Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Health

ಜಗತ್ತನ್ನೇ ಬೆಚ್ಚಿ ಬೀಳಿಸಿದ ಸೋಂಕಿತ ರಕ್ತ ಹಗರಣ – ಯುಕೆಯಲ್ಲಿ ಡೆಡ್ಲಿ ಚಿಕಿತ್ಸೆ ತಂದ ವಿಪತ್ತು; ಏನಿದು ಹಗರಣ?

Public TV
Last updated: May 25, 2024 8:42 pm
Public TV
Share
4 Min Read
Blood Scandal
SHARE

ಲಂಡನ್‌ನಲ್ಲಾದ (London) ಸೋಂಕಿತರ ರಕ್ತದ ಹಗರಣಕ್ಕೆ ಇಡೀ ಜಗತ್ತೇ ಬೆಚ್ಚಿಬಿದ್ದಿದೆ. ಈ ಹಗರಣಕ್ಕೆ ಬಲಿಯಾದವರು ಒಬ್ಬರು ಇಬ್ಬರಲ್ಲ. ಬರೋಬ್ಬರಿ 3,000 ಮಂದಿ. ವೈದ್ಯಕೀಯ ಲೋಕದ ನಿರ್ಲಕ್ಷ್ಯಕ್ಕೆ ಸಾವಿರಾರು ಜನರ ಬದುಕು ಬರಡಾಯಿತು. ಇನ್ನೂ ಬಾಳಬೇಕಿದ್ದ ನೂರಾರು ಮಕ್ಕಳ ಬದುಕು ಕಮರಿತು. ಹೌದು, 70-80 ರ ದಶಕದಲ್ಲಿ ಲಂಡನ್‌ನಲ್ಲಾದ ಈ ಹಗರಣವು ಈಗ ಬೆಳಕಿಗೆ ಬಂದಿದೆ. ಈ ಹಗರಣದಿಂದ ವೈದ್ಯಲೋಕದ ವೈಫಲ್ಯ ಜಗಜ್ಜಾಹೀರಾಗಿದೆ.

ತನಿಖಾ ವರದಿಯಲ್ಲೇನಿದೆ?
ಮೇ 20 ರಂದು ಯುನೈಟೆಡ್ ಕಿಂಗ್‌ಡಮ್‌ನ (United Kingdom) ಸೋಂಕಿತ ರಕ್ತದ ಹಗರಣದ ತನಿಖಾ ವರದಿ ಬಿಡುಗಡೆಯಾಯಿತು. ಸಾವಿರಾರು ಜನರು ಹೆಚ್‌ಐವಿ (HIV) ಅಥವಾ ಹೆಪಟೈಟಿಸ್‌ಗೆ (Hepatitis C) ತುತ್ತಾಗಲು ಕಾರಣವಾದ ಹಗರಣ ಇದು ಎಂಬುದು ಬಯಲಾಯಿತು. ಈ ಹಗರಣವು ರಾಜ್ಯ-ನಿಧಿಯ ರಾಷ್ಟ್ರೀಯ ಆರೋಗ್ಯ ಸೇವೆಯ (NHS) ಇತಿಹಾಸದಲ್ಲಿ ಮಾರಣಾಂತಿಕ ಚಿಕಿತ್ಸಾ ವಿಪತ್ತುಗಳಲ್ಲಿ ಒಂದು ಎಂಬ ಕೆಟ್ಟ ದಾಖಲೆ ಬರೆಯಿತು. ಬ್ರಿಯಾನ್ ಲ್ಯಾಂಗ್‌ಸ್ಟಾಫ್ ನೇತೃತ್ವದಲ್ಲಿ ತನಿಖೆ ನಡೆಯಿತು. ಹಗರಣವು 30,000 ಮಂದಿ ಆರೋಗ್ಯ ಸಮಸ್ಯೆ ಹಾಗೂ 3,000 ಮಂದಿ ಸಾವಿಗೆ ಕಾರಣವಾಯಿತು ಎಂಬುದನ್ನು ವರದಿ ಬಹಿರಂಗಪಡಿಸಿದೆ. ಇಂತಹ ದೊಡ್ಡ ದುರಂತವನ್ನು ಮುಚ್ಚಿಡಲು ಸರ್ಕಾರ ಪ್ರಯತ್ನಿಸಿತು ಎಂದು ಸಹ ದೂರಲಾಗಿದೆ. ‘ಸತ್ಯವನ್ನು ಮರೆಮಾಚುವುದು ಸಂಯೋಜಿತ ಪಿತೂರಿಗಿಂತ ಹೆಚ್ಚು ಅಪಾಯಕಾರಿ’ ಎಂದು ಬ್ರಿಯಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲೆ ನಾಸಾ ರೈಲು – ಏನಿದು ಹೊಸ ಪ್ರಯೋಗ?

blood scandal 1

ಏನಿದು ಸೋಂಕಿತ ರಕ್ತ ಹಗರಣ?
1970 ಮತ್ತು 1980 ರ ದಶಕಗಳಲ್ಲಿ ಬ್ರಿಟನ್‌ನಲ್ಲಿ ಸೋಂಕಿತ ರಕ್ತ ವರ್ಗಾವಣೆ ಹಗರಣ (Infected Blood Scandal) ನಡೆಯಿತು. ಆಗಿನ ಸಂದರ್ಭದಲ್ಲಿ ರಕ್ತ ಹೆಪ್ಪುಗಟ್ಟುವ ಹಿಮೋಫಿಲಿಯಾ ಸಮಸ್ಯೆ ಬ್ರಿಟನ್‌ನಾದ್ಯಂತ ಜನರನ್ನು ಭಾದಿಸಿತು. ಈ ಸಮಸ್ಯೆ ವೈದ್ಯಲೋಕವನ್ನು ಕಂಗೆಡಿಸಿತು. ಆಗ ಬ್ರಿಟನ್‌ನ ಆರೋಗ್ಯ ಸಂಸ್ಥೆ (ಎನ್‌ಹೆಚ್‌ಎಸ್) ‘ಫ್ಯಾಕ್ಟರ್ 8’ ಎಂಬ ಎಂಬ ವಿಧಾನದ ಮೂಲಕ ಚಿಕಿತ್ಸೆ ನೀಡಲು ಮುಂದಾಯಿತು. ಚಿಕಿತ್ಸೆ ಪ್ರಕಾರ, ಹತ್ತಾರು ದಾನಿಗಳಿಂದ ಪ್ಲಾಸ್ಮಾಗಳನ್ನು ಒಟ್ಟುಗೂಡಿಸಿ ರೋಗಿಗೆ ನಿಡಲಾಗುತ್ತಿತ್ತು. ಹಿಂದಿನ ಚಿಕಿತ್ಸೆಗಳಿಗಿಂತ ಇದು ಹೆಚ್ಚು ಪರಿಣಾಮಕಾರಿಯಾಗಿದೆ. ಹಾಗಾಗಿ, ಇದನ್ನ ‘ವಂಡರ್ ಡ್ರಗ್’ ಚಿಕಿತ್ಸೆ ಎಂದು ಬ್ರಿಟನ್ ವೈದ್ಯರು ಕರೆದರು.

ಏನಿದು ಹಿಮೋಫೀಲಿಯಾ?
ಇದೊಂದು ಅಪರೂಪದ ಆನುವಂಶಿಕ ಸಮಸ್ಯೆ. ಹಿಮೋಫೀಲಿಯಾಗೆ ಒಳಗಾದವರಲ್ಲಿ ರಕ್ತ ಹೆಪ್ಪುಗಟ್ಟಲು ಕಷ್ಟವಾಗುತ್ತದೆ. ರಕ್ತ ತೆಳುವಾಗುವ ಸಮಸ್ಯೆ ಇರುತ್ತದೆ. ಹಿಮೋಫೀಲಿಯಾದಲ್ಲಿ ಎರಡು ರೀತಿ ಇದೆ. ಹಿಮೋಫೀಲಿಯಾ-ಎ ಹೊಂದಿರುವವರ ರಕ್ತದಲ್ಲಿ ಹೆಪ್ಪುಗಟ್ಟುವ ಅಂಶವಾದ ಫ್ಯಾಕ್ಟರ್-8 ರ ಕೊರತೆ ಇರುತ್ತದೆ. ಹಿಮೋಫೀಲಿಯಾ-ಬಿ ಸಮಸ್ಯೆ ಇರುವವರಿಗೆ ಫ್ಯಾಕ್ಟರ್-9 ರ ಕೊರತೆ ಇರುತ್ತದೆ. ಇದನ್ನೂ ಓದಿ: ನಿಮ್ಮ ಡಿಜಿಟಲ್‌ ಆರೋಗ್ಯ ಹೇಗಿದೆ? – ಮಿತಿಮೀರಿದ ಎಐ ಬಳಕೆ ತಂದೊಡ್ಡುವ ಅಪಾಯಗಳೇನು? – ತಂತ್ರಜ್ಞರ ಕಳವಳ ಏನು?

ರೋಗಿಗಳಿಗೆ ಫ್ಯಾಕ್ಟರ್-8 ಚಿಕಿತ್ಸೆ ನೀಡಲು ಸಾಕಷ್ಟು ಪ್ರಮಾಣದ ರಕ್ತದ ಅಗತ್ಯವಿತ್ತು. ಆಗ ಅಮೆರಿಕದಿಂದ ಬ್ರಿಟನ್ ರಕ್ತ ತರಿಸಿಕೊಳ್ಳಲು ಮುಂದಾಯಿತು. ದಾನ ಮಾಡಿದ್ದರಲ್ಲಿ ಮಾದಕ ವ್ಯಸನಿಗಳು, ಕೈದಿಗಳು, ಅಪಾಯಕಾರಿ ಸೋಂಕು ಹೊಂದಿದ ವ್ಯಕ್ತಿಗಳ ರಕ್ತವೇ ಹೆಚ್ಚಿನ ಪ್ರಮಾಣದಲ್ಲಿತ್ತು. ಪರೀಕ್ಷೆ ಮಾಡದೇ ಇದೇ ರಕ್ತವನ್ನು ಬಳಸಿ ಜನರಿಗೆ ಚಿಕಿತ್ಸೆ ನೀಡಲಾಯಿತು. ಒಬ್ಬ ದಾನಿ ನೀಡಿದ ರಕ್ತದಲ್ಲಿ ಸೋಂಕು ಇದ್ದರೆ, ಅದು ಇಡೀ ಬ್ಯಾಚ್ ಅನ್ನು ಕಲುಷಿತಗೊಳಿಸುವ ಅಪಾಯವಿತ್ತು. ಇಂತಹ ರಕ್ತ ಪಡೆದ ಸಾವಿರಾರು ಮಂದಿ ಸೋಂಕಿಗೆ ತುತ್ತಾದರು.

blood scandal 2

ಸೋಂಕಿತ ರಕ್ತ ಪಡೆದವರಿಗೆ ಹೆಚ್‌ಐವಿ, ಹೆಪಟೈಟಿಸ್
ತನಿಖಾ ವರದಿಯ ಪ್ರಕಾರ 30,000 ಜನರು ಹೆಚ್‌ಐವಿ, ಹೆಪಟೈಟಿಸ್ ಸಿ ಗೆ ತುತ್ತಾದರು. ರಕ್ತ ದಾನ ಮಾಡಿದವರಲ್ಲಿ ಹೆಚ್ಚಾಗಿ ಹೆಪಟೈಟಿಸ್ ಸಿ ಸೋಂಕು ಇತ್ತು. 380 ಮಕ್ಕಳು ಹೆಚ್‌ಐವಿ ಸೋಂಕಿಗೆ ತುತ್ತಾಗಿದ್ದಾರೆ. ಹೆರಿಗೆ ಅಥವಾ ಶಸ್ತ್ರಚಿಕಿತ್ಸೆಗಾಗಿ ರಕ್ತದ ಅಗತ್ಯವಿರುವ ಜನರಿಗೂ ಸೋಂಕಿತ ರಕ್ತವನ್ನೇ ನೀಡಲಾಗಿತ್ತು.

ಹೆಚ್‌ಐವಿ ಸೋಂಕಿಗೆ ಒಳಗಾದವರಲ್ಲಿ ಸುಮಾರು ಮೂರನೇ ಎರಡರಷ್ಟು ಜನರು ಏಡ್ಸ್ ಸಂಬಂಧಿತ ಕಾಯಿಲೆಗಳಿಂದ ಮರಣ ಹೊಂದಿದರು. ಬದುಕಿದ್ದಾಗ ಇವರ ಸಂಪರ್ಕ ಹೊಂದಿದವರಿಗೂ ಸೋಂಕು ವರ್ಗಾವಣೆಯಾಗಿದೆ. ಆ ಸಂಖ್ಯೆ ಎಷ್ಟು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಇದನ್ನೂ ಓದಿ: ಫಸ್ಟ್‌ ಟೈಂ ಸೌದಿಯಲ್ಲಿ ನಡೆಯಿತು ಸ್ವಿಮ್‌ ಸೂಟ್‌ ಫ್ಯಾಶನ್‌ ಶೋ!

ಬ್ರಿಟನ್ ದೇಶವನ್ನೇ ಹೆಚ್ಚು ಕಾಡಿದ್ದೇಕೆ?
70 ರ ದಶಕದಲ್ಲಿ ಹಿಮೋಫೀಲಿಯಾ ಬ್ರಿಟನ್ ದೇಶವನ್ನು ಹೆಚ್ಚು ಕಾಡಿತ್ತು. ಜಪಾನ್, ಸ್ಪೇನ್ ದೇಶಗಳಲ್ಲೂ ಈ ಸಮಸ್ಯೆ ಕಾಣಿಸಿಕೊಂಡರೂ, ಸೋಂಕು ತಗುಲುವ ಪ್ರಮಾಣ ಕಡಿಮೆಯಿತ್ತು. ಅಲ್ಲದೇ ಬ್ರಿಟನ್ ಫ್ಯಾಕ್ಟರ್-8 ಎಂಬ ಹೊಸ ಚಿಕಿತ್ಸಾ ವಿಧಾನವನ್ನು ಪರಿಚಯಿಸಿದ್ದು, ದೊಡ್ಡ ದುರಂತಕ್ಕೆ ಕಾರಣವಾಯಿತು. ಆದರೆ ಜಪಾನ್, ಸ್ಪೇನ್ ದೇಶಗಳು ಹಳೆ ಚಿಕಿತ್ಸಾ ವಿಧಾನವನ್ನೇ ಮುಂದುವರಿಸಿದ್ದರಿಂದ ಹೆಚ್ಚಿನ ಸಮಸ್ಯೆ ಆಗಲಿಲ್ಲ. 90 ರ ದಶಕಕದವರೆಗೂ ಬ್ರಿಟನ್‌ನಲ್ಲಿ ಹೆಪಟೈಟಿಸ್-ಸಿ ಪತ್ತೆಗಾಗಿ ಸೋಂಕಿಗೆ ಸ್ಕ್ರೀನಿಂಗ್ ಪರೀಕ್ಷೆ ಕೂಡ ಲಭ್ಯವಿರಲಿಲ್ಲ. ಇದು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಹರಡಲು ಕಾರಣವಾಗಿತ್ತು.

infected blood scandal

ಸರ್ಕಾರದ ಪ್ರತಿಕ್ರಿಯೆ ಏನು?
ಯುಕೆನಲ್ಲಿ ದೊಡ್ಡ ದುರಂತಕ್ಕೆ ಕಾರಣವಾದ ಹಗರಣದ ವಿಚಾರವಾಗಿ ಬ್ರಿಟನ್‌ನ ಪ್ರಧಾನಿ ರಿಷಿ ಸುನಾಕ್ ದೇಶದ ಜನತೆಯಲ್ಲಿ ಕ್ಷಮೆಯಾಚಿಸಿದ್ದಾರೆ. ವೈದ್ಯಕೀಯ ಲೋಕದ ಅತಿ ದೊಡ್ಡ ಹಗರಣ ಇದಾಗಿದ್ದು, ಬ್ರಿಟನ್ ಸರ್ಕಾರ ಇದರಿಂದ ತಲೆ ತಗ್ಗಿಸುವಂತಾಗಿದೆ. ಈ ಘಟನೆಗೆ ನಾನು ಪೂರ್ಣ ಹೃದಯದಿಂದ ನಿಸ್ಸಂದಿಗ್ಧವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ ಎಂದಿದ್ದಾರೆ.

ಅಂದಿನಿಂದ ಇಲ್ಲಿವರೆಗೆ ಏನಾಗಿದೆ?
1980 ರ ದಶಕದ ಉತ್ತರಾರ್ಧದಲ್ಲಿ ಸಂತ್ರಸ್ತರು ಮತ್ತು ಅವರ ಕುಟುಂಬಗಳು ವೈದ್ಯಕೀಯ ನಿರ್ಲಕ್ಷ್ಯದ ಆಧಾರದ ಮೇಲೆ ಪರಿಹಾರ ನೀಡಬೇಕು ಎಂದು ಬ್ರಿಟನ್‌ನಾದ್ಯಂತ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. 1990 ರ ದಶಕದ ಆರಂಭದಲ್ಲಿ ಹೆಚ್‌ಐವಿ ಸೋಂಕಿತರಿಗೆ ಏಕಕಾಲದಲ್ಲಿ ಪರಿಹಾರ ನೀಡಲು ಸರ್ಕಾರವು ಚಾರಿಟಿಯನ್ನು ಸ್ಥಾಪಿಸಿತು. ಆದರೆ ಸಮಸ್ಯೆ ಅಲ್ಲಿಗೆ ಬಗೆಹರಿಯಲಿಲ್ಲ. ಸರ್ಕಾರದ ವಿರುದ್ಧ ಅಭಿಯಾನಗಳು ಪ್ರಾರಂಭವಾದವು.

ಪ್ರಕರಣ ಸಂಸತ್ ಮೆಟ್ಟಿಲೇರಿ ತನಿಖೆಯ ಒತ್ತಾಯ ಕೇಳಿಬಂತು. ಕೊನೆಗೆ 2018 ರ ಫೆಬ್ರವರಿಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಸರ್ ಬ್ರಿಯಾನ್ ಲ್ಯಾಂಗ್‌ಸ್ಟಾಫ್ ಅವರ ಅಧ್ಯಕ್ಷತೆಯಲ್ಲಿ ತನಿಖಾ ತಂಡ ರಚಿಸಲಾಯಿತು. 2018 ರ ಜುಲೈ ತಿಂಗಳಿಂದ ತನಿಖೆ ಪ್ರಾರಂಭವಾಯಿತು. 2019 ರ ಏಪ್ರಿಲ್‌ನಿಂದ 2022 ರ ಡಿಸೆಂಬರ್ ವರೆಗೆ ಸೋಂಕಿತ ಮತ್ತು ಬಾಧಿತರಿಂದ ಸಾರ್ವಜನಿಕ ಸಾಕ್ಷ್ಯವನ್ನು ತನಿಖಾ ತಂಡ ಸಂಗ್ರಹಿಸಿತು. 2023 ರ ಫೆಬ್ರವರಿ 3 ರಲ್ಲಿ ಮೌಖಿಕವಾಗಿ ವರದಿ ಒಪ್ಪಿಸಲಾಯಿತು.

TAGGED:Contaminated Blood ScandalHepatitis ChivInfected Blood ScandalukUnited Kingdomಯುಕೆಯುನೈಟೆಡ್‌ ಕಿಂಗ್‌ಡಮ್‌ಸೋಂಕಿತ ರಕ್ತ ಹಗರಣಹೆಚ್‍ಐವಿಹೆಪಟೈಟಿಸ್‌ ಸಿ
Share This Article
Facebook Whatsapp Whatsapp Telegram

Cinema News

Gulshan Devaiah kantara chapter 1
ಹೊಂಬಾಳೆ ಫಿಲಮ್ಸ್‌ನ ‘ಕಾಂತಾರ ಚಾಪ್ಟರ್ 1’ ನಲ್ಲಿ ಕುಲಶೇಖರನ ಪಾತ್ರದಲ್ಲಿ ಗುಲ್ಶನ್ ದೇವಯ್ಯ
Cinema Latest Top Stories
Darshan 8
ಸೆಲ್‌ನಲ್ಲೇ ವಾಕಿಂಗ್, ತೆಳುವಾದ ಬೆಡ್ ಮೇಲೆ ಸ್ಲೀಪಿಂಗ್ – ರಾಜಾತಿಥ್ಯ ಇಲ್ದೇ `ಡಿ’ ಗ್ಯಾಂಗ್ ಫುಲ್ ಸೈಲೆಂಟ್
Bengaluru City Cinema Karnataka Latest Top Stories
Rashmika Mandanna Thama Movie
ಹಾರರ್ ಅವತಾರದಲ್ಲಿ ಜನರನ್ನ ಬೆಚ್ಚಿಸಿದ ಶ್ರೀವಲ್ಲಿ
Bollywood Cinema Latest Top Stories
Shivarajkumar steps into a father–daughter saga with DAD Movie Muhurtha Nandi Temple Mysuru Chamundi Hill 2
ಶಿವರಾಜ್‌ಕುಮಾರ್‌ ನಟನೆಯ ಡ್ಯಾಡ್ ಚಿತ್ರಕ್ಕೆ ಚಾಲನೆ
Cinema Latest Sandalwood Top Stories
Mahesh Babu Namrata Shirodkar
ಪತ್ನಿ ಜೊತೆ ಸ್ಟೈಲ್‌ ಆಗಿ ಕಾಣಿಸಿಕೊಂಡ ಮಹೇಶ್ ಬಾಬು
Cinema Latest South cinema Top Stories

You Might Also Like

apple
Bengaluru City

ಬೆಂಗಳೂರಿನಲ್ಲಿ ಹೊಸ ಆ್ಯಪಲ್ ಕಚೇರಿ – ತಿಂಗಳಿಗೆ 6.3 ಕೋಟಿ ರೂ. ಬಾಡಿಗೆ

Public TV
By Public TV
18 minutes ago
landslide in Beegar Village in Yellapur
Latest

ಯಲ್ಲಾಪುರದ ಬೀಗಾರ ಗ್ರಾಮದಲ್ಲಿ ಭೂಕುಸಿತ

Public TV
By Public TV
21 minutes ago
Kolar Accident
Crime

ಕಾಲೇಜು ಅಡ್ಮಿಷನ್ ಮುಗಿಸಿ ಹಿಂತಿರುಗುವಾಗ ಭೀಕರ ಅಪಘಾತ – ಅಣ್ಣ, ತಂಗಿ ದುರ್ಮರಣ

Public TV
By Public TV
22 minutes ago
Mumbai Rain
Latest

ವರುಣಾರ್ಭಟಕ್ಕೆ ತತ್ತರಿಸಿದ ಮುಂಬೈ – ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ, ರೆಡ್ ಅಲರ್ಟ್ ಘೋಷಣೆ

Public TV
By Public TV
24 minutes ago
Asia Cup 2025 Team India
Cricket

Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

Public TV
By Public TV
40 minutes ago
BY Vijayendra 1
Bengaluru City

ಎಸ್‌ಸಿ ಒಳಮೀಸಲಾತಿ ಜಾರಿಗೆ ವಿಶೇಷ ಸಭೆ; 101 ಜಾತಿಗಳಿಗೂ ನ್ಯಾಯ ಕೊಡಿ: ವಿಜಯೇಂದ್ರ ಆಗ್ರಹ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?