. ಅಲ್ಲದೇ ಈ ರೀತಿಯ ಉಂಗುರಗಳನ್ನು ಧರಿಸುವುದಕ್ಕೆ ಇನ್ನೂ ಒಂದು ಮಹತ್ವದ ಕಾರಣವಿತ್ತು.

ಹೌದು. ಇಸ್ರೇಲ್‌-ಇರಾನ್‌ ನಡುವಿನ ಸಂಘರ್ಷಕ್ಕೆ ಅಮೆರಿಕ ಎಂಟ್ರಿಯಾದ ಬಳಿಕ ಇಡೀ ವಿಶ್ವದ ಚಿತ್ತ ಯುದ್ಧದ ಸನ್ನಿವೇಶಗಳು, ಜಾಗತಿಕ ಉದ್ವಿಗ್ನತೆ ಹಾಗೂ ಮುಂದಾಗುವ ಆರ್ಥಿಕ ಪರಿಣಾಮಗಳ ಮೇಲಿದ್ದರೆ, ಕೆಲವರ ಚಿತ್ತ ಮಾತ್ರ ಖಮೇನಿ ಕೈಯಲ್ಲಿರೋ ಕಲ್ಲಿನ ಉಂಗುರದ ಮೇಲಿದೆ. ಅವರ ಕೈಯಲ್ಲಿರೋ ನೀಲಿ ಕಲ್ಲು, ಹಸಿರು ಮತ್ತು ಕೆಂಪು ಕಲ್ಲು ಮತ್ತು ರತ್ನಗಳಿಂದ ಕೂಡಿದ ಉಂಗುರ ಪ್ರಮುಖ ಆಕರ್ಷಣೆಯಾಗಿವೆ. ಇದನ್ನು ಧರಿಸುವುದು ಶುಭ ಎಂದೇ ಪರಿಗಣಿಸಲಾಗುತ್ತದೆ. ಅದಕ್ಕಾಗಿಯೇ ಇರಾನ್‌ನಲ್ಲಿನ ಸಾಮಾನ್ಯ ಜನರು ಸಹ ಇದನ್ನ ಧರಿಸಲು ಇಷ್ಟಪಡುತ್ತಾರೆ.

Ayatollah Ali Khamenei

ಕಲ್ಲಿನ ಉಂಗುರದ ಪ್ರಯೋಜನಗಳೇನು?
ಖಮೇನಿ ಸಾಮಾನ್ಯವಾಗಿ ಧರಿಸುವ ಉಂಗುರಗಳು ಬೆಳ್ಳಿಯಿಂದ ಮಾಡಲ್ಪಟ್ಟಿರುತ್ತದೆ. ಜೊತೆಗೆ ಆ ಉಂಗುರದಲ್ಲಿ ಹಳದಿ ಕಲ್ಲು ಹಾಗೂ ಕೆಲ ತಾಲಿಸ್ಮನ್‌ (ಮಾಂತ್ರಿಕ ಗುಣಗಳನ್ನು ಹೊಂದಿದೆ ಎಂದು ನಂಬಲಾದ ವಸ್ತು) ಸಹ ಮಿಶ್ರಣ ಮಾಡಲಾಗಿರುತ್ತದೆ. ಜೊತೆಗೆ ಸ್ವಲ್ಪ ಪ್ರಮಾಣದಲ್ಲಿ ರತ್ನಗಳೂ ಇದರಲ್ಲಿರಲಿದೆ. ಹಾಗಾಗಿ ಇಂತಹ ಉಂಗುರ ಆಧ್ಯಾತ್ಮಿಕ ಶಕ್ತಿಯನ್ನು ಒಳಗೊಂಡಿರುತ್ತದೆ ಅನ್ನೋದು ನಂಬಿಕೆ.

ಇನ್ನೂ ಖಮೇನಿ ಹೆಚ್ಚಾಗಿ ಧರಿಸುವ ನೀಲಿ, ಹಸಿರು ಉಂಗುರ ವೈಡೂರ್ಯದ್ದಾಗಿರುತ್ತದೆ, ಜೊತೆಗೆ ಸ್ಪಟಿಕ ಶಿಲೆಯ ಉಂಗುರವೂ ಅವರ ಕೈಯಲ್ಲಿರುತ್ತದೆ. ಇದನ್ನ ದುರ್‌ ಎ ನಜಾಫ್‌ ಎಂದೂ ಕೂಡ ಕರೆಯುತ್ತಾರೆ. ಇವೆಲ್ಲವು ಅತ್ಯುನ್ನತ ದರ್ಜೆಯ ಕಲ್ಲುಂಗುರಗಳಾಗಿದ್ದು ಶಿಯಾ ಸಂಪ್ರದಾಯದ ಪ್ರತೀಕವೂ ಆಗಿದೆ. ಹಾಗಾಗಿಯೇ ಖಮೇನಿ ಸೇರಿದಂತೆ ದೊಡ್ಡ ದೊಡ್ಡ ಧರ್ಮಗುರುಗಳು ಕಲ್ಲಿನ ಉಂಗುರಗಳನ್ನು ಧರಿಸುತ್ತಾರೆ.

Iran Fires Missiles

ಸದ್ಯ ನೀಲಿ ಮತ್ತು ಹಸಿರು ಬಣ್ಣದ ಕಲ್ಲುಗಳನ್ನು ಇರಾನ್‌ನ ʻರಾಷ್ಟ್ರೀಯ ಕಲ್ಲುʼ ಎಂದೇ ಕರೆಯಲಾಗುತ್ತದೆ. ಈ ಕಲ್ಲು ನೂರಾರು ವರ್ಷಗಳಿಂದ ಇರಾನ್‌ ಸಂಸ್ಕೃತಿಯ ಭಾಗವಾಗಿದ್ದು, ʻವಿಜಯʼದ ಸಂಕೇತವೂ ಆಗಿದೆ. ಈ ರೀತಿಯ ಉಂಗುರ ಧರಿಸುವವರಿಗೆ ಹಲವು ರೀತಿಯ ಪ್ರಯೋಜನಗಳಿವೆ. ಸ್ಫಟಿಕ ಶಿಲೆಯ ಉಂಗುರವು ಮನಸ್ಸಿಗೆ ಶಾಂತಿ ನೀಡಿದ್ರೆ, ನೀಲಿ ಮತ್ತು ಹಸಿರು ಕಲ್ಲು ಶುಭವನ್ನು ಸೂಚಿಸುತ್ತದೆ. ಈ ಉಂಗುರ ಧರಿಸಿದವರಿಗೆ ಸೋಲೇ ಇಲ್ಲ, ಒಂದು ವೇಳೆ ಸೋತರೂ ಅಷ್ಟು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ ಎಂಬ ನಂಬಿಕೆ ಅಲ್ಲಿನ ಜನರದ್ದು. ಹಾಗಾಗಿ ಇರಾನ್‌, ಲೆಬನಾನ್‌ ಇರಾಕ್‌ ದೇಶಗಳಲ್ಲಿ ಇವುಗಳಿಗೆ ಬೇಡಿಕೆ ಹೆಚ್ಚಿದೆ. ಜೊತೆಗೆ ಇವು ತನ್ನದೇ ಆದ ಸ್ಥಾನಮಾನಗಳನ್ನು ಗಳಿಸಿಕೊಂಡಿವೆ. ಇಂತಹ ಕಲ್ಲುಗಳನ್ನು ವಿಶ್ವದಾದ್ಯಂತ ಶಿಯಾ ಮುಸ್ಲಿಮರಿಗೆ ತಲುಪಿಸಲೆಂದೇ ಇಸ್ರೇಲ್‌ ಮಾರುಕಟ್ಟೆ ವ್ಯವಸ್ಥೆಯನ್ನೂ ಮಾಡಿದೆ.

ಉದಾಹಣೆಗೆ ಇರಾನ್‌ನ ಫೇಮಸ್‌ ನಿಶಾಪುರದ ವೈಡೂರ್ಯ (ನೀಲಿ ಕಲ್ಲಿನ ಉಂಗುರ) ಆನ್‌ಲೈನ್‌ ವೇದಿಕೆಗಳಲ್ಲೂ ಸಿಗುತ್ತಿದೆ. ಪ್ರತಿ ಕ್ಯಾರೆಟ್‌ನ ಬೆಲೆ 10 ರಿಂದ 3,000 ಡಾಲರ್‌ನಷ್ಟು ಇರುತ್ತದೆ. ಇದರೊಂದಿಗೆ ಕೆಂಪು-ಹಳದಿ-ಕಂದು ಬಣ್ಣ ಕಲ್ಲುಗಳು ಹಾಗೂ ಸ್ಪಟಿಕ ಶಿಲೆಗಳಿಗೆ ಅವುಗಳದ್ದೇ ಆದ ಬೇಡಿಕೆಗಳಿವೆ. ಜನ ಮೆಚ್ಚಿದ ರೀತಿಯಲ್ಲಿ ಕಲ್ಲುಗಳನ್ನು ವಿನ್ಯಾಸ ಮಾಡಿಕೊಡಲಾಗುತ್ತದೆ.

ಕಥೆ ಹೇಳುವ ರತ್ನದ ಕಲ್ಲುಗಳು
ಇರಾನ್‌ನಲ್ಲಿ ಸಿಗುವ ವಿಶೇಷ ನೀಲಿ, ಕೆಂಪು, ಹಸಿರು ರತ್ನದ ಕಲ್ಲಿನ ಉಂಗುರಗಳ ಹಿಂದೆ ಒಂದೊಂದು ಕಥೆಗಳಿವೆ.

ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ಸ್ ಕಾರ್ಪ್ಸ್ ಕಮಾಂಡರ್ ಖಾಸಿಮ್ ಸುಲೇಮಾನಿ ಖಮೇನಿಗೆ ಅತ್ಯಾಪ್ತರಲ್ಲಿ ಒಬ್ಬರು. ಸುಲೇಮಾನಿ ಸಿರಿಯಾ, ಇರಾಕ್‌, ಲೆಬನಾನ್‌ ಮತ್ತು ಯೆಮೆನ್‌ ದೇಶಗಳಲ್ಲಿ ಇರಾನ್‌ ಪ್ರಭಾವವನ್ನು ಪ್ರಚಾರ ಮಾಡಿದ್ದರು. ಶಿಯಾ ಸಮುದಾಯದ ಪ್ರಮುಖ ನಾಯಕನಾಗಿಯೂ ಗುರುತಿಸಿಕೊಂಡಿದ್ದ ಸುಲೇಮಾನಿ ಅಷ್ಟೇ ಶತ್ರುಗಳನ್ನು ಒಳಗೊಂಡಿದ್ದರು. 2020ರಲ್ಲಿ ಬಾಗ್ದಾದ್‌ ವಿಮಾನ ನಿಲ್ದಾಣದ ಮೇಲೆ ನಡೆದ ಡ್ರೋನ್‌ ದಾಳಿಯಲ್ಲಿ ಅವರು ಪ್ರಾಣ ಕಳೆದುಕೊಂಡರು. ಬಳಿಕ ಈ ದಾಳಿಗೆ ಅಮೆರಿಕವೇ ಮೂಲ ಕಾರಣ ಎಂದು ತಿಳಿಯಿತು. ಸುಲೇಮಾನಿಯ ಶವ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಮೃತದೇಹ ಗುರುತಿಸುವುದಕ್ಕೂ ಕಷ್ಟವಾಗಿತ್ತು. ಕೊನೆಗೆ ಅವರ ಕೈಯಲ್ಲಿ ಧರಿಸಿದ್ದ ಬೆಳ್ಳಿ ಮಿಶ್ರಿಯ ಕೆಂಪು ಉಂಗುರದಿಂದ ಮೃತದೇಹ ಪತ್ತೆ ಮಾಡಲಾಗಿತ್ತು. ಅದಕ್ಕಾಗಿ ಈಗಲೂ ಅನೇಕರು ಸುಲೇಮಾನಿ ನೆನಪಿಗಾಗಿ ಕಲ್ಲಿನ ಉಂಗುರ ಧರಿಸುತ್ತಾರೆ ಎಂದು ಹೇಳಲಾಗುತ್ತಿದೆ.

TAGGED:americaayatollah ali khameneidonald trumpGemstonesiranIran Fires MissilesIsraelಅಮೆರಿಕಅಯತೊಲ್ಲಾ ಅಲಿ ಖಮೇನಿಇರಾನ್ಇರಾನ್‌ ಮಿಸೈಲ್‌ ದಾಳಿಇಸ್ರೇಲ್ನೀಲಿ ಕಲ್ಲಿನ ಉಂಗುರ
Share This Article
Facebook Whatsapp Whatsapp Telegram

Cinema News

rana daggubati
ಆನ್‌ಲೈನ್ ಬೆಟ್ಟಿಂಗ್ – ಇ.ಡಿ ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ
Cinema Latest Top Stories
Dhruva Sarja Raghavendra Hegde
ಧ್ರುವ ಬಳಗದ ಆರೋಪಕ್ಕೆ ನಿರ್ದೇಶಕ ರಾಘವೇಂದ್ರ ಹೆಗಡೆ ಸ್ಪಷ್ಟನೆ
Cinema Latest Sandalwood Top Stories
darshan 28 years cinema journey
ದರ್ಶನ್ ಸಿನಿ ಜರ್ನಿಗೆ 28 ವರ್ಷ: ‘ಡಿ’ ಫ್ಯಾನ್ಸ್ ಸಂಭ್ರಮ
Cinema Latest Sandalwood Top Stories
Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories

You Might Also Like

KN Rajanna
Bengaluru City

ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ?

Public TV
By Public TV
12 minutes ago
elephant attack chamarajanagara
Chamarajanagar

ಚಾ.ನಗರ| ಫೋಟೊ ತೆಗೆಯಲು ಹೋದವನ ಮೇಲೆ ಕಾಡಾನೆ ದಾಳಿ

Public TV
By Public TV
21 minutes ago
Vidhya Mandira 1
Bengaluru City

`ಪಬ್ಲಿಕ್ ಟಿವಿ’ ವಿದ್ಯಾಮಂದಿರಕ್ಕೆ ಇಂದು ಚಾಲನೆ

Public TV
By Public TV
26 minutes ago
Vijay Kumar Sinha
Latest

ಎರಡೆರಡು ವೋಟರ್ ಐಡಿ – ಬಿಹಾರ ಡಿಸಿಎಂಗೆ ಚುನಾವಣಾ ಆಯೋಗ ನೋಟಿಸ್

Public TV
By Public TV
32 minutes ago
Former Minister Arvind Limbavali mother passed away
Bagalkot

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ

Public TV
By Public TV
37 minutes ago
PM Modi Launches Vande Bharat Express Bengaluru Belagavi KSR Railway station 2
Belgaum

ಬೆಂಗಳೂರು-ಬೆಳಗಾವಿ ವಂದೇಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?