Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಗತ್ತನ್ನೇ ಬೆಚ್ಚಿ ಬೀಳಿಸಿದ ಸೋಂಕಿತ ರಕ್ತ ಹಗರಣ – ಯುಕೆಯಲ್ಲಿ ಡೆಡ್ಲಿ ಚಿಕಿತ್ಸೆ ತಂದ ವಿಪತ್ತು; ಏನಿದು ಹಗರಣ?
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Health

ಜಗತ್ತನ್ನೇ ಬೆಚ್ಚಿ ಬೀಳಿಸಿದ ಸೋಂಕಿತ ರಕ್ತ ಹಗರಣ – ಯುಕೆಯಲ್ಲಿ ಡೆಡ್ಲಿ ಚಿಕಿತ್ಸೆ ತಂದ ವಿಪತ್ತು; ಏನಿದು ಹಗರಣ?

Public TV
Last updated: May 25, 2024 8:42 pm
Public TV
Share
4 Min Read
Blood Scandal
SHARE

ಲಂಡನ್‌ನಲ್ಲಾದ (London) ಸೋಂಕಿತರ ರಕ್ತದ ಹಗರಣಕ್ಕೆ ಇಡೀ ಜಗತ್ತೇ ಬೆಚ್ಚಿಬಿದ್ದಿದೆ. ಈ ಹಗರಣಕ್ಕೆ ಬಲಿಯಾದವರು ಒಬ್ಬರು ಇಬ್ಬರಲ್ಲ. ಬರೋಬ್ಬರಿ 3,000 ಮಂದಿ. ವೈದ್ಯಕೀಯ ಲೋಕದ ನಿರ್ಲಕ್ಷ್ಯಕ್ಕೆ ಸಾವಿರಾರು ಜನರ ಬದುಕು ಬರಡಾಯಿತು. ಇನ್ನೂ ಬಾಳಬೇಕಿದ್ದ ನೂರಾರು ಮಕ್ಕಳ ಬದುಕು ಕಮರಿತು. ಹೌದು, 70-80 ರ ದಶಕದಲ್ಲಿ ಲಂಡನ್‌ನಲ್ಲಾದ ಈ ಹಗರಣವು ಈಗ ಬೆಳಕಿಗೆ ಬಂದಿದೆ. ಈ ಹಗರಣದಿಂದ ವೈದ್ಯಲೋಕದ ವೈಫಲ್ಯ ಜಗಜ್ಜಾಹೀರಾಗಿದೆ.

ತನಿಖಾ ವರದಿಯಲ್ಲೇನಿದೆ?
ಮೇ 20 ರಂದು ಯುನೈಟೆಡ್ ಕಿಂಗ್‌ಡಮ್‌ನ (United Kingdom) ಸೋಂಕಿತ ರಕ್ತದ ಹಗರಣದ ತನಿಖಾ ವರದಿ ಬಿಡುಗಡೆಯಾಯಿತು. ಸಾವಿರಾರು ಜನರು ಹೆಚ್‌ಐವಿ (HIV) ಅಥವಾ ಹೆಪಟೈಟಿಸ್‌ಗೆ (Hepatitis C) ತುತ್ತಾಗಲು ಕಾರಣವಾದ ಹಗರಣ ಇದು ಎಂಬುದು ಬಯಲಾಯಿತು. ಈ ಹಗರಣವು ರಾಜ್ಯ-ನಿಧಿಯ ರಾಷ್ಟ್ರೀಯ ಆರೋಗ್ಯ ಸೇವೆಯ (NHS) ಇತಿಹಾಸದಲ್ಲಿ ಮಾರಣಾಂತಿಕ ಚಿಕಿತ್ಸಾ ವಿಪತ್ತುಗಳಲ್ಲಿ ಒಂದು ಎಂಬ ಕೆಟ್ಟ ದಾಖಲೆ ಬರೆಯಿತು. ಬ್ರಿಯಾನ್ ಲ್ಯಾಂಗ್‌ಸ್ಟಾಫ್ ನೇತೃತ್ವದಲ್ಲಿ ತನಿಖೆ ನಡೆಯಿತು. ಹಗರಣವು 30,000 ಮಂದಿ ಆರೋಗ್ಯ ಸಮಸ್ಯೆ ಹಾಗೂ 3,000 ಮಂದಿ ಸಾವಿಗೆ ಕಾರಣವಾಯಿತು ಎಂಬುದನ್ನು ವರದಿ ಬಹಿರಂಗಪಡಿಸಿದೆ. ಇಂತಹ ದೊಡ್ಡ ದುರಂತವನ್ನು ಮುಚ್ಚಿಡಲು ಸರ್ಕಾರ ಪ್ರಯತ್ನಿಸಿತು ಎಂದು ಸಹ ದೂರಲಾಗಿದೆ. ‘ಸತ್ಯವನ್ನು ಮರೆಮಾಚುವುದು ಸಂಯೋಜಿತ ಪಿತೂರಿಗಿಂತ ಹೆಚ್ಚು ಅಪಾಯಕಾರಿ’ ಎಂದು ಬ್ರಿಯಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲೆ ನಾಸಾ ರೈಲು – ಏನಿದು ಹೊಸ ಪ್ರಯೋಗ?

blood scandal 1

ಏನಿದು ಸೋಂಕಿತ ರಕ್ತ ಹಗರಣ?
1970 ಮತ್ತು 1980 ರ ದಶಕಗಳಲ್ಲಿ ಬ್ರಿಟನ್‌ನಲ್ಲಿ ಸೋಂಕಿತ ರಕ್ತ ವರ್ಗಾವಣೆ ಹಗರಣ (Infected Blood Scandal) ನಡೆಯಿತು. ಆಗಿನ ಸಂದರ್ಭದಲ್ಲಿ ರಕ್ತ ಹೆಪ್ಪುಗಟ್ಟುವ ಹಿಮೋಫಿಲಿಯಾ ಸಮಸ್ಯೆ ಬ್ರಿಟನ್‌ನಾದ್ಯಂತ ಜನರನ್ನು ಭಾದಿಸಿತು. ಈ ಸಮಸ್ಯೆ ವೈದ್ಯಲೋಕವನ್ನು ಕಂಗೆಡಿಸಿತು. ಆಗ ಬ್ರಿಟನ್‌ನ ಆರೋಗ್ಯ ಸಂಸ್ಥೆ (ಎನ್‌ಹೆಚ್‌ಎಸ್) ‘ಫ್ಯಾಕ್ಟರ್ 8’ ಎಂಬ ಎಂಬ ವಿಧಾನದ ಮೂಲಕ ಚಿಕಿತ್ಸೆ ನೀಡಲು ಮುಂದಾಯಿತು. ಚಿಕಿತ್ಸೆ ಪ್ರಕಾರ, ಹತ್ತಾರು ದಾನಿಗಳಿಂದ ಪ್ಲಾಸ್ಮಾಗಳನ್ನು ಒಟ್ಟುಗೂಡಿಸಿ ರೋಗಿಗೆ ನಿಡಲಾಗುತ್ತಿತ್ತು. ಹಿಂದಿನ ಚಿಕಿತ್ಸೆಗಳಿಗಿಂತ ಇದು ಹೆಚ್ಚು ಪರಿಣಾಮಕಾರಿಯಾಗಿದೆ. ಹಾಗಾಗಿ, ಇದನ್ನ ‘ವಂಡರ್ ಡ್ರಗ್’ ಚಿಕಿತ್ಸೆ ಎಂದು ಬ್ರಿಟನ್ ವೈದ್ಯರು ಕರೆದರು.

ಏನಿದು ಹಿಮೋಫೀಲಿಯಾ?
ಇದೊಂದು ಅಪರೂಪದ ಆನುವಂಶಿಕ ಸಮಸ್ಯೆ. ಹಿಮೋಫೀಲಿಯಾಗೆ ಒಳಗಾದವರಲ್ಲಿ ರಕ್ತ ಹೆಪ್ಪುಗಟ್ಟಲು ಕಷ್ಟವಾಗುತ್ತದೆ. ರಕ್ತ ತೆಳುವಾಗುವ ಸಮಸ್ಯೆ ಇರುತ್ತದೆ. ಹಿಮೋಫೀಲಿಯಾದಲ್ಲಿ ಎರಡು ರೀತಿ ಇದೆ. ಹಿಮೋಫೀಲಿಯಾ-ಎ ಹೊಂದಿರುವವರ ರಕ್ತದಲ್ಲಿ ಹೆಪ್ಪುಗಟ್ಟುವ ಅಂಶವಾದ ಫ್ಯಾಕ್ಟರ್-8 ರ ಕೊರತೆ ಇರುತ್ತದೆ. ಹಿಮೋಫೀಲಿಯಾ-ಬಿ ಸಮಸ್ಯೆ ಇರುವವರಿಗೆ ಫ್ಯಾಕ್ಟರ್-9 ರ ಕೊರತೆ ಇರುತ್ತದೆ. ಇದನ್ನೂ ಓದಿ: ನಿಮ್ಮ ಡಿಜಿಟಲ್‌ ಆರೋಗ್ಯ ಹೇಗಿದೆ? – ಮಿತಿಮೀರಿದ ಎಐ ಬಳಕೆ ತಂದೊಡ್ಡುವ ಅಪಾಯಗಳೇನು? – ತಂತ್ರಜ್ಞರ ಕಳವಳ ಏನು?

ರೋಗಿಗಳಿಗೆ ಫ್ಯಾಕ್ಟರ್-8 ಚಿಕಿತ್ಸೆ ನೀಡಲು ಸಾಕಷ್ಟು ಪ್ರಮಾಣದ ರಕ್ತದ ಅಗತ್ಯವಿತ್ತು. ಆಗ ಅಮೆರಿಕದಿಂದ ಬ್ರಿಟನ್ ರಕ್ತ ತರಿಸಿಕೊಳ್ಳಲು ಮುಂದಾಯಿತು. ದಾನ ಮಾಡಿದ್ದರಲ್ಲಿ ಮಾದಕ ವ್ಯಸನಿಗಳು, ಕೈದಿಗಳು, ಅಪಾಯಕಾರಿ ಸೋಂಕು ಹೊಂದಿದ ವ್ಯಕ್ತಿಗಳ ರಕ್ತವೇ ಹೆಚ್ಚಿನ ಪ್ರಮಾಣದಲ್ಲಿತ್ತು. ಪರೀಕ್ಷೆ ಮಾಡದೇ ಇದೇ ರಕ್ತವನ್ನು ಬಳಸಿ ಜನರಿಗೆ ಚಿಕಿತ್ಸೆ ನೀಡಲಾಯಿತು. ಒಬ್ಬ ದಾನಿ ನೀಡಿದ ರಕ್ತದಲ್ಲಿ ಸೋಂಕು ಇದ್ದರೆ, ಅದು ಇಡೀ ಬ್ಯಾಚ್ ಅನ್ನು ಕಲುಷಿತಗೊಳಿಸುವ ಅಪಾಯವಿತ್ತು. ಇಂತಹ ರಕ್ತ ಪಡೆದ ಸಾವಿರಾರು ಮಂದಿ ಸೋಂಕಿಗೆ ತುತ್ತಾದರು.

blood scandal 2

ಸೋಂಕಿತ ರಕ್ತ ಪಡೆದವರಿಗೆ ಹೆಚ್‌ಐವಿ, ಹೆಪಟೈಟಿಸ್
ತನಿಖಾ ವರದಿಯ ಪ್ರಕಾರ 30,000 ಜನರು ಹೆಚ್‌ಐವಿ, ಹೆಪಟೈಟಿಸ್ ಸಿ ಗೆ ತುತ್ತಾದರು. ರಕ್ತ ದಾನ ಮಾಡಿದವರಲ್ಲಿ ಹೆಚ್ಚಾಗಿ ಹೆಪಟೈಟಿಸ್ ಸಿ ಸೋಂಕು ಇತ್ತು. 380 ಮಕ್ಕಳು ಹೆಚ್‌ಐವಿ ಸೋಂಕಿಗೆ ತುತ್ತಾಗಿದ್ದಾರೆ. ಹೆರಿಗೆ ಅಥವಾ ಶಸ್ತ್ರಚಿಕಿತ್ಸೆಗಾಗಿ ರಕ್ತದ ಅಗತ್ಯವಿರುವ ಜನರಿಗೂ ಸೋಂಕಿತ ರಕ್ತವನ್ನೇ ನೀಡಲಾಗಿತ್ತು.

ಹೆಚ್‌ಐವಿ ಸೋಂಕಿಗೆ ಒಳಗಾದವರಲ್ಲಿ ಸುಮಾರು ಮೂರನೇ ಎರಡರಷ್ಟು ಜನರು ಏಡ್ಸ್ ಸಂಬಂಧಿತ ಕಾಯಿಲೆಗಳಿಂದ ಮರಣ ಹೊಂದಿದರು. ಬದುಕಿದ್ದಾಗ ಇವರ ಸಂಪರ್ಕ ಹೊಂದಿದವರಿಗೂ ಸೋಂಕು ವರ್ಗಾವಣೆಯಾಗಿದೆ. ಆ ಸಂಖ್ಯೆ ಎಷ್ಟು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಇದನ್ನೂ ಓದಿ: ಫಸ್ಟ್‌ ಟೈಂ ಸೌದಿಯಲ್ಲಿ ನಡೆಯಿತು ಸ್ವಿಮ್‌ ಸೂಟ್‌ ಫ್ಯಾಶನ್‌ ಶೋ!

ಬ್ರಿಟನ್ ದೇಶವನ್ನೇ ಹೆಚ್ಚು ಕಾಡಿದ್ದೇಕೆ?
70 ರ ದಶಕದಲ್ಲಿ ಹಿಮೋಫೀಲಿಯಾ ಬ್ರಿಟನ್ ದೇಶವನ್ನು ಹೆಚ್ಚು ಕಾಡಿತ್ತು. ಜಪಾನ್, ಸ್ಪೇನ್ ದೇಶಗಳಲ್ಲೂ ಈ ಸಮಸ್ಯೆ ಕಾಣಿಸಿಕೊಂಡರೂ, ಸೋಂಕು ತಗುಲುವ ಪ್ರಮಾಣ ಕಡಿಮೆಯಿತ್ತು. ಅಲ್ಲದೇ ಬ್ರಿಟನ್ ಫ್ಯಾಕ್ಟರ್-8 ಎಂಬ ಹೊಸ ಚಿಕಿತ್ಸಾ ವಿಧಾನವನ್ನು ಪರಿಚಯಿಸಿದ್ದು, ದೊಡ್ಡ ದುರಂತಕ್ಕೆ ಕಾರಣವಾಯಿತು. ಆದರೆ ಜಪಾನ್, ಸ್ಪೇನ್ ದೇಶಗಳು ಹಳೆ ಚಿಕಿತ್ಸಾ ವಿಧಾನವನ್ನೇ ಮುಂದುವರಿಸಿದ್ದರಿಂದ ಹೆಚ್ಚಿನ ಸಮಸ್ಯೆ ಆಗಲಿಲ್ಲ. 90 ರ ದಶಕಕದವರೆಗೂ ಬ್ರಿಟನ್‌ನಲ್ಲಿ ಹೆಪಟೈಟಿಸ್-ಸಿ ಪತ್ತೆಗಾಗಿ ಸೋಂಕಿಗೆ ಸ್ಕ್ರೀನಿಂಗ್ ಪರೀಕ್ಷೆ ಕೂಡ ಲಭ್ಯವಿರಲಿಲ್ಲ. ಇದು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ಹರಡಲು ಕಾರಣವಾಗಿತ್ತು.

infected blood scandal

ಸರ್ಕಾರದ ಪ್ರತಿಕ್ರಿಯೆ ಏನು?
ಯುಕೆನಲ್ಲಿ ದೊಡ್ಡ ದುರಂತಕ್ಕೆ ಕಾರಣವಾದ ಹಗರಣದ ವಿಚಾರವಾಗಿ ಬ್ರಿಟನ್‌ನ ಪ್ರಧಾನಿ ರಿಷಿ ಸುನಾಕ್ ದೇಶದ ಜನತೆಯಲ್ಲಿ ಕ್ಷಮೆಯಾಚಿಸಿದ್ದಾರೆ. ವೈದ್ಯಕೀಯ ಲೋಕದ ಅತಿ ದೊಡ್ಡ ಹಗರಣ ಇದಾಗಿದ್ದು, ಬ್ರಿಟನ್ ಸರ್ಕಾರ ಇದರಿಂದ ತಲೆ ತಗ್ಗಿಸುವಂತಾಗಿದೆ. ಈ ಘಟನೆಗೆ ನಾನು ಪೂರ್ಣ ಹೃದಯದಿಂದ ನಿಸ್ಸಂದಿಗ್ಧವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ ಎಂದಿದ್ದಾರೆ.

ಅಂದಿನಿಂದ ಇಲ್ಲಿವರೆಗೆ ಏನಾಗಿದೆ?
1980 ರ ದಶಕದ ಉತ್ತರಾರ್ಧದಲ್ಲಿ ಸಂತ್ರಸ್ತರು ಮತ್ತು ಅವರ ಕುಟುಂಬಗಳು ವೈದ್ಯಕೀಯ ನಿರ್ಲಕ್ಷ್ಯದ ಆಧಾರದ ಮೇಲೆ ಪರಿಹಾರ ನೀಡಬೇಕು ಎಂದು ಬ್ರಿಟನ್‌ನಾದ್ಯಂತ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. 1990 ರ ದಶಕದ ಆರಂಭದಲ್ಲಿ ಹೆಚ್‌ಐವಿ ಸೋಂಕಿತರಿಗೆ ಏಕಕಾಲದಲ್ಲಿ ಪರಿಹಾರ ನೀಡಲು ಸರ್ಕಾರವು ಚಾರಿಟಿಯನ್ನು ಸ್ಥಾಪಿಸಿತು. ಆದರೆ ಸಮಸ್ಯೆ ಅಲ್ಲಿಗೆ ಬಗೆಹರಿಯಲಿಲ್ಲ. ಸರ್ಕಾರದ ವಿರುದ್ಧ ಅಭಿಯಾನಗಳು ಪ್ರಾರಂಭವಾದವು.

ಪ್ರಕರಣ ಸಂಸತ್ ಮೆಟ್ಟಿಲೇರಿ ತನಿಖೆಯ ಒತ್ತಾಯ ಕೇಳಿಬಂತು. ಕೊನೆಗೆ 2018 ರ ಫೆಬ್ರವರಿಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಸರ್ ಬ್ರಿಯಾನ್ ಲ್ಯಾಂಗ್‌ಸ್ಟಾಫ್ ಅವರ ಅಧ್ಯಕ್ಷತೆಯಲ್ಲಿ ತನಿಖಾ ತಂಡ ರಚಿಸಲಾಯಿತು. 2018 ರ ಜುಲೈ ತಿಂಗಳಿಂದ ತನಿಖೆ ಪ್ರಾರಂಭವಾಯಿತು. 2019 ರ ಏಪ್ರಿಲ್‌ನಿಂದ 2022 ರ ಡಿಸೆಂಬರ್ ವರೆಗೆ ಸೋಂಕಿತ ಮತ್ತು ಬಾಧಿತರಿಂದ ಸಾರ್ವಜನಿಕ ಸಾಕ್ಷ್ಯವನ್ನು ತನಿಖಾ ತಂಡ ಸಂಗ್ರಹಿಸಿತು. 2023 ರ ಫೆಬ್ರವರಿ 3 ರಲ್ಲಿ ಮೌಖಿಕವಾಗಿ ವರದಿ ಒಪ್ಪಿಸಲಾಯಿತು.

Share This Article
Facebook Whatsapp Whatsapp Telegram
Previous Article RAGHUPATI BHAT small ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಉಚ್ಚಾಟನೆ
Next Article Madhya Pradesh Crime News Voice Changing App ಮಹಿಳೆಯ ಧ್ವನಿಯಲ್ಲಿ ಮಾತನಾಡಿ 7 ವಿದ್ಯಾರ್ಥಿನಿಯರ ಅತ್ಯಾಚಾರ – ಆರೋಪಿ ಸಿಕ್ಕಿಬಿದ್ದಿದ್ದೇ ರೋಚಕ

Latest Cinema News

diljit dosanjh kantara chapter 1 song rishab shetty
ಕಾಂತಾರಕ್ಕೆ ಕೈಜೋಡಿಸಿದ ಗಾಯಕ ದಿಲ್ಜಿತ್ ಸಿಂಗ್
Cinema Latest Main Post Sandalwood
marali manasagide song prema
ಮರಳಿ ಮನಸಾಗಿದೆ ಸಾಂಗ್ ರಿಲೀಸ್ ಮಾಡಿದ ನಟಿ ಪ್ರೇಮಾ
Cinema Latest Sandalwood Top Stories
Anushka Shetty
ಪತ್ರ ಬರೆದು ಅಭಿಮಾನಿಗಳಿಗೆ ಶಾಕ್ ಕೊಟ್ಟ ಅನುಷ್ಕಾ ಶೆಟ್ಟಿ!
Cinema Latest South cinema Top Stories
ranbir kapoor ramayana
ರಾಮನ ಪಾತ್ರಕ್ಕಾಗಿ ಮಾಂಸಾಹಾರ, ಮದ್ಯ ಸೇವನೆ ಬಿಟ್ಟಿದ್ದರಂತೆ ರಣ್‌ಬೀರ್ ಕಪೂರ್
Cinema Latest Sandalwood Top Stories
S Narayan
ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನಿಗೆ ನೋಟಿಸ್
Bengaluru City Cinema Latest Sandalwood Top Stories

You Might Also Like

DK Shivakumar Oxygen Tragedy 1
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಕೊನೆಗೂ ಭರವಸೆಯ ಬೆಳಕು; ಸರ್ಕಾರಿ ನೌಕರಿ ಕೊಡಲು ಸಚಿವ ಸಂಪುಟ ಅಸ್ತು

5 hours ago
Thawar Chand Gehlot
Bengaluru City

ಸರ್ಕಾರದ 32 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ

5 hours ago
hassan accident siddaramaiah
Hassan

ಹಾಸನ| ಗಣೇಶ ಮೆರವಣಿಗೆ ವೇಳೆ ಭೀಕರ ಅಪಘಾತ – ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

5 hours ago
sameer
Bengaluru City

ನನಗೆ ಯಾವುದೇ ರೀತಿಯ ಫಂಡ್ ಬಂದಿಲ್ಲ: ಸಮೀರ್‌ನಿಂದ ವೀಡಿಯೋ ರಿಲೀಸ್

5 hours ago
hassan accident
Hassan

ಹಾಸನ| ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ – ಟ್ರಕ್‌ ಹರಿದು 8 ಮಂದಿ ಸ್ಥಳದಲ್ಲೇ ಸಾವು

6 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?